Homeಮುಖಪುಟಜುಲೈ 1ರಿಂದ ಹೊಸ ಕ್ರಿಮಿನಲ್ ಕಾನೂನುಗಳು ಜಾರಿ?

ಜುಲೈ 1ರಿಂದ ಹೊಸ ಕ್ರಿಮಿನಲ್ ಕಾನೂನುಗಳು ಜಾರಿ?

- Advertisement -
- Advertisement -

ಇತ್ತೀಚೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆ ಜುಲೈ 1ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ಪ್ರಕಟಣೆಯನ್ನು ಹೊರಡಿಸಿದೆ.

ನೂತನ ಕಾನೂನು ವಸಾಹತುಶಾಹಿ ಯುಗದ ಭಾರತೀಯ ದಂಡ ಸಂಹಿತೆ (IPC), ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು 1872ರ ಭಾರತೀಯ ಸಾಕ್ಷ್ಯ ಕಾಯಿದೆಯನ್ನು ಬದಲಿಸುತ್ತದೆ. ನೂತನ ಕಾಯ್ದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದು, ಈ ಕಾಯ್ದೆಯು ಜುಲೈ 1ರಿಂದ ಕಾನೂನಾಗಿ ಜಾರಿಗೆ ಬರಲಿದೆ.

ಹೊಸ ಕಾನೂನುಗಳ ಪ್ರಕಾರ, ಶೂನ್ಯ-ಎಫ್‌ಐಆರ್, ಇ-ಎಫ್‌ಐಆರ್, ಚಾರ್ಜ್‌ಶೀಟ್‌ನಂತಹ ಪ್ರಕ್ರಿಯೆಗಳು ಎಲೆಕ್ಟ್ರಾನಿಕ್ ರೂಪದಲ್ಲಿರುತ್ತದೆ ಮತ್ತು ಸಂತ್ರಸ್ತರಿಗೆ ಡಿಜಿಟಲ್ ರೂಪದಲ್ಲಿ ಮಾಹಿತಿಯನ್ನು ಒದಗಿಸಲಾಗುತ್ತದೆ.
ಸಂಸತ್ತಿನಲ್ಲಿ ಮೂರು ವಿಧೇಯಕಗಳ ಮೇಲಿನ ಚರ್ಚೆಯ ಸಂದರ್ಭದಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶಿಕ್ಷೆಯನ್ನು ನೀಡುವ ಬದಲು ನ್ಯಾಯವನ್ನು ತಲುಪಿಸುವತ್ತ ಗಮನಹರಿಸುವುದಾಗಿ ಹೇಳಿದ್ದರು.

ಹೊಸ ಕಾನೂನುಗಳು ಜಾರಿಗೆ ಬರುವ ಮೊದಲು, ಭಾರತೀಯ ದಂಡ ಸಂಹಿತೆಯಿಂದ ಭಾರತೀಯ ನ್ಯಾಯ ಸಂಹಿತೆಗೆ ಕೆಲ ಬದಲಾವಣೆಗಳನ್ನು ಮಾಡಲಾಗಿದೆ. ಹೊಸ ಕಾನೂನಿನಲ್ಲಿ ಐಪಿಸಿ ಅಡಿಯಲ್ಲಿ ಕೆಲವು ಸೆಕ್ಷನ್‌ಗಳ ಸಂಖ್ಯೆಗಳನ್ನು ಬದಲಾಯಿಸಲಾಗಿದೆ.

IPC ಅಡಿಯಲ್ಲಿ ಸೆಕ್ಷನ್ 302 ಕೊಲೆಯ ಶಿಕ್ಷೆಗೆ ಸಂಬಂಧಿಸಿದೆ. ಈಗ ಕೊಲೆಯು ಸೆಕ್ಷನ್ 101ರ ಅಡಿಯಲ್ಲಿ ಬರುತ್ತದೆ. ಇದಲ್ಲದೆ ಹೊಸ ಕಾನೂನಿನ ಅಡಿಯಲ್ಲಿ ಸೆಕ್ಷನ್ 302 ದರೋಡೆಗೆ ಸಂಬಂಧಿಸಿದೆ.
ಐಪಿಸಿಯ ಸೆಕ್ಷನ್ 420 ವಂಚನೆಯ ಅಪರಾಧವಾಗಿದೆ, ಆದರೆ ಹೊಸ ಕಾನೂನಿನಲ್ಲಿ ವಂಚನೆಯು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 316ರ ಅಡಿಯಲ್ಲಿ ಬರುತ್ತದೆ.

ಅಕ್ರಮ ಸಭೆಗೆ ಸಂಬಂಧಿಸಿದ ಐಪಿಸಿಯ ಸೆಕ್ಷನ್ 144ನ್ನು ಈಗ ಸೆಕ್ಷನ್ 187 ಎಂದು ಕರೆಯಲಾಗುವುದು.
ಅಂತೆಯೇ IPCಯ ಸೆಕ್ಷನ್ 121, ಯುದ್ಧ, ಅಥವಾ ಯುದ್ಧಕ್ಕೆ ಸಂಚು ಅಥವಾ ಭಾರತ ಸರ್ಕಾರದ ವಿರುದ್ಧ ಯುದ್ಧವನ್ನು ನಡೆಸಲು ಪ್ರೇರೇಪಿಸುವುದನ್ನು ಈಗ ಅದನ್ನು ಸೆಕ್ಷನ್ 146ರಡಿಯಲ್ಲಿ ಸೇರಿಸಲಾಗಿದೆ. ಮಾನನಷ್ಟಕ್ಕೆ ಸಂಬಂಧಿಸಿದ ಐಪಿಸಿಯ ಸೆಕ್ಷನ್ 499 ಈಗ ಹೊಸ ಕಾನೂನಿನ ಸೆಕ್ಷನ್ 354ರಡಿಯಲ್ಲಿ ಒಳಗೊಂಡಿದೆ.

IPC ಅಡಿಯಲ್ಲಿ ಅತ್ಯಾಚಾರದ ಶಿಕ್ಷೆಗೆ ಸಂಬಂಧಿಸಿದ ಸೆಕ್ಷನ್ 376, ಈಗ ಸೆಕ್ಷನ್ 63 ಆಗಿದೆ. ಹೊಸ ಕಾನೂನಿನ ಅಡಿಯಲ್ಲಿ ಸೆಕ್ಷನ್ 64 ಈ ಕುರಿತ ಶಿಕ್ಷೆಯ ಬಗ್ಗೆ ಹೇಳುತ್ತದೆ, ಆದರೆ ಸೆಕ್ಷನ್ 70 ಸಾಮೂಹಿಕ ಅತ್ಯಾಚಾರದ ಅಪರಾಧಕ್ಕೆ ಸಂಬಂಧಿಸಿದೆ. ಆರೋಪಿಗಳು ದಂಡ ಸಂಹಿತೆಯ ಉದಾರ ನಿಬಂಧನೆಗಳ ಲಾಭವನ್ನು ಪಡೆದುಕೊಳ್ಳುವುದನ್ನು ತಡೆಯಲು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳ ಕುರಿತು ನಿಬಂಧನೆಗಳನ್ನು ಪೋಕ್ಸೊ ಕಾಯ್ದೆಯೊಂದಿಗೆ ಸೇರಿಸಲಾಗಿದೆ. ಅಪ್ರಾಪ್ತ ವಯಸ್ಕರ ಮೇಲಿನ ಅತ್ಯಾಚಾರಕ್ಕೆ ಜೀವಾವಧಿ ಶಿಕ್ಷೆ ಅಥವಾ ಮರಣ ದಂಡನೆಯನ್ನು ಕಡ್ಡಾಯಗೊಳಿಸಲಾಗಿದೆ. ಸಾಮೂಹಿಕ ಅತ್ಯಾಚಾರ ಪ್ರಕರಣಗಳಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ದೇಶದ್ರೋಹದ ಬಗ್ಗೆ ವ್ಯವಹರಿಸುವ ಐಪಿಸಿಯ ಸೆಕ್ಷನ್ 124-ಎಯನ್ನು ಈಗ ಹೊಸ ಕಾನೂನಿನ ಅಡಿಯಲ್ಲಿ ಸೆಕ್ಷನ್ 150 ಎಂದು ಕರೆಯಲಾಗುತ್ತದೆ.

ಭಾರತದ ಹೊರಗೆ ತಲೆಮರೆಸಿಕೊಂಡಿರುವ ಆರೋಪಿ ಇಲ್ಲಿರಬೇಕಿಲ್ಲ. ವ್ಯಕ್ತಿಯು 90 ದಿನಗಳಲ್ಲಿ ನ್ಯಾಯಾಲಯದ ಎದುರು ಹಾಜರಾಗದಿದ್ದರೆ ಆತನ ಅನುಪಸ್ಥಿತಿಯ ಹೊರತಾಗಿಯೂ ವಿಚಾರಣೆಯು ಮುಂದುವರಿಯುತ್ತದೆ. ಕಾನೂನು ಕ್ರಮವನ್ನು ಜರುಗಿಸಲು ಪಬ್ಲಿಕ್ ಪ್ರಾಸಿಕ್ಯೂಟರನ್ನು ನೇಮಿಸಲಾಗುತ್ತಿದೆ.

ಮೂರು ಕಾನೂನುಗಳು ಕಳೆದ ವರ್ಷ ಡಿಸೆಂಬರ್ 21ರಂದು ಸಂಸತ್ತಿನ ಅನುಮೋದನೆಯನ್ನು ಪಡೆದಿದೆ.  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 25ರಂದು ನೂತನ ಕಾನೂನಿಗೆ ಒಪ್ಪಿಗೆಯನ್ನು ನೀಡಿದ್ದರು.  ಜುಲೈ 1ರಿಂದ ಇದು ಜಾರಿಗೆ ಬರಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ಇದೀಗ ಪ್ರಕಟನೆಯನ್ನು ಹೊರಡಿಸಿದೆ.

ಇದನ್ನು ಓದಿ: ಗಾಝಾದಲ್ಲಿ ಮಾನವೀಯ ನೆರವು ಕಾರ್ಯಚರಣೆ: ಸಂಕಷ್ಟದಲ್ಲಿರುವ UN ಏಜೆನ್ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...