Homeಮುಖಪುಟರಾಜ್ಯಸಭಾ ಚುನಾವಣೆ: ಕ್ರಿಮಿನಲ್‌ ಹಿನ್ನೆಲೆ ಹೊಂದಿರುವ 36% ಅಭ್ಯರ್ಥಿಗಳು!

ರಾಜ್ಯಸಭಾ ಚುನಾವಣೆ: ಕ್ರಿಮಿನಲ್‌ ಹಿನ್ನೆಲೆ ಹೊಂದಿರುವ 36% ಅಭ್ಯರ್ಥಿಗಳು!

- Advertisement -
- Advertisement -

ರಾಜ್ಯಸಭಾ ಅಭ್ಯರ್ಥಿಗಳ ಪೈಕಿ 36% ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿಕೊಂಡಿದ್ದು, ಅಭ್ಯರ್ಥಿಗಳ ಸರಾಸರಿ ಆಸ್ತಿ 127.81 ಕೋಟಿ ಎಂದು ವಿಶ್ಲೇಷಿಸಲಾಗಿದೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿಯು ಬಹಿರಂಗಪಡಿಸಿದೆ.

ಎಡಿಆರ್ ಮತ್ತು ನ್ಯಾಷನಲ್ ಎಲೆಕ್ಷನ್ ವಾಚ್ 15 ರಾಜ್ಯಗಳ 56 ಸ್ಥಾನಗಳಿಗೆ ಕಣದಲ್ಲಿರುವ 59 ಅಭ್ಯರ್ಥಿಗಳ ಪೈಕಿ 58 ಮಂದಿ ಅಫಿಡವಿತ್‌ಗಳನ್ನು ವಿಶ್ಲೇಷಿಸಿದೆ. ರಾಜ್ಯಸಭಾ ಚುನಾವಣೆ ಫೆಬ್ರವರಿ 27ಕ್ಕೆ ನಿಗದಿಯಾಗಿದೆ. 56 ರಾಜ್ಯಸಭಾ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಯಲಿದೆ. ಕರ್ನಾಟಕದ ಕಾಂಗ್ರೆಸ್ ಅಭ್ಯರ್ಥಿ ಜಿ.ಸಿ.ಚಂದ್ರಶೇಖರ್ ಅವರು ವಿಶ್ಲೇಷಣೆಯಿಂದ ಹೊರಗುಳಿದಿದ್ದಾರೆ. 36% ಅಭ್ಯರ್ಥಿಗಳು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿಕೊಂಡಿದ್ದಾರೆ ಎಂದು ವಿಶ್ಲೇಷಣೆಯ ವೇಳೆ ಕಂಡು ಹಿಡಿಯಲಾಗಿದೆ.

ಹೆಚ್ಚುವರಿಯಾಗಿ 17%ದಷ್ಟು ಅಭ್ಯರ್ಥಿಗಳು ಗಂಭೀರ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ ಮತ್ತು ಒಬ್ಬ ಅಭ್ಯರ್ಥಿಯು ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

ವಿಶ್ಲೇಷಣೆಯ ಪ್ರಕಾರ, 30 ಬಿಜೆಪಿ ಅಭ್ಯರ್ಥಿಗಳಲ್ಲಿ ಎಂಟು (27%), ಒಂಬತ್ತು ಕಾಂಗ್ರೆಸ್ ಅಭ್ಯರ್ಥಿಗಳಲ್ಲಿ ಆರು ಮಂದಿ, ನಾಲ್ಕು ಟಿಎಂಸಿ ಅಭ್ಯರ್ಥಿಗಳಲ್ಲಿ ಒಬ್ಬರು (25%), ಮೂರು ಎಸ್‌ಪಿ ಅಭ್ಯರ್ಥಿಗಳಲ್ಲಿ ಇಬ್ಬರು,  ಮೂವರು YSRCP ಅಭ್ಯರ್ಥಿಗಳಲ್ಲಿ ಒಬ್ಬರು, ಇಬ್ಬರು RJD ನಾಮನಿರ್ದೇಶಿತರಲ್ಲಿ ಒಬ್ಬರು, ಇಬ್ಬರು BJD ಅಭ್ಯರ್ಥಿಗಳಲ್ಲಿ ಒಬ್ಬರು  ಮತ್ತು ಓರ್ವ BRS ಅಭ್ಯರ್ಥಿ ತಮ್ಮ ಅಫಿಡವಿತ್‌ನಲ್ಲಿ ಕ್ರಿಮಿನಲ್ ಮೊಕದ್ದಮೆಗಳು ಇರುವುದನ್ನು ಘೋಷಿಸಿದ್ದಾರೆ.

ಸರಿಸುಮಾರು 21% ಅಭ್ಯರ್ಥಿಗಳು ಶತಕೋಟ್ಯಾಧಿಪತಿಗಳಾಗಿದ್ದು, 100 ಕೋಟಿಗಿಂತ ಹೆಚ್ಚಿನ ಆಸ್ತಿಯನ್ನು ಹೊಂದಿದ್ದಾರೆ. ರಾಜ್ಯಸಭಾ ಅಭ್ಯರ್ಥಿಗಳ ಸರಾಸರಿ ಆಸ್ತಿ 127.81 ಕೋಟಿ ಎಂದು ವರದಿಯು ತಿಳಿಸಿದೆ.

ಹಿಮಾಚಲ ಪ್ರದೇಶದ ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಒಟ್ಟು 1,872 ಕೋಟಿ ಆಸ್ತಿಯನ್ನು ಹೊಂದಿದ್ದು, ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯ ಅಮಿತಾಬ್ ಬಚ್ಚನ್ 1,578 ಕೋಟಿ ಮತ್ತು ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ 871 ಕೋಟಿ ಆಸ್ತಿ ಹೊಂದಿದ್ದಾರೆ. ಇವರು ರಾಜ್ಯಸಭಗೆ ಸ್ಪರ್ಧಿಸುತ್ತಿರುವ ಮೂವರು ಅತಿ ಶ್ರೀಮಂತ ಅಭ್ಯರ್ಥಿಗಳೆಂದು ವರದಿಯು ಉಲ್ಲೇಖಿಸಿದೆ.

ಬಡ ಅಭ್ಯರ್ಥಿಗಳ ಪೈಕಿ ಬಿಜೆಪಿಯ ಮಧ್ಯಪ್ರದೇಶದ ಅಭ್ಯರ್ಥಿ ಬಾಲಯೋಗಿ ಉಮೇಶ್ ನಾಥ್ 47 ಲಕ್ಷ  ಆಸ್ತಿ ಹೊಂದಿದ್ದಾರೆ, ಬಿಜೆಪಿಯ ಪಶ್ಚಿಮ ಬಂಗಾಳದ ಅಭ್ಯರ್ಥಿ ಸಮಿಕ್ ಭಟ್ಟಾಚಾರ್ಯ 1 ಕೋಟಿ ಆಸ್ತಿ ಮತ್ತು ಉತ್ತರ ಪ್ರದೇಶದ ಬಿಜೆಪಿ ಅಭ್ಯರ್ಥಿ ಸಂಗೀತಾ  1 ಕೋಟಿ ಆಸ್ತಿ ಹೊಂದಿದ್ದಾರೆ.

17% ಅಭ್ಯರ್ಥಿಗಳು 5ನೇ ಉತ್ತೀರ್ಣದಿಂದ 12ನೇ ತೇರ್ಗಡೆಯವರೆಗಿನ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿದ್ದರೆ, ಗಮನಾರ್ಹ 79% ಪದವಿ ಅಥವಾ ಉನ್ನತ ಪದವಿಗಳನ್ನು ಹೊಂದಿದ್ದಾರೆ. ಬಹುಪಾಲು (76%) ಅಭ್ಯರ್ಥಿಗಳು 51-70 ವಯಸ್ಸಿನ ಗುಂಪಿನಲ್ಲಿ ಬರುತ್ತಾರೆ ಮತ್ತು 31-50 ವಯಸ್ಸಿನ ಗುಂಪಿನಲ್ಲಿ ಸಣ್ಣ ಪ್ರಮಾಣ ಅಂದರೆ 16% ಹೊಂದಿದ್ದಾರೆ. 19% ಮಹಿಳಾ ಅಭ್ಯರ್ಥಿಗಳು ರಾಜ್ಯಸಭಾ ಕಣದಲ್ಲಿದ್ದಾರೆ ಎಂದು ವರದಿಯು ಬಹಿರಂಗಪಡಿಸುತ್ತದೆ.

ಇದನ್ನು ಓದಿ: ಗಾಝಾದಲ್ಲಿ ಮಾನವೀಯ ನೆರವು ಕಾರ್ಯಚರಣೆ: ಸಂಕಷ್ಟದಲ್ಲಿರುವ UN ಏಜೆನ್ಸಿ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...