Homeಮುಖಪುಟಉತ್ತರಪ್ರದೇಶದಲ್ಲಿ ಮುಂದುವರಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿಯಿಂದ ಕೋಟ್ಯಾಧಿಪತಿಗಳ ತೆರಿಗೆ ಮನ್ನಾ; ರಾಹುಲ್‌...

ಉತ್ತರಪ್ರದೇಶದಲ್ಲಿ ಮುಂದುವರಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿಯಿಂದ ಕೋಟ್ಯಾಧಿಪತಿಗಳ ತೆರಿಗೆ ಮನ್ನಾ; ರಾಹುಲ್‌ ವಾಗ್ಧಾಳಿ

- Advertisement -
- Advertisement -

ಭಾರತ್‌ ಜೋಡೋ ನ್ಯಾಯ ಯಾತ್ರೆ ಉತ್ತರಪ್ರದೇಶದಲ್ಲಿ ಮುಂದುವರಿದಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಅವರು ಇಂದು ಉತ್ತರಪ್ರದೇಶದ ಅಲಿಗಢದಿಂದ ತಮ್ಮ ಯಾತ್ರೆಯನ್ನು ಪ್ರಾರಂಭಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ವಿರುದ್ಧ ರಾಹುಲ್‌ ಗಾಂಧಿ ವಾಗ್ಧಾಳಿಯನ್ನು ನಡೆಸಿದ್ದು, ಪ್ರಧಾನಿ ಮೋದಿ ಕೋಟ್ಯಾಧಿಪತಿಗಳ ತೆರಿಯನ್ನು ಮನ್ನಾ ಮಾಡಿದ್ದು, ರೈತರ ಒಂದೇ ಒಂದು ರೂ.ಸಾಲವನ್ನು ಮನ್ನಾ ಮಾಡಿಲ್ಲ ಎಂದು ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ ಪ್ರತಿಪಕ್ಷಗಳ ಒಗ್ಗಟ್ಟನ್ನು ಪ್ರದರ್ಶಿಸುವ ಭಾಗವಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆಗ್ರಾದಲ್ಲಿ ಯಾತ್ರೆಯೊಂದಿಗೆ ಸೇರಲಿದ್ದಾರೆ. ಸಾವಿರಾರು ಮಂದಿ ಕಾಂಗ್ರೆಸ್‌- ಎಸ್ಪಿ ಕಾರ್ಯಕರ್ತರು ಯಾತ್ರೆಯಲ್ಲಿ ಭಾಗವಹಿಸಿದ್ದಾರೆ.

ಯಾತ್ರೆಯ ವೇಳೆ ಮಾತನಾಡಿದ ರಾಹುಲ್‌ ಗಾಂಧಿ, ಕೇಂದ್ರ ಸರಕಾರ ಅದಾನಿಗೆ ಎಲ್ಲವನ್ನೂ ನೀಡಿದ್ದು, ಸಣ್ಣ  ಕುಶಲಕರ್ಮಿಗಳಿಗೆ ಏನೂ ಉಳಿದಿಲ್ಲ. ಖಾಸಗಿ ಕಂಪನಿಗಳು, ದೊಡ್ಡ ಮಾಧ್ಯಮ ಸಂಸ್ಥೆಗಳಲ್ಲಿ ಒಬಿಸಿ, ದಲಿತರು, ಎಸ್ಟಿಗಳ ಪ್ರಾತಿನಿಧ್ಯ ಶೂನ್ಯ. ನಿರುದ್ಯೋಗ ಇಲ್ಲದಿದ್ದರೆ ಯುವಕರು ದಿನದ 12 ಗಂಟೆ ಮೊಬೈಲ್ ಬಳಸುತ್ತಿರಲಿಲ್ಲ ಎಂದು ಹೇಳಿದ್ದಾರೆ.

ನಾನು 10 ವರ್ಷಗಳ ನಂತರ ಮತ್ತೆ ಇಲ್ಲಿಗೆ ಬರಲು ಬಯಸುತ್ತೇನೆ. ಅಲಿಗಢ್ ಮೊಬೈಲ್ ಉತ್ಪಾದನಾ ಕೇಂದ್ರವಾಗಿದೆ. ನಾನು ಮೊಬೈಲ್ ಫೋನ್‌ಗಳಲ್ಲಿ ‘ಮೇಡ್ ಇನ್ ಅಲಿಗಢ’ ಎಂದು ಬರೆದಿರುವುದನ್ನು ನೋಡಲು ಬಯಸುತ್ತೇನೆ ಹೊರತಾಗಿ ‘ಮೇಡ್ ಇನ್ ಚೀನಾ’ ಅಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಟಾರ್ಚ್‌ ಲೈಟ್‌ ಹಾಕುವಂತೆ, ಪಾತ್ರೆಗಳನ್ನು ಬಡಿಯುವಂತೆ ಹೇಳಿ ಮೋದಿ ಜನಸಾಮಾನ್ಯರನ್ನು ತಬ್ಬಿಬ್ಬುಗೊಳಿಸುತ್ತಿದ್ದಾರೆ. ಪ್ರಧಾನಿ ಮೋದಿ ಕೋಟ್ಯಾಧಿಪತಿಗಳ ತೆರಿಗೆಯನ್ನು ಮನ್ನಾ ಮಾಡಿದ್ದಾರೆ, ಆದರೆ ರೈತರ ಸಾಲವನ್ನು ಒಂದು ರೂಪಾಯಿ ಕೂಡ ಮನ್ನಾ ಮಾಡಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಬಜೆಟ್ ರಚಿಸುವವರಲ್ಲಿ ಶೇಕಡಾ 90ರಷ್ಟು ಜನರು ಮೇಲ್ಜಾತಿಯವರು, ಒಬಿಸಿಗಳು ಯುಪಿಯ ಬಜೆಟ್‌ನಲ್ಲಿ ಶೇಕಡಾ 4ರಷ್ಟು ಪಡೆಯುತ್ತಾರೆ. ಎಲ್ಲಾ ಹಿಂದುಳಿದ ಜಾತಿಗಳ ಜನರು ಏನು ಮಾಡುತ್ತಿದ್ದಾರೆ? ನೀವು MNGREGA, ಗುತ್ತಿಗೆ ಕಾರ್ಮಿಕರ ಪಟ್ಟಿ ಬಗ್ಗೆ ಕೇಳಬೇಕು ಎಂದು ಹೇಳಿದ್ದಾರೆ.

ನಾವು ದೇಶವನ್ನು ಒಗ್ಗೂಡಿಸಲು ಪ್ರಯತ್ನಿಸುತ್ತಿದ್ದೇವೆ, ಹಿಂಸೆ ಮತ್ತು ದ್ವೇಷ ‘ಅನ್ಯಾಯ’ದ ಕಾರಣದಿಂದ ನಡೆಯುತ್ತಿದೆ ಎಂದು  ರೈತರು ಹೇಳಿದ್ದಾರೆ. ಇಲ್ಲಿ ಪ್ರತಿನಿತ್ಯ ಮಹಿಳೆಯರು, ಕಾರ್ಮಿಕರು, ರೈತರು ಅನ್ಯಾಯ ಎದುರಿಸುತ್ತಿದ್ದಾರೆ. ಆದ್ದರಿಂದ ಈ ಯಾತ್ರೆಯನ್ನು ಆಯೋಜಿಸಲಾಗಿದೆ. ಈ ಅನ್ಯಾಯದ ವಿರುದ್ಧ ಒಗ್ಗೂಡಿ ಹೋರಾಡಲು ಪ್ರಯತ್ನಿಸುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನೀವು ಓದುತ್ತೀರಿ, ಖಾಸಗಿ ಟ್ಯೂಷನ್ ತೆಗೆದುಕೊಳ್ಳುತ್ತೀರಿ. ನಂತರ ಪರೀಕ್ಷೆ ಬರೆಯಲು ಹೋದಾಗ ಪೇಪರ್ ಲೀಕ್ ಆಗಿರುವುದು ಗೊತ್ತಾಗಿದೆ. ಮೋದಿ ಸರ್ಕಾರದ ಗುರಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವವರ ಸಮಯವನ್ನು ವ್ಯರ್ಥ ಮಾಡುವುದಾಗಿದೆ. ಏಕೆಂದರೆ ಅವರು ನಿಮಗೆ ಉದ್ಯೋಗವನ್ನು ನೀಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಕುಟುಂಬದಲ್ಲಿ ಜಗಳವಾದಾಗ ಕುಟುಂಬ ದುರ್ಬಲವಾಗುತ್ತದೆ. ಹಾಗೆಯೇ, ಯಾರಾದರೂ ದೇಶವನ್ನು ದುರ್ಬಲಗೊಳಿಸಿದಾಗ, ದೇಶಭಕ್ತ ದೇಶವನ್ನು ಉಳಿಸುತ್ತಾನೆ. ದ್ವೇಷ ಮತ್ತು ಹಿಂಸೆಯನ್ನು ಹೋಗಲಾಡಿಸಲಾಗುತ್ತದೆ. ಇದು ಭಾರತ್ ಜೋಡೋ ಯಾತ್ರೆಯ ಉದ್ದೇಶವಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಭಾರತ್‌ ಜೋಡೋ ನ್ಯಾಯ ಯಾತ್ರೆಯ ವೇಳೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ಅಗ್ನಿವೀರ್ ಯೋಜನೆಯು ಬಿಹಾರ, ಯುಪಿಯ ಶ್ರಮಜೀವಿ ಯುವಕರ ಮೇಲೆ ನೇರವಾಗಿ ದಾಳಿ ಮಾಡುತ್ತದೆ. ಹಣದುಬ್ಬರ, ಕನಿಷ್ಠ ವೇತನ ಹೆಚ್ಚಳ, 10 ವರ್ಷಗಳ ಮೋದಿ ಸರ್ಕಾರ ಏನು ಮಾಡಿದೆ ಎಂಬುವುದನ್ನು ಪ್ರತಿಬಿಂಬಿಸುತ್ತದೆ. ನೀವು ಯೋಚಿಸುತ್ತೀರಿ ಮತ್ತು ಇದನ್ನು ಅರಿತುಕೊಳ್ಳುತ್ತೀರಿ ಇದರಿಂದ ಬದಲಾವಣೆಗೆ ನಾಂದಿ ಹಾಡಬಹುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಗಾಝಾದಲ್ಲಿ ಮಾನವೀಯ ನೆರವು ಕಾರ್ಯಚರಣೆ: ಸಂಕಷ್ಟದಲ್ಲಿರುವ UN ಏಜೆನ್ಸಿ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...