Homeಅಂಕಣಗಳುಹೈದ್ರಾಬಾದ್ ಫಂಡ್: ಪಾಕಿಸ್ತಾನಕ್ಕೆ ಮುಖಭಂಗ, 306 ಕೋಟಿ ರೂ. ಯಾರ ಪಾಲಾಗಲಿದೆ?

ಹೈದ್ರಾಬಾದ್ ಫಂಡ್: ಪಾಕಿಸ್ತಾನಕ್ಕೆ ಮುಖಭಂಗ, 306 ಕೋಟಿ ರೂ. ಯಾರ ಪಾಲಾಗಲಿದೆ?

- Advertisement -
- Advertisement -

ಇಂಗ್ಲೆಂಡ್ ಅಂಡ್ ವೇಲ್ಸ್ ಹೈಕೋರ್ಟ್ ಇತ್ತೀಚೆಗೆ ಕೊಟ್ಟ ತೀರ್ಪೊಂದು ಎಲ್ಲರ ಗಮನ ಸೆಳೆದಿದೆ. ಲಂಡನ್‍ನ ನ್ಯಾಟ್‍ವೆಸ್ಟ್ ಬ್ಯಾಂಕಿನಲ್ಲಿರುವ 35 ಮಿಲಿಯನ್ ಪೌಂಡ್ ಅಂದರೆ 306 ಕೋಟಿ ರೂಪಾಯಿ ಹಣ ತನಗೆ ಸೇರಬೇಕೆಂದು ಪಾಕಿಸ್ತಾನ ಹೂಡಿದ್ದ ದಾವೆಯನ್ನು ತಳ್ಳಿ ಹಾಕಿರುವ ನ್ಯಾಯಾಲಯ ಭಾರತದ ಪರವಾಗಿ ತೀರ್ಪು ನೀಡಿದೆ. ಆ ಮೂಲಕ ಸುಮಾರು ಏಳು ದಶಕಗಳ ಹಳೆಯ ಪ್ರಕರಣವೊಂದು ಇತ್ಯರ್ಥ ಕಂಡಂತಾಗಿದೆ. ‘ಹೈದ್ರಾಬಾದ್ ಫಂಡ್’ ಎಂತಲೇ ಹೆಸರಾದ ಈ ವಿವಾದ ಕೇವಲ ಹಣದ ಕಾರಣಕ್ಕೆ ಮಾತ್ರವಲ್ಲದೆ ಭಾರತ ಪಾಕಿಸ್ತಾನಗಳ ನಡುವೆ ಪ್ರತಿಷ್ಠೆಯ ವಿಷಯವಾಗಿತ್ತು.

ಏನಿದು ಹೈದ್ರಾಬಾದ್ ಫಂಡ್..?

1948ರ ಸೆಪ್ಟೆಂಬರ್ ನಲ್ಲಿ ಹೈದ್ರಾಬಾದ್‍ನ ಏಳನೇ ನಿಜಾಮನಾಗಿದ್ದ ಮೀರ್ ಒಸ್ಮಾನ್ ಅಲಿ ಖಾನ್, ಇಂಗ್ಲೆಂಡ್‍ನಲ್ಲಿದ್ದ ಪಾಕಿಸ್ತಾನದ ಅಂದಿನ ರಾಯಭಾರಿ ಹಬೀಬ್ ಇಬ್ರಾಹಿಂ ರಹಮತುಲ್ಲಾ ಖಾತೆಗೆ ವರ್ಗಾವಣೆ ಮಾಡಿದ್ದ 1 ಮಿಲಿಯನ್ ಪೌಂಡ್ ಹಣವಿದು. ಅದೀಗ 35 ಮಿಲಿಯನ್‍ನಷ್ಟಾಗಿದೆ. ಆದರೆ ನಂತರ ಕೋರ್ಟ್‍ನಲ್ಲಿ ಹಣಕ್ಕಾಗಿ ದಾವೆ ಹೂಡಿದ ಒಸ್ಮಾನ್ ಅಲಿ ಖಾನ್, ಹಣವನ್ನು ತಾನು ವರ್ಗಾವಣೆ ಮಾಡಿಲ್ಲ, ನನ್ನ ಗಮನಕ್ಕೆ ಬಾರದೆ ಅಂದಿನ ಹೈದ್ರಾಬಾದ್ ಪ್ರಾಂತ್ಯದ ಹಣಕಾಸು ಮತ್ತು ವಿದೇಶಾಂಗ ಸಚಿವನಾಗಿದ್ದ ನವಾಬ್ ಮೊಯಿನ್ ನವಾಜ್ ಜಂಗ್, ವರ್ಗಾವಣೆ ಮಾಡಿದ್ದ ಎಂದು ಹೇಳಿಕೆ ನೀಡಿದ್ದರು. ಆಗ ಪ್ರಕರಣ ಇತ್ಯರ್ಥವಾಗುವವರೆಗೆ ಹಣವನ್ನು ‘ಫ್ರೀಜ್’ ಮಾಡುವಂತೆ ನ್ಯಾಯಾಲಯ ಆದೇಶಿಸಿತ್ತು.

1947ರಲ್ಲಿ ಭಾರತ ವಿಭಜನೆಯಾದಾಗ, ತನ್ನ ಆಳ್ವಿಕೆಯಲ್ಲಿದ್ದ ಹೈದ್ರಾಬಾದ್ ಪ್ರಾಂತ್ಯವನ್ನು ಭಾರತದೊಂದಿಗೆ ವಿಲೀನ ಮಾಡದೆ ಸ್ವತಂತ್ರವಾಗುಳಿಯಲು ನಿಜಾಮ ನಿರ್ಧರಿಸಿದ. ಆಗ ಭಾರತದೊಂದಿಗೆ ಒಂದು ಯಥಾಸ್ಥಿತಿ ಒಪ್ಪಂದಕ್ಕೆ ಸಹಿ ಹಾಕಿದ್ದ. ಅದರ ಪ್ರಕಾರ ಒಂದು ವರ್ಷದ ಕಾಲ ಭಾರತವು ಹೈದ್ರಾಬಾದ್‍ನಲ್ಲಿ ಸೇನೆಯನ್ನು ಜಮಾವಣೆ ಮಾಡದೆ ಯಥಾಸ್ಥಿತಿ ಕಾಪಾಡಬೇಕಿತ್ತು. ಹಾಗಾಗಿ ಸಿಕಂದರಾಬಾದ್‍ನಲ್ಲಿ ಭಾರತೀಯ ಸೇನೆಯನ್ನು ವಾಪಾಸ್ ಕೂಡಾ ಕರೆಸಿಕೊಳ್ಳಲಾಗಿತ್ತು. ಈ ಅವಧಿಯಲ್ಲಿ ನಿಜಾಮನ ‘ರಜಾಕಾರ್’ ಸೈನಿಕರ ಉಪಟಳ ಹೆಚ್ಚಾಗಿತ್ತಲ್ಲದೆ, ನಿಜಾಮ ಪೋರ್ಚುಗೀಸರ ಜತೆ ಒಪ್ಪಂದ ಮಾಡಿಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದರಿಂದ ಭಾರತವು 1948ರ ಸೆಪ್ಟೆಂಬರ್ ನಲ್ಲಿ ‘ಆಪರೇಷನ್ ಪೋಲೊ’ ಹೆಸರಿನ ಸೇನಾ ಕಾರ್ಯಾಚರಣೆ ಮೂಲಕ ಹೈದ್ರಾಬಾದ್ ಅನ್ನು ತನ್ನೊಳಗೆ ವಿಲೀನ ಮಾಡಿಕೊಂಡಿತು. ಅಂತಹ ಯುದ್ಧಮಯ ಸನ್ನಿವೇಶದಲ್ಲೇ ವಿತ್ತ ಸಚಿವ ಹಣವನ್ನು ಪಾಕಿಸ್ತಾನದ ರಾಯಭಾರಿ ಅಕೌಂಟಿಗೆ ವರ್ಗಾಯಿಸಿದ್ದ.

ವಿಲೀನದ ನಂತರ ನಿಜಾಮ ಹಣ ವಾಪಾಸ್ ನೀಡುವಂತೆ ಕೇಳಿದಾಗ ಪಾಕಿಸ್ತಾನ ತಕರಾರು ಮಾಡಿತು. ಹಾಗಾಗಿ ಲಂಡನ್ ಕೋರ್ಟ್‍ನಲ್ಲಿ ದಾವೆ ಹೂಡಿದರು.

ಪಾಕಿಸ್ತಾನದ ವಾದ ಏನಾತ್ತು..?

ಆರಂಭದಲ್ಲಿ ಇದು ಏಳನೇ ನಿಜಾಮ ಮತ್ತು ಪಾಕಿಸ್ತಾನ ನಡುವಿನ ವಿವಾದವಾಗಿತ್ತಷ್ಟೆ. ಆದರೆ 1956ರಲ್ಲಿ ನಿಜಾಮ ಹಣದ ಮೇಲಿನ ದಾವೆ ಹೂಡಿಕೆ ಹಕ್ಕನ್ನು ಭಾರತದ ರಾಷ್ಟ್ರಪತಿಗಳ ಜತೆ ಹಂಚಿಕೊಂಡಾಗ ‘ಹೈದ್ರಾಬಾದ್ ಫಂಡ್’ನ ಮೇಲೆ ಮೂರು ಹಕ್ಕುದಾರರು ಸೃಷ್ಟಿಯಾಗಿದ್ದರು. ಹಣ ತನಗೆ ಸೇರಬೇಕೆಂದು ವಾದಿಸಲು ಪಾಕಿಸ್ತಾನ ಎರಡು ಅಂಶಗಳನ್ನು ಮುಂದಿಡುತ್ತಿತ್ತು. ಮೊದಲನೆಯದು, ಹೈದ್ರಾಬಾದ್ ಪ್ರಾಂತ್ಯವು ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡುವಂತೆ ತನಗೆ ಕೊಟ್ಟಿದ್ದ ಹಣ ಇದು ಎನ್ನುವುದು. ಎರಡನೆಯ ವಾದದಲ್ಲಿ, ಸರ್ಕಾರಿ ಮಾನದಂಡಗಳ ಅನ್ವಯ ವರ್ಗಾವಣೆಯಾದ ಈ ಹಣವನ್ನು ಭಾರತದಿಂದ ‘ಸುರಕ್ಷಿತವಾಗಿಡಲು’ ತನಗೆ ವರ್ಗಾಯಿಸಬೇಕೆಂದು ಹೇಳಿಕೊಂಡಿತ್ತು.

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ, ದಿವಂಗತ ಮೀರ್ ಒಸ್ಮಾನ್ ಅಲಿ ಖಾನ್‍ನ ಮೊಮ್ಮಕ್ಕಳಾದ ಮುಫ್ಫಖಮ್ ಝಾ ಮತ್ತು ಮುಖ್ಖರ್ರಂ ಝಾ, ವಿದೇಶಾಂಗ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುವ ಪ್ರಯತ್ನಕ್ಕೂ ಮುಂದಾಗಿದ್ದರು. ಆದರೆ 2013ರಲ್ಲಿ ಪಾಕಿಸ್ತಾನ ಇದನ್ನು ಮತ್ತೆ ನ್ಯಾಯಾಲಯದ ಕಟೆಕಟೆ ಹತ್ತಿಸಿತ್ತು. ಈಗ ಅದರ ವಿರುದ್ಧವೇ ತೀರ್ಪು ಹೊರಬಂದಿದೆ.

ಯಾರಿಗೆ ಸೇರಲಿದೆ ಈ ಹಣ..?

ನ್ಯಾಯಾಲಯವು ತನ್ನ ತೀರ್ಪಿನಲ್ಲಿ “ಈ ಹಣದ ಮೇಲೆ ಏಳನೇ ನಿಜಾಮನ ಹಕ್ಕಿದೆ. ಹಾಗಾಗಿ ದಿವಂಗತ ನಿಜಾಮನ ಪರ ವಾದಿಗಳಾದವರಿಗೆ (ಅವರ ಮೊಮ್ಮಕ್ಕಳು ಮತ್ತು ಭಾರತ) ಈ ಹಣ ಸಂದಾಯವಾಗುತ್ತೆ” ಎಂದು ಹೇಳಿದೆ ಮಾತ್ರವಲ್ಲ, “ಅದನ್ನು ಹೇಗೆ ಹಂಚಿಕೊಳ್ಳಬೇಕೆಂಬ ಆಯ್ಕೆಯನ್ನು ಅವರಿಗೇ ಬಿಟ್ಟಿದ್ದೇನೆ. ಆದರೆ ಹಾಗೆ ಹಂಚಿಕೊಳ್ಳುವ ವಿಧಾನ/ನಿಯಮವನ್ನು ನನ್ನ ಮುಂದೆ ಮಂಡಿಸಿ, ಅನುಮೋದನೆ ಪಡೆದುಕೊಳ್ಳಬೇಕು” ಎಂದೂ ಹೇಳಿದೆ.

ನಿಜವಾದ ಪ್ರಶ್ನೆ ಶುರುವಾಗುವುದೇ ಇಲ್ಲಿಂದ. ಯಾಕೆಂದರೆ ನಿಜಾಮನ ಪರವಾಗಿ ಇಬ್ಬರು ಮೊಮ್ಮಕ್ಕಳು ಮಾತ್ರ ದಾವೆಯಲ್ಲಿ ಭಾಗಿಯಾಗಿದ್ದರೂ ಕಾನೂನುಬದ್ಧವಾಗಿ ನಿಜಾಮನ ಪಿತ್ರಾರ್ಜಿತ ಫಲಾನುಭವಿಗಳ ಸಂಖ್ಯೆ 120! ನಿಜಾಮರ ಕುಟುಂಬ ಕಲ್ಯಾಣ ಸಂಘವನ್ನು ಹುಟ್ಟುಹಾಕಿ ಅದರ ಅಧ್ಯಕ್ಷರೂ ಆಗಿರುವ ನಿಜಾಮರ ಮತ್ತೊಬ್ಬ ಮೊಮ್ಮಗ ನಜಾಫ್ ಅಲಿಖಾನ್ ಹೇಳುವಂತೆ, ಬೆರಳೆಣಿಕೆಯ ಮಂದಿ ಬಿಟ್ಟರೆ ಇನ್ನುಳಿದ ನಿಜಾಮನ ವಂಶಸ್ಥರೆಲ್ಲ ಆರ್ಥಿಕ ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ. ಭಾರತ ಸರ್ಕಾರ ಈ ಹಣದ ಮೇಲೆ ಯಾವ ರೀತಿ ಪಾಲನ್ನು ನಿರೀಕ್ಷಿಸಲಿದೆ ಎನ್ನುವುದು ಸದ್ಯಕ್ಕಂತು ನಿಗೂಢವಾಗಿದೆ. ಹಾಗಾಗಿ ಹಂಚಿಕೆಯ ಕಗ್ಗಂಟು ಇನ್ನಷ್ಟು ಮುಂದುವರೆಯಲಿದೆ.

ಅಂದ ಹಾಗೆ, ಸದರಿ ತೀರ್ಪಿನ ಸಾಧಕ ಬಾಧಕಗಳನ್ನು ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಪಾಕಿಸ್ತಾನ ಹೇಳಿದೆ. ಹಾಗೊಮ್ಮೆ ಅದೇನಾದರು ಮೇಲ್ಮನವಿ ಸಲ್ಲಿಸಿದರೆ, ಏಳು ದಶಕಗಳ ಈ ಪ್ರಕರಣ ಇನ್ನೊಂದಷ್ಟು ದಶಕಗಳಿಗೆ ಮುಂದುವರೆದರೆ ಅಚ್ಚರಿಯಿಲ್ಲ. ಒಟ್ಟಿನಲ್ಲಿ, ಈ ತೀರ್ಪಿನಿಂದಾಗಿ ಭಾರತದ ಎದುರು ಪಾಕಿಸ್ತಾನಕ್ಕೆ ದೊಡ್ಡ ಮುಖಭಂಗ ಆಗಿರುವುದು ಮಾತ್ರ ಸತ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...