Homeಕರ್ನಾಟಕಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳೇ ಶಿಕ್ಷಣ ನೀತಿಯನ್ನು ರೂಪಿಸಿಕೊಳ್ಳುವಂತಾಗಬೇಕು: ಡಿ ಎನ್‌ ಗುರುಪ್ರಸಾದ್

ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳೇ ಶಿಕ್ಷಣ ನೀತಿಯನ್ನು ರೂಪಿಸಿಕೊಳ್ಳುವಂತಾಗಬೇಕು: ಡಿ ಎನ್‌ ಗುರುಪ್ರಸಾದ್

- Advertisement -
- Advertisement -

“ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳೇ ಶಿಕ್ಷಣ ನೀತಿಯನ್ನು ರೂಪಿಸಿಕೊಳ್ಳುವಂತಾಗಬೇಕು. ಕೇಂದ್ರ ಸರ್ಕಾರ ತಮ್ಮ ನೀತಿಗಳನ್ನು ರಾಜ್ಯಗಳ ಮೇಲೆ ಹೇರಬಾರದು” ಎಂದು ಪತ್ರಕರ್ತ ಡಿ ಎನ್‌ ಗುರುಪ್ರಸಾದ್‌ ಅಭಿಪ್ರಾಯಪಟ್ಟರು.

ರಾಜ್ಯ ಸರ್ಕಾರ ಆಯೋಜಿಸಿರುವ ಎರಡು ದಿನಗಳ ‘ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶ, ಭಾರತದ ಸಂವಿಧಾನ ರಚನೆಯ ಅಮೃತಮಹೋತ್ಸವ ಸಮಾರಂಭದಲ್ಲಿ’ ಒಕ್ಕೂಟ ವ್ಯವಸ್ಥೆಯಲ್ಲಿನ ಅಂತರಗಳ ಸಮತೋಲನಾ ಆಯಾಮಗಳು’ ಎಂಬ ಗೋಷ್ಠಿಯಲ್ಲಿ ಅವರು ಮಾತನಾಡಿದರು.

“22 ಭಾಷೆಗಳನ್ನು ಅಧಿಕೃತ ಭಾಷಾ ಪಟ್ಟಿಯಲ್ಲಿ ಸೇರಿಸಲಾಯಿತು. ತದನಂತರ ಎಂಟು ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡಲಾಯಿತು. ಇನ್ನೂ ಅನೇಕ ಭಾಷೆಗಳು ಶಾಸ್ತ್ರೀಯ ಸ್ಥಾನಮಾನಕ್ಕೆ ಹೊರಟಿವೆ. ಆದರೆ, ನಮ್ಮ ಸಂವಿಧಾನ ಸಮಾನತೆಯ ತಳಹದಿಯ ಮೇಲೆ ಇದೆ. ಎಲ್ಲ ಭಾಷೆಗಳು ಶಾಸ್ತ್ರೀಯ ಭಾಷೆಗಳೇ” ಎಂದು ಹೇಳಿದರು.

“ಹಿಂದಿಯನ್ನು ರಾಷ್ಟ್ರಭಾಷೆ ಮಾಡಬೇಕು ಎಂಬುದರ ವಿರುದ್ಧ ತಮಿಳುನಾಡು ದೊಡ್ಡಮಟ್ಟದಲ್ಲಿ ಪ್ರತಿಭಟಿಸಿತು. ಆದರೆ ಸಂವಿಧಾನದಲ್ಲಿ ಒಂದು ಆರ್ಟಿಕಲ್ ಹಿಂದಿಯನ್ನು ಪ್ರಮೋಟ್ ಮಾಡಬೇಕೆಂಬ ಅಂಶವನ್ನು ಹೊಂದಿದೆ. ಇದರ ವಿರುದ್ಧ ದಿಟ್ಟ ನಿಲುವನ್ನು ತೆಗೆದುಕೊಳ್ಳಲು ಈ ವರೆಗೂ ಆಗಿಲ್ಲ. ಹಿಂದಿ ಹೇರಿಕೆ ವಿರುದ್ಧ ಹೋರಾಡಿದರೂ ಕೂಡ ಸಣ್ಣ ಸಣ್ಣ ಭಾಷೆಗಳನ್ನು ಅದು ಒಳಗೊಂಡಿದೆಯಾ ಎಂಬುದನ್ನು ನೋಡಬೇಕಾಗುತ್ತದೆ. ಕರ್ನಾಟಕದಲ್ಲೂ ಇದು ಆಗುವ ಸಾಧ್ಯತೆ ಇದೆ. ಇಲ್ಲಿ ಯಾರೋ ತಮಿಳು, ತೆಲುಗು ಕಲಿಯಬೇಕು ಎಂದಾಗ ಆಗುತ್ತಿಲ್ಲ ಎಂದರು.

“ರಾಜ್ಯ ಸರ್ಕಾರದ ಪ್ರತಿನಿಧಿಗಳು ರಾಜ್ಯಸಭೆಯಲ್ಲಿ ಚರ್ಚೆ ಮಾಡಬೇಕು. ಆಯಾ ರಾಜ್ಯಗಳ ಸಂಗತಿಗಳನ್ನು ಚರ್ಚಿಸಬೇಕು. ಈಗ ರಾಜ್ಯಗಳ ಹಿತಾಸಕ್ತಿಯನ್ನು ಕಳೆದುಕೊಂಡು ಪಕ್ಷದ ಹಿತಾಸಕ್ತಿಯನ್ನೇ ನೋಡುತ್ತಿರುವವರನ್ನು ಕಾಣುತ್ತಿದ್ದೇವೆ. ಮೊದಲೆಲ್ಲ ಆಯಾ ರಾಜ್ಯದ ಪ್ರತಿನಿಧಿಗಳಾಗಬೇಕಾದವರು ಆಯಾ ರಾಜ್ಯದ ನಿವಾಸಿಯಾಗಿರಬೇಕು ಎಂಬ ನಿಯಮವಿತ್ತು. ಆದರೆ 2003ರಲ್ಲಿ ತಿದ್ದುಪಡಿ ತಂದು ಯಾರು ಎಲ್ಲಿಂದ ಬೇಕಾದರೂ ಆಯ್ಕೆಯಾಗಬಹುದು ಎಂಬ ನಿಯಮ ತಂದಿದ್ದಾರೆ. ಹೀಗಾಗಿ ಇಲ್ಲಿಂದ ನಿರ್ಮಲಾ ಸೀತಾರಾಮನ್ ಆಯ್ಕೆಯಾಗಿದ್ದಾರೆ ಎಂದು ಹೇಳಿದರು.

“ಕ್ಷೇತ್ರ ಮರು ವಿಂಗಡಣೆ ಪ್ರಶ್ನೆ ಬಂದಾಗ ಉತ್ತರ ಪ್ರದೇಶದಲ್ಲಿ ಹೆಚ್ಚಿನ ಜನಸಂಖ್ಯೆ ಇದೆ. ಇಲ್ಲಿನ ಪ್ರಾತಿನಿಧ್ಯ ಕಡಿಮೆಯಾಗುತ್ತದೆ. ಇದರ ಜೊತೆಗೆ ಉತ್ತರ ಪ್ರದೇಶದಲ್ಲಿ ದಲಿತರು ಹೆಚ್ಚಿದ್ದರೆ, ಅವರಿಗೆ ಎಷ್ಟು ಸ್ಥಾನ ಸಿಗುತ್ತದೆ ಎಂಬುವುದನ್ನು ನೋಡಬೇಕಾಗುತ್ತದೆ”.

“ಒಂದು ರಾಷ್ಟ್ರ ಒಂದು ಚುನಾವಣೆ’ ಎನ್ನುತ್ತಿದ್ದಾರೆ. ಇದು ಒಕ್ಕೂಟ ತತ್ವದ ಮೇಲೆ ಹಲ್ಲೆಯಲ್ಲದೆ ಮತ್ತೇನೂ ಅಲ್ಲ. ಇದು ಯಾವತ್ತೂ ಆಗದಂತೆ ನೋಡಿಕೊಳ್ಳಬೇಕಿದೆ. ಈಗ ಚುನಾವಣೆ ಬರುತ್ತಿದೆ. ಬಿಜೆಪಿ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಗೌರವ ಸಲ್ಲಿಸಲಿಲ್ಲ. ಕನಿಷ್ಠ ಪಕ್ಷ ಇಂಡಿಯಾ ಮೈತ್ರಿ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ, ಒಕ್ಕೂಟ ವ್ಯವಸ್ಥೆ ಕಾಪಾಡುತ್ತೇವೆ ಎಂಬುವುದನ್ನು ಸೇರಿಸಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಹಿಂದೂ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ: ಬಿಜೆಪಿ ನಾಯಕರ ಆರೋಪಗಳಿಗೆ ತಿರುಗೇಟು ಕೊಟ್ಟ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...