Homeಕರ್ನಾಟಕಕಾಂಗ್ರೆಸ್ ಸರಕಾರ ಇರುವವರೆಗೆ ರಾಜ್ಯದ ಜನತೆಗೆ 5 'ಗ್ಯಾರಂಟಿ ಸ್ಕೀಂ' ಸಿಗಲಿದೆ: ಡಿ.ಕೆ ಶಿವಕುಮಾರ್

ಕಾಂಗ್ರೆಸ್ ಸರಕಾರ ಇರುವವರೆಗೆ ರಾಜ್ಯದ ಜನತೆಗೆ 5 ‘ಗ್ಯಾರಂಟಿ ಸ್ಕೀಂ’ ಸಿಗಲಿದೆ: ಡಿ.ಕೆ ಶಿವಕುಮಾರ್

- Advertisement -
- Advertisement -

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುವವರೆಗೆ ಐದು ʼಗ್ಯಾರಂಟಿʼ ಯೋಜನೆಗಳು ಮುಂದುವರೆಯಲಿವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದು, ಗ್ಯಾರೆಂಟಿ ಯೋಜನೆಗಳು ರಾಜ್ಯದಲ್ಲಿ ಸ್ಥಗಿತವಾಗಲಿದೆ ಎಂದು ಬಿಜೆಪಿ ಸೃಷ್ಟಿಸುತ್ತಿರುವ ಊಹಾಪೋಹಗಳಿಗೆ ಸ್ಪಷ್ಟನೆಯನ್ನು ನೀಡಿದ್ದಾರೆ.

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಅಲ್ಲಮ್ಮ ಪ್ರಭು ಆವರಣದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ  ಡಿಸಿಎಂ ಡಿ.ಕೆ ಶಿವಕುಮಾರ್, ಗ್ಯಾರಂಟಿಗಳನ್ನು ಜಾತಿ ಮೇಲೆ ಕೊಟ್ಟಿಲ್ಲ. ಕಾಂಗ್ರೆಸ್ ಸರಕಾರ ಎಲ್ಲಾ ವರ್ಗದ ಬಗ್ಗೆಯೂ ಚಿಂತನೆ ಮಾಡಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಏನೇ ಟೀಕೆ ಮಾಡಬಹುದು. ಕಾಂಗ್ರೆಸ್ ಸರಕಾರ ಗಟ್ಟಿಯಾಗಿದೆ. ಈ ಐದು ವರ್ಷವಲ್ಲ, ಇನ್ನೊಂದು ಸಲ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿಯವರು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ. ಕಾಂಗ್ರೆಸ್ ಪಕ್ಷ ಬಡವರ ಬದುಕಿನ ಮೇಲೆ ರಾಜಕಾರಣ ಮಾಡುತ್ತದೆ ಹಾಗಾಗಿ ರಾಜಕಾರಣದಲ್ಲಿ ಧರ್ಮ ಇರಬಾರದು.  ದೇವಸ್ಥಾನ ಯಾರ ಆಸ್ತಿಯಲ್ಲ. ರಾಮಮಂದಿರ ಮೇಲೆ ಬಹಳ ಪ್ರಚಾರ ಮಾಡಲು ಬಿಜೆಪಿ ಮುಂದಾಗಿದೆ. ಅರಣ್ಯ ಭೂಮಿ ಹಕ್ಕಿನ ಅರ್ಜಿಯ ಮಾನ್ಯತೆ ಮಿತಿಯನ್ನು 25 ವರ್ಷಕ್ಕೆ ಇಳಿಸಬೇಕು ಎಂದು ನಿರ್ಣಯ ಮಾಡಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಶರಾವತಿ ಮುಳುಗಡೆ ಸಂತ್ರಸ್ಥರ ರಕ್ಷಣೆ ಸರಕಾರದ ಕರ್ತವ್ಯ, ಬದ್ದತೆಯೂ ಹೌದು. ಅರಣ್ಯ ಭೂಮಿ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವ ಕೆಲಸಕ್ಕೆ ಅವಕಾಶ ನೀಡುವುದಿಲ್ಲ. ಇದು ನಮ್ಮ ಸರಕಾರದ ಜವಾಬ್ದಾರಿ ಎಂದು ಶಿವಕುಮಾರ್‌ ಅವರು ಹೇಳಿದ್ದಾರೆ.

ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು. ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಇದನ್ನು ನೋಡಿದ ಕಮಲ ಉದುರಿ ಹೋಯಿತು. ತೆನೆ ಹೊತ್ತ ಮಹಿಳೆ ತೆನೆ ಎಸೆದು ಹೋದಳು. ಕರ್ನಾಟಕ ಪ್ರಬುದ್ಧವಾಯಿತು. ಸಮೃದ್ಧಿಯಾಯಿತು ಎಂದೂ ಕವಿತೆ ವಾಚಿಸಿದರು. ಗ್ಯಾರಂಟಿ ಯೋಜನೆಗಳನ್ನು ಅಲ್ಪಸಂಖ್ಯಾತರಿಗೆ ಕೊಟ್ಟಿರುವುದಕ್ಕೆ ಬಿಜೆಪಿಯವರು ವಿರೋಧ ಮಾಡುತ್ತಾರೆ. ಆ ಸಮುದಾಯದವರು ತೆರಿಗೆ ಕಟ್ಟುವುದಿಲ್ಲವೇ ಎಂದು ಪ್ರಶ್ನಿಸಿದ ಡಿಕೆ ಶಿವಕುಮಾರ್‌, ಬಿಜೆಪಿಯವರು ಈ ರಾಜ್ಯದ ಜನರಿಗೆ ನೀಡಿದ ಕಾರ್ಯಕ್ರಮ ಏನು ಎಂಬುದನ್ನು ಹೇಳಬೇಕು. ನಾನು ಇಷ್ಟೆಲ್ಲಾ ಯೋಜನೆಗಳನ್ನು ಹೇಳುತ್ತೇನೆ. ಆದರೆ ನಿಮ್ಮ ಶಾಸಕ ಆರಗ ಜ್ಞಾನೇಂದ್ರ ಇದು 420 ಗ್ಯಾರಂಟಿ ಎಂದು ಹೇಳುತ್ತಾರೆ. ಆರಗ ಜ್ಞಾನೇಂದ್ರ ನಿನಗೆ ಜ್ಞಾನ ಇದೆಯಾ? ಎಂದು ಪ್ರಶ್ನಿಸಿದ್ದಾರೆ.

ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧುಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್ ಸುಂದರೇಶ್, ಕಾಂಗ್ರೆಸ್ ವಕ್ತಾರ ನಿಕೇತರಾಜ್ ಮೌರ್ಯ, ಆಯನೂರು ಮಂಜುನಾಥ್ ಸೇರಿ ಹಲವು ಕಾಂಗ್ರೆಸ್‌ ನಾಯಕರು ಉಪಸ್ಥಿತರಿದ್ದರು.

ಇದನ್ನು ಓದಿ: ದಲಿತರ ಬಗ್ಗೆ ಕೇಂದ್ರ ಸರಕಾರ ಹಗೆತನದ ಧೋರಣೆ ಅನುಸರಿಸುತ್ತಿದೆ: ಪಿಣರಾಯ್‌ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...