Homeಮುಖಪುಟಭರೂಚ್ ಕ್ಷೇತ್ರ ಎಎಪಿಗೆ ಬಿಟ್ಟುಕೊಟ್ಟ ಕಾಂಗ್ರೆಸ್: ಕ್ಷಮೆ ಕೋರಿದ ಅಹ್ಮದ್ ಪಟೇಲ್ ಪುತ್ರಿ

ಭರೂಚ್ ಕ್ಷೇತ್ರ ಎಎಪಿಗೆ ಬಿಟ್ಟುಕೊಟ್ಟ ಕಾಂಗ್ರೆಸ್: ಕ್ಷಮೆ ಕೋರಿದ ಅಹ್ಮದ್ ಪಟೇಲ್ ಪುತ್ರಿ

- Advertisement -
- Advertisement -

ಮುಂಬರುವ ಲೋಕಸಭೆ ಚುನಾವಣೆಗೆ ಆಮ್‌ ಆದ್ಮಿ ಪಕ್ಷ (ಎಎಪಿ) ಮತ್ತು ಕಾಂಗ್ರೆಸ್ ಸೀಟು ಹಂಚಿಕೆ ಮಾಡಿಕೊಂಡಿದ್ದು, ಗುಜರಾತ್‌ನ ಭರೂಚ್ ಲೋಕಸಭಾ ಕ್ಷೇತ್ರವನ್ನು ಎಎಪಿಗೆ ಬಿಟ್ಟು ಕೊಡಲಾಗಿದೆ. ಇದಕ್ಕಾಗಿ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ಪುತ್ರಿ ಮುಮ್ತಾಝ್ ಪಟೇಲ್ ಕ್ಷೇತ್ರದ ಜನರ ಕ್ಷಮೆ ಕೋರಿದ್ದಾರೆ.

ಒಟ್ಟು 26 ಲೋಕಸಭಾ ಕ್ಷೇತ್ರಗಳಿರುವ ಗುಜರಾತ್‌ನಲ್ಲಿ ಭರೂಚ್ ಮತ್ತು ಭಾವನಗರಲ್ಲಿ ಎಎಪಿ ಸ್ಪರ್ಧಿಸಲಿದೆ. ಉಳಿದ 24 ಕ್ಷೇತ್ರಗಳನ್ನು ಕಾಂಗ್ರೆಸ್‌ಗೆ ಬಿಟ್ಟು ಕೊಡಲಾಗಿದೆ.

ಭರೂಚ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಅಹ್ಮದ್ ಪಟೇಲ್ ಅವರ ನಿಧನದ ನಂತರ ಅವರ ಪುತ್ರಿ ಮುಮ್ತಾಝ್ ಈ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಹಿರಿಯ ಕಾಂಗ್ರೆಸ್‌ ನಾಯಕನ ಪುತ್ರಿಯಾಗಿರುವುದರಿಂದ ಟಿಕೆಟ್ ಸಿಗುವ ಎಲ್ಲಾ ನಿರೀಕ್ಷೆಯಲ್ಲಿ ಇದ್ದರು. ಅದಕ್ಕಾಗಿ ತಯಾರಿಯನ್ನೂ ಮಾಡಿಕೊಂಡಿದ್ದರು. ಆದರೆ, ಹೈಕಮಾಂಡ್ ನಾಯಕರು ಕ್ಷೇತ್ರವನ್ನು ಎಎಪಿಗೆ ನೀಡಿದ್ದಾರೆ. ಇದು ಮುಮ್ತಾಝ್ ಅವರ ಬೇಸರಕ್ಕೆ ಕಾರಣವಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ಮೈತ್ರಿಯ ನಂತರವೂ ಭರೂಚ್ ಕ್ಷೇತ್ರವನ್ನು ಉಳಿಸಿಕೊಳ್ಳಲಾರದ್ದಕ್ಕೆ ಜಿಲ್ಲಾ ಮಟ್ಟದ ಪಕ್ಷದ ಮುಖಂಡರಲ್ಲಿ ಕ್ಷಮೆ ಕೋರುತ್ತೇನೆ. ನಿಮ್ಮ ಅಸಮಾಧಾನವನ್ನು ನಾನು ವರಿಷ್ಠರಿಗೆ ತಿಳಿಸುತ್ತೇನೆ. ಆದರೆ ಎಲ್ಲರೂ ಜೊತೆಗೂಡಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸೋಣ. ಅಹ್ಮದ್ ಪಟೇಲ್ ಅವರು 45 ವರ್ಷಗಳ ಕಾಲ ಹಾಕಿಕೊಟ್ಟ ಪರಂಪರೆಯನ್ನು ಮುಂದುವರಿಸೋಣ” ಎಂದಿದ್ದಾರೆ.

ಅಹ್ಮದ್ ಪಟೇಲ್ ಬಳಿಕ ಭರೂಚ್ ಕ್ಷೇತ್ರದಲ್ಲಿ ಬಿಜೆಪಿ ಸತತವಾಗಿ ಗೆಲ್ಲುತ್ತಾ ಬಂದಿದೆ. ಬಿಜೆಪಿಯ ಈ ಪ್ರಾಬಲ್ಯಕ್ಕೆ ಸವಾಲೆಸೆಯಲು ಅಹ್ಮದ್ ಪಟೇಲ್ ಅವರ ಮಕ್ಕಳಾದ ಫೈಝಲ್ ಪಟೇಲ್ ಅಥವಾ ಮುಮ್ತಾಝ್ ಪಟೇಲ್ ಅವರನ್ನು ಕಾಂಗ್ರೆಸ್‌ನಿಂದ ಕಣಕ್ಕಿಳಿಸಲಾಗುತ್ತದೆ ಎಂಬ ಸುದ್ದಿಗಳು ಹಬ್ಬಿತ್ತು. ಮುಮ್ತಾಝ್ ಪಟೇಲ್ ಮತ್ತು ಫೈಝಲ್ ಪಟೇಲ್ ಇಬ್ಬರೂ ಕಾಂಗ್ರೆಸ್‌ನಿಂದ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು.

ಭರೂಚ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಅಹ್ಮದ್ ಪಟೇಲ್ ಅವರು 1977, 1980, 1984, 1989ರಲ್ಲಿ ಜಯ ಸಾಧಿಸಿದ್ದರು. ನಂತರ ಈ ಕ್ಷೇತ್ರದಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ಮೆರೆಯಿತು. 1998ರಿಂದ ಮುನ್ಸುಕ್‌ಭಾಯ್‌ ವಾಸವ ಅವರು ಈ ಕ್ಷೇತ್ರದ ಸಂಸದರಾಗಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಸೀಟು ಹಂಚಿಕೆ ಮಾಡಿಕೊಂಡ ಎಎಪಿ-ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...