Homeಮುಖಪುಟ'ಮಜ್ದೂರ್ ಪೈದಲ್ ಜೋಡೋ ಯಾತ್ರೆ': ಭೂರಹಿತ ದಲಿತ ಕಾರ್ಮಿಕರಿಂದ ಹಕ್ಕಿಗಾಗಿ ಹೋರಾಟ

‘ಮಜ್ದೂರ್ ಪೈದಲ್ ಜೋಡೋ ಯಾತ್ರೆ’: ಭೂರಹಿತ ದಲಿತ ಕಾರ್ಮಿಕರಿಂದ ಹಕ್ಕಿಗಾಗಿ ಹೋರಾಟ

- Advertisement -
- Advertisement -

ಎಂಎಸ್‌ಪಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ದೆಹಲಿ ಚಲೋ’ ಪ್ರತಿಭಟನೆ ನಡೆಯುತ್ತಿದೆ. ಪಂಜಾಬ್ ರೈತರು ದಿಲ್ಲಿ ಚಲೋ ಮೆರವಣಿಗೆಯ ಭಾಗವಾಗಿ ದೆಹಲಿಯತ್ತ ಸಾಗಲು ಹರಿಯಾಣ ಗಡಿಯಲ್ಲಿ ಮೊಕ್ಕಾಂ ಹೂಡಿದ್ದಾರೆ. ಈ ಮಧ್ಯೆ ಪಂಜಾಬ್‌ನ ಭೂರಹಿತ ರೈತರು, ಕೂಲಿ ಕಾರ್ಮಿಕರು ‘ಮಜ್ದೂರ್ ಪೈದಲ್ ಜೋಡೋ ಯಾತ್ರೆ’ ಪ್ರತಿಭಟನೆಯನ್ನು ಪ್ರಾರಂಭಿಸಿದ್ದಾರೆ. ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾಲ್ನಡಿಗೆಯಲ್ಲಿ ಮತ್ತು ಸೈಕಲ್‌ನಲ್ಲಿ ಒಂದು ಗ್ರಾಮದಿಂದ ಮತ್ತೊಂದು ಗ್ರಾಮಕ್ಕೆ ತೆರಳುತ್ತಿದ್ದಾರೆ.

ಮಹಿಳೆಯರು, ಭೂರಹಿತ ರೈತರು ಮತ್ತು ದೈನಂದಿನ ಕೂಲಿ ಕಾರ್ಮಿಕರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ಪ್ರತಿಭಟನಾಕಾರರಲ್ಲಿ ಹೆಚ್ಚಾಗಿ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಭೂ ಮಾಲೀಕತ್ವದ ಹಕ್ಕುಗಳು, ಮನೆ, ಸಾಲ-ಮನ್ನಾ, ಯೋಗ್ಯ ವೇತನ ಮತ್ತು ಜಾತಿ ಆಧಾರಿತ ತಾರತಮ್ಯವನ್ನು ಕೊನೆಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ.

ಪೆಂಡು ಮಜ್ದೂರ್ ಯೂನಿಯನ್, ಪಂಜಾಬ್ ಮತ್ತು ಜಮೀನ್ ಪ್ರಾಪ್ತಿ ಸಂಘರ್ಷ ಸಮಿತಿಯಂತಹ ಒಕ್ಕೂಟಗಳು ಪ್ರತಿಭಟನೆಯಲ್ಲಿ ಭಾಗವಹಿಸಿದೆ. ಈ ಯಾತ್ರೆಯು ಪ್ರಸ್ತುತ ಜಲಂಧರ್, ಹೋಶಿಯಾರ್‌ಪುರ ಮತ್ತು ಮೊಗಾ ಜಿಲ್ಲೆಗಳಲ್ಲಿ ನಡೆಯುತ್ತಿದೆ. ಇದಲ್ಲದೆ ಈ ಸಂಘಟನೆಗಳು ಮಾರ್ಚ್ 11ರಂದು ರಾಜ್ಯಾದ್ಯಂತ ‘ರೈಲ್ ರೋಕೋ’ ಪ್ರತಿಭಟನೆಯನ್ನು ಘೋಷಿಸಿವೆ.

ಪೆಂಡು ಮಜ್ದೂರ್ ಯೂನಿಯನ್ ಮಾದ್ಯಮ ಕಾರ್ಯದರ್ಶಿ ಕಾಶ್ಮೀರ್ ಸಿಂಗ್ ಘುಶೋರ್ ಈ ಬಗ್ಗೆ ಮಾತನಾಡಿದ್ದು, ಭೂರಹಿತ ಮತ್ತು ದಲಿತ ಕಾರ್ಮಿಕರು ಮತ್ತು ಇತರ ಸೌಲಭ್ಯ ವಂಚಿತ ವರ್ಗಗಳು ಕಾಲ್ನಡಿಗೆಯಲ್ಲಿ ಮತ್ತು ಸೈಕಲ್‌ಗಳಲ್ಲಿ ಜಾಥಾ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸತತ ಬೇಡಿಕೆಗಳ ಮಧ್ಯೆಯು ಸರಕಾರವು ಹಲವಾರು ವರ್ಷಗಳಿಂದ ಈಡೇರಿಸದಿರುವ ಬೇಡಿಕೆ ಬಗ್ಗೆ ಧ್ವನಿ ಎತ್ತುವುದಾಗಿ ಹೇಳಿದ್ದಾರೆ.

ನಮ್ಮ ಪ್ರಮುಖ ಬೇಡಿಕೆಗಳಲ್ಲಿ ಭೂಮಿಯ ಹಕ್ಕು ಮತ್ತು ಮನೆ ಮಾಲೀಕತ್ವ ಪ್ರಮುಖವಾದಂತಹ ಬೇಡಿಕೆಯಾಗಿದೆ. ಪಂಜಾಬ್ ಲ್ಯಾಂಡ್ ಸೀಲಿಂಗ್ ಆಕ್ಟ್ ಪ್ರಕಾರ, ಒಂದು ಕುಟುಂಬವು 17.5 ಎಕರೆಗಿಂತ ಹೆಚ್ಚಿನ ಕೃಷಿ ಭೂಮಿಯನ್ನು ಹೊಂದುವಂತಿಲ್ಲ. ಹೀಗಾಗಿ ಹೆಚ್ಚುವರಿ ಭೂಮಿಯನ್ನು ಭೂ ರಹಿತರಿಗೆ ಹಂಚಿಕೆ ಮಾಡಲು ಸರ್ಕಾರಕ್ಕೆ ನೀಡಬೇಕು. ಪಂಜಾಬ್ ಸರ್ಕಾರದ ‘ಮೇರಾ ಘರ್, ಮೇರೆ ನಾಮ್’ ಯೋಜನೆಯಡಿ, ಗ್ರಾಮಗಳ ‘ಲಾಲ್ ದೋರಾ’ ವ್ಯಾಪ್ತಿಯಲ್ಲಿ  ವಾಸಿಸುವ ಎಲ್ಲಾ ಎಸ್‌ಸಿ ಕುಟುಂಬಗಳಿಗೆ ಅವರ ಮನೆಗಳ ಮಾಲೀಕತ್ವವನ್ನು ನೀಡಲಾಗುವುದು ಎಂದು ಭರವಸೆ ನೀಡಿತ್ತು, ಆದರೆ ಇಲ್ಲಿಯವರೆಗೆ ನೋಂದಣಿ ಪ್ರಕ್ರಿಯೆ ಮಾಡಲಾಗಿಲ್ಲ. ಶ್ರೀಮಂತರಿಗೆ ಮಾತ್ರವಲ್ಲ, ನಮ್ಮಂತಹ ಬಡವರಿಗೆ ಭೂಮಿ ಮತ್ತು ಮನೆಯ ಮೇಲೆ ಸಮಾನ ಹಕ್ಕುಗಳಿವೆ ಎಂದು ಘುಶೋರ್ ಹೇಳಿದ್ದಾರೆ.

1957ರಲ್ಲಿ ಅಖಿಲ ಭಾರತ ಕಾರ್ಮಿಕ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯದಂತೆ ತಮ್ಮ ದಿನಗೂಲಿಯಲ್ಲಿ ಕನಿಷ್ಠ 1,000 ರೂ.ಗಳ ಹೆಚ್ಚಳ, ಭಾನುವಾರದಂದು ಪಾವತಿ ವಾರದ ರಜೆಯ ಹಕ್ಕು, ಸರ್ಕಾರ, ಸಹಕಾರಿ ಸಂಸ್ಥೆಗಳ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ್ದಾರೆ.

ಇದನ್ನು ಓದಿ: ಬಿಲ್ಕೀಸ್‌ ಬಾನು ಪ್ರಕರಣ: ಪೆರೋಲ್‌ ಮೇಲೆ ಹೊರ ಬರುತ್ತಿರುವ ಅಪರಾಧಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...