Homeಮುಖಪುಟಕನ್ನಡಿಗರು ಸೇರಿದಂತೆ ಭಾರತೀಯ ಯುವಕರನ್ನು ಯುದ್ಧಕ್ಕೆ ಕಳುಹಿಸಿದ ರಷ್ಯಾ: ರಕ್ಷಿಸುವಂತೆ ಓವೈಸಿ ಮನವಿ

ಕನ್ನಡಿಗರು ಸೇರಿದಂತೆ ಭಾರತೀಯ ಯುವಕರನ್ನು ಯುದ್ಧಕ್ಕೆ ಕಳುಹಿಸಿದ ರಷ್ಯಾ: ರಕ್ಷಿಸುವಂತೆ ಓವೈಸಿ ಮನವಿ

- Advertisement -
- Advertisement -

ಉದ್ಯೋಗ ಭರವಸೆಯೊಂದಿಗೆ ಏಜೆಂಟರ ವಂಚನೆಗೆ ಒಳಗಾಗಿ ರಷ್ಯಾಗೆ ತೆರಳಿದ್ದ ಭಾರತೀಯ ಯುವಕರನ್ನು ಉಕ್ರೇನ್ ವಿರುದ್ದದ ಯುದ್ದಕ್ಕೆ ಕಳುಹಿಸಲಾಗಿದ್ದು, ಅವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆ ತರುವಂತೆ ಹೈದರಾಬಾದ್ ಸಂಸದ ಹಾಗೂ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ಧೀನ್ ಓವೈಸಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌ ಜೈಶಂಕರ್ ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ರಷ್ಯಾ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಯುವಕರ ಸಹಾಯಕ್ಕೆ ಧಾವಿಸುವಂತೆ ಓವೈಸಿ ಆಗ್ರಹಿಸಿದ್ದಾರೆ.

ನಿರುದ್ಯೋಗಿ ಯುವಕರನ್ನು ಕಟ್ಟಡಗಳಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ನೀಡುವ ಆಮಿಷವೊಡ್ಡಿ ರಷ್ಯಾಗೆ ಕಳುಹಿಸಲಾಗಿದೆ. ಬಳಿಕ ಅವರಿಗೆ ಶಸ್ತ್ರಾಸ್ತ್ರ ನಿರ್ವಹಣೆಯ ತರಬೇತಿ ಕೊಟ್ಟು ಬಲವಂತವಾಗಿ ಯುದ್ಧಭೂಮಿಗೆ ಕಳುಹಿಸಲಾಗಿದೆ. ಪ್ರಸ್ತುತ ಯುವಕರು ಉಕ್ರೇನ್ ಗಡಿಯ ಮಾರಿಯುಪೋಲ್, ಖಾರ್ಕಿವ್ ಮತ್ತು ಡೊನೆಟ್ಸ್ಕ್‌ ಪ್ರದೇಶಗಳಲ್ಲಿ ರಷ್ಯಾದ ಖಾಸಗಿ ಸೇನೆ ವ್ಯಾಗ್ನರ್‌ನ ಭಾಗವಾಗಿ ಸಿಲುಕಿಕೊಂಡಿದ್ದಾರೆ ಎಂದು ಓವೈಸಿ ಹೇಳಿದ್ದಾರೆ.

“ತೆಲಂಗಾಣದ ಇಬ್ಬರು, ಕರ್ನಾಟಕದ ಕಲಬುರಗಿಯ ಮೂವರು, ಕಾಶ್ಮೀರದ ಇಬ್ಬರು ಮತ್ತು ಗುಜರಾತ್ ಮತ್ತು ಉತ್ತರ ಪ್ರದೇಶದ ತಲಾ ಒಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲ ಯುವಕರ ಕುಟುಂಬಸ್ಥರು ನನ್ನನ್ನು ಭೇಟಿಯಾಗಿ ವಿಷಯ ತಿಳಿಸಿದ ಬಳಿಕ, ನಾನು ಸಚಿವ ಜೈಶಂಕರ್ ಮತ್ತು ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಪತ್ರ ಬರೆದಿದ್ದೇನೆ” ಎಂದು ಓವೈಸಿ ತಿಳಿಸಿದ್ದಾರೆ.

“ತೆಲಂಗಾಣ, ಗುಜರಾತ್, ಕರ್ನಾಟಕ, ಜಮ್ಮು ಕಾಶ್ಮೀರ ಮತ್ತು ಉತ್ತರ ಪ್ರದೇಶದ ನಿರುದ್ಯೋಗಿ ಯುವಕರಿಗೆ
ಸೆಕ್ಯೂರಿಟಿ ಗಾರ್ಡ್ ಕೆಲಸ ನೀಡುವುದಾಗಿ ಸುಳ್ಳು ಹೇಳಿ ರಷ್ಯಾದ ಏಜೆಂಟರು ಕರೆಸಿಕೊಂಡಿದ್ದಾರೆ. ಬಳಿಕ ಅವರಿಗೆ ಶಸ್ತ್ರಾಸ್ತ್ರ ಕೊಟ್ಟು ಬಲವಂತವಾಗಿ ಯುದ್ಧ ಭೂಮಿಗೆ ಕಳುಹಿಸಲಾಗಿದೆ. ನಾನು ಯುವಕರ ಕುಟುಂಬಸ್ಥರನ್ನು ಭೇಟಿಯಾಗಿದ್ದೇನೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಅವರು ನನ್ನಿಂದ ಸಹಾಯ ಕೇಳಿದ್ದರು. ಯುವಕರನ್ನು ಮರಳಿ ಕರೆತರುವಂತೆ ನಾನು ವಿದೇಶಾಂಗ ಸಚಿವರಿಗೆ ಮತ್ತು ರಷ್ಯಾದಲ್ಲಿರುವ ಭಾರತದ ರಾಯಭಾರ ಕಚೇರಿಗೆ ಪತ್ರ ಬರೆದಿದ್ದೇನೆ” ಎಂದು ಓವೈಸಿ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ್ದಾರೆ.

ಏಜೆಂಟ್‌ಗಳಲ್ಲಿ ಒಬ್ಬನಾದ, ಸುಮಾರು 3 ಲಕ್ಷ ಚಂದಾದಾರರನ್ನು ಹೊಂದಿರುವ ‘ಬಾಬಾ ಬ್ಲಾಗ್ಸ್’ ಎಂಬ ಯೂಟ್ಯೂಬ್ ಚಾನೆಲ್‌ನ ಫೈಝಲ್ ಖಾನ್ ಎಂಬಾತ ಯುವಕರನ್ನು ವಂಚಿಸಿದ್ದಾನೆ. ಪ್ರಸ್ತುತ ಆತ ದುಬೈನಲ್ಲಿದ್ದಾನೆ. ವಿವಿಧ ದೇಶಗಳಲ್ಲಿ ಹೇಗೆ ಉದ್ಯೋಗ ಮತ್ತು ಉದ್ಯೋಗದ ಪರವಾನಿಗೆ ಪಡೆಯುವುದು ಎಂಬುವುದರ ಕುರಿತು ಈತ ವಿಡಿಯೋಗಳನ್ನು ಮಾಡುತ್ತಿರುತ್ತಾನೆ. ಈತನ ಜೊತೆಗೆ ಮುಂಬೈನಿಂದ ಸುಫಿಯಾನ್ ಮತ್ತು ಪೂಜಾ, ರಮೇಶ್ ಮತ್ತು ಮೊಯಿನ್ ರಷ್ಯಾದಲ್ಲಿ ಭಾರತೀಯ ಏಜೆಂಟ್‌ಗಳು ಎಂದು ಓವೈಸಿ ಹೇಳಿದ್ದಾರೆ.

ಯುದ್ಧ ಭೂಮಿಗೆ ತಮ್ಮನ್ನು ಹೇಗೆ ತಳ್ಳಲಾಯಿತು ಎಂದು ಯುವಕರು ವಿಡಿಯೋ ಕಳುಹಿಸಿದ್ದಾರೆ. ಅವರಲ್ಲಿ ಒಬ್ಬ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಯುವಕರು ಹೇಳಿದ್ದಾಗಿ ಓವೈಸಿ ಮಾಹಿತಿ ನೀಡಿದ್ದಾರೆ.

ರಷ್ಯಾದಲ್ಲಿ ಸಿಲುಕಿದವರಲ್ಲಿ ಹೈದರಾಬಾದ್‌ನ ನಾಂಪಲ್ಲಿಯ ಮೊಹಮ್ಮದ್ ಅಫ್ಸಾನ್ ಕೂಡ ಒಬ್ಬರು, ಈ ಕುರಿತು ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿರುವ ಅಫ್ಸಾನ್ ಪತ್ನಿ ಅಸ್ಮಾ ಶಿರೀನ್, ತನ್ನ ಪತಿಯನ್ನು ರಕ್ಷಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರಷ್ಯಾದ ರಕ್ಷಣಾ ಸಚಿವಾಲಯದಲ್ಲಿ ಕೆಲಸ ಮಾಡುವ ಭಾರತೀಯ ಮೂಲದ ಅಧಿಕಾರಿಯೊಬ್ಬರು ದೃಢಪಡಿಸಿದಂತೆ, ಕಳೆದ ಒಂದು ವರ್ಷದಲ್ಲಿ ತನ್ನ ಮಾಸ್ಕೋ ನೇಮಕಾತಿ ಕೇಂದ್ರದಲ್ಲಿ ರಷ್ಯಾದ ಸೇನೆಯು ಸುಮಾರು 100 ಭಾರತೀಯರನ್ನು ನೇಮಿಸಿಕೊಂಡಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ, ಉಜ್ಬೇಕಿಸ್ತಾನ್ ಮತ್ತು ಕಿರ್ಗಿಸ್ತಾನ್ ಸೇರಿದಂತೆ ಹಲವಾರು ದೇಶಗಳ ಜನರನ್ನು ಕಳೆದ ಒಂದೂವರೆ ವರ್ಷಗಳಿಂದ ರಷ್ಯಾದ ಸೇನೆಯು ನೇಮಿಸಿಕೊಳ್ಳುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ಪ್ರಾರಂಭಗೊಂಡು ಎರಡು ವರ್ಷಗಳಾಗುತ್ತಾ ಬಂದಿದೆ. ಉಭಯ ರಾಷ್ಟ್ರಗಳ ನಡುವೆ ಮಾತುಕತೆಗಳು ನಿಂತು ಹೋಗಿವೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸುದೀರ್ಘ ಸಂಘರ್ಷಕ್ಕೆ ಸಿದ್ಧರಾಗಿದ್ದಾರೆ. ತಮ್ಮ ಭೂ ಪ್ರದೇಶಗಳನ್ನು ಮರಳಿ ಪಡೆಯಲು ಉಕ್ರೇನ್ ಮುಂದಾಗಲಿರುವ ಕಾರಣ 2024ರಲ್ಲಿ ಯುದ್ಧ ತೀವ್ರಗೊಳ್ಳಬಹುದು ಎಂದು ವಿಶ್ಲೇಷಕರು ಹೇಳಿದ್ದಾರೆ. ಉಕ್ರೇನ್‌ ಬೇಷರತ್ ಆಗಿ ಶರಣಾಗುವವರೆಗೆ ನಾವು ಯುದ್ಧ ನಿಲ್ಲಿಸುವುದಿಲ್ಲ ಎಂದು ರಷ್ಯಾ ಪಟ್ಟು ಹಿಡಿದಿದೆ.

ಇದನ್ನೂ ಓದಿ : ತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...