Homeಮುಖಪುಟತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

ತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

- Advertisement -
- Advertisement -

ಕ್ರಿಮಿನಲ್ ಪ್ರಕರಣವೊಂದರಲ್ಲಿ ಅರಬ್‌ನಲ್ಲಿ ಶಿಕ್ಷೆಗೆ ಗುರಿಯಾಗಿದ್ದ ತೆಲಂಗಾಣದ ಐವರು ಪುರುಷರು 18 ವರ್ಷಗಳ ನಂತರ ದುಬೈನಿಂದ ತವರಿಗೆ ಮರಳಿದ್ದಾರೆ. ತಮ್ಮವರನ್ನು ಕಂಡ ಖುಷಿಯಲ್ಲಿ, ವಿಮಾನ ನಿಲ್ದಾಣದಲ್ಲೇ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

ತಮ್ಮ ವಾಪಸಾತಿಗೆ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕ ಕೆಟಿ ರಾಮರಾವ್ (ಕೆಟಿಆರ್) ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಹೇಳಿರುವ ಎಲ್ಲ ಐವರು ಪುರುಷರು ರಾಜ್ಯದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯ ನಿವಾಸಿಗಳು. ಬಿಆರ್‌ಎಸ್‌ ಪಕ್ಷವು ಅವರ ಕುಟುಂಬ ಸದಸ್ಯರೊಂದಿಗೆ ನಿವಾಸಿಗಳ ಪುನರ್ಮಿಲನದ ಭಾವನಾತ್ಮಕ ವೀಡಿಯೊವನ್ನು ಹಂಚಿಕೊಂಡಿದೆ.

ಐದು ಜನರ ಮೇಲೆ ಕ್ರಿಮಿನಲ್ ಆರೋಪ

ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ನಿವಾಸಿಗಳಾದ ಶಿವರಾತ್ರಿ ಮಲ್ಲೇಶ್, ಶಿವರಾತ್ರಿ ರವಿ, ಗೊಲ್ಲೆಂ ನಾಂಪಲ್ಲಿ, ದುಂಡುಗುಲ ಲಕ್ಷ್ಮಣ್ ಮತ್ತು ಶಿವರಾತ್ರಿ ಹನ್ಮಂತು ಎಂಬ ಐವರು ನೇಪಾಳದ ಪ್ರಜೆಯೊಬ್ಬರನ್ನು 2005ರಲ್ಲಿ ದುಬೈನಲ್ಲಿ ಕೆಲಸ ಮಾಡುತ್ತಿದ್ದಾಗ ಹತ್ಯೆ ಮಾಡಿದ ಆರೋಪದ ಮೇಲೆ, 25 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು.

ದುಬೈನಲ್ಲಿ ವಾಚ್‌ಮನ್ ಆಗಿ ಕೆಲಸ ಮಾಡುತ್ತಿದ್ದ ಬಹದ್ದೂರ್ ಸಿಂಗ್ ಎಂಬ ಮೃತ ನೇಪಾಳದ ಪ್ರಜೆಯ ಕುಟುಂಬವನ್ನು ಭೇಟಿ ಮಾಡಲು ಕೆಟಿಆರ್ ನೇಪಾಳಕ್ಕೆ ಹೋಗಿದ್ದರು ಎಂದು ಬಿಆರ್‌ಎಸ್ ಹೇಳಿಕೊಂಡಿದೆ. ದುಬೈನಲ್ಲಿನ ಕಾನೂನಿನ ಪ್ರಕಾರ, ಬಹದ್ದೂರ್ ಅವರ ಕುಟುಂಬ ಸದಸ್ಯರು ಕ್ಷಮೆ ನೀಡಿದರೆ ಐವರನ್ನು ಬಿಡುಗಡೆ ಮಾಡುವ ಸಾಧ್ಯತೆಯಿತ್ತು. ಆದ್ದರಿಂದ, ಕೆಟಿಆರ್ ಬಹದ್ದೂರ್ ಕುಟುಂಬಸ್ಥರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.

ನೇಪಾಳದ ಬಹದ್ದೂರ್ ಅವರ ಕುಟುಂಬ ಸದಸ್ಯರು, ವಕೀಲರು ಮತ್ತು ಇತರ ಪ್ರತಿನಿಧಿಗಳ ಸಹಾಯದಿಂದ ಕ್ಷಮಾದಾನಕ್ಕೆ ಸಹಿ ಹಾಕಿದರು. ನೇಪಾಳದ ಪ್ರಜೆಯ ಕುಟುಂಬಕ್ಕೆ ಕೆಟಿಆರ್ ₹15 ಲಕ್ಷ ಚೆಕ್ ನೀಡಿದ್ದಾರೆ ಎಂದು ಬಿಆರ್‌ಎಸ್ ಹೇಳಿಕೊಂಡಿದೆ.

‘ಬಿಆರ್‌ಎಸ್ ಕಾರ್ಯಾಧ್ಯಕ್ಷ ಮತ್ತು ಮಾಜಿ ಸಚಿವರ ಸತತ ಪ್ರಯತ್ನದಿಂದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ನಿವಾಸಿಗಳು 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಮನೆಗೆ ಮರಳಿದರು. ಮಾಜಿ ಸಚಿವ ಹಾಗೂ ಶಾಸಕರಾದ ಕೆಟಿಆರ್ ಅವರು  ಎಲ್ಲರಿಗೂ ವಿಮಾನ ಟಿಕೆಟ್ ವ್ಯವಸ್ಥೆ ಮಾಡಿದರು’ ಎಂದು ಬಿಆರ್‌ಎಸ್‌ ತನ್ನ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದೆ.

‘ಎರಡು ತಿಂಗಳ ಹಿಂದೆ ದುಬೈ ಜೈಲಿನಿಂದ ಬಿಡುಗಡೆಯಾಗಿದ್ದ ಕೋನರಾವ್ ಪೇಟೆ ಮಂಡಲದ ದಂಡುಂಗುಲ ಲಕ್ಷ್ಮಣ್. ಮತ್ತೊಬ್ಬ ರುದ್ರಂಗಿ ಮಂಡಲದ ಮನಾಳ ಗ್ರಾಮದ ಶಿವರಾತ್ರಿ ಹನ್ಮಂತು ಎರಡು ದಿನಗಳ ಹಿಂದೆ ಬಿಡುಗಡೆಗೊಂಡು ಮನೆಗೆ ತಲುಪಿದ್ದ. ದುಬೈ ನ್ಯಾಯಾಲಯದ ಕ್ಷಮಾದಾನದಿಂದಾಗಿ ಜಿಲ್ಲೆಯ ನಿವಾಸಿಗಳು ಮನೆಗೆ ತೆರಳುತ್ತಿದ್ದಾರೆ. ಪೆದ್ದೂರು ಗ್ರಾಮದ ಶಿವರಾತ್ರಿ ಮಲ್ಲೇಶಂ ಹಾಗೂ ರವಿ ಎಂಬ ಇಬ್ಬರು ಸಹೋದರರು ಇದೇ ತಿಂಗಳ 21ರಂದು ಬಿಡುಗಡೆಯಾಗಿದ್ದರು. ಚಂದೂರ್ತಿ ಮಂಡಲದ ಮತ್ತೊಬ್ಬ ವ್ಯಕ್ತಿ ವೆಂಕಟೇಶ್ ಮುಂದಿನ ತಿಂಗಳು ಬಿಡುಗಡೆಯಾಗಲಿದ್ದಾರೆ’ ಎಂದು ಬಿಆರ್‌ಎಸ್‌ ಹೇಳಿದೆ.

‘ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ಚಂದೂರ್ತಿ ಮಂಡಲದ ಕೋನರಾವ್ ಪೇಟೆ ಗ್ರಾಮದ ಗೋಲಂ ನಾಂಪಳ್ಳಿ, ಶಿವರಾತ್ರಿ ಹನುಮಂಡ್ಲು ಹಾಗೂ ದಂಡುಂಗುಲ ಲಕ್ಷ್ಮಣ್ ದುಬೈಗೆ ತೆರಳಿದ್ದರು. ಹೋದ ಆರು ತಿಂಗಳ ನಂತರ ನೇಪಾಳದ ಬಹದ್ದೂರ್ ಸಿಂಗ್ ಎಂಬ ಕಾವಲುಗಾರನ ಕೊಲೆ ಮಾಡಲಾಯಿತು. ಅಲ್ಲಿ ಕೆಲಸ ಮಾಡುತ್ತಿರುವ ಜಿಲ್ಲೆಯ ಐವರು ನಿವಾಸಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಭಾಷೆ ಸಂವಹನದ ಕಾರಣದಿಂದ ಪೊಲೀಸರಿಗೆ ಏನು ಹೇಳಿದ್ದಾರೋ ಗೊತ್ತಿಲ್ಲ. ಆದರೆ, ಶಿಕ್ಷೆ ಸಾಬೀತಾಗಿದ್ದು, ದುಬೈ ಕೋರ್ಟ್ ಆರಂಭದಲ್ಲಿ ಹತ್ತು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಮೇಲ್ಮನವಿ ಸಲ್ಲಿಸಿದ ನಂತರ, 25 ವರ್ಷಗಳ ಶಿಕ್ಷೆ ವಿಧಿಸಲಾಯಿತು. ದುಬೈನ ಕಾನೂನು ಪ್ರಕಾರ ಕೊಲೆಯಾದವರ ಕುಟುಂಬಸ್ಥರು ಕ್ಷಮೆ ಯಾಚಿಸಿದರೆ ಬಿಡುಗಡೆ ಸಾಧ್ಯತೆ ಇದ್ದು, 2011ರಲ್ಲಿ ಶಾಸಕ ಕೆ.ಟಿ.ಆರ್ ಒಮ್ಮೆ ನೇಪಾಳಕ್ಕೆ ತೆರಳಿದ್ದರು’ ಎಂದು ಹೇಳಿದೆ.

‘ನೇಪಾಳದ ಬಹದ್ದೂರ್ ಅವರ ಕುಟುಂಬ ಸದಸ್ಯರು ವಕೀಲ ಅನುರಾಧ ಮತ್ತು ಇತರ ಪ್ರತಿನಿಧಿಗಳ ಸಹಾಯದಿಂದ ಕ್ಷಮಾದಾನಕ್ಕೆ ಸಹಿ ಹಾಕಿದರು. ಆರ್ಥಿಕವಾಗಿ ಕೆಟಿಆರ್ ಅವರಿಗೆ ಹದಿನೈದು ಲಕ್ಷ ರೂಪಾಯಿ ಚೆಕ್ ನೀಡಿದರು. ಅವರ ಕ್ಷಮಾದಾನ ಅರ್ಜಿಯನ್ನು ದುಬೈ ನ್ಯಾಯಾಲಯವು ತಿರಸ್ಕರಿಸಿತು. ಇದು ದುಬೈನಲ್ಲಿನ ಕಾನೂನುಗಳ ಬದಲಾವಣೆಯಿಂದಾಗಿ ಅವರ ಬಿಡುಗಡೆಗೆ ತಡವಾಯಿತು. ಸೆಪ್ಟೆಂಬರ್‌ನಲ್ಲಿ ಸಚಿವ ಕೆಟಿಆರ್ ಅವರು ಸಂತ್ರಸ್ತೆಯ ಕುಟುಂಬ ಸದಸ್ಯರೊಂದಿಗೆ ದುಬೈ ಕೋರ್ಟ್‌ನಲ್ಲಿ ಪ್ರಕರಣವನ್ನು ಪರಿಶೀಲಿಸಿದರು ಮತ್ತು ಕೇಂದ್ರ ವಿದೇಶಾಂಗ ಸಚಿವಾಲಯದ ಸಹಾಯದಿಂದ ದುಬೈ ರಾಜನ ಅಪಾಯಿಂಟ್‌ಮೆಂಟ್ ಪಡೆದು ಈ ಪ್ರಕರಣದಲ್ಲಿ ಕ್ಷಮಾದಾನ ಕೋರಿದರು’ ಎಂದು ಪಕ್ಷ ಹೇಳಿಕೊಂಡಿದೆ.

ಇದನ್ನೂ ಓದಿ; ಹರಿಯಾಣ 160 ರೈತರನ್ನು ಗಾಯಗೊಳಿಸಿದ್ದರೂ ನಮ್ಮ ಪೊಲೀಸರು ಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ: ಪಂಜಾಬ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...