Homeಮುಖಪುಟಕನ್ನಡಿಗರು ಸೇರಿದಂತೆ ಭಾರತೀಯ ಯುವಕರನ್ನು ಯುದ್ಧಕ್ಕೆ ಕಳುಹಿಸಿದ ರಷ್ಯಾ: ರಕ್ಷಿಸುವಂತೆ ಓವೈಸಿ ಮನವಿ

ಕನ್ನಡಿಗರು ಸೇರಿದಂತೆ ಭಾರತೀಯ ಯುವಕರನ್ನು ಯುದ್ಧಕ್ಕೆ ಕಳುಹಿಸಿದ ರಷ್ಯಾ: ರಕ್ಷಿಸುವಂತೆ ಓವೈಸಿ ಮನವಿ

- Advertisement -
- Advertisement -

ಉದ್ಯೋಗ ಭರವಸೆಯೊಂದಿಗೆ ಏಜೆಂಟರ ವಂಚನೆಗೆ ಒಳಗಾಗಿ ರಷ್ಯಾಗೆ ತೆರಳಿದ್ದ ಭಾರತೀಯ ಯುವಕರನ್ನು ಉಕ್ರೇನ್ ವಿರುದ್ದದ ಯುದ್ದಕ್ಕೆ ಕಳುಹಿಸಲಾಗಿದ್ದು, ಅವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆ ತರುವಂತೆ ಹೈದರಾಬಾದ್ ಸಂಸದ ಹಾಗೂ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ಧೀನ್ ಓವೈಸಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌ ಜೈಶಂಕರ್ ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ರಷ್ಯಾ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಯುವಕರ ಸಹಾಯಕ್ಕೆ ಧಾವಿಸುವಂತೆ ಓವೈಸಿ ಆಗ್ರಹಿಸಿದ್ದಾರೆ.

ನಿರುದ್ಯೋಗಿ ಯುವಕರನ್ನು ಕಟ್ಟಡಗಳಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ನೀಡುವ ಆಮಿಷವೊಡ್ಡಿ ರಷ್ಯಾಗೆ ಕಳುಹಿಸಲಾಗಿದೆ. ಬಳಿಕ ಅವರಿಗೆ ಶಸ್ತ್ರಾಸ್ತ್ರ ನಿರ್ವಹಣೆಯ ತರಬೇತಿ ಕೊಟ್ಟು ಬಲವಂತವಾಗಿ ಯುದ್ಧಭೂಮಿಗೆ ಕಳುಹಿಸಲಾಗಿದೆ. ಪ್ರಸ್ತುತ ಯುವಕರು ಉಕ್ರೇನ್ ಗಡಿಯ ಮಾರಿಯುಪೋಲ್, ಖಾರ್ಕಿವ್ ಮತ್ತು ಡೊನೆಟ್ಸ್ಕ್‌ ಪ್ರದೇಶಗಳಲ್ಲಿ ರಷ್ಯಾದ ಖಾಸಗಿ ಸೇನೆ ವ್ಯಾಗ್ನರ್‌ನ ಭಾಗವಾಗಿ ಸಿಲುಕಿಕೊಂಡಿದ್ದಾರೆ ಎಂದು ಓವೈಸಿ ಹೇಳಿದ್ದಾರೆ.

“ತೆಲಂಗಾಣದ ಇಬ್ಬರು, ಕರ್ನಾಟಕದ ಕಲಬುರಗಿಯ ಮೂವರು, ಕಾಶ್ಮೀರದ ಇಬ್ಬರು ಮತ್ತು ಗುಜರಾತ್ ಮತ್ತು ಉತ್ತರ ಪ್ರದೇಶದ ತಲಾ ಒಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲ ಯುವಕರ ಕುಟುಂಬಸ್ಥರು ನನ್ನನ್ನು ಭೇಟಿಯಾಗಿ ವಿಷಯ ತಿಳಿಸಿದ ಬಳಿಕ, ನಾನು ಸಚಿವ ಜೈಶಂಕರ್ ಮತ್ತು ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಪತ್ರ ಬರೆದಿದ್ದೇನೆ” ಎಂದು ಓವೈಸಿ ತಿಳಿಸಿದ್ದಾರೆ.

“ತೆಲಂಗಾಣ, ಗುಜರಾತ್, ಕರ್ನಾಟಕ, ಜಮ್ಮು ಕಾಶ್ಮೀರ ಮತ್ತು ಉತ್ತರ ಪ್ರದೇಶದ ನಿರುದ್ಯೋಗಿ ಯುವಕರಿಗೆ
ಸೆಕ್ಯೂರಿಟಿ ಗಾರ್ಡ್ ಕೆಲಸ ನೀಡುವುದಾಗಿ ಸುಳ್ಳು ಹೇಳಿ ರಷ್ಯಾದ ಏಜೆಂಟರು ಕರೆಸಿಕೊಂಡಿದ್ದಾರೆ. ಬಳಿಕ ಅವರಿಗೆ ಶಸ್ತ್ರಾಸ್ತ್ರ ಕೊಟ್ಟು ಬಲವಂತವಾಗಿ ಯುದ್ಧ ಭೂಮಿಗೆ ಕಳುಹಿಸಲಾಗಿದೆ. ನಾನು ಯುವಕರ ಕುಟುಂಬಸ್ಥರನ್ನು ಭೇಟಿಯಾಗಿದ್ದೇನೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಅವರು ನನ್ನಿಂದ ಸಹಾಯ ಕೇಳಿದ್ದರು. ಯುವಕರನ್ನು ಮರಳಿ ಕರೆತರುವಂತೆ ನಾನು ವಿದೇಶಾಂಗ ಸಚಿವರಿಗೆ ಮತ್ತು ರಷ್ಯಾದಲ್ಲಿರುವ ಭಾರತದ ರಾಯಭಾರ ಕಚೇರಿಗೆ ಪತ್ರ ಬರೆದಿದ್ದೇನೆ” ಎಂದು ಓವೈಸಿ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ್ದಾರೆ.

ಏಜೆಂಟ್‌ಗಳಲ್ಲಿ ಒಬ್ಬನಾದ, ಸುಮಾರು 3 ಲಕ್ಷ ಚಂದಾದಾರರನ್ನು ಹೊಂದಿರುವ ‘ಬಾಬಾ ಬ್ಲಾಗ್ಸ್’ ಎಂಬ ಯೂಟ್ಯೂಬ್ ಚಾನೆಲ್‌ನ ಫೈಝಲ್ ಖಾನ್ ಎಂಬಾತ ಯುವಕರನ್ನು ವಂಚಿಸಿದ್ದಾನೆ. ಪ್ರಸ್ತುತ ಆತ ದುಬೈನಲ್ಲಿದ್ದಾನೆ. ವಿವಿಧ ದೇಶಗಳಲ್ಲಿ ಹೇಗೆ ಉದ್ಯೋಗ ಮತ್ತು ಉದ್ಯೋಗದ ಪರವಾನಿಗೆ ಪಡೆಯುವುದು ಎಂಬುವುದರ ಕುರಿತು ಈತ ವಿಡಿಯೋಗಳನ್ನು ಮಾಡುತ್ತಿರುತ್ತಾನೆ. ಈತನ ಜೊತೆಗೆ ಮುಂಬೈನಿಂದ ಸುಫಿಯಾನ್ ಮತ್ತು ಪೂಜಾ, ರಮೇಶ್ ಮತ್ತು ಮೊಯಿನ್ ರಷ್ಯಾದಲ್ಲಿ ಭಾರತೀಯ ಏಜೆಂಟ್‌ಗಳು ಎಂದು ಓವೈಸಿ ಹೇಳಿದ್ದಾರೆ.

ಯುದ್ಧ ಭೂಮಿಗೆ ತಮ್ಮನ್ನು ಹೇಗೆ ತಳ್ಳಲಾಯಿತು ಎಂದು ಯುವಕರು ವಿಡಿಯೋ ಕಳುಹಿಸಿದ್ದಾರೆ. ಅವರಲ್ಲಿ ಒಬ್ಬ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಯುವಕರು ಹೇಳಿದ್ದಾಗಿ ಓವೈಸಿ ಮಾಹಿತಿ ನೀಡಿದ್ದಾರೆ.

ರಷ್ಯಾದಲ್ಲಿ ಸಿಲುಕಿದವರಲ್ಲಿ ಹೈದರಾಬಾದ್‌ನ ನಾಂಪಲ್ಲಿಯ ಮೊಹಮ್ಮದ್ ಅಫ್ಸಾನ್ ಕೂಡ ಒಬ್ಬರು, ಈ ಕುರಿತು ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿರುವ ಅಫ್ಸಾನ್ ಪತ್ನಿ ಅಸ್ಮಾ ಶಿರೀನ್, ತನ್ನ ಪತಿಯನ್ನು ರಕ್ಷಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರಷ್ಯಾದ ರಕ್ಷಣಾ ಸಚಿವಾಲಯದಲ್ಲಿ ಕೆಲಸ ಮಾಡುವ ಭಾರತೀಯ ಮೂಲದ ಅಧಿಕಾರಿಯೊಬ್ಬರು ದೃಢಪಡಿಸಿದಂತೆ, ಕಳೆದ ಒಂದು ವರ್ಷದಲ್ಲಿ ತನ್ನ ಮಾಸ್ಕೋ ನೇಮಕಾತಿ ಕೇಂದ್ರದಲ್ಲಿ ರಷ್ಯಾದ ಸೇನೆಯು ಸುಮಾರು 100 ಭಾರತೀಯರನ್ನು ನೇಮಿಸಿಕೊಂಡಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ, ಉಜ್ಬೇಕಿಸ್ತಾನ್ ಮತ್ತು ಕಿರ್ಗಿಸ್ತಾನ್ ಸೇರಿದಂತೆ ಹಲವಾರು ದೇಶಗಳ ಜನರನ್ನು ಕಳೆದ ಒಂದೂವರೆ ವರ್ಷಗಳಿಂದ ರಷ್ಯಾದ ಸೇನೆಯು ನೇಮಿಸಿಕೊಳ್ಳುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ಪ್ರಾರಂಭಗೊಂಡು ಎರಡು ವರ್ಷಗಳಾಗುತ್ತಾ ಬಂದಿದೆ. ಉಭಯ ರಾಷ್ಟ್ರಗಳ ನಡುವೆ ಮಾತುಕತೆಗಳು ನಿಂತು ಹೋಗಿವೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸುದೀರ್ಘ ಸಂಘರ್ಷಕ್ಕೆ ಸಿದ್ಧರಾಗಿದ್ದಾರೆ. ತಮ್ಮ ಭೂ ಪ್ರದೇಶಗಳನ್ನು ಮರಳಿ ಪಡೆಯಲು ಉಕ್ರೇನ್ ಮುಂದಾಗಲಿರುವ ಕಾರಣ 2024ರಲ್ಲಿ ಯುದ್ಧ ತೀವ್ರಗೊಳ್ಳಬಹುದು ಎಂದು ವಿಶ್ಲೇಷಕರು ಹೇಳಿದ್ದಾರೆ. ಉಕ್ರೇನ್‌ ಬೇಷರತ್ ಆಗಿ ಶರಣಾಗುವವರೆಗೆ ನಾವು ಯುದ್ಧ ನಿಲ್ಲಿಸುವುದಿಲ್ಲ ಎಂದು ರಷ್ಯಾ ಪಟ್ಟು ಹಿಡಿದಿದೆ.

ಇದನ್ನೂ ಓದಿ : ತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...