Homeಮುಖಪುಟಪ್ರತಿಭಟನಾ ನಿರತ ರೈತರ ವಿರುದ್ಧ 'ರಾಷ್ಟ್ರೀಯ ಭದ್ರತಾ ಕಾಯ್ದೆ' ಜಾರಿಗೊಳಿಸಿದ ಹರಿಯಾಣದ ಬಿಜೆಪಿ ಸರ್ಕಾರ

ಪ್ರತಿಭಟನಾ ನಿರತ ರೈತರ ವಿರುದ್ಧ ‘ರಾಷ್ಟ್ರೀಯ ಭದ್ರತಾ ಕಾಯ್ದೆ’ ಜಾರಿಗೊಳಿಸಿದ ಹರಿಯಾಣದ ಬಿಜೆಪಿ ಸರ್ಕಾರ

- Advertisement -
- Advertisement -

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ‘ದೆಹಲಿ ಚಲೋ’ ನಡೆಸುತ್ತಿರುವ ರೈತರ ವಿರುದ್ದ ಹರಿಯಾಣದ ಬಿಜೆಪಿ ಸರ್ಕಾರವು ‘ರಾಷ್ಟ್ರೀಯ ಭದ್ರತಾ ಕಾಯ್ದೆ(ಎನ್‌ಎಸ್‌ಎ)ಯನ್ನು ಜಾರಿಗೊಳಿಸಿದೆ. ಈ ಕಾಯ್ದೆಯು ರಾಷ್ಟ್ರೀಯ ಭದ್ರತೆಗೆ ಅಪಾಯ ಎಂದು ಪರಿಗಣಿಸಲ್ಪಡುವ ವ್ಯಕ್ತಿಗಳನ್ನು ಬಂಧಿಸಲು ಪೊಲೀಸರಿಗೆ ಅವಕಾಶ ನೀಡುತ್ತದೆ.

ಪ್ರಸ್ತುತ, ಹರಿಯಾಣದ ಅಂಬಾಲಾ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ವೇಳೆ ಉಂಟಾಗಿರುವ ಆಸ್ತಿ ನಷ್ಟದ ಬಗ್ಗೆ ಪೊಲೀಸ್ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾಗಿರುವ ರೈತರ ಆಸ್ತಿ ಜಪ್ತಿ ಮಾಡುವ ಮೂಲಕ ನಷ್ಟ ಭರಿಸಲು ಮುಂದಾಗಿದ್ದಾರೆ.

“ಫೆ.13ರಿಂದ ‘ದೆಹಲಿ ಚಲೋ’ ಆರಂಭಿಸಿರುವ ರೈತರು ಪಂಜಾಬ್-ಹರಿಯಾಣ ನಡುವಿನ ಶಂಭು ಗಡಿಯಲ್ಲಿ ಬ್ಯಾರಿಕೇಡ್‌ಗಳನ್ನು ದಾಟಿ ಬರುವ ಪ್ರಯತ್ನ ಮಾಡಿದ್ದಾರೆ. ಕಲ್ಲು ತೂರಾಟ ನಡೆಸಿ ಸಾರ್ವಜನಿಕ ಸುವ್ಯವಸ್ಥೆಗೆ ಅಡ್ಡಿಪಡಿಸಿದ್ದಾರೆ. ಸರ್ಕಾರಿ ಆಸ್ತಿ-ಪಾಸ್ತಿಗೆ ಹಾನಿ ಮಾಡಿದ್ದಾರೆ. ಈ ಬಗ್ಗೆ ಮೌಲ್ಯಮಾಪನ ಮಾಡಲಾಗುತ್ತಿದೆ” ಎಂದು ಅಂಬಾಲಾ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಂಭಾವ್ಯ ಹಾನಿಯ ನಿರೀಕ್ಷೆಯಲ್ಲಿ, ಪ್ರತಿಭಟನಾಕಾರರಿಂದ ಉಂಟಾದ ನಷ್ಟಗಳಿಗೆ ಪರಿಹಾರವಾಗಿ ಅವರ ಆಸ್ತಿ ಮತ್ತು ಬ್ಯಾಂಕ್ ಖಾತೆಯನ್ನು ವಶಪಡಿಸಿಕೊಳ್ಳುವ ಬಗ್ಗೆ ಆಡಳಿತವು ಹಿಂದೆ ಎಚ್ಚರಿಕೆ ನೀಡಿತ್ತು. ಪ್ರತಿಭಟನೆಯ ಸಮಯದಲ್ಲಿ ಆಸ್ತಿ ಹಾನಿಯಾಗಿರುವ ವ್ಯಕ್ತಿಗಳು ತಮ್ಮ ನಷ್ಟದ ಕುರಿತು ಮುಂದಿನ ಕ್ರಮಕ್ಕಾಗಿ ಸ್ಥಳೀಯಾಡಳಿತಕ್ಕೆ ಮಾಹಿತಿ ನೀಡಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫೆ.13ರಂದು ಪಂಜಾಬ್‌ನಿಂದ ದೆಹಲಿ ಚಲೋ ಮೆರವಣಿಗೆಯಲ್ಲಿ ಆಗಮಿಸಿದ ರೈತರು, ಪಂಜಾಬ್-ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ಇದ್ದಾರೆ. ಇಲ್ಲಿ ಹರಿಯಾಣದ ಬಿಜೆಪಿ ಸರ್ಕಾರದ ಆದೇಶದ ಮೇರೆಗೆ ಪೊಲೀಸರು ಬ್ಯಾರಿಕೇಡ್, ಸಿಮೆಂಟ್ ಸ್ಲ್ಯಾಬ್, ಮುಳ್ಳಿನ ತಂತಿ, ಮೊಳೆ ಅಳವಡಿಸಿದ್ದು, ರೈತರು ಹರಿಯಾಣ ಪ್ರವೇಶಿದಂತೆ ಸರ್ಪಗಾವಲು ಹಾಕಿದ್ದಾರೆ.

ಭದ್ರಕೋಟೆಯನ್ನು ಬೇಧಿಸಿ ಒಳ ನುಗ್ಗಲು ಯತ್ನಿಸಿದ ರೈತರ ಮೇಲೆ ಪೊಲೀಸರು ಅಶ್ರುವಾಯು, ರಬ್ಬರ್ ಬುಲೆಟ್, ಜಲಫಿರಂಗಿ ಪ್ರಯೋಗಿಸಿದ್ದಾರೆ. ಇದರಿಂದ ಓರ್ವ ಯುವ ರೈತ ಮೃತಪಟ್ಟಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ.

ನಾವು ಸರ್ಕಾರದೊಂದಿಗೆ ಸಂಘರ್ಷಕ್ಕೆ ಇಳಿಯುವುದಿಲ್ಲ. ಶಾಂತಿಯುತವಾಗಿ ದೆಹಲಿ ಹೋಗಲು ನಮಗೆ ಅವಕಾಶ ಕೊಡಿ ಎಂದು ರೈತರು ಮನವಿ ಮಾಡಿದ್ದಾರೆ. ಹರಿಯಾಣ ಪೊಲೀಸರು ಇದಕ್ಕೆ ಅವಕಾಶ ನೀಡಿಲ್ಲ. ಗಡಿಯ ದಾಟಲು ಪ್ರಯತ್ನಿಸಿದ ರೈತರ ಮೇಲೆ ದಾಳಿ ಮಾಡಿದ್ದಾರೆ. ಅಲ್ಲದೆ, ಇದೀಗ ಎನ್‌ಎಸ್‌ಎ ಕಾಯ್ದೆ ಜಾರಿಗೊಳಿಸಿದ್ದಾರೆ. ರೈತರು ಮಾತ್ರ ನಾವು ದೆಹಲಿ ಚಲೋ ನಡೆಸಿಯೇ ತೀರುತ್ತೇವೆ ಎಂದು ಶಪಥ ಮಾಡಿದ್ದಾರೆ.

ಇದನ್ನೂ ಓದಿ : ಪಂಜಾಬ್‌ನೊಳಗೆ ನುಗ್ಗಿ ಹರಿಯಾಣ ಪೊಲೀಸರಿಂದ ಅಶ್ರುವಾಯು ಶೆಲ್ ದಾಳಿ: ರೈತರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...