Homeಮುಖಪುಟಹರಿಯಾಣ 160 ರೈತರನ್ನು ಗಾಯಗೊಳಿಸಿದ್ದರೂ ನಮ್ಮ ಪೊಲೀಸರು ಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ: ಪಂಜಾಬ್ ಸರ್ಕಾರ

ಹರಿಯಾಣ 160 ರೈತರನ್ನು ಗಾಯಗೊಳಿಸಿದ್ದರೂ ನಮ್ಮ ಪೊಲೀಸರು ಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ: ಪಂಜಾಬ್ ಸರ್ಕಾರ

- Advertisement -
- Advertisement -

ರೈತರ ಆಂದೋಲನದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ನೀಡಿರುವ ಸಲಹೆಗೆ ತೀವ್ರ ಪ್ರತಿಕ್ರಿಯೆ ನೀಡಿರುವ ಪಂಜಾಬ್ ಸರ್ಕಾರ, ರಾಜ್ಯವು ಗಡಿಯಲ್ಲಿ ಪ್ರತಿಭಟನಾಕಾರರಿಗೆ ಸೇರಲು ಅವಕಾಶ ನೀಡುತ್ತಿದೆ ಎಂದು ಹೇಳುವುದು ಸಂಪೂರ್ಣ ತಪ್ಪು ಎಂದು ಹೇಳಿದೆ.

ಹರಿಯಾಣ ಪೊಲೀಸರ ಅಶ್ರುವಾಯು ಶೆಲ್‌ಗಳು, ರಬ್ಬರ್ ಬುಲೆಟ್‌ಗಳು, ಡ್ರೋನ್‌ಗಳು ಮತ್ತು ದೈಹಿಕ ಬಲದ ಬಳಕೆಯಿಂದಾಗಿ 160ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರೂ, ಪಂಜಾಬ್ ಸರ್ಕಾರವು ‘ಜವಾಬ್ದಾರಿಯಿಂದ’ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡಿದೆ ಎಂದು ಅದು ಹೇಳಿಕೊಂಡಿದೆ.

ಬುಧವಾರದಂದು ‘ದೆಹಲಿ ಚಲೋ’ ಮೆರವಣಿಗೆಯನ್ನು ಪುನರಾರಂಭಿಸುವ ಮುನ್ನ 14,000 ಕ್ಕೂ ಹೆಚ್ಚು ಜನರು 1,200 ಟ್ರಾಕ್ಟರ್-ಟ್ರಾಲಿಗಳು ಮತ್ತು ಇತರ ವಾಹನಗಳೊಂದಿಗೆ ಪಂಜಾಬ್-ಹರಿಯಾಣ ಗಡಿಯಲ್ಲಿ ಜಮಾಯಿಸುತ್ತಿದ್ದಾರೆ ಎಂಬ ವರದಿಗಳ ನಂತರ, ಗೃಹ ವ್ಯವಹಾರಗಳ ಸಚಿವಾಲಯ ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೇಳಿದೆ.

ಪಂಜಾಬ್ ಮುಖ್ಯ ಕಾರ್ಯದರ್ಶಿ ಅನುರಾಗ್ ವರ್ಮಾ ಅವರು ಬುಧವಾರ ಬರೆದ ಪತ್ರದಲ್ಲಿ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಹಿಂದಿನ ದಿನ ಹೊರಡಿಸಿದ ಆದೇಶಗಳನ್ನು ಸ್ವೀಕರಿಸಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಅದರಲ್ಲಿ ರೈತರು ರಸ್ತೆಯ ಮೇಲೆ ಟ್ರ್ಯಾಕ್ಟರ್-ಟ್ರಾಲಿಗಳನ್ನು ಬಳಸದಂತೆ ಕೇಳಿಕೊಂಡಿದೆ.  ನ್ಯಾಯಾಲಯದ ವೆಬ್‌ಸೈಟ್‌ನಲ್ಲಿಯೂ ಆದೇಶವನ್ನು ಅಪ್‌ಲೋಡ್ ಮಾಡಲಾಗಿಲ್ಲ ಎಂದು ಹೇಳಿದ್ದಾರೆ.

ರೈತರು ಪ್ರತಿಭಟಿಸಲು ದೆಹಲಿಗೆ ಹೋಗುತ್ತಿದ್ದಾರೆ ಮತ್ತು ಪಂಜಾಬ್ ಮತ್ತು ಹರಿಯಾಣದ ಗಡಿಯಲ್ಲಿ ಅವರನ್ನು ತಡೆದಿದ್ದರಿಂದ ಅವರನ್ನು ಅಲ್ಲಿಯೆ ನಿಲ್ಲಿಸಲಾಯಿತು ಎಂದು ವರ್ಮಾ ಹೇಳಿದ್ದಾರೆ.

‘ಹರಿಯಾಣ ಪೊಲೀಸರು ಬಳಸಿದ ಅಶ್ರುವಾಯು, ರಬ್ಬರ್ ಬುಲೆಟ್‌ಗಳು, ದೈಹಿಕ ಬಲ ಮತ್ತು ಡ್ರೋನ್‌ಗಳಿಂದ ಇದುವರೆಗೆ 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅದರ ನಂತರವೂ ಪಂಜಾಬ್ ಸರ್ಕಾರವು ಕಾನೂನು ಸುವ್ಯವಸ್ಥೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿದೆ’ ಎಂದು ಪಂಜಾಬ್ ತನ್ನ ಪತ್ರದಲ್ಲಿ ತಿಳಿಸಿದೆ.

ರೈತರ ಬಗ್ಗೆ ಹೆಚ್ಚು ಸಹಾನುಭೂತಿ ತೋರಿಸಲು ಕರೆ ನೀಡಿದ ಮುಖ್ಯ ಕಾರ್ಯದರ್ಶಿ, ಪಂಜಾಬ್ ಗಡಿ ರಾಜ್ಯವಾಗಿರುವುದರಿಂದ ಪ್ರತಿಭಟನೆಯ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಹೆಚ್ಚು ಸೂಕ್ಷ್ಮವಾಗಿ ನಿರ್ವಹಿಸಬೇಕು ಎಂದು ಹೇಳಿದರು.

ಪಂಜಾಬ್ ಸರ್ಕಾರವು ಮಾತುಕತೆಗಳಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಒತ್ತಿ ಹೇಳಿದ್ದು, ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಕೇಂದ್ರ ಮತ್ತು ರೈತರ ನಡುವಿನ ನಾಲ್ಕು ಸಭೆಗಳಲ್ಲಿ ಮೂರರಲ್ಲಿ ಭಾಗವಹಿಸಿದ್ದರು.  ಮಾನ್ ಅವರು ಭಾಗವಹಿಸಲು ಸಾಧ್ಯವಾಗದ ಏಕೈಕ ಸಭೆಗೆ ಕ್ಯಾಬಿನೆಟ್ ಸಚಿವರು ಮತ್ತು ಉನ್ನತ ಶ್ರೇಣಿಯ ಅಧಿಕಾರಿಗಳನ್ನು ಕಳುಹಿಸಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪಂಜಾಬ್ ಪೊಲೀಸ್‌ನ ಡಿಐಜಿ ಶ್ರೇಣಿಯ ಐಪಿಎಸ್ ಮತ್ತು ಪ್ರಾಂತೀಯ ಪೊಲೀಸ್ ಸೇವಾ ಅಧಿಕಾರಿಗಳು ಸೇರಿದಂತೆ 2,000 ಪೊಲೀಸರು ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಕೆಲಸ ಮಾಡುತ್ತಿದ್ದಾರೆ. ನಾವು ನಿರಂತರವಾಗಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇವೆ ಮತ್ತು ಅಗತ್ಯವಿದ್ದರೆ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.

ಕನಿಷ್ಠ ಬೆಂಬಲ ಬೆಲೆಗೆ ಕಾನೂನಾತ್ಮಕ ಖಾತರಿ ಸೇರಿದಂತೆ ತಮ್ಮ ಬೇಡಿಕೆಗಳನ್ನು ಒತ್ತಾಯಿಸಲು ರೈತರು ದೆಹಲಿಯತ್ತ ಮೆರವಣಿಗೆ ನಡೆಸಲು ಯತ್ನಿಸಿದ ನಂತರ ಬುಧವಾರ ಶಂಭು ಗಡಿಯಲ್ಲಿ ಮತ್ತೆ ಅಶ್ರುವಾಯು ಪ್ರಯೋಗಿಸಲಾಯಿತು. ಮಣ್ಣು ಅರೆಯುವ ಯಂತ್ರಗಳೊಂದಿಗೆ ಸಾಲುಗಟ್ಟಿ ನಿಂತಿದ್ದ ರೈತರ ವಿರುದ್ಧ ಹರಿಹಾಯ್ದ ಹರ್ಯಾಣ ಪೊಲೀಸರು ರೈತರನ್ನು ಕೆಳಗಿಳಿಸುವಂತೆ ಎಚ್ಚರಿಕೆ ನೀಡಿದ್ದಾರೆ.

‘ಮಾತುಕತೆಗಳನ್ನು ಹೈಜಾಕ್ ಮಾಡಲು ಪ್ರಯತ್ನಿಸುತ್ತಿರುವ ಅಶಿಸ್ತಿನ ಅಂಶಗಳ’ ವಿರುದ್ಧ ಎಚ್ಚರಿಕೆ ನೀಡಿದ ಕೃಷಿ ಸಚಿವ ಅರ್ಜುನ್ ಮುಂಡಾ, ಐದನೇ ಸುತ್ತಿನ ಚರ್ಚೆಗಾಗಿ ರೈತರನ್ನು ಸಂಧಾನದ ಮೇಜಿಗೆ ಮರಳಿ ಆಹ್ವಾನಿಸಿದ್ದಾರೆ; ಶಾಂತಿಯುತವಾಗಿರಲು ಪ್ರತಿಭಟನಾಕಾರರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ದೆಹಲಿ ಚಲೋ ರೈತರ ಪ್ರತಿಭಟನೆ: ತಲೆಗೆ ಪೆಟ್ಟು ಬಿದ್ದು ಪ್ರತಿಭಟನಾನಿರತ ಯುವ ರೈತ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...