Homeಮುಖಪುಟಬಲಪಂಥೀಯ ವಿದ್ಯಾರ್ಥಿಗಳ ಸಂಭ್ರಮಾಚರಣೆಗೆ ವಿರೋಧಿಸಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ IIPS ವಿದ್ಯಾರ್ಥಿಯ ಬಂಧನ

ಬಲಪಂಥೀಯ ವಿದ್ಯಾರ್ಥಿಗಳ ಸಂಭ್ರಮಾಚರಣೆಗೆ ವಿರೋಧಿಸಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ IIPS ವಿದ್ಯಾರ್ಥಿಯ ಬಂಧನ

- Advertisement -
- Advertisement -

ಜನವರಿ 22ರಂದು ನಡೆದಿದ್ದ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಸಂಬಂಧಿಸಿ ಇಂಟರ್ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಪಾಪ್ಯುಲೇಶನ್ ಸೈನ್ಸಸ್ (ಐಐಪಿಎಸ್)ನ ಕ್ಯಾಂಪಸ್‌ನಲ್ಲಿ ಬಲಪಂಥೀಯ ಕಾರ್ಯಕರ್ತರ ಸಂಭ್ರಮಾಚರಣೆಗೆ ಅವಕಾಶ ನಿರಾಕರಿಸುವಂತೆ ವಾಟ್ಸಾಪ್‌ನಲ್ಲಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ ಮತ್ತು ಸಂಸ್ಥೆಯ ನಿರ್ದೇಶಕರಿಗೆ ಪತ್ರ ಬರೆದ ತಂಡದಲ್ಲಿದ್ದ ವಿದ್ಯಾರ್ಥಿಯನ್ನು ಮುಂಬೈನ ಗೋವಂಡಿ ಪೊಲೀಸ್ ಠಾಣೆಯು ಪೊಲೀಸರು ಬಂಧಿಸಿದ್ದಾರೆ. ಇದು ಈ ಪ್ರಕರಣದಲ್ಲಿ ಇದುವರೆಗೆ ನಡೆದ ಎರಡನೇ ಬಂಧನವಾಗಿದೆ.

ಈ ವಿದ್ಯಾರ್ಥಿಯ ಪೋಸ್ಟ್‌ನ ಸ್ಕ್ರೀನ್‌ಶಾಟ್‌ನ್ನು ಪೋಸ್ಟ್ ಮಾಡಿದ ಇನ್ನೊಬ್ಬ ವಿದ್ಯಾರ್ಥಿಯನ್ನು ಜನವರಿ 22 ರಂದು ಪೊಲೀಸರು ಬಂಧಿಸಿ ಎರಡು ದಿನಗಳ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು. ವಿದ್ಯಾರ್ಥಿಯ ಸಹಪಾಠಿಗಳ ಪ್ರಕಾರ, ಪೊಲೀಸರು ಫೆಬ್ರವರಿ 21ರ ಮುಂಜಾನೆ ಐಐಪಿಎಸ್ ಕ್ಯಾಂಪಸ್‌ನಲ್ಲೇ ಆರೋಪಿತ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ.

ಸಂಸ್ಥೆಯ ನಿರ್ದೇಶಕ ಡಾ.ಎಸ್.ಕೆ. ಸಿಂಗ್ ಮತ್ತು ಅದರ ಮುಖ್ಯ ನಿರ್ವಾಹಕರು ಮತ್ತು ರಿಜಿಸ್ಟ್ರಾರ್ ಪ್ರಶಾಂತ್ ಬೋರ್ಡೆ ಅವರನ್ನು ಈ ಬಗ್ಗೆ ಮಾದ್ಯಮಗಳು ಸಂಪರ್ಕಿಸಿದಾಗ ಅವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ದಿ ವೈರ್‌ ವರದಿ ಹೇಳಿದೆ. ಬಂಧನದ ಬಗ್ಗೆ ದಿ ವೈರ್‌ನ ಪ್ರಶ್ನೆಗೆ ಉತ್ತರಿಸಿದ ಸಂಸ್ಥೆಯ ನಿರ್ದೇಶಕ ಡಾ.ಎಸ್.ಕೆ. ಸಿಂಗ್, ದಯವಿಟ್ಟು ನಾಳೆ ಐಐಪಿಎಸ್‌ಗೆ ಭೇಟಿ ನೀಡಿ, ಸುಳ್ಳು ಪ್ರಚಾರ ಮಾಡುವ ಬದಲು ಸತ್ಯವನ್ನು ಕಂಡುಕೊಳ್ಳಿ ಎಂದು ಹೇಳಿದ್ದಾರೆ. ಆದರೆ ಬಂಧನದ ಮಾಹಿತಿಯು ಸತ್ಯವಲ್ಲವೇ ಎಂದು ವರದಿಗಾರರು ಕೇಳಿದಾಗ, ಸಿಂಗ್ ಸ್ಪಷ್ಟಪಡಿಸಲಿಲ್ಲ ಎಂದು ವೈರ್‌ ವರದಿಯಲ್ಲಿ ಉಲ್ಲೇಖಿಸಿದೆ.

ರಾಮಮಂದಿರ ಉದ್ಘಾಟನೆ ವೇಳೆ ಐಐಪಿಎಸ್ ಸಂಸ್ಥೆಯಲ್ಲಿ ಬಲಪಂಥೀಯ ವಿದ್ಯಾರ್ಥಿಗಳು ಸಂಭ್ರಮಾಚರಣೆ ನಡೆಸಿದ್ದರು. ಬಹುಜನ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳ ಗುಂಪು, ಕ್ಯಾಂಪಸ್‌ನಲ್ಲಿ ಆಚರಣೆಗೆ ಅವಕಾಶ ನೀಡುವುದರ ಹಿಂದಿನ ಸಮಸ್ಯೆಯ ಕುರಿತು ಸಿಂಗ್‌ಗೆ ಪತ್ರವನ್ನು ಬರೆದಿದ್ದರು. ಪತ್ರವು ಗೌಪ್ಯವಾಗಿತ್ತು ಮತ್ತು ಅದರಲ್ಲಿ ಕನಿಷ್ಠ 35 ಮಂದಿ ವಿದ್ಯಾರ್ಥಿಗಳು ಸಹಿ ಮಾಡಿದ್ದರು. ಬಳಿಕ ಪತ್ರವು ಸೋರಿಕೆಯು ಕ್ಯಾಂಪಸ್‌ನಲ್ಲಿ ಮತ್ತು ಹೊರಗಿನ ಬಲಪಂಥೀಯ ಕಾರ್ಯಕರ್ತರಿಗೆ ತಲುಪಿದೆ.

ಸಹಿ ಮಾಡಿದವರಲ್ಲಿ ಓರ್ವನಾದ ಮಹಾರಾಷ್ಟ್ರದ ದಲಿತ ಸಮುದಾಯಕ್ಕೆ ಸೇರಿದ 23 ವರ್ಷದ ವಿದ್ಯಾರ್ಥಿಯನ್ನು ಮೊದಲು ಬಂಧಿಸಲಾಗಿತ್ತು. ಪೊಲೀಸರು ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153(A) ಮತ್ತು 295(A)ಯಡಿ ಪ್ರಕರಣವನ್ನು ದಾಖಲಿಸಿದ್ದಾರೆ. ಈತ ರಾಮಮಂದಿರ ಉದ್ಘಾಟನೆ ದಿನ ಕ್ಯಾಂಪಸ್‌ನಲ್ಲಿ ಆಚರಣೆಯನ್ನು ಟೀಕಿಸುವ ಪೋಸ್ಟ್‌ನ ಸ್ಕ್ರೀನ್‌ಶಾಟ್‌ನ್ನು ಮಾತ್ರ ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು.

ಪೊಲೀಸರು ತನಿಖೆಯ ಸಮಯದಲ್ಲಿ ಪೋಸ್ಟ್‌ನ ಮೂಲವನ್ನು ಕಂಡುಹಿಡಿದರು ಮತ್ತು ಇತರ ವಿದ್ಯಾರ್ಥಿಯನ್ನು ಹಲವು ಬಾರಿ ವಿಚಾರಣೆಗೆ ಕರೆದಿದ್ದರು. ಮೂಲತಃ ಕೇರಳದ ಈ ವಿದ್ಯಾರ್ಥಿ ಕೆಲವು ವಾರಗಳ ಹಿಂದೆ ತನ್ನ ಊರಿಗೆ ಮರಳಿದ್ದ. ಇದೀಗ ವಿದ್ಯಾರ್ಥಿ ಕ್ಯಾಂಪಸ್‌ಗೆ ತೆರಳಿದ್ದು, ಆತನಿಗೆ ಪೊಲೀಸರು ಬಂಧಿಸಿದ್ದಾರೆ ಎಂದು ಇತರ ವಿದ್ಯಾರ್ಥಿಗಳು ಹೇಳಿದ್ದಾರೆ. ಕೇರಳದಲ್ಲಿರುವ ವಿದ್ಯಾರ್ಥಿಯ ಕುಟುಂಬ ಕೂಡ ವಿದ್ಯಾರ್ಥಿಯ ಬಂಧನದ ಸುದ್ದಿಯನ್ನು ಖಚಿತಪಡಿಸಿದೆ. ವಿದ್ಯಾರ್ಥಿಯನ್ನು ಇಂದು ಮುಂಬೈನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿದು ಬಂದಿದೆ.

ನಿರ್ದೇಶಕರಿಗೆ ಬರೆದ ಪತ್ರದಲ್ಲಿ ವಿದ್ಯಾರ್ಥಿಗಳು ಹೀಗೆ ಬರೆದಿದ್ದಾರೆ: ಐಐಪಿಎಸ್ ಬಹುಸಂಸ್ಕೃತಿಯ ಕ್ಯಾಂಪಸ್ ಆಗಿದ್ದು, ಗಣೇಶ ಚತುರ್ಥಿ, ದಸರಾ, ಕ್ರಿಸ್‌ಮಸ್ ಇತ್ಯಾದಿಗಳನ್ನು ಒಳಗೊಂಡಂತೆ ವಿವಿಧ ಆಚರಣೆಗಳನ್ನು ಆಯೋಜಿಸುತ್ತದೆ, ಭಾರತದಂತಹ ರಾಜ್ಯ ಇದು ವೈವಿಧ್ಯಮಯ ರಾಷ್ಟ್ರಕ್ಕೆ ಸಮೃದ್ಧಿಯನ್ನು ನೀಡಬಲ್ಲ ಜಾತ್ಯತೀತ ಯುವ ಪೀಳಿಗೆಯನ್ನು ರೂಪಿಸುವ ಭರವಸೆಯನ್ನು ಸಾರುತ್ತದೆ. ಆದರೆ ರಾಮ ಮಂದಿರದ ಪ್ರತಿಷ್ಠಾಪನೆಯ ಆಚರಣೆಯು ಐಐಪಿಎಸ್‌ನಂತಹ ಸಂಸ್ಥೆಯಲ್ಲಿ ಆಚರಿಸುವಾಗ ವಿದ್ಯಾರ್ಥಿಗಳ ಜಾತ್ಯತೀತ ಭಾವನೆಗಳಿಗೆ ಹಾನಿಯುಂಟುಮಾಡುತ್ತದೆ. ಇದು ವಿವಿಧ ಸಂಘಟನೆಗಳಿಂದ ಆಯೋಜಿಸಲಾದ ರಾಜಕೀಯ ಅಜೆಂಡಾದ ಕಾರ್ಯವಾಗಿದೆ, ಅಂತಹ ಆಚರಣೆಗಳನ್ನು ಇಲ್ಲಿ ಮಾಡಬಾರದು. ದ್ವೇಷ ಮತ್ತು ಭಯವನ್ನು ಹರಡುವ ಮೂಲಕ ವಿದ್ಯಾರ್ಥಿಗಳ ನಡುವಿನ ಭ್ರಾತೃತ್ವವನ್ನು ನಾಶಪಡಿಸುವ  ಸಾಮರ್ಥ್ಯವನ್ನು ಹೊಂದಿದೆ. ಆದ್ದರಿಂದ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಆಚರಣೆಗಳ ಮೇಲೆ ನಿರ್ಬಂಧಗಳನ್ನು ಹೇರುವಂತೆ ಕೋರಿದ್ದರು.

ಇದನ್ನು ಓದಿ: ರಾಮನಗರ: ವಕೀಲರ ಪ್ರತಿಭಟನೆ; ಐಜೂರು ಠಾಣೆ ಪಿಎಸ್‌ಐ ತನ್ವೀರ್ ಹುಸೇನ್ ಅಮಾನತು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...