Homeಮುಖಪುಟಮೋದಿ ಆಡಳಿತದಲ್ಲಿ ಆರ್ಥಿಕ ಅಭಿವೃದ್ಧಿ 20 ವರ್ಷ ಹಿಂದಕ್ಕೆ ತಳ್ಳಲ್ಪಟ್ಟಿದೆ: ಕಾಂಗ್ರೆಸ್‌

ಮೋದಿ ಆಡಳಿತದಲ್ಲಿ ಆರ್ಥಿಕ ಅಭಿವೃದ್ಧಿ 20 ವರ್ಷ ಹಿಂದಕ್ಕೆ ತಳ್ಳಲ್ಪಟ್ಟಿದೆ: ಕಾಂಗ್ರೆಸ್‌

- Advertisement -
- Advertisement -

ಆರ್ಥಿಕ ಬೆಳವಣಿಗೆ ಎಂದರೆ ಕೃಷಿ, ಕೈಗಾರಿಕೆಗಳಲ್ಲಿ ಉದ್ಯೋಗವನ್ನು ಹೆಚ್ಚಿಸುವುದು, ಈ ದಿಸೆಯಲ್ಲಿ ಮನಮೋಹನ್ ಸಿಂಗ್ ಅವರ ಪ್ರಧಾನಿಯಾಗಿ ಸಾಧಿಸಿದ ಪ್ರಗತಿಯನ್ನು ನರೇಂದ್ರ ಮೋದಿ ಸರ್ಕಾರ ಹಿಮ್ಮುಖಗೊಳಿಸಿದೆ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿಯನ್ನು ನಡೆಸಿದ್ದು, ಮೋದಿ ಸರಕಾರದ ” ಅಸಮರ್ಪಕ ನಿರ್ವಹಣೆಯು” ಆರ್ಥಿಕ ಅಭಿವೃದ್ಧಿಯನ್ನು 20 ವರ್ಷಗಳಷ್ಟು ಹಿಂದಕ್ಕೆ ತಳ್ಳಿದೆ ಎಂದು ಕಾಂಗ್ರೆಸ್‌ ಪಕ್ಷ ಆರೋಪಿಸಿದೆ.

ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿದ್ದು, 2004-05 ಮತ್ತು 2017-18 ರ ನಡುವೆ ಭಾರತದಲ್ಲಿ ಕೃಷಿ ಕಾರ್ಮಿಕರ ಸಂಖ್ಯೆ 6.7 ಕೋಟಿ ಕಡಿಮೆಯಾಗಿದೆ, ಏಕೆಂದರೆ ಕಾರ್ಮಿಕರು ಕಡಿಮೆ-ವೇತನದ ಕೃಷಿಯನ್ನು ತೊರೆದು ಉತ್ಪಾದನೆ ಮತ್ತು ಸೇವೆಗಳಲ್ಲಿ ಹೆಚ್ಚಿನ ವೇತನದ ಉದ್ಯೋಗಗಳನ್ನು ಹುಡುಕುತ್ತಾರೆ. ಇದು ಐತಿಹಾಸಿಕ ಸಾಧನೆಯಾಗಿದೆ, ಮಧ್ಯಮ ಆದಾಯದ ದೇಶಕ್ಕೆ ಭಾರತದ ಆರ್ಥಿಕ ಪರಿವರ್ತನೆಯಲ್ಲಿ ಪ್ರಮುಖ ಹೆಗ್ಗುರುತಾಗಿದೆ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಡಾ.ಮನಮೋಹನ್ ಸಿಂಗ್ ಅವರು ಪ್ರಧಾನ ಮಂತ್ರಿಯಾಗಿ ಸಾಧಿಸಿದ ಎಲ್ಲಾ ಪ್ರಗತಿಯು ಮೋದಿಯವರ ಅನ್ಯಾಯ ಕಾಲದ ಮೂರು ವರ್ಷಗಳಲ್ಲಿ ಸಂಪೂರ್ಣವಾಗಿ ವ್ಯತಿರಿಕ್ತವಾಗಿದೆ. 2018-19 ರಿಂದ ಕೃಷಿ ಕಾರ್ಮಿಕರ ಸಂಖ್ಯೆ 6 ಕೋಟಿಗಳಷ್ಟು ಹೆಚ್ಚಾಗಿದೆ ಎಂದು ಜೈರಾಮ್‌ ರಮೇಶ್ ಹೇಳಿದ್ದಾರೆ.

ಹಿಂದಿನ ಯುಪಿಎ ಸರ್ಕಾರದ 10 ವರ್ಷಗಳ ಅಧಿಕಾರದ ವಿರುದ್ಧ ಕೇಂದ್ರ ಸರ್ಕಾರ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ‘ಶ್ವೇತಪತ್ರ’ ಮಂಡಿಸಲು ಮುಂದಾಗಿತ್ತು. ಇದರ ಬೆನ್ನಲ್ಲಿ ಕಾಂಗ್ರೆಸ್‌ ಕಳೆದ 10 ವರ್ಷಗಳಲ್ಲಿನ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಅನ್ಯಾಯಗಳನ್ನು ಎತ್ತಿ ತೋರಿಸುವ ನರೇಂದ್ರ ಮೋದಿ ಸರಕಾರದ ವೈಫಲ್ಯಗಳ ಕುರಿತ ಕಪ್ಪು ಪತ್ರವನ್ನು ಬಿಡುಗಡೆ ಮಾಡಿತ್ತು.

ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಪ್ಪು  ಪತ್ರವನ್ನು ಬಿಡುಗಡೆ ಮಾಡಿದ್ದಾರೆ. “10 ಸಾಲ್‌ ಅನ್ಯಾಯ್‌ ಕಾಲ್” (10 ವರ್ಷ ಅನ್ಯಾಯದ ಕಾಲ) ಎಂಬ ಶೀರ್ಷಿಕೆಯ ಈ ಕಪ್ಪು ಪತ್ರವು 54 ಪುಟಗಳ ದಾಖಲೆಯನ್ನು ಹೊಂದಿದೆ. ಮೋದಿ ಸರ್ಕಾರವು ತನ್ನ 10 ವರ್ಷಗಳ ಅಧಿಕಾರದಲ್ಲಿ ದೇಶದ ಆರ್ಥಿಕತೆಯನ್ನು ನಾಶಪಡಿಸಿದೆ, ನಿರುದ್ಯೋಗ ಉಲ್ಭಣಕ್ಕೆ ಕಾರಣವಾಗಿದೆ, ದೇಶದ ಕೃಷಿ ಕ್ಷೇತ್ರವನ್ನು ನಾಶಪಡಿಸಿದೆ, ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಕುಮ್ಮಕ್ಕು ನೀಡಿದೆ ಮತ್ತು ದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಘೋರ ಅನ್ಯಾಯವನ್ನು ಮಾಡಿದೆ ಎಂದು ಹೇಳಿತ್ತು.

ಭಾರತವನ್ನು ಸಮೃದ್ಧಿಯ ಹಾದಿಯಲ್ಲಿ ಕೊಂಡೊಯ್ಯುವ ಬದಲು, ಪ್ರಧಾನಿಯವರ ಪ್ರಮಾದ ಮತ್ತು ದುರಾಡಳಿತವು ನಮ್ಮ ಆರ್ಥಿಕ ಪರಿವರ್ತನೆಯನ್ನು 20 ವರ್ಷಗಳಷ್ಟು ಹಿಂದಕ್ಕೆ ತಳ್ಳಿದೆ ಎಂದು ರಮೇಶ್ ಆರೋಪಿಸಿದರು. ಮೋದಿ ಸರಕಾರ ಆರ್ಥಿಕತೆಯನ್ನು ನಿಭಾಯಿಸುವ ರೀತಿಯ ಬಗ್ಗೆ ಕಾಂಗ್ರೆಸ್‌ ನಿರಂತವಾಗಿ ವಾಗ್ಧಾಳಿಯನ್ನು ನಡೆಸುತ್ತಿದೆ, ಹೆಚ್ಚುತ್ತಿರುವ ನಿರುದ್ಯೋಗ ಮತ್ತು ಬೆಲೆ ಏರಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದೆ.

ಇದನ್ನು ಓದಿ: ‘ಮಜ್ದೂರ್ ಪೈದಲ್ ಜೋಡೋ ಯಾತ್ರೆ’: ಭೂರಹಿತ ದಲಿತ ಕಾರ್ಮಿಕರಿಂದ ಹಕ್ಕಿಗಾಗಿ ಹೋರಾಟ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...