Homeಕರ್ನಾಟಕಒಕ್ಕೂಟ ವ್ಯವಸ್ಥೆಗೆ ನರೇಂದ್ರ ಮೋದಿ ಅಪಾಯಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ 

ಒಕ್ಕೂಟ ವ್ಯವಸ್ಥೆಗೆ ನರೇಂದ್ರ ಮೋದಿ ಅಪಾಯಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ 

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಯುಪಿಎ ಸರ್ಕಾರದ ಬಗ್ಗೆ ಮೋದಿ ಅವರು ಹಿಂದೆ ಹೇಳಿದ್ದ ಮಾತನ್ನು ಉಲ್ಲೇಖಿಸಿ ತಿರುಗೇಟು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಮೋದಿಯವರು ಒಕ್ಕೂಟ ವ್ಯವಸ್ಥೆಗೆ ಅಪಾಯ’ ಎಂದು ತಿರುಗೇಟು ನೀಡಿದರು.

ಮೋದಿ ಅವರು ಸಿ.ಎಂ ಆಗಿದ್ದಾಗ ಗುಜರಾತ್ ರಾಜ್ಯಕ್ಕೆ ಶೇ.50 ರಷ್ಟು ತೆರಿಗೆ ಪಾಲು ಕೇಳಿದ್ದರು. ಈಗ ಅವರು ಪ್ರಧಾನಿ ಆಗಿ ಕರ್ನಾಟಕ ರಾಜ್ಯಕ್ಕೆ ಕೇವಲ ಶೇ.12 ರಷ್ಟು ವಾಪಾಸ್ ಕೊಡುತ್ತಿದ್ದಾರೆ. ಮೋದಿ ಅವರ ಮಾತು ಮತ್ತು ವರ್ತನೆಗೆ ಅಂಕಿ ಅಂಶಗಳ ಕನ್ನಡಿ ಹಿಡಿದಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

ವಿಧಾನ‌ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವಾಗ, ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ವಿವರಿಸುವಾಗ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಬಿಸಿ ಬಿಸಿ ವಾಗ್ವಾದ ನಡೆಯಿತು.

ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿ ಇದ್ದಾಗ ನಡೆದಿದ್ದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ  ಮುಖ್ಯಮಂತ್ರಿ ಆಗಿದ್ದ ಮೋದಿಯವರು, ಯುಪಿಎ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಎಂದು ಹೇಳಿದ್ದ ಮಾತನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿದರು.

‘ಮೋದಿ ಅವರು ಪ್ರಧಾನ ಮಂತ್ರಿ ಆಗಿದ್ದಾಗ, ರಾಜ್ಯಗಳು ಕೇಂದ್ರದ ಮುಂದೆ ಭಿಕ್ಷುಕರಲ್ಲ. ಗುಜರಾತ್ ರಾಜ್ಯದಿಂದ ಸಂಗ್ರಹ ಆಗುವ ತೆರಿಗೆಯಲ್ಲಿ ಶೇ.50 ರಷ್ಟು ವಾಪಾಸ್ ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. ಗುಜರಾತ್ ರಾಜ್ಯದ ತೆರಿಗೆಯನ್ನು ನಾವು ಕೇಂದ್ರಕ್ಕೆ ಕೊಡುವುದಿಲ್ಲ ಎನ್ನುವ ಮಾತನ್ನೂ ಮೋದಿ ಅವರು ಆಡಿದ್ದರು. ಆದರೆ, ಈಗ ಅದೇ ಮೋದಿ ಅವರು ಪ್ರಧಾನಿ ಆಗಿರುವಾಗ ಕರ್ನಾಟಕ ರಾಜ್ಯಕ್ಕೆ ವಾಪಾಸ್ ಕೊಡುತ್ತಿರುವುದು ಶೇ. 12-13 ರಷ್ಟು ಮಾತ್ರ. ಮೋದಿ ಅವರು ಆಗೊಂದು ಮಾತು ಈಗೊಂದು ರೀತಿ ಮಾತನಾಡಿದ್ದಾರೆ. ಇದನ್ನು ಪ್ರಸ್ತಾಪಿಸಿದರೆ ನಿಮಗೇಕೆ ಸಿಟ್ಟು’ ಎಂದು ಮುಖ್ಯಮಂತ್ರಿಗಳು ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದರು.

‘ನಾವು ಕೊಡುವ ಪ್ರತಿ 100 ರೂಪಾಯಿಗೆ ಕೇವಲ 12 ರೂ. ವಾಪಾಸ್ ಕೊಟ್ಟರೆ ರಾಜ್ಯದ ಅಭಿವೃದ್ಧಿ ಆಗಲು ಹೇಗೆ ಸಾಧ್ಯ? ಇಷ್ಟು ಕಡಿಮೆ ಪಾಲು ನಮಗೆ ಕೊಟ್ಟರೆ ರಾಜ್ಯದ ಶೂದ್ರರು, ದಲಿತರು, ಆದಿವಾಸಿಗಳು, ದುಡಿಯುವವರು, ಶ್ರಮಿಕರು, ಯುವಕರ, ಮಹಿಳೆಯರ ಅಭಿವೃದ್ಧಿ ಹೇಗೆ ಸಾಧ್ಯ’ ಎಂದು ಬಿಜೆಪಿಗರನ್ನು ಪ್ರಶ್ನಿಸಿದರು.

‘ಕೇಂದ್ರದಿಂದ ರಾಜ್ಯಕ್ಕೆ  ಬರುತ್ತಿರುವ ಹಣದ ಪಾಲಿನಲ್ಲಿ ಅನ್ಯಾಯವಾದುದು. 2018-19ರಲ್ಲಿ ಕೇಂದ್ರ ಬಜೆಟ್ ಗಾತ್ರ ₹24,44,213 ಕೋಟಿ ಇತ್ತು. ಅಂದು ರಾಜ್ಯಕ್ಕೆ ₹51000 ಕೋಟಿ ಮಾತ್ರ ಬಂತು. 2020-21 ಸಾಲಿನಲ್ಲಿ ಕೇಂದ್ರದ ಬಜೆಟ್ ಗಾತ್ರ ₹30,42,243 ಕೋಟಿ ಇದ್ದರೆ ನಮಗೆ ಬಂದಿದ್ದು ₹31734ಕೋಟಿ. 2021-22 ರಲ್ಲಿ ₹34,83,236 ಕೋಟಿ ಗಾತ್ರದ ಬಜೆಟ್ಟಿನಲ್ಲಿ ರಾಜ್ಯಕ್ಕೆ ₹48589 ಕೋಟಿ ಬಂತು. 2022-23ರಲ್ಲಿ ಕೇಂದ್ರದ ಬಜೆಟ್ ₹4181232 ಕೋಟಿ, ಆಗ ರಾಜ್ಯಕ್ಕೆ ₹53510 ಕೋಟಿ ಮಾತ್ರ ಬಂತು. 2023-24ರಲ್ಲಿ ₹45,03007 ಕೋಟಿ ಕೇಂದ್ರದ ಬಜೆಟ್ ಗಾತ್ರ. ರಾಜ್ಯಕ್ಕೆ ಬಂದಿದ್ದು ₹50257 ಕೋಟಿ ಮಾತ್ರ. 2024-25ರಲ್ಲಿ ರಾಜ್ಯಕ್ಕೆ ₹59785 ಕೋಟಿ ಬರುತ್ತದೆ’ ಎಂದು ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಆರ್ಥಿಕ ಅನ್ಯಾಯದ ಅಂಕಿ ಅಂಶಗಳನ್ನು ಬಿಚ್ಚಿಟ್ಟರು.

‘ಬಜೆಟ್ ಗಾತ್ರ ದೊಡ್ಡದಾದರೂ, ನಮಗೆ ಬರುತ್ತಿರುವ ಪಾಲು ಕಡಿಮೆಯಾಗುತ್ತಿದೆ. ಪ್ರಧಾನಿ ಅವರು ರಾಷ್ಟ್ರಪತಿಗಳ ಭಾಷಣದ ಚರ್ಚೆಗೆ ಉತ್ತರಿಸುತ್ತಾ, ರಾಜ್ಯದ ತೆರಿಗೆ ಪ್ರತಿಭಟನೆಯನ್ನು ಗುರಿಯಾಗಿಸಿಕೊಂಡು ‘ದೇಶದ ಐಕ್ಯತೆಗೆ ಅಪಾಯವೊಡ್ಡುತ್ತದೆ’ ಎಂದಿದ್ದರು. ಅದೇ ಪ್ರಧಾನಿ ಮಂತ್ರಿಗಳು ಗುಜರಾತಿನ ಸಿಎಂ ಆಗಿದ್ದಾಗ  2012 ರಲ್ಲಿ ಗುಜರಾತಿಗೆ ಬರುತ್ತಿರುವ ಆರ್ಥಿಕ ಪಾಲನ್ನು ವಿರೋಧಿಸಿದ್ದರು. ಗುಜರಾತ್ ರಾಜ್ಯ ’ನಾವು ಭಿಕ್ಷುಕ ರಾಜ್ಯವೇ, ನಾವು ಭಿಕ್ಷುಕರೆ, ನಾವು ಕೇಂದ್ರದ ಕರುಣೆಯ ಮೇಲೆ ಬದುಕಬೇಕೆ’ ಎಂದಿದ್ದರು. ಅಂದಿನ ಕೇಂದ್ರಕ್ಕೆ ‘ಗುಜರಾತಿನಿಂದ ತೆರಿಗೆ ತೆಗೆದುಕೊಳ್ಳಬೇಡಿ, ಅದನ್ನು ನಾವೇ ಬಳಸಿಕೊಳ್ಳುತ್ತೇವೆ’ಎಂದು ಮೋದಿ ಅವರು ಅಂದಿದ್ದರು. ಇದು ಸಂವಿಧಾನ, ಒಕ್ಕೂಟ ವ್ಯವಸ್ಥೆಗೆ ವಿರೋಧವಲ್ಲವೇ’ ಎಂದು ಅಂದಿನ ಮೋದಿಯವರ ಮಾತನ್ನೇ ಉಲ್ಲೇಖಿಸಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ; ತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...