Homeಮುಖಪುಟ29 ಸಾವಿರ ಜನರ ಮಾರಣಹೋಮ: ಗಾಝಾ 'ಸಾವಿನ ಮನೆ'ಯಾಗಿದೆ ಎಂದ ವಿಶ್ವ ಆರೋಗ್ಯ ಸಂಸ್ಥೆ

29 ಸಾವಿರ ಜನರ ಮಾರಣಹೋಮ: ಗಾಝಾ ‘ಸಾವಿನ ಮನೆ’ಯಾಗಿದೆ ಎಂದ ವಿಶ್ವ ಆರೋಗ್ಯ ಸಂಸ್ಥೆ

- Advertisement -
- Advertisement -

“ಗಾಝಾ ಸಾವಿನ ಮನೆಯಾಗಿ ಮಾರ್ಪಟ್ಟಿದೆ” ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ಜಿನೀವಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

“ಗಾಝಾದ ಹೆಚ್ಚಿನ ಪ್ರದೇಶಗಳು ನಾಶವಾಗಿವೆ. ಬರೋಬ್ಬರಿ 29,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಕಾಣೆಯಾಗಿದ್ದಾರೆ, ಅವರೆಲ್ಲರೂ ಮೃತಪಟ್ಟಿದ್ದಾರೆ ಎಂದು ಭಾವಿಸಲಾಗಿದೆ. ಸಾವಿರಾರು ಜನರು ಗಾಯಗೊಂಡಿದ್ದಾರೆ” ಎಂದು ಘೆಬ್ರೆಯೆಸಸ್ ತಿಳಿಸಿದ್ದಾರೆ.

ಅಪೌಷ್ಠಿಕತೆ ಹೆಚ್ಚಳ :

“ಅಕ್ಟೋಬರ್ 7ರಂದು ಯುದ್ಧ ಪ್ರಾರಂಭವಾದಾಗಿನಿಂದ ಗಾಝಾದಲ್ಲಿ ಅಪೌಷ್ಠಿಕತೆಯ ಪ್ರಮಾಣ ಭಾರೀ ಹೆಚ್ಚಳವಾಗಿದೆ. ಕೆಲ ಪ್ರದೇಶಗಳಲ್ಲಿ ಶೇ.1ಕ್ಕಿಂತ ಕಡಿಮೆ, ಕೆಲ ಪ್ರದೇಶಗಳಲ್ಲಿ ಶೇ.15ಕ್ಕಿಂತ ಹೆಚ್ಚು ಅಪೌಷ್ಠಿಕತೆಯಿದೆ” ಎಂದು ಹೇಳಿದ್ದಾರೆ.

“ಯುದ್ಧ ಮುಂದುವರೆಯಲಿರುವ ಹಿನ್ನೆಲೆ, ಆಹಾರ ಸಾಮಗ್ರಿಗಳ ಪೂರೈಕೆಗೆ ಸಮಸ್ಯೆ ಉಂಟಾಗಿದೆ. ಇದರಿಂದ ಜನರಿಗೆ ಸರಿಯಾದ ಆಹಾರ ಸಿಗದೆ ಅಪೌಷ್ಠಿಕತೆಯ ಪ್ರಮಾಣ ಇನ್ನೂ ಹೆಚ್ಚಳವಾಗಬಹುದು. ಉತ್ತರ ಗಾಝಾ ಪ್ರದೇಶಕ್ಕೆ ವಿಶ್ವ ಆಹಾರ ಕಾರ್ಯಕ್ರಮ (ಡಬ್ಲ್ಯುಎಫ್‌ಪಿ) ಯಂತಹ ಸಂಸ್ಥೆಗಳು ತೆರಳಲು ಸಾಧ್ಯವಾಗುತ್ತಿಲ್ಲ. ಮಾನವೀಯ ಸಿಬ್ಬಂದಿ ಮತ್ತು ಸಹಾಯವನ್ನು ಬಯಸುವವರಿಗೆ ಭದ್ರತೆಯ ಕೊರತೆಯಿಂದಾಗಿ ಡಬ್ಲ್ಯುಎಫ್‌ಪಿ ಅಲ್ಲಿ ತನ್ನ ಸಹಾಯ ವಿತರಣೆಯನ್ನು ಸ್ಥಗಿತಗೊಳಿಸಿದೆ” ಎಂದು ಘೆಬ್ರೆಯೆಸಸ್ ಕಳವಳ ವ್ಯಕ್ತಪಡಿಸಿದ್ದಾರೆ.

ವೈದ್ಯಕೀಯ ನೆರವಿನ ಮೇಲೆ ದಾಳಿ :

ಯುದ್ಧದಿಂದ ಸಂತ್ರಸ್ತ ಜನರಿಗೆ ಸಹಾಯ ಒದಗಿಸುತ್ತಿರುವ ಸ್ವಯಂ ಸೇವಕರಿಗೆ ದೊಡ್ಡ ಭೀತಿ ಉಂಟಾಗಿದೆ. ನೂರಾರು ಮಾನವೀಯ ನೆರವಿನ ಕಾರ್ಯಕರ್ತರು ಕೊಲ್ಲಲ್ಪಟ್ಟಿದ್ದಾರೆ. ಮೆಡೆಸಿನ್ಸ್ ಸಾನ್ಸ್ ಫ್ರಾಂಟಿಯರ್ಸ್ (ಎಂಎಸ್‌ಎಫ್‌) ಶಿಬಿರದ ಮೇಲೆ ಮಂಗಳವಾರ (ಫೆ.20) ರಾತ್ರಿ (ಸ್ಥಳೀಯ ಕಾಲಮಾನ) ಶೆಲ್ ದಾಳಿ ನಡೆದಿದೆ. ಇರಿಂದ ಅಲ್ಲಿನ ಸಿಬ್ಬಂದಿ ಗಾಯಗೊಂಡಿದ್ದಾರೆ ಮತ್ತು ಅವರ ಕುಟುಂಬ ಸದಸ್ಯರು ಮೃತಪಟ್ಟಿದ್ದಾರೆ ಎಂದು ವರದಿಗಳು ಹೇಳಿವೆ.

ವಿಶ್ವಸಂಸ್ಥೆಯ ತುರ್ತು ಪರಿಹಾರ ಯೋಜನೆಯ ಸಂಯೋಜಕ ಮಾರ್ಟಿನ್ ಗ್ರಿಫಿತ್ಸ್, “ಗಾಝಾ ಮೇಲಿನ ದಾಳಿಯಿಂದ ತಾನು ದಿಗ್ಭ್ರಮೆಗೊಂಡಿದ್ದೇನೆ. ಅಲ್ಲಿನ ಜನರ ದುಃಖದಲ್ಲಿ ಭಾಗಿಯಾಗಿದ್ದೇನೆ. ಇತರ ನಾಗರಿಕರಂತೆ ಮಾನವೀಯ ನೆರವು ಒದಗಿಸುತ್ತಿರುವ ಸಿಬ್ಬಂದಿ ಅಪಾಯಕ್ಕೆ ಸಿಲುಕಿದ್ದಾರೆ. ಅವರನ್ನು ರಕ್ಷಿಸಬೇಕು” ಎಂದು ಎಕ್ಸ್ ಪೋಸ್ಟ್‌ನಲ್ಲಿ ಮನವಿ ಮಾಡಿದ್ದಾರೆ.

‘ನಾವು ಯಾವ ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ’?

ಮಾನವೀಯತೆಯ ಗಂಭೀರ ಅಪಾಯವನ್ನು ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ಪುನರುಚ್ಚರಿಸಿದ್ದಾರೆ. ಎಲ್ಲಾ ನಾಗರಿಕರನ್ನು ತುರ್ತಾಗಿ ರಕ್ಷಿಸುವಂತೆ ಅವರು ಮನವಿ ಮಾಡಿದ್ದಾರೆ. “ಜನರಿಗೆ ಆಹಾರ, ನೀರು ಸಿಗುತ್ತಿಲ್ಲ. ಕನಿಷ್ಠ ಪಕ್ಷ ಸ್ವತಂತ್ರವಾಗಿ ಓಡಾಡಲು ಆಗುತ್ತಿಲ್ಲ. ನಾವು ಯಾವ ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ?” ಎಂದು ಘೆಬ್ರೆಯೆಸಸ್ ಬೇಸರ ವ್ಯಕ್ತಪಡಿಸಿದ್ದಾರೆ.

“ಸಂಕಷ್ಟದಲ್ಲಿರುವ ಜನರ ಜೀವ ಉಳಿಸಲು ಧಾವಿಸುವ ಆರೋಗ್ಯ ಕಾರ್ಯಕರ್ತರು ಬಾಂಬ್ ದಾಳಿಯ ಅಪಾಯದಲ್ಲಿದ್ದಾರೆ. ಔಷಧಗಳ ಕೊರತೆಯಿಂದ ಆಸ್ಪತ್ರೆಗಳು ಮುಚ್ಚಲ್ಪಡುತ್ತಿವೆ. ಹಾಗಾದರೆ, ನಾವು ಯಾವ ಜಗತ್ತಿನಲ್ಲಿದ್ದೇವೆ?” ಎಂದು ಘೆಬ್ರೆಯೆಸಸ್ ಪುನರುಚ್ಚರಿಸಿದ್ದಾರೆ.

ತಕ್ಷಣದ ಕದನ ವಿರಾಮದ ಘೋಷಿಸಬೇಕು, ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು, ಬಂದೂಕುಗಳು ಮೌನವಾಗಬೇಕು ಎಂದು ಅವರು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ : ಕನ್ನಡಿಗರು ಸೇರಿದಂತೆ ಭಾರತೀಯ ಯುವಕರನ್ನು ಯುದ್ಧಕ್ಕೆ ಕಳುಹಿಸಿದ ರಷ್ಯಾ: ರಕ್ಷಿಸುವಂತೆ ಓವೈಸಿ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...