Homeಕರ್ನಾಟಕಕಾಂಗ್ರೆಸ್ ಸರಕಾರ ಇರುವವರೆಗೆ ರಾಜ್ಯದ ಜನತೆಗೆ 5 'ಗ್ಯಾರಂಟಿ ಸ್ಕೀಂ' ಸಿಗಲಿದೆ: ಡಿ.ಕೆ ಶಿವಕುಮಾರ್

ಕಾಂಗ್ರೆಸ್ ಸರಕಾರ ಇರುವವರೆಗೆ ರಾಜ್ಯದ ಜನತೆಗೆ 5 ‘ಗ್ಯಾರಂಟಿ ಸ್ಕೀಂ’ ಸಿಗಲಿದೆ: ಡಿ.ಕೆ ಶಿವಕುಮಾರ್

- Advertisement -
- Advertisement -

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುವವರೆಗೆ ಐದು ʼಗ್ಯಾರಂಟಿʼ ಯೋಜನೆಗಳು ಮುಂದುವರೆಯಲಿವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದು, ಗ್ಯಾರೆಂಟಿ ಯೋಜನೆಗಳು ರಾಜ್ಯದಲ್ಲಿ ಸ್ಥಗಿತವಾಗಲಿದೆ ಎಂದು ಬಿಜೆಪಿ ಸೃಷ್ಟಿಸುತ್ತಿರುವ ಊಹಾಪೋಹಗಳಿಗೆ ಸ್ಪಷ್ಟನೆಯನ್ನು ನೀಡಿದ್ದಾರೆ.

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಅಲ್ಲಮ್ಮ ಪ್ರಭು ಆವರಣದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ  ಡಿಸಿಎಂ ಡಿ.ಕೆ ಶಿವಕುಮಾರ್, ಗ್ಯಾರಂಟಿಗಳನ್ನು ಜಾತಿ ಮೇಲೆ ಕೊಟ್ಟಿಲ್ಲ. ಕಾಂಗ್ರೆಸ್ ಸರಕಾರ ಎಲ್ಲಾ ವರ್ಗದ ಬಗ್ಗೆಯೂ ಚಿಂತನೆ ಮಾಡಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಏನೇ ಟೀಕೆ ಮಾಡಬಹುದು. ಕಾಂಗ್ರೆಸ್ ಸರಕಾರ ಗಟ್ಟಿಯಾಗಿದೆ. ಈ ಐದು ವರ್ಷವಲ್ಲ, ಇನ್ನೊಂದು ಸಲ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿಯವರು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ. ಕಾಂಗ್ರೆಸ್ ಪಕ್ಷ ಬಡವರ ಬದುಕಿನ ಮೇಲೆ ರಾಜಕಾರಣ ಮಾಡುತ್ತದೆ ಹಾಗಾಗಿ ರಾಜಕಾರಣದಲ್ಲಿ ಧರ್ಮ ಇರಬಾರದು.  ದೇವಸ್ಥಾನ ಯಾರ ಆಸ್ತಿಯಲ್ಲ. ರಾಮಮಂದಿರ ಮೇಲೆ ಬಹಳ ಪ್ರಚಾರ ಮಾಡಲು ಬಿಜೆಪಿ ಮುಂದಾಗಿದೆ. ಅರಣ್ಯ ಭೂಮಿ ಹಕ್ಕಿನ ಅರ್ಜಿಯ ಮಾನ್ಯತೆ ಮಿತಿಯನ್ನು 25 ವರ್ಷಕ್ಕೆ ಇಳಿಸಬೇಕು ಎಂದು ನಿರ್ಣಯ ಮಾಡಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಶರಾವತಿ ಮುಳುಗಡೆ ಸಂತ್ರಸ್ಥರ ರಕ್ಷಣೆ ಸರಕಾರದ ಕರ್ತವ್ಯ, ಬದ್ದತೆಯೂ ಹೌದು. ಅರಣ್ಯ ಭೂಮಿ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವ ಕೆಲಸಕ್ಕೆ ಅವಕಾಶ ನೀಡುವುದಿಲ್ಲ. ಇದು ನಮ್ಮ ಸರಕಾರದ ಜವಾಬ್ದಾರಿ ಎಂದು ಶಿವಕುಮಾರ್‌ ಅವರು ಹೇಳಿದ್ದಾರೆ.

ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು. ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಇದನ್ನು ನೋಡಿದ ಕಮಲ ಉದುರಿ ಹೋಯಿತು. ತೆನೆ ಹೊತ್ತ ಮಹಿಳೆ ತೆನೆ ಎಸೆದು ಹೋದಳು. ಕರ್ನಾಟಕ ಪ್ರಬುದ್ಧವಾಯಿತು. ಸಮೃದ್ಧಿಯಾಯಿತು ಎಂದೂ ಕವಿತೆ ವಾಚಿಸಿದರು. ಗ್ಯಾರಂಟಿ ಯೋಜನೆಗಳನ್ನು ಅಲ್ಪಸಂಖ್ಯಾತರಿಗೆ ಕೊಟ್ಟಿರುವುದಕ್ಕೆ ಬಿಜೆಪಿಯವರು ವಿರೋಧ ಮಾಡುತ್ತಾರೆ. ಆ ಸಮುದಾಯದವರು ತೆರಿಗೆ ಕಟ್ಟುವುದಿಲ್ಲವೇ ಎಂದು ಪ್ರಶ್ನಿಸಿದ ಡಿಕೆ ಶಿವಕುಮಾರ್‌, ಬಿಜೆಪಿಯವರು ಈ ರಾಜ್ಯದ ಜನರಿಗೆ ನೀಡಿದ ಕಾರ್ಯಕ್ರಮ ಏನು ಎಂಬುದನ್ನು ಹೇಳಬೇಕು. ನಾನು ಇಷ್ಟೆಲ್ಲಾ ಯೋಜನೆಗಳನ್ನು ಹೇಳುತ್ತೇನೆ. ಆದರೆ ನಿಮ್ಮ ಶಾಸಕ ಆರಗ ಜ್ಞಾನೇಂದ್ರ ಇದು 420 ಗ್ಯಾರಂಟಿ ಎಂದು ಹೇಳುತ್ತಾರೆ. ಆರಗ ಜ್ಞಾನೇಂದ್ರ ನಿನಗೆ ಜ್ಞಾನ ಇದೆಯಾ? ಎಂದು ಪ್ರಶ್ನಿಸಿದ್ದಾರೆ.

ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧುಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್ ಸುಂದರೇಶ್, ಕಾಂಗ್ರೆಸ್ ವಕ್ತಾರ ನಿಕೇತರಾಜ್ ಮೌರ್ಯ, ಆಯನೂರು ಮಂಜುನಾಥ್ ಸೇರಿ ಹಲವು ಕಾಂಗ್ರೆಸ್‌ ನಾಯಕರು ಉಪಸ್ಥಿತರಿದ್ದರು.

ಇದನ್ನು ಓದಿ: ದಲಿತರ ಬಗ್ಗೆ ಕೇಂದ್ರ ಸರಕಾರ ಹಗೆತನದ ಧೋರಣೆ ಅನುಸರಿಸುತ್ತಿದೆ: ಪಿಣರಾಯ್‌ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...

ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12)...