Homeಮುಖಪುಟದೆಹಲಿ ಚಲೋ ಮೆರವಣಿಗೆ: ರೈತರ ರಕ್ಷಣೆಗೆ ಆಗಮಿಸಿದ 'ನಿಹಾಂಗ್ ಸಿಖ್‌ ಪಡೆ'

ದೆಹಲಿ ಚಲೋ ಮೆರವಣಿಗೆ: ರೈತರ ರಕ್ಷಣೆಗೆ ಆಗಮಿಸಿದ ‘ನಿಹಾಂಗ್ ಸಿಖ್‌ ಪಡೆ’

- Advertisement -
- Advertisement -

ಭದ್ರತಾ ಪಡೆಗಳನ್ನು ಎದುರಿಸುತ್ತಿರುವ ಸಾವಿರಾರು ಪ್ರತಿಭಟನಾಕಾರರಿಗೆ ರಕ್ಷಣೆ ನೀಡಲು ‘ನಿಹಾಂಗ್ ಸಿಖ್‌ಗಳು’ ಶಂಭು ಗಡಿಗೆ ಬಂದಿದ್ದಾರೆ. 1600ರ ದಶಕದ ಹಿಂದಿನ ಯೋಧ ಪಂಗಡದ ಅವರು ನೀಲಿ ನಿಲುವಂಗಿಗಳು, ಪ್ರಾಚೀನ ಆಯುಧಗಳಾದ ಕತ್ತಿಗಳು ಮತ್ತು ಈಟಿಗಳಿಂದ ಗುರುತಿಸಲ್ಪಟ್ಟಿದೆ.

ಮುಖ್ಯವಾಗಿ, ಪಂಜಾಬ್‌ನಿಂದ ಬಂದಿರುವ ಬಹುಪಾಲು ರೈತರು ಸಿಖ್ಖರಾಗಿದ್ದು, ಅವರು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಒತ್ತಾಯಿಸುತ್ತಿದ್ದಾರೆ. ತಮ್ಮ ಬೇಡಿಕೆಗಳನ್ನು ಸರ್ಕಾರಕ್ಕೆ ಒತ್ತಾಯಿಸಲು ಈ ತಿಂಗಳ ಆರಂಭದಲ್ಲಿ ದೆಹಲಿಗೆ ಮೆರವಣಿಗೆಯನ್ನು ಪ್ರಾರಂಭಿಸಿದರು.

ಆದರೆ, ಪೊಲೀಸರು ರಾಷ್ಟ್ರೀಯ ರಾಜಧಾನಿಯಿಂದ ಸುಮಾರು 200 ಕಿಮೀ ದೂರದಲ್ಲೇ ಮೆರವಣಿಗೆಯನ್ನು ನಿಲ್ಲಿಸಿದ್ದಾ., ಪ್ರತಿಭಟನೆಯನ್ನು ಅಡ್ಡಿಪಡಿಸಲು ಜಲ ಫಿರಂಗಿ ಮತ್ತು ಅಶ್ರುವಾಯು ಬಳಸಿದ್ದಾರೆ.

ಪ್ರತಿಭಟನಾಕಾರರಲ್ಲಿ ಒಬ್ಬರು ಮೃತಪಟ್ಟ ನಂತರ ಎರಡು ದಿನಗಳ ಕಾಲ ತಮ್ಮ ಪ್ರತಿಭಟನೆಯನ್ನು ನಿಲ್ಲಿಸುವುದಾಗಿ ರೈತರು ಬುಧವಾರ ಹೇಳಿದರು. ಪ್ರತಿಭಟನಾ ಸ್ಥಳದಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ದೃಢಪಡಿಸಿದರು. ಆದರೆ ಅವರ ಸಾವಿನ ಕಾರಣವನ್ನು ಶವಪರೀಕ್ಷೆಯಿಂದ ಮಾತ್ರ ನಿರ್ಧರಿಸಲಾಗುವುದು ಎಂದು ಹೇಳಿದರು.

ಮೆರವಣಿಗೆ ಪುನರಾರಂಭಗೊಳಿಸಲು ರೈತರು ಕಾಯುತ್ತಿರುವಾಗ, ನಿಹಾಂಗ್ ಯೋಧರು ಫೆನ್ಸಿಂಗ್, ಕುದುರೆ ಸವಾರಿ ಮತ್ತು ಧ್ಯಾನ ಮಾಡುವ ಮೂಲಕ ತಮ್ಮ ಕೌಶಲ್ಯಗಳನ್ನು ಹೆಚ್ಚಿಸಿಕೊಂಡರು. ತಮ್ಮ ಉದ್ದದ ನಿಲುವಂಗಿಗಳು ಮತ್ತು ಹೊಂದಾಣಿಕೆಯ ಪೇಟಗಳಿಂದ ಸುಲಭವಾಗಿ ಅವರನ್ನು ಗುರುತಿಸಬಹುದು. ‘ನಾವು ರೈತರನ್ನು ರಕ್ಷಿಸಲು ಆಗಮಿಸಿದ್ದೇವೆ’ ಎಂದು ಹಲವಾರು ನಿಹಾಂಗ್‌ಗಳು ಹೇಳುತ್ತಾರೆ.

‘ಅನ್ಯಾಯ ಮತ್ತು ದಬ್ಬಾಳಿಕೆಯ ವಿರುದ್ಧ ಹೋರಾಡಲು ಸಿಖ್ಖರು ಯಾವಾಗಲೂ ಸಿದ್ಧರಾಗಿರಬೇಕು ಎಂದು ಗುರು ಗೋಬಿಂದ್ ಸಿಂಗ್ ಬೋಧಿಸಿದ್ದಾರೆ’ ಎಂದು ಸಿಖ್ಖರ ಆಧ್ಯಾತ್ಮಿಕ ನಾಯಕನನ್ನು ಉಲ್ಲೇಖಿಸಿ ನಿಹಾಂಗ್‌ಗಳಲ್ಲಿ ಒಬ್ಬರಾದ ಶೇರ್ ಸಿಂಗ್ ಹೇಳಿದರು.

‘ಈ ಪ್ರತಿಭಟನಾಕಾರರು ಮಧ್ಯರಾತ್ರಿಯಲ್ಲೂ ಯಾವುದೇ ತೊಂದರೆ ಎದುರಿಸಿದರೂ ನಾವು ಸಿದ್ಧರಾಗಿರಬೇಕು’ ಎಂದು ಹೇಳಿದ್ದಾರೆ.

ಭಾರತದ ಅಲ್ಪಸಂಖ್ಯಾತ ಸಿಖ್ ಸಮುದಾಯವು ಪಂಜಾಬ್‌ನ ಮೂರು ಕೋಟಿ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ. ನಿಹಾಂಗ್‌ಗಳು 2021 ರಲ್ಲಿ ಇದೇ ರೀತಿಯ, ವರ್ಷವಿಡೀ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದರು.

‘ರೈತರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ… ರೈತರನ್ನು ಹೆದರಿಸಿ ಓಡಿಸಬಹುದು ಎಂದು ಸರ್ಕಾರ ಭಾವಿಸಬಾರದು… ಇದು ಪಂಜಾಬ್ ಮತ್ತು ನಾವು ರೈತರೊಂದಿಗೆ ಒಗ್ಗಟ್ಟಿನಿಂದ ನಿಂತಿದ್ದೇವೆ’ ಎಂದು ಮತ್ತೊಬ್ಬ ನಿಹಾಂಗ್ ರಾಜಾ ರಾಮ್ ಸಿಂಗ್ ಹೇಳಿದ್ದಾರೆ.

2021 ರ ಪ್ರತಿಭಟನೆ ಸಮಯದಲ್ಲಿ, ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಪ್ರತಿಭಟನಾ ಸ್ಥಳವೊಂದರಲ್ಲಿ ಸಿಖ್ ವ್ಯಕ್ತಿಯ ಹತ್ಯೆಗೆ ಸಂಬಂಧಿಸಿದಂತೆ ಮೂವರು ನಿಹಾಂಗ್‌ಗಳನ್ನು ಬಂಧಿಸಲಾಯಿತು. ನಿಹಾಂಗ್‌ಗಳು ಆರೋಪಗಳನ್ನು ನಿರಾಕರಿಸಲಿಲ್ಲ, ಆ ವ್ಯಕ್ತಿ ತಮ್ಮ ಪವಿತ್ರ ಪುಸ್ತಕದ ಮೇಲೆ ದಾಳಿ ಮಾಡುವ ಮೂಲಕ ಅಪವಿತ್ರ ಮಾಡಿದ್ದಾರೆ ಎಂದು ಹೇಳಿದ್ದರು.

ನಿಹಾಂಗ್ ಸಿಖ್ಖರು ಕಡು ನೀಲಿ ಬಣ್ಣದ ಬಟ್ಟೆ ಮತ್ತು ಲಾಂಚನ ಹೊಂದಿರುವ ಪೇಟ ಧರಿಸುತ್ತಾರೆ. ಕಠಾರಿಗಳು, ಬಂದೂಕು ಮತ್ತಿತರ ಆಯುಧಗಳನ್ನು ಸದಾ  ಹೊಂದಿರುತ್ತಾರೆ. ಅವರು ತಮ್ಮನ್ನು ಗುರು ಕೀ ಫೌಜ್ (ಗುರುವಿನ ಸೈನಿಕ) ಎಂದು ಪರಿಗಣಿಸುತ್ತಾರೆ. ಇವರು ಗುರುದ್ವಾರಗಳನ್ನು ಕಾಯುತ್ತಾರೆ.

ಇದನ್ನೂ ಓದಿ; ಇಂಡಿಯಾ ಮೈತ್ರಿಕೂಟ ತೊರೆಯದಿದ್ದರೆ ಕೇಜ್ರಿವಾಲ್‌ರನ್ನು ಬಂಧಿಸುವ ಬೆದರಿಕೆ: ಬಿಜೆಪಿ ವಿರುದ್ಧ ಆಪ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...