Homeಮುಖಪುಟಕಳೆದ 15 ವರ್ಷಗಳಲ್ಲಿ ಪುನರಾಯ್ಕೆಗೊಂಡಿರುವ 23 ಸಂಸದರ ಆಸ್ತಿ ಮೌಲ್ಯ ಸರಾಸರಿ ಶೇ.1,045ರಷ್ಟು ಏರಿಕೆ: ವರದಿ

ಕಳೆದ 15 ವರ್ಷಗಳಲ್ಲಿ ಪುನರಾಯ್ಕೆಗೊಂಡಿರುವ 23 ಸಂಸದರ ಆಸ್ತಿ ಮೌಲ್ಯ ಸರಾಸರಿ ಶೇ.1,045ರಷ್ಟು ಏರಿಕೆ: ವರದಿ

- Advertisement -
- Advertisement -

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೇನಕಾ ಗಾಂಧಿ ಸೇರಿದಂತೆ 2004ರಿಂದ ಪುನರಾಯ್ಕೆಗೊಳ್ಳುತ್ತಿರುವ 23 ಸಂಸದರ ಒಟ್ಟಾರೆ ಆಸ್ತಿ ಮೌಲ್ಯವು ರೂ. 35.18 ಕೋಟಿಯಿಂದ ರೂ. 402.79 ಕೋಟಿಗೆ ಏರಿಕೆಯಾಗಿದೆ ಎಂದು ಅಸೋಸಿಯೇಷನ್‌ ಫಾರ್‌ ಡೆಮಾಕ್ರೆಟಿಕ್‌ ರಿಫಾರ್ಮ್ಸ್‌ (ಎಡಿಆರ್‌) ವರದಿ ತಿಳಿಸಿದೆ.

ಎಡಿಆರ್ ಪ್ರಕಾರ, ಕರ್ನಾಟಕದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ (ವಿಜಯಪುರ) ಯವರ ಆಸ್ತಿ ಮೌಲ್ಯ ಗರಿಷ್ಠ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಶೇ. 9,098ರಷ್ಟು ಏರಿಕೆಯಾಗಿದೆ. 2004ರಲ್ಲಿ ರೂ. 54.8 ಲಕ್ಷದಷ್ಟಿದ್ದ ಇವರ ಆಸ್ತಿ ಮೌಲ್ಯವು 2019ರ ವೇಳೆಗೆ ರೂ. 50.41 ಕೋಟಿಯಷ್ಟಾಗಿದ್ದು, ಆ ಮೂಲಕ ರೂ. 49.86 ಕೋಟಿ ಏರಿಕೆಯಾದಂತಾಗಿದೆ.

ವರದಿಯಲ್ಲಿ ಕರ್ನಾಟಕದ ಇನ್ನೂ ಐವರು ಸಂಸದರ ಹೆಸರಿದೆ. ಇವರೆಲ್ಲರೂ ಬಿಜೆಪಿಯವರಾಗಿದ್ದು, 2004ರಿಂದ ಆಯ್ಕೆಯಾಗುತ್ತಿದ್ದಾರೆ. ಈ ಸಂಸದರ ಆಸ್ತಿ ಮೌಲ್ಯವು ವರದಿಯಲ್ಲಿ ಉಲ್ಲೇಖಿಸಿರುವ ಇತರ ಎಲ್ಲಾ ರಾಜ್ಯಗಳ ಸಂಸದರಿಗಿಂತ ಹೆಚ್ಚಿದೆ.

ಸಂಸದ ಜಿ.ಎಂ.ಸಿದ್ದೇಶ್ವರ್ (ದಾವಣಗೆರೆ) ಆಸ್ತಿ ಮೌಲ್ಯವು ರೂ. 5.02 ಕೋಟಿಯಿಂದ ರೂ. 38.01 ಕೋಟಿಗೆ (ಶೇ. 656), ಡಿ.ವಿ.ಸದಾನಂದ ಗೌಡ (ಬೆಂಗಳೂರು ಉತ್ತರ) ಆಸ್ತಿ ಮೌಲ್ಯವು ರೂ. 46.39 ಲಕ್ಷದಿಂದ ರೂ. 20.93 ಕೋಟಿಗೆ (ಶೇ. 4,413), ಕೇಂದ್ರ ಸಚಿವ ಪಹ್ಲಾದ್ ಜೋಶಿ (ಧಾರವಾಡ) ಆಸ್ತಿ ಮೌಲ್ಯ ರೂ. 77.60 ಲಕ್ಷದಿಂದ ರೂ. 11.13 ಕೋಟಿಗೆ (ಶೇ. 1,33), ಅನಂತಕುಮಾರ್ ಹೆಗಡೆ (ಉತ್ತರ ಕನ್ನಡ) ಆಸ್ತಿ ಮೌಲ್ಯವು ರೂ. 12.06 ಲಕ್ಷದಿಂದ ರೂ. 8.47 ಕೋಟಿಗೆ (ಶೇ. 6,928) ಹಾಗೂ ಪಿ.ಸಿ.ಗದ್ದಿಗೌಡರ್ (ಬಾಗಲಕೋಟೆ) ಆಸ್ತಿ ಮೌಲ್ಯವು ರೂ. 53.75 ಲಕ್ಷದಿಂದ ರೂ. 4.39 ಕೋಟಿಗೆ (ಶೇ. 718) ಏರಿಕೆ ಕಂಡಿದೆ.

2004ರಿಂದ ಪುನರಾಯ್ಕೆಗೊಂಡಿರುವ 23 ಸಂಸದರ ಪೈಕಿ 17 ಸಂಸದರು ಬಿಜೆಪಿಗೆ ಸೇರಿದ್ದರೆ, ಮೂವರು ಸಂಸದರು ಕಾಂಗ್ರೆಸ್ ಪಕ್ಷಕ್ಕೆ, ಎಐಎಂಐಎಂ, ಶಿವಸೇನೆ ಹಾಗೂ ಬಿಜೆಡಿಗೆ ಸೇರಿದ ತಲಾ ಓರ್ವ ಸಂಸದರಿದ್ದಾರೆ. ಈ ಎಲ್ಲಾ ಸಂಸದರ ಸರಾಸರಿ ಆಸ್ತಿ ಮೌಲ್ಯವು 2004ರಲ್ಲಿ 1.52 ಕೋಟಿಯಾಗಿದ್ದರೆ, 2009ರಲ್ಲಿ 3.46 ಕೋಟಿಗೆ, 2014ರಲ್ಲಿ 9.85 ಕೋಟಿಗೆ ಹಾಗೂ 2019ರಲ್ಲಿ ರೂ. 17.51 ಕೋಟಿಗೆ ಏರಿಕೆಯಾಗಿದೆ.

ಸಂಸದರ ಸರಾಸರಿ ಆಸ್ತಿ ಮೌಲ್ಯದ ಏರಿಕೆ ರೂ. 15.98 ಕೋಟಿ ಅಥವಾ ಶೇ. 1,045ರಷ್ಟಾಗಿದೆ ಎಂಬ ವಿಷಯವನ್ನು ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರಗಳ ವಿಶ್ಲೇಷಣೆಯಿಂದ ಗೊತ್ತಾಗಿದೆ.

ರಮೇಶ್ ಜಿಗಿಜಿಣಗಿ ಬಳಿಕ ಬಿಜೆಪಿ ಸಂದದೆ ಮೇನಕಾ ಗಾಂಧಿ (ಸುಲ್ತಾನ್‌ಪುರ್) ಅವರ ಆಸ್ತಿ ಮೌಲ್ಯದಲ್ಲಿ ಭಾರೀ ಹೆಚ್ಚಳದ ಕಂಡಿದೆ. ಮೇನಕಾ ಅವರ ಆಸ್ತಿ ಮೌಲ್ಯ ರೂ. 6.66 ಕೋಟಿಯಿಂದ ರೂ. 55.69 ಕೋಟಿಗೆ ಅಥವಾ ಶೇ. 735ರಷ್ಟು ಏರಿಕೆಯಾಗಿದೆ. ಬಿಜೆಪಿಯ ರಾವ್ ಇಂದರ್‌ಜಿತ್ ಸಿಂಗ್ (ಗುರ್‌ಗಾಂವ್) ನಂತರದ ಸ್ಥಾನದಲ್ಲಿದ್ದಾರೆ. ಇವರ ಆಸ್ತಿ ಮೌಲ್ಯ ರೂ. 5.51 ಕೋಟಿಯಿಂದ ರೂ 42.09 ಕೋಟಿಗೆ (ಶೇ. 664) ಹೆಚ್ಚಳವಾಗಿದೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ಆಸ್ತಿ ಮೌಲ್ಯ 2004 ರಲ್ಲಿ ರೂ. 55.38 ಲಕ್ಷದಿಂದ 2009 ರಲ್ಲಿ ರೂ. 2.32 ಕೋಟಿಗೆ, 2014 ರಲ್ಲಿ ರೂ. 9.4 ಕೋಟಿ ಮತ್ತು 2019ರಲ್ಲಿ ರೂ. 15.88 ಕೋಟಿಗೆ ಏರಿಕೆಯಾಗಿದೆ. ಕಳೆದ15 ವರ್ಷಗಳಲ್ಲಿ ರಾಹುಲ್ ಗಾಂಧಿಯವರ ಆಸ್ತಿ ಮೌಲ್ಯದಲ್ಲಿ ಶೇ. 2,769ರಷ್ಟು ಏರಿಕೆ ಕಂಡಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರ ಆಸ್ತಿ ಮೌಲ್ಯ ರೂ. 85.68 ಲಕ್ಷದಿಂದ ರೂ.11.82 ಕೋಟಿಗೆ (ಶೇ.1,280ರಷ್ಟು) ಏರಿಕೆ ಕಂಡಿದೆ.

ಪಟ್ಟಿಯಲ್ಲಿ ಮೂರನೇ ಕಾಂಗ್ರೆಸ್ ಸಂಸದರಾಗಿ ಪಕ್ಷದ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ ಅವರ ಹೆಸರಿದೆ. ಚೌಧರಿಯವರ ಆಸ್ತಿ ಮೌಲ್ಯ1.93 ಕೋಟಿಯಿಂದ 10.13 ಕೋಟಿಗೆ ( ಶೇ.422) ಏರಿಕೆಯಾಗಿದೆ.

ವಿಶ್ಲೇಷಣೆಯ ಪ್ರಕಾರ, ಈ ಪಟ್ಟಿಯಲ್ಲಿರುವ ಒಂಬತ್ತು ಸಂಸದರ ವಿರುದ್ಧ ಗಂಭೀರ ಅಪರಾಧ ಪ್ರಕರಣಗಳಿವೆ. ಅಲ್ಲದೆ, ಪಟ್ಟಿಯಲ್ಲಿ ಮೂವರು ಮಹಿಳಾ ಸಂಸದರು ಮಾತ್ರ ಇದ್ದು, ಈ ಪೈಕಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಬಿಜೆಪಿಯ ಮೇನಕಾ ಗಾಂಧಿ ಹಾಗೂ ಶಿವಸೇನೆಯ ಭವಾನ ಗೌಳಿ (ಯವತ್ಮಲ್ ವಾಶಿಂ) ಸೇರಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್‌ನ ಬ್ಯಾಂಕ್ ಖಾತೆಯಿಂದ ಬಿಜೆಪಿ ಹಣ ಕಳ್ಳತನ ಮಾಡುತ್ತಿದೆ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...