Homeಮುಖಪುಟತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

ತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

- Advertisement -
- Advertisement -

ಕ್ರಿಮಿನಲ್ ಪ್ರಕರಣವೊಂದರಲ್ಲಿ ಅರಬ್‌ನಲ್ಲಿ ಶಿಕ್ಷೆಗೆ ಗುರಿಯಾಗಿದ್ದ ತೆಲಂಗಾಣದ ಐವರು ಪುರುಷರು 18 ವರ್ಷಗಳ ನಂತರ ದುಬೈನಿಂದ ತವರಿಗೆ ಮರಳಿದ್ದಾರೆ. ತಮ್ಮವರನ್ನು ಕಂಡ ಖುಷಿಯಲ್ಲಿ, ವಿಮಾನ ನಿಲ್ದಾಣದಲ್ಲೇ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

ತಮ್ಮ ವಾಪಸಾತಿಗೆ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕ ಕೆಟಿ ರಾಮರಾವ್ (ಕೆಟಿಆರ್) ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಹೇಳಿರುವ ಎಲ್ಲ ಐವರು ಪುರುಷರು ರಾಜ್ಯದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯ ನಿವಾಸಿಗಳು. ಬಿಆರ್‌ಎಸ್‌ ಪಕ್ಷವು ಅವರ ಕುಟುಂಬ ಸದಸ್ಯರೊಂದಿಗೆ ನಿವಾಸಿಗಳ ಪುನರ್ಮಿಲನದ ಭಾವನಾತ್ಮಕ ವೀಡಿಯೊವನ್ನು ಹಂಚಿಕೊಂಡಿದೆ.

ಐದು ಜನರ ಮೇಲೆ ಕ್ರಿಮಿನಲ್ ಆರೋಪ

ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ನಿವಾಸಿಗಳಾದ ಶಿವರಾತ್ರಿ ಮಲ್ಲೇಶ್, ಶಿವರಾತ್ರಿ ರವಿ, ಗೊಲ್ಲೆಂ ನಾಂಪಲ್ಲಿ, ದುಂಡುಗುಲ ಲಕ್ಷ್ಮಣ್ ಮತ್ತು ಶಿವರಾತ್ರಿ ಹನ್ಮಂತು ಎಂಬ ಐವರು ನೇಪಾಳದ ಪ್ರಜೆಯೊಬ್ಬರನ್ನು 2005ರಲ್ಲಿ ದುಬೈನಲ್ಲಿ ಕೆಲಸ ಮಾಡುತ್ತಿದ್ದಾಗ ಹತ್ಯೆ ಮಾಡಿದ ಆರೋಪದ ಮೇಲೆ, 25 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು.

ದುಬೈನಲ್ಲಿ ವಾಚ್‌ಮನ್ ಆಗಿ ಕೆಲಸ ಮಾಡುತ್ತಿದ್ದ ಬಹದ್ದೂರ್ ಸಿಂಗ್ ಎಂಬ ಮೃತ ನೇಪಾಳದ ಪ್ರಜೆಯ ಕುಟುಂಬವನ್ನು ಭೇಟಿ ಮಾಡಲು ಕೆಟಿಆರ್ ನೇಪಾಳಕ್ಕೆ ಹೋಗಿದ್ದರು ಎಂದು ಬಿಆರ್‌ಎಸ್ ಹೇಳಿಕೊಂಡಿದೆ. ದುಬೈನಲ್ಲಿನ ಕಾನೂನಿನ ಪ್ರಕಾರ, ಬಹದ್ದೂರ್ ಅವರ ಕುಟುಂಬ ಸದಸ್ಯರು ಕ್ಷಮೆ ನೀಡಿದರೆ ಐವರನ್ನು ಬಿಡುಗಡೆ ಮಾಡುವ ಸಾಧ್ಯತೆಯಿತ್ತು. ಆದ್ದರಿಂದ, ಕೆಟಿಆರ್ ಬಹದ್ದೂರ್ ಕುಟುಂಬಸ್ಥರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.

ನೇಪಾಳದ ಬಹದ್ದೂರ್ ಅವರ ಕುಟುಂಬ ಸದಸ್ಯರು, ವಕೀಲರು ಮತ್ತು ಇತರ ಪ್ರತಿನಿಧಿಗಳ ಸಹಾಯದಿಂದ ಕ್ಷಮಾದಾನಕ್ಕೆ ಸಹಿ ಹಾಕಿದರು. ನೇಪಾಳದ ಪ್ರಜೆಯ ಕುಟುಂಬಕ್ಕೆ ಕೆಟಿಆರ್ ₹15 ಲಕ್ಷ ಚೆಕ್ ನೀಡಿದ್ದಾರೆ ಎಂದು ಬಿಆರ್‌ಎಸ್ ಹೇಳಿಕೊಂಡಿದೆ.

‘ಬಿಆರ್‌ಎಸ್ ಕಾರ್ಯಾಧ್ಯಕ್ಷ ಮತ್ತು ಮಾಜಿ ಸಚಿವರ ಸತತ ಪ್ರಯತ್ನದಿಂದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ನಿವಾಸಿಗಳು 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಮನೆಗೆ ಮರಳಿದರು. ಮಾಜಿ ಸಚಿವ ಹಾಗೂ ಶಾಸಕರಾದ ಕೆಟಿಆರ್ ಅವರು  ಎಲ್ಲರಿಗೂ ವಿಮಾನ ಟಿಕೆಟ್ ವ್ಯವಸ್ಥೆ ಮಾಡಿದರು’ ಎಂದು ಬಿಆರ್‌ಎಸ್‌ ತನ್ನ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದೆ.

‘ಎರಡು ತಿಂಗಳ ಹಿಂದೆ ದುಬೈ ಜೈಲಿನಿಂದ ಬಿಡುಗಡೆಯಾಗಿದ್ದ ಕೋನರಾವ್ ಪೇಟೆ ಮಂಡಲದ ದಂಡುಂಗುಲ ಲಕ್ಷ್ಮಣ್. ಮತ್ತೊಬ್ಬ ರುದ್ರಂಗಿ ಮಂಡಲದ ಮನಾಳ ಗ್ರಾಮದ ಶಿವರಾತ್ರಿ ಹನ್ಮಂತು ಎರಡು ದಿನಗಳ ಹಿಂದೆ ಬಿಡುಗಡೆಗೊಂಡು ಮನೆಗೆ ತಲುಪಿದ್ದ. ದುಬೈ ನ್ಯಾಯಾಲಯದ ಕ್ಷಮಾದಾನದಿಂದಾಗಿ ಜಿಲ್ಲೆಯ ನಿವಾಸಿಗಳು ಮನೆಗೆ ತೆರಳುತ್ತಿದ್ದಾರೆ. ಪೆದ್ದೂರು ಗ್ರಾಮದ ಶಿವರಾತ್ರಿ ಮಲ್ಲೇಶಂ ಹಾಗೂ ರವಿ ಎಂಬ ಇಬ್ಬರು ಸಹೋದರರು ಇದೇ ತಿಂಗಳ 21ರಂದು ಬಿಡುಗಡೆಯಾಗಿದ್ದರು. ಚಂದೂರ್ತಿ ಮಂಡಲದ ಮತ್ತೊಬ್ಬ ವ್ಯಕ್ತಿ ವೆಂಕಟೇಶ್ ಮುಂದಿನ ತಿಂಗಳು ಬಿಡುಗಡೆಯಾಗಲಿದ್ದಾರೆ’ ಎಂದು ಬಿಆರ್‌ಎಸ್‌ ಹೇಳಿದೆ.

‘ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ಚಂದೂರ್ತಿ ಮಂಡಲದ ಕೋನರಾವ್ ಪೇಟೆ ಗ್ರಾಮದ ಗೋಲಂ ನಾಂಪಳ್ಳಿ, ಶಿವರಾತ್ರಿ ಹನುಮಂಡ್ಲು ಹಾಗೂ ದಂಡುಂಗುಲ ಲಕ್ಷ್ಮಣ್ ದುಬೈಗೆ ತೆರಳಿದ್ದರು. ಹೋದ ಆರು ತಿಂಗಳ ನಂತರ ನೇಪಾಳದ ಬಹದ್ದೂರ್ ಸಿಂಗ್ ಎಂಬ ಕಾವಲುಗಾರನ ಕೊಲೆ ಮಾಡಲಾಯಿತು. ಅಲ್ಲಿ ಕೆಲಸ ಮಾಡುತ್ತಿರುವ ಜಿಲ್ಲೆಯ ಐವರು ನಿವಾಸಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಭಾಷೆ ಸಂವಹನದ ಕಾರಣದಿಂದ ಪೊಲೀಸರಿಗೆ ಏನು ಹೇಳಿದ್ದಾರೋ ಗೊತ್ತಿಲ್ಲ. ಆದರೆ, ಶಿಕ್ಷೆ ಸಾಬೀತಾಗಿದ್ದು, ದುಬೈ ಕೋರ್ಟ್ ಆರಂಭದಲ್ಲಿ ಹತ್ತು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಮೇಲ್ಮನವಿ ಸಲ್ಲಿಸಿದ ನಂತರ, 25 ವರ್ಷಗಳ ಶಿಕ್ಷೆ ವಿಧಿಸಲಾಯಿತು. ದುಬೈನ ಕಾನೂನು ಪ್ರಕಾರ ಕೊಲೆಯಾದವರ ಕುಟುಂಬಸ್ಥರು ಕ್ಷಮೆ ಯಾಚಿಸಿದರೆ ಬಿಡುಗಡೆ ಸಾಧ್ಯತೆ ಇದ್ದು, 2011ರಲ್ಲಿ ಶಾಸಕ ಕೆ.ಟಿ.ಆರ್ ಒಮ್ಮೆ ನೇಪಾಳಕ್ಕೆ ತೆರಳಿದ್ದರು’ ಎಂದು ಹೇಳಿದೆ.

‘ನೇಪಾಳದ ಬಹದ್ದೂರ್ ಅವರ ಕುಟುಂಬ ಸದಸ್ಯರು ವಕೀಲ ಅನುರಾಧ ಮತ್ತು ಇತರ ಪ್ರತಿನಿಧಿಗಳ ಸಹಾಯದಿಂದ ಕ್ಷಮಾದಾನಕ್ಕೆ ಸಹಿ ಹಾಕಿದರು. ಆರ್ಥಿಕವಾಗಿ ಕೆಟಿಆರ್ ಅವರಿಗೆ ಹದಿನೈದು ಲಕ್ಷ ರೂಪಾಯಿ ಚೆಕ್ ನೀಡಿದರು. ಅವರ ಕ್ಷಮಾದಾನ ಅರ್ಜಿಯನ್ನು ದುಬೈ ನ್ಯಾಯಾಲಯವು ತಿರಸ್ಕರಿಸಿತು. ಇದು ದುಬೈನಲ್ಲಿನ ಕಾನೂನುಗಳ ಬದಲಾವಣೆಯಿಂದಾಗಿ ಅವರ ಬಿಡುಗಡೆಗೆ ತಡವಾಯಿತು. ಸೆಪ್ಟೆಂಬರ್‌ನಲ್ಲಿ ಸಚಿವ ಕೆಟಿಆರ್ ಅವರು ಸಂತ್ರಸ್ತೆಯ ಕುಟುಂಬ ಸದಸ್ಯರೊಂದಿಗೆ ದುಬೈ ಕೋರ್ಟ್‌ನಲ್ಲಿ ಪ್ರಕರಣವನ್ನು ಪರಿಶೀಲಿಸಿದರು ಮತ್ತು ಕೇಂದ್ರ ವಿದೇಶಾಂಗ ಸಚಿವಾಲಯದ ಸಹಾಯದಿಂದ ದುಬೈ ರಾಜನ ಅಪಾಯಿಂಟ್‌ಮೆಂಟ್ ಪಡೆದು ಈ ಪ್ರಕರಣದಲ್ಲಿ ಕ್ಷಮಾದಾನ ಕೋರಿದರು’ ಎಂದು ಪಕ್ಷ ಹೇಳಿಕೊಂಡಿದೆ.

ಇದನ್ನೂ ಓದಿ; ಹರಿಯಾಣ 160 ರೈತರನ್ನು ಗಾಯಗೊಳಿಸಿದ್ದರೂ ನಮ್ಮ ಪೊಲೀಸರು ಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ: ಪಂಜಾಬ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...