Homeಮುಖಪುಟ'ಕೇಂದ್ರದಲ್ಲಿರುವ ಭ್ರಷ್ಟ ಸರ್ಕಾರವನ್ನು ಸೋಲಿಸಿ': ಬಿಜೆಪಿಗೆ ಮುಜುಗರ ತಂದಿಟ್ಟ ತಮ್ಮದೇ ಪ್ರೋಮೋ ಸಾಂಗ್‌

‘ಕೇಂದ್ರದಲ್ಲಿರುವ ಭ್ರಷ್ಟ ಸರ್ಕಾರವನ್ನು ಸೋಲಿಸಿ’: ಬಿಜೆಪಿಗೆ ಮುಜುಗರ ತಂದಿಟ್ಟ ತಮ್ಮದೇ ಪ್ರೋಮೋ ಸಾಂಗ್‌

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೇರಳದಲ್ಲಿ ಬಿಜೆಪಿ ಕಾರ್ಯಕರ್ತರು ಮಾಡಿರುವ ಯಡವಟ್ಟು ಬಿಜೆಪಿಗೆ ಭಾರೀ ಮುಖಭಂಗವನ್ನುಂಟು ಮಾಡಿದೆ. ಬಿಜೆಪಿ ಪಕ್ಷದ ಕೇರಳ ರಾಜ್ಯ ಘಟಕವು ಬಿಡುಗಡೆ ಮಾಡಿರುವ ಪ್ರೋಮೋ ಸಾಂಗ್‌ನಲ್ಲಿ “ಭ್ರಷ್ಟಾಚಾರಕ್ಕೆ ಹೆಸರಾಗಿರುವ ಕೇಂದ್ರದ ಸರ್ಕಾರವನ್ನು” ಸೋಲಿಸುವಂತೆ ಜನರಿಗೆ ಕರೆ ನೀಡಲಾಗಿದೆ.

ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪಕ್ಷದ ನಾಯಕತ್ವದ ಗಮನಕ್ಕೆ ಬಂದಿದ್ದು, ಎಲ್ಲಾ ರೀತಿಯ ಪ್ರತಿಕ್ರಿಯೆಗಳನ್ನು ಗಮನಿಸಲಾಗಿದೆ. ನಂತರ ಡೆಕ್ಕನ್ ಹೆರಾಲ್ಡ್ ಪ್ರಕಾರ ಬಿಜೆಪಿ ರಾಜ್ಯ ನಾಯಕತ್ವವು  ವಿಡಿಯೊ ಬಿಡುಗಡೆಗೆ ಕಾರಣರಾದವರಲ್ಲಿ ವಿವರಣೆಯನ್ನು ಕೇಳಿದೆ ಎಂದು ಹೇಳಲಾಗಿದೆ.

ಮೂಲಗಳನ್ನು ಉಲ್ಲೇಖಿಸಿ, ಪ್ರೋಮೋ ವಿಡಿಯೋದಲ್ಲಿ ಬಳಸಲಾದ ಆಡಿಯೊ (ಹಾಡು) ಬಿಜೆಪಿ ವಿರೋಧ ಪಕ್ಷದಲ್ಲಿದ್ದಾಗ ಯುನೈಟೆಡ್ ಪ್ರೊಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಸರ್ಕಾರದ ದಿನಗಳ ಹಿಂದಿನದು ಎಂದು ಪತ್ರಿಕೆ ಹೇಳಿದೆ. 2014ರ ಚುನಾವಣೆಗೆ ಪೂರ್ವಭಾವಿಯಾಗಿ ಈ ಹಾಡನ್ನು ಸಿದ್ಧಪಡಿಸಲಾಗಿತ್ತು. ಯುಪಿಎ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸಿ ಎಂಬ ಸಂದೇಶವನ್ನು ಸಾರಲು ಈ ಆಡಿಯೋವನ್ನು ಹಂಚಿಕೊಳ್ಳಲಾಗಿತ್ತು.

ಮತ್ತೊಂದೆಡೆ ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ಫೆಬ್ರವರಿ 20ರಂದು ಎಸ್ಸಿ ಮತ್ತು ಎಸ್ಟಿ ನಾಯಕರ ಜೊತೆ ಔತನ ಕೂಟದಲ್ಲಿ ಭಾಗವಹಿಸಲಿದ್ದಾರೆ ಎಂಬ ಪೋಸ್ಟರ್‌ನ ಇನ್ನೊಂದು ವಿವಾದವನ್ನು ಸೃಷ್ಟಿಸಿದೆ. ಪೋಸ್ಟರ್‌ ವಿರುದ್ಧ ವ್ಯಾಪಕವಾದ ಟೀಕೆ ವ್ಯಕ್ತವಾಗಿದ್ದು, ಪೋಸ್ಟರ್‌ ಬಿಜೆಪಿಯ ಮೇಲ್ಜಾತಿಯ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ಸುರೇಂದ್ರನ್‌, ಎಸ್ಸಿ ಮತ್ತು ಎಸ್ಟಿ ಮುದಾಯಗಳು ಬಿಜೆಪಿಗೆ ಹತ್ತಿರವಾಗುತ್ತಿರುವ ಬಗ್ಗೆ ಅಸಮಾಧಾನ ಹೊಂದಿರುವವರು ಸೃಷ್ಟಿಸುತ್ತಿರುವ ಅನಗತ್ಯ ವಿವಾದ ಇದು ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಕೇರಳದ ಮೇಲೆ ಕಣ್ಣಿಟ್ಟಿದೆ. ಬಿಜೆಪಿಗೆ ಕೇರಳದಲ್ಲಿ ದೀರ್ಘಕಾಲದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಥಾನವನ್ನು ಪಡೆಯಲು ಸಾಧ್ಯವಾಗಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇತ್ತೀಚೆಗೆ ಕೇರಳದ ದೇವಾಲಯಗಳಿಗೆ ಭೇಟಿ ನೀಡಿದ್ದರು ಮತ್ತು ರಾಜ್ಯದಲ್ಲಿ ಕ್ರಿಶ್ಚಿಯನ್‌ ಸಮುದಾಯದ ನಾಯಕರನ್ನು, ಪಾದ್ರಿಗಳನ್ನು ಭೇಟಿ ಮಾಡಿದ್ದರು. ಕೇರಳದಲ್ಲಿ ಏನಾದರೂ ಮಾಡಿ ಈ ಬಾರಿ ಖಾತೆಯನ್ನು ತೆರೆಯಬೇಕು ಎಂದು ಬಿಜೆಪಿ ಶತಾಯಗತಾಯ ಪ್ರಯತ್ನವನ್ನು ಮಾಡುತ್ತಿದೆ.

ಇದನ್ನು ಓದಿ: ಮೋದಿ ಸರಕಾರದಿಂದ ನಿರ್ದಿಷ್ಟ ಖಾತೆ, ಪೋಸ್ಟ್‌ಗಳನ್ನು ನಿರ್ಬಂಧಿಸಲು ಸೂಚನೆ: ಇದೇ ಮೊದಲ ಬಾರಿಗೆ ಮಾಹಿತಿ ಬಿಚ್ಚಿಟ್ಟ ಎಕ್ಸ್‌(X)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...