Homeಮುಖಪುಟಮೋದಿ ಆಡಳಿತದಲ್ಲಿ ಆರ್ಥಿಕ ಅಭಿವೃದ್ಧಿ 20 ವರ್ಷ ಹಿಂದಕ್ಕೆ ತಳ್ಳಲ್ಪಟ್ಟಿದೆ: ಕಾಂಗ್ರೆಸ್‌

ಮೋದಿ ಆಡಳಿತದಲ್ಲಿ ಆರ್ಥಿಕ ಅಭಿವೃದ್ಧಿ 20 ವರ್ಷ ಹಿಂದಕ್ಕೆ ತಳ್ಳಲ್ಪಟ್ಟಿದೆ: ಕಾಂಗ್ರೆಸ್‌

- Advertisement -
- Advertisement -

ಆರ್ಥಿಕ ಬೆಳವಣಿಗೆ ಎಂದರೆ ಕೃಷಿ, ಕೈಗಾರಿಕೆಗಳಲ್ಲಿ ಉದ್ಯೋಗವನ್ನು ಹೆಚ್ಚಿಸುವುದು, ಈ ದಿಸೆಯಲ್ಲಿ ಮನಮೋಹನ್ ಸಿಂಗ್ ಅವರ ಪ್ರಧಾನಿಯಾಗಿ ಸಾಧಿಸಿದ ಪ್ರಗತಿಯನ್ನು ನರೇಂದ್ರ ಮೋದಿ ಸರ್ಕಾರ ಹಿಮ್ಮುಖಗೊಳಿಸಿದೆ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿಯನ್ನು ನಡೆಸಿದ್ದು, ಮೋದಿ ಸರಕಾರದ ” ಅಸಮರ್ಪಕ ನಿರ್ವಹಣೆಯು” ಆರ್ಥಿಕ ಅಭಿವೃದ್ಧಿಯನ್ನು 20 ವರ್ಷಗಳಷ್ಟು ಹಿಂದಕ್ಕೆ ತಳ್ಳಿದೆ ಎಂದು ಕಾಂಗ್ರೆಸ್‌ ಪಕ್ಷ ಆರೋಪಿಸಿದೆ.

ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿದ್ದು, 2004-05 ಮತ್ತು 2017-18 ರ ನಡುವೆ ಭಾರತದಲ್ಲಿ ಕೃಷಿ ಕಾರ್ಮಿಕರ ಸಂಖ್ಯೆ 6.7 ಕೋಟಿ ಕಡಿಮೆಯಾಗಿದೆ, ಏಕೆಂದರೆ ಕಾರ್ಮಿಕರು ಕಡಿಮೆ-ವೇತನದ ಕೃಷಿಯನ್ನು ತೊರೆದು ಉತ್ಪಾದನೆ ಮತ್ತು ಸೇವೆಗಳಲ್ಲಿ ಹೆಚ್ಚಿನ ವೇತನದ ಉದ್ಯೋಗಗಳನ್ನು ಹುಡುಕುತ್ತಾರೆ. ಇದು ಐತಿಹಾಸಿಕ ಸಾಧನೆಯಾಗಿದೆ, ಮಧ್ಯಮ ಆದಾಯದ ದೇಶಕ್ಕೆ ಭಾರತದ ಆರ್ಥಿಕ ಪರಿವರ್ತನೆಯಲ್ಲಿ ಪ್ರಮುಖ ಹೆಗ್ಗುರುತಾಗಿದೆ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಡಾ.ಮನಮೋಹನ್ ಸಿಂಗ್ ಅವರು ಪ್ರಧಾನ ಮಂತ್ರಿಯಾಗಿ ಸಾಧಿಸಿದ ಎಲ್ಲಾ ಪ್ರಗತಿಯು ಮೋದಿಯವರ ಅನ್ಯಾಯ ಕಾಲದ ಮೂರು ವರ್ಷಗಳಲ್ಲಿ ಸಂಪೂರ್ಣವಾಗಿ ವ್ಯತಿರಿಕ್ತವಾಗಿದೆ. 2018-19 ರಿಂದ ಕೃಷಿ ಕಾರ್ಮಿಕರ ಸಂಖ್ಯೆ 6 ಕೋಟಿಗಳಷ್ಟು ಹೆಚ್ಚಾಗಿದೆ ಎಂದು ಜೈರಾಮ್‌ ರಮೇಶ್ ಹೇಳಿದ್ದಾರೆ.

ಹಿಂದಿನ ಯುಪಿಎ ಸರ್ಕಾರದ 10 ವರ್ಷಗಳ ಅಧಿಕಾರದ ವಿರುದ್ಧ ಕೇಂದ್ರ ಸರ್ಕಾರ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ‘ಶ್ವೇತಪತ್ರ’ ಮಂಡಿಸಲು ಮುಂದಾಗಿತ್ತು. ಇದರ ಬೆನ್ನಲ್ಲಿ ಕಾಂಗ್ರೆಸ್‌ ಕಳೆದ 10 ವರ್ಷಗಳಲ್ಲಿನ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಅನ್ಯಾಯಗಳನ್ನು ಎತ್ತಿ ತೋರಿಸುವ ನರೇಂದ್ರ ಮೋದಿ ಸರಕಾರದ ವೈಫಲ್ಯಗಳ ಕುರಿತ ಕಪ್ಪು ಪತ್ರವನ್ನು ಬಿಡುಗಡೆ ಮಾಡಿತ್ತು.

ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಪ್ಪು  ಪತ್ರವನ್ನು ಬಿಡುಗಡೆ ಮಾಡಿದ್ದಾರೆ. “10 ಸಾಲ್‌ ಅನ್ಯಾಯ್‌ ಕಾಲ್” (10 ವರ್ಷ ಅನ್ಯಾಯದ ಕಾಲ) ಎಂಬ ಶೀರ್ಷಿಕೆಯ ಈ ಕಪ್ಪು ಪತ್ರವು 54 ಪುಟಗಳ ದಾಖಲೆಯನ್ನು ಹೊಂದಿದೆ. ಮೋದಿ ಸರ್ಕಾರವು ತನ್ನ 10 ವರ್ಷಗಳ ಅಧಿಕಾರದಲ್ಲಿ ದೇಶದ ಆರ್ಥಿಕತೆಯನ್ನು ನಾಶಪಡಿಸಿದೆ, ನಿರುದ್ಯೋಗ ಉಲ್ಭಣಕ್ಕೆ ಕಾರಣವಾಗಿದೆ, ದೇಶದ ಕೃಷಿ ಕ್ಷೇತ್ರವನ್ನು ನಾಶಪಡಿಸಿದೆ, ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಕುಮ್ಮಕ್ಕು ನೀಡಿದೆ ಮತ್ತು ದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಘೋರ ಅನ್ಯಾಯವನ್ನು ಮಾಡಿದೆ ಎಂದು ಹೇಳಿತ್ತು.

ಭಾರತವನ್ನು ಸಮೃದ್ಧಿಯ ಹಾದಿಯಲ್ಲಿ ಕೊಂಡೊಯ್ಯುವ ಬದಲು, ಪ್ರಧಾನಿಯವರ ಪ್ರಮಾದ ಮತ್ತು ದುರಾಡಳಿತವು ನಮ್ಮ ಆರ್ಥಿಕ ಪರಿವರ್ತನೆಯನ್ನು 20 ವರ್ಷಗಳಷ್ಟು ಹಿಂದಕ್ಕೆ ತಳ್ಳಿದೆ ಎಂದು ರಮೇಶ್ ಆರೋಪಿಸಿದರು. ಮೋದಿ ಸರಕಾರ ಆರ್ಥಿಕತೆಯನ್ನು ನಿಭಾಯಿಸುವ ರೀತಿಯ ಬಗ್ಗೆ ಕಾಂಗ್ರೆಸ್‌ ನಿರಂತವಾಗಿ ವಾಗ್ಧಾಳಿಯನ್ನು ನಡೆಸುತ್ತಿದೆ, ಹೆಚ್ಚುತ್ತಿರುವ ನಿರುದ್ಯೋಗ ಮತ್ತು ಬೆಲೆ ಏರಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದೆ.

ಇದನ್ನು ಓದಿ: ‘ಮಜ್ದೂರ್ ಪೈದಲ್ ಜೋಡೋ ಯಾತ್ರೆ’: ಭೂರಹಿತ ದಲಿತ ಕಾರ್ಮಿಕರಿಂದ ಹಕ್ಕಿಗಾಗಿ ಹೋರಾಟ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...