Homeಮುಖಪುಟಜುಲೈ 1ರಿಂದ ಹೊಸ ಕ್ರಿಮಿನಲ್ ಕಾನೂನುಗಳು ಜಾರಿ?

ಜುಲೈ 1ರಿಂದ ಹೊಸ ಕ್ರಿಮಿನಲ್ ಕಾನೂನುಗಳು ಜಾರಿ?

- Advertisement -
- Advertisement -

ಇತ್ತೀಚೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆ ಜುಲೈ 1ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ಪ್ರಕಟಣೆಯನ್ನು ಹೊರಡಿಸಿದೆ.

ನೂತನ ಕಾನೂನು ವಸಾಹತುಶಾಹಿ ಯುಗದ ಭಾರತೀಯ ದಂಡ ಸಂಹಿತೆ (IPC), ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು 1872ರ ಭಾರತೀಯ ಸಾಕ್ಷ್ಯ ಕಾಯಿದೆಯನ್ನು ಬದಲಿಸುತ್ತದೆ. ನೂತನ ಕಾಯ್ದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದು, ಈ ಕಾಯ್ದೆಯು ಜುಲೈ 1ರಿಂದ ಕಾನೂನಾಗಿ ಜಾರಿಗೆ ಬರಲಿದೆ.

ಹೊಸ ಕಾನೂನುಗಳ ಪ್ರಕಾರ, ಶೂನ್ಯ-ಎಫ್‌ಐಆರ್, ಇ-ಎಫ್‌ಐಆರ್, ಚಾರ್ಜ್‌ಶೀಟ್‌ನಂತಹ ಪ್ರಕ್ರಿಯೆಗಳು ಎಲೆಕ್ಟ್ರಾನಿಕ್ ರೂಪದಲ್ಲಿರುತ್ತದೆ ಮತ್ತು ಸಂತ್ರಸ್ತರಿಗೆ ಡಿಜಿಟಲ್ ರೂಪದಲ್ಲಿ ಮಾಹಿತಿಯನ್ನು ಒದಗಿಸಲಾಗುತ್ತದೆ.
ಸಂಸತ್ತಿನಲ್ಲಿ ಮೂರು ವಿಧೇಯಕಗಳ ಮೇಲಿನ ಚರ್ಚೆಯ ಸಂದರ್ಭದಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶಿಕ್ಷೆಯನ್ನು ನೀಡುವ ಬದಲು ನ್ಯಾಯವನ್ನು ತಲುಪಿಸುವತ್ತ ಗಮನಹರಿಸುವುದಾಗಿ ಹೇಳಿದ್ದರು.

ಹೊಸ ಕಾನೂನುಗಳು ಜಾರಿಗೆ ಬರುವ ಮೊದಲು, ಭಾರತೀಯ ದಂಡ ಸಂಹಿತೆಯಿಂದ ಭಾರತೀಯ ನ್ಯಾಯ ಸಂಹಿತೆಗೆ ಕೆಲ ಬದಲಾವಣೆಗಳನ್ನು ಮಾಡಲಾಗಿದೆ. ಹೊಸ ಕಾನೂನಿನಲ್ಲಿ ಐಪಿಸಿ ಅಡಿಯಲ್ಲಿ ಕೆಲವು ಸೆಕ್ಷನ್‌ಗಳ ಸಂಖ್ಯೆಗಳನ್ನು ಬದಲಾಯಿಸಲಾಗಿದೆ.

IPC ಅಡಿಯಲ್ಲಿ ಸೆಕ್ಷನ್ 302 ಕೊಲೆಯ ಶಿಕ್ಷೆಗೆ ಸಂಬಂಧಿಸಿದೆ. ಈಗ ಕೊಲೆಯು ಸೆಕ್ಷನ್ 101ರ ಅಡಿಯಲ್ಲಿ ಬರುತ್ತದೆ. ಇದಲ್ಲದೆ ಹೊಸ ಕಾನೂನಿನ ಅಡಿಯಲ್ಲಿ ಸೆಕ್ಷನ್ 302 ದರೋಡೆಗೆ ಸಂಬಂಧಿಸಿದೆ.
ಐಪಿಸಿಯ ಸೆಕ್ಷನ್ 420 ವಂಚನೆಯ ಅಪರಾಧವಾಗಿದೆ, ಆದರೆ ಹೊಸ ಕಾನೂನಿನಲ್ಲಿ ವಂಚನೆಯು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 316ರ ಅಡಿಯಲ್ಲಿ ಬರುತ್ತದೆ.

ಅಕ್ರಮ ಸಭೆಗೆ ಸಂಬಂಧಿಸಿದ ಐಪಿಸಿಯ ಸೆಕ್ಷನ್ 144ನ್ನು ಈಗ ಸೆಕ್ಷನ್ 187 ಎಂದು ಕರೆಯಲಾಗುವುದು.
ಅಂತೆಯೇ IPCಯ ಸೆಕ್ಷನ್ 121, ಯುದ್ಧ, ಅಥವಾ ಯುದ್ಧಕ್ಕೆ ಸಂಚು ಅಥವಾ ಭಾರತ ಸರ್ಕಾರದ ವಿರುದ್ಧ ಯುದ್ಧವನ್ನು ನಡೆಸಲು ಪ್ರೇರೇಪಿಸುವುದನ್ನು ಈಗ ಅದನ್ನು ಸೆಕ್ಷನ್ 146ರಡಿಯಲ್ಲಿ ಸೇರಿಸಲಾಗಿದೆ. ಮಾನನಷ್ಟಕ್ಕೆ ಸಂಬಂಧಿಸಿದ ಐಪಿಸಿಯ ಸೆಕ್ಷನ್ 499 ಈಗ ಹೊಸ ಕಾನೂನಿನ ಸೆಕ್ಷನ್ 354ರಡಿಯಲ್ಲಿ ಒಳಗೊಂಡಿದೆ.

IPC ಅಡಿಯಲ್ಲಿ ಅತ್ಯಾಚಾರದ ಶಿಕ್ಷೆಗೆ ಸಂಬಂಧಿಸಿದ ಸೆಕ್ಷನ್ 376, ಈಗ ಸೆಕ್ಷನ್ 63 ಆಗಿದೆ. ಹೊಸ ಕಾನೂನಿನ ಅಡಿಯಲ್ಲಿ ಸೆಕ್ಷನ್ 64 ಈ ಕುರಿತ ಶಿಕ್ಷೆಯ ಬಗ್ಗೆ ಹೇಳುತ್ತದೆ, ಆದರೆ ಸೆಕ್ಷನ್ 70 ಸಾಮೂಹಿಕ ಅತ್ಯಾಚಾರದ ಅಪರಾಧಕ್ಕೆ ಸಂಬಂಧಿಸಿದೆ. ಆರೋಪಿಗಳು ದಂಡ ಸಂಹಿತೆಯ ಉದಾರ ನಿಬಂಧನೆಗಳ ಲಾಭವನ್ನು ಪಡೆದುಕೊಳ್ಳುವುದನ್ನು ತಡೆಯಲು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳ ಕುರಿತು ನಿಬಂಧನೆಗಳನ್ನು ಪೋಕ್ಸೊ ಕಾಯ್ದೆಯೊಂದಿಗೆ ಸೇರಿಸಲಾಗಿದೆ. ಅಪ್ರಾಪ್ತ ವಯಸ್ಕರ ಮೇಲಿನ ಅತ್ಯಾಚಾರಕ್ಕೆ ಜೀವಾವಧಿ ಶಿಕ್ಷೆ ಅಥವಾ ಮರಣ ದಂಡನೆಯನ್ನು ಕಡ್ಡಾಯಗೊಳಿಸಲಾಗಿದೆ. ಸಾಮೂಹಿಕ ಅತ್ಯಾಚಾರ ಪ್ರಕರಣಗಳಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ದೇಶದ್ರೋಹದ ಬಗ್ಗೆ ವ್ಯವಹರಿಸುವ ಐಪಿಸಿಯ ಸೆಕ್ಷನ್ 124-ಎಯನ್ನು ಈಗ ಹೊಸ ಕಾನೂನಿನ ಅಡಿಯಲ್ಲಿ ಸೆಕ್ಷನ್ 150 ಎಂದು ಕರೆಯಲಾಗುತ್ತದೆ.

ಭಾರತದ ಹೊರಗೆ ತಲೆಮರೆಸಿಕೊಂಡಿರುವ ಆರೋಪಿ ಇಲ್ಲಿರಬೇಕಿಲ್ಲ. ವ್ಯಕ್ತಿಯು 90 ದಿನಗಳಲ್ಲಿ ನ್ಯಾಯಾಲಯದ ಎದುರು ಹಾಜರಾಗದಿದ್ದರೆ ಆತನ ಅನುಪಸ್ಥಿತಿಯ ಹೊರತಾಗಿಯೂ ವಿಚಾರಣೆಯು ಮುಂದುವರಿಯುತ್ತದೆ. ಕಾನೂನು ಕ್ರಮವನ್ನು ಜರುಗಿಸಲು ಪಬ್ಲಿಕ್ ಪ್ರಾಸಿಕ್ಯೂಟರನ್ನು ನೇಮಿಸಲಾಗುತ್ತಿದೆ.

ಮೂರು ಕಾನೂನುಗಳು ಕಳೆದ ವರ್ಷ ಡಿಸೆಂಬರ್ 21ರಂದು ಸಂಸತ್ತಿನ ಅನುಮೋದನೆಯನ್ನು ಪಡೆದಿದೆ.  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 25ರಂದು ನೂತನ ಕಾನೂನಿಗೆ ಒಪ್ಪಿಗೆಯನ್ನು ನೀಡಿದ್ದರು.  ಜುಲೈ 1ರಿಂದ ಇದು ಜಾರಿಗೆ ಬರಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ಇದೀಗ ಪ್ರಕಟನೆಯನ್ನು ಹೊರಡಿಸಿದೆ.

ಇದನ್ನು ಓದಿ: ಗಾಝಾದಲ್ಲಿ ಮಾನವೀಯ ನೆರವು ಕಾರ್ಯಚರಣೆ: ಸಂಕಷ್ಟದಲ್ಲಿರುವ UN ಏಜೆನ್ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...