Homeಮುಖಪುಟಬಲಪಂಥೀಯ ವಿದ್ಯಾರ್ಥಿಗಳ ಸಂಭ್ರಮಾಚರಣೆಗೆ ವಿರೋಧಿಸಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ IIPS ವಿದ್ಯಾರ್ಥಿಯ ಬಂಧನ

ಬಲಪಂಥೀಯ ವಿದ್ಯಾರ್ಥಿಗಳ ಸಂಭ್ರಮಾಚರಣೆಗೆ ವಿರೋಧಿಸಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ IIPS ವಿದ್ಯಾರ್ಥಿಯ ಬಂಧನ

- Advertisement -
- Advertisement -

ಜನವರಿ 22ರಂದು ನಡೆದಿದ್ದ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಸಂಬಂಧಿಸಿ ಇಂಟರ್ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಪಾಪ್ಯುಲೇಶನ್ ಸೈನ್ಸಸ್ (ಐಐಪಿಎಸ್)ನ ಕ್ಯಾಂಪಸ್‌ನಲ್ಲಿ ಬಲಪಂಥೀಯ ಕಾರ್ಯಕರ್ತರ ಸಂಭ್ರಮಾಚರಣೆಗೆ ಅವಕಾಶ ನಿರಾಕರಿಸುವಂತೆ ವಾಟ್ಸಾಪ್‌ನಲ್ಲಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ ಮತ್ತು ಸಂಸ್ಥೆಯ ನಿರ್ದೇಶಕರಿಗೆ ಪತ್ರ ಬರೆದ ತಂಡದಲ್ಲಿದ್ದ ವಿದ್ಯಾರ್ಥಿಯನ್ನು ಮುಂಬೈನ ಗೋವಂಡಿ ಪೊಲೀಸ್ ಠಾಣೆಯು ಪೊಲೀಸರು ಬಂಧಿಸಿದ್ದಾರೆ. ಇದು ಈ ಪ್ರಕರಣದಲ್ಲಿ ಇದುವರೆಗೆ ನಡೆದ ಎರಡನೇ ಬಂಧನವಾಗಿದೆ.

ಈ ವಿದ್ಯಾರ್ಥಿಯ ಪೋಸ್ಟ್‌ನ ಸ್ಕ್ರೀನ್‌ಶಾಟ್‌ನ್ನು ಪೋಸ್ಟ್ ಮಾಡಿದ ಇನ್ನೊಬ್ಬ ವಿದ್ಯಾರ್ಥಿಯನ್ನು ಜನವರಿ 22 ರಂದು ಪೊಲೀಸರು ಬಂಧಿಸಿ ಎರಡು ದಿನಗಳ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು. ವಿದ್ಯಾರ್ಥಿಯ ಸಹಪಾಠಿಗಳ ಪ್ರಕಾರ, ಪೊಲೀಸರು ಫೆಬ್ರವರಿ 21ರ ಮುಂಜಾನೆ ಐಐಪಿಎಸ್ ಕ್ಯಾಂಪಸ್‌ನಲ್ಲೇ ಆರೋಪಿತ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ.

ಸಂಸ್ಥೆಯ ನಿರ್ದೇಶಕ ಡಾ.ಎಸ್.ಕೆ. ಸಿಂಗ್ ಮತ್ತು ಅದರ ಮುಖ್ಯ ನಿರ್ವಾಹಕರು ಮತ್ತು ರಿಜಿಸ್ಟ್ರಾರ್ ಪ್ರಶಾಂತ್ ಬೋರ್ಡೆ ಅವರನ್ನು ಈ ಬಗ್ಗೆ ಮಾದ್ಯಮಗಳು ಸಂಪರ್ಕಿಸಿದಾಗ ಅವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ದಿ ವೈರ್‌ ವರದಿ ಹೇಳಿದೆ. ಬಂಧನದ ಬಗ್ಗೆ ದಿ ವೈರ್‌ನ ಪ್ರಶ್ನೆಗೆ ಉತ್ತರಿಸಿದ ಸಂಸ್ಥೆಯ ನಿರ್ದೇಶಕ ಡಾ.ಎಸ್.ಕೆ. ಸಿಂಗ್, ದಯವಿಟ್ಟು ನಾಳೆ ಐಐಪಿಎಸ್‌ಗೆ ಭೇಟಿ ನೀಡಿ, ಸುಳ್ಳು ಪ್ರಚಾರ ಮಾಡುವ ಬದಲು ಸತ್ಯವನ್ನು ಕಂಡುಕೊಳ್ಳಿ ಎಂದು ಹೇಳಿದ್ದಾರೆ. ಆದರೆ ಬಂಧನದ ಮಾಹಿತಿಯು ಸತ್ಯವಲ್ಲವೇ ಎಂದು ವರದಿಗಾರರು ಕೇಳಿದಾಗ, ಸಿಂಗ್ ಸ್ಪಷ್ಟಪಡಿಸಲಿಲ್ಲ ಎಂದು ವೈರ್‌ ವರದಿಯಲ್ಲಿ ಉಲ್ಲೇಖಿಸಿದೆ.

ರಾಮಮಂದಿರ ಉದ್ಘಾಟನೆ ವೇಳೆ ಐಐಪಿಎಸ್ ಸಂಸ್ಥೆಯಲ್ಲಿ ಬಲಪಂಥೀಯ ವಿದ್ಯಾರ್ಥಿಗಳು ಸಂಭ್ರಮಾಚರಣೆ ನಡೆಸಿದ್ದರು. ಬಹುಜನ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳ ಗುಂಪು, ಕ್ಯಾಂಪಸ್‌ನಲ್ಲಿ ಆಚರಣೆಗೆ ಅವಕಾಶ ನೀಡುವುದರ ಹಿಂದಿನ ಸಮಸ್ಯೆಯ ಕುರಿತು ಸಿಂಗ್‌ಗೆ ಪತ್ರವನ್ನು ಬರೆದಿದ್ದರು. ಪತ್ರವು ಗೌಪ್ಯವಾಗಿತ್ತು ಮತ್ತು ಅದರಲ್ಲಿ ಕನಿಷ್ಠ 35 ಮಂದಿ ವಿದ್ಯಾರ್ಥಿಗಳು ಸಹಿ ಮಾಡಿದ್ದರು. ಬಳಿಕ ಪತ್ರವು ಸೋರಿಕೆಯು ಕ್ಯಾಂಪಸ್‌ನಲ್ಲಿ ಮತ್ತು ಹೊರಗಿನ ಬಲಪಂಥೀಯ ಕಾರ್ಯಕರ್ತರಿಗೆ ತಲುಪಿದೆ.

ಸಹಿ ಮಾಡಿದವರಲ್ಲಿ ಓರ್ವನಾದ ಮಹಾರಾಷ್ಟ್ರದ ದಲಿತ ಸಮುದಾಯಕ್ಕೆ ಸೇರಿದ 23 ವರ್ಷದ ವಿದ್ಯಾರ್ಥಿಯನ್ನು ಮೊದಲು ಬಂಧಿಸಲಾಗಿತ್ತು. ಪೊಲೀಸರು ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153(A) ಮತ್ತು 295(A)ಯಡಿ ಪ್ರಕರಣವನ್ನು ದಾಖಲಿಸಿದ್ದಾರೆ. ಈತ ರಾಮಮಂದಿರ ಉದ್ಘಾಟನೆ ದಿನ ಕ್ಯಾಂಪಸ್‌ನಲ್ಲಿ ಆಚರಣೆಯನ್ನು ಟೀಕಿಸುವ ಪೋಸ್ಟ್‌ನ ಸ್ಕ್ರೀನ್‌ಶಾಟ್‌ನ್ನು ಮಾತ್ರ ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು.

ಪೊಲೀಸರು ತನಿಖೆಯ ಸಮಯದಲ್ಲಿ ಪೋಸ್ಟ್‌ನ ಮೂಲವನ್ನು ಕಂಡುಹಿಡಿದರು ಮತ್ತು ಇತರ ವಿದ್ಯಾರ್ಥಿಯನ್ನು ಹಲವು ಬಾರಿ ವಿಚಾರಣೆಗೆ ಕರೆದಿದ್ದರು. ಮೂಲತಃ ಕೇರಳದ ಈ ವಿದ್ಯಾರ್ಥಿ ಕೆಲವು ವಾರಗಳ ಹಿಂದೆ ತನ್ನ ಊರಿಗೆ ಮರಳಿದ್ದ. ಇದೀಗ ವಿದ್ಯಾರ್ಥಿ ಕ್ಯಾಂಪಸ್‌ಗೆ ತೆರಳಿದ್ದು, ಆತನಿಗೆ ಪೊಲೀಸರು ಬಂಧಿಸಿದ್ದಾರೆ ಎಂದು ಇತರ ವಿದ್ಯಾರ್ಥಿಗಳು ಹೇಳಿದ್ದಾರೆ. ಕೇರಳದಲ್ಲಿರುವ ವಿದ್ಯಾರ್ಥಿಯ ಕುಟುಂಬ ಕೂಡ ವಿದ್ಯಾರ್ಥಿಯ ಬಂಧನದ ಸುದ್ದಿಯನ್ನು ಖಚಿತಪಡಿಸಿದೆ. ವಿದ್ಯಾರ್ಥಿಯನ್ನು ಇಂದು ಮುಂಬೈನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿದು ಬಂದಿದೆ.

ನಿರ್ದೇಶಕರಿಗೆ ಬರೆದ ಪತ್ರದಲ್ಲಿ ವಿದ್ಯಾರ್ಥಿಗಳು ಹೀಗೆ ಬರೆದಿದ್ದಾರೆ: ಐಐಪಿಎಸ್ ಬಹುಸಂಸ್ಕೃತಿಯ ಕ್ಯಾಂಪಸ್ ಆಗಿದ್ದು, ಗಣೇಶ ಚತುರ್ಥಿ, ದಸರಾ, ಕ್ರಿಸ್‌ಮಸ್ ಇತ್ಯಾದಿಗಳನ್ನು ಒಳಗೊಂಡಂತೆ ವಿವಿಧ ಆಚರಣೆಗಳನ್ನು ಆಯೋಜಿಸುತ್ತದೆ, ಭಾರತದಂತಹ ರಾಜ್ಯ ಇದು ವೈವಿಧ್ಯಮಯ ರಾಷ್ಟ್ರಕ್ಕೆ ಸಮೃದ್ಧಿಯನ್ನು ನೀಡಬಲ್ಲ ಜಾತ್ಯತೀತ ಯುವ ಪೀಳಿಗೆಯನ್ನು ರೂಪಿಸುವ ಭರವಸೆಯನ್ನು ಸಾರುತ್ತದೆ. ಆದರೆ ರಾಮ ಮಂದಿರದ ಪ್ರತಿಷ್ಠಾಪನೆಯ ಆಚರಣೆಯು ಐಐಪಿಎಸ್‌ನಂತಹ ಸಂಸ್ಥೆಯಲ್ಲಿ ಆಚರಿಸುವಾಗ ವಿದ್ಯಾರ್ಥಿಗಳ ಜಾತ್ಯತೀತ ಭಾವನೆಗಳಿಗೆ ಹಾನಿಯುಂಟುಮಾಡುತ್ತದೆ. ಇದು ವಿವಿಧ ಸಂಘಟನೆಗಳಿಂದ ಆಯೋಜಿಸಲಾದ ರಾಜಕೀಯ ಅಜೆಂಡಾದ ಕಾರ್ಯವಾಗಿದೆ, ಅಂತಹ ಆಚರಣೆಗಳನ್ನು ಇಲ್ಲಿ ಮಾಡಬಾರದು. ದ್ವೇಷ ಮತ್ತು ಭಯವನ್ನು ಹರಡುವ ಮೂಲಕ ವಿದ್ಯಾರ್ಥಿಗಳ ನಡುವಿನ ಭ್ರಾತೃತ್ವವನ್ನು ನಾಶಪಡಿಸುವ  ಸಾಮರ್ಥ್ಯವನ್ನು ಹೊಂದಿದೆ. ಆದ್ದರಿಂದ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಆಚರಣೆಗಳ ಮೇಲೆ ನಿರ್ಬಂಧಗಳನ್ನು ಹೇರುವಂತೆ ಕೋರಿದ್ದರು.

ಇದನ್ನು ಓದಿ: ರಾಮನಗರ: ವಕೀಲರ ಪ್ರತಿಭಟನೆ; ಐಜೂರು ಠಾಣೆ ಪಿಎಸ್‌ಐ ತನ್ವೀರ್ ಹುಸೇನ್ ಅಮಾನತು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...