Homeಮುಖಪುಟಜುಲೈ 1ರಿಂದ ಹೊಸ ಕ್ರಿಮಿನಲ್ ಕಾನೂನುಗಳು ಜಾರಿ?

ಜುಲೈ 1ರಿಂದ ಹೊಸ ಕ್ರಿಮಿನಲ್ ಕಾನೂನುಗಳು ಜಾರಿ?

- Advertisement -
- Advertisement -

ಇತ್ತೀಚೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆ ಜುಲೈ 1ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ಪ್ರಕಟಣೆಯನ್ನು ಹೊರಡಿಸಿದೆ.

ನೂತನ ಕಾನೂನು ವಸಾಹತುಶಾಹಿ ಯುಗದ ಭಾರತೀಯ ದಂಡ ಸಂಹಿತೆ (IPC), ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು 1872ರ ಭಾರತೀಯ ಸಾಕ್ಷ್ಯ ಕಾಯಿದೆಯನ್ನು ಬದಲಿಸುತ್ತದೆ. ನೂತನ ಕಾಯ್ದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದು, ಈ ಕಾಯ್ದೆಯು ಜುಲೈ 1ರಿಂದ ಕಾನೂನಾಗಿ ಜಾರಿಗೆ ಬರಲಿದೆ.

ಹೊಸ ಕಾನೂನುಗಳ ಪ್ರಕಾರ, ಶೂನ್ಯ-ಎಫ್‌ಐಆರ್, ಇ-ಎಫ್‌ಐಆರ್, ಚಾರ್ಜ್‌ಶೀಟ್‌ನಂತಹ ಪ್ರಕ್ರಿಯೆಗಳು ಎಲೆಕ್ಟ್ರಾನಿಕ್ ರೂಪದಲ್ಲಿರುತ್ತದೆ ಮತ್ತು ಸಂತ್ರಸ್ತರಿಗೆ ಡಿಜಿಟಲ್ ರೂಪದಲ್ಲಿ ಮಾಹಿತಿಯನ್ನು ಒದಗಿಸಲಾಗುತ್ತದೆ.
ಸಂಸತ್ತಿನಲ್ಲಿ ಮೂರು ವಿಧೇಯಕಗಳ ಮೇಲಿನ ಚರ್ಚೆಯ ಸಂದರ್ಭದಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶಿಕ್ಷೆಯನ್ನು ನೀಡುವ ಬದಲು ನ್ಯಾಯವನ್ನು ತಲುಪಿಸುವತ್ತ ಗಮನಹರಿಸುವುದಾಗಿ ಹೇಳಿದ್ದರು.

ಹೊಸ ಕಾನೂನುಗಳು ಜಾರಿಗೆ ಬರುವ ಮೊದಲು, ಭಾರತೀಯ ದಂಡ ಸಂಹಿತೆಯಿಂದ ಭಾರತೀಯ ನ್ಯಾಯ ಸಂಹಿತೆಗೆ ಕೆಲ ಬದಲಾವಣೆಗಳನ್ನು ಮಾಡಲಾಗಿದೆ. ಹೊಸ ಕಾನೂನಿನಲ್ಲಿ ಐಪಿಸಿ ಅಡಿಯಲ್ಲಿ ಕೆಲವು ಸೆಕ್ಷನ್‌ಗಳ ಸಂಖ್ಯೆಗಳನ್ನು ಬದಲಾಯಿಸಲಾಗಿದೆ.

IPC ಅಡಿಯಲ್ಲಿ ಸೆಕ್ಷನ್ 302 ಕೊಲೆಯ ಶಿಕ್ಷೆಗೆ ಸಂಬಂಧಿಸಿದೆ. ಈಗ ಕೊಲೆಯು ಸೆಕ್ಷನ್ 101ರ ಅಡಿಯಲ್ಲಿ ಬರುತ್ತದೆ. ಇದಲ್ಲದೆ ಹೊಸ ಕಾನೂನಿನ ಅಡಿಯಲ್ಲಿ ಸೆಕ್ಷನ್ 302 ದರೋಡೆಗೆ ಸಂಬಂಧಿಸಿದೆ.
ಐಪಿಸಿಯ ಸೆಕ್ಷನ್ 420 ವಂಚನೆಯ ಅಪರಾಧವಾಗಿದೆ, ಆದರೆ ಹೊಸ ಕಾನೂನಿನಲ್ಲಿ ವಂಚನೆಯು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 316ರ ಅಡಿಯಲ್ಲಿ ಬರುತ್ತದೆ.

ಅಕ್ರಮ ಸಭೆಗೆ ಸಂಬಂಧಿಸಿದ ಐಪಿಸಿಯ ಸೆಕ್ಷನ್ 144ನ್ನು ಈಗ ಸೆಕ್ಷನ್ 187 ಎಂದು ಕರೆಯಲಾಗುವುದು.
ಅಂತೆಯೇ IPCಯ ಸೆಕ್ಷನ್ 121, ಯುದ್ಧ, ಅಥವಾ ಯುದ್ಧಕ್ಕೆ ಸಂಚು ಅಥವಾ ಭಾರತ ಸರ್ಕಾರದ ವಿರುದ್ಧ ಯುದ್ಧವನ್ನು ನಡೆಸಲು ಪ್ರೇರೇಪಿಸುವುದನ್ನು ಈಗ ಅದನ್ನು ಸೆಕ್ಷನ್ 146ರಡಿಯಲ್ಲಿ ಸೇರಿಸಲಾಗಿದೆ. ಮಾನನಷ್ಟಕ್ಕೆ ಸಂಬಂಧಿಸಿದ ಐಪಿಸಿಯ ಸೆಕ್ಷನ್ 499 ಈಗ ಹೊಸ ಕಾನೂನಿನ ಸೆಕ್ಷನ್ 354ರಡಿಯಲ್ಲಿ ಒಳಗೊಂಡಿದೆ.

IPC ಅಡಿಯಲ್ಲಿ ಅತ್ಯಾಚಾರದ ಶಿಕ್ಷೆಗೆ ಸಂಬಂಧಿಸಿದ ಸೆಕ್ಷನ್ 376, ಈಗ ಸೆಕ್ಷನ್ 63 ಆಗಿದೆ. ಹೊಸ ಕಾನೂನಿನ ಅಡಿಯಲ್ಲಿ ಸೆಕ್ಷನ್ 64 ಈ ಕುರಿತ ಶಿಕ್ಷೆಯ ಬಗ್ಗೆ ಹೇಳುತ್ತದೆ, ಆದರೆ ಸೆಕ್ಷನ್ 70 ಸಾಮೂಹಿಕ ಅತ್ಯಾಚಾರದ ಅಪರಾಧಕ್ಕೆ ಸಂಬಂಧಿಸಿದೆ. ಆರೋಪಿಗಳು ದಂಡ ಸಂಹಿತೆಯ ಉದಾರ ನಿಬಂಧನೆಗಳ ಲಾಭವನ್ನು ಪಡೆದುಕೊಳ್ಳುವುದನ್ನು ತಡೆಯಲು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳ ಕುರಿತು ನಿಬಂಧನೆಗಳನ್ನು ಪೋಕ್ಸೊ ಕಾಯ್ದೆಯೊಂದಿಗೆ ಸೇರಿಸಲಾಗಿದೆ. ಅಪ್ರಾಪ್ತ ವಯಸ್ಕರ ಮೇಲಿನ ಅತ್ಯಾಚಾರಕ್ಕೆ ಜೀವಾವಧಿ ಶಿಕ್ಷೆ ಅಥವಾ ಮರಣ ದಂಡನೆಯನ್ನು ಕಡ್ಡಾಯಗೊಳಿಸಲಾಗಿದೆ. ಸಾಮೂಹಿಕ ಅತ್ಯಾಚಾರ ಪ್ರಕರಣಗಳಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ದೇಶದ್ರೋಹದ ಬಗ್ಗೆ ವ್ಯವಹರಿಸುವ ಐಪಿಸಿಯ ಸೆಕ್ಷನ್ 124-ಎಯನ್ನು ಈಗ ಹೊಸ ಕಾನೂನಿನ ಅಡಿಯಲ್ಲಿ ಸೆಕ್ಷನ್ 150 ಎಂದು ಕರೆಯಲಾಗುತ್ತದೆ.

ಭಾರತದ ಹೊರಗೆ ತಲೆಮರೆಸಿಕೊಂಡಿರುವ ಆರೋಪಿ ಇಲ್ಲಿರಬೇಕಿಲ್ಲ. ವ್ಯಕ್ತಿಯು 90 ದಿನಗಳಲ್ಲಿ ನ್ಯಾಯಾಲಯದ ಎದುರು ಹಾಜರಾಗದಿದ್ದರೆ ಆತನ ಅನುಪಸ್ಥಿತಿಯ ಹೊರತಾಗಿಯೂ ವಿಚಾರಣೆಯು ಮುಂದುವರಿಯುತ್ತದೆ. ಕಾನೂನು ಕ್ರಮವನ್ನು ಜರುಗಿಸಲು ಪಬ್ಲಿಕ್ ಪ್ರಾಸಿಕ್ಯೂಟರನ್ನು ನೇಮಿಸಲಾಗುತ್ತಿದೆ.

ಮೂರು ಕಾನೂನುಗಳು ಕಳೆದ ವರ್ಷ ಡಿಸೆಂಬರ್ 21ರಂದು ಸಂಸತ್ತಿನ ಅನುಮೋದನೆಯನ್ನು ಪಡೆದಿದೆ.  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 25ರಂದು ನೂತನ ಕಾನೂನಿಗೆ ಒಪ್ಪಿಗೆಯನ್ನು ನೀಡಿದ್ದರು.  ಜುಲೈ 1ರಿಂದ ಇದು ಜಾರಿಗೆ ಬರಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ಇದೀಗ ಪ್ರಕಟನೆಯನ್ನು ಹೊರಡಿಸಿದೆ.

ಇದನ್ನು ಓದಿ: ಗಾಝಾದಲ್ಲಿ ಮಾನವೀಯ ನೆರವು ಕಾರ್ಯಚರಣೆ: ಸಂಕಷ್ಟದಲ್ಲಿರುವ UN ಏಜೆನ್ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...