Homeಮುಖಪುಟಉತ್ತರಪ್ರದೇಶದಲ್ಲಿ ಮುಂದುವರಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿಯಿಂದ ಕೋಟ್ಯಾಧಿಪತಿಗಳ ತೆರಿಗೆ ಮನ್ನಾ; ರಾಹುಲ್‌...

ಉತ್ತರಪ್ರದೇಶದಲ್ಲಿ ಮುಂದುವರಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿಯಿಂದ ಕೋಟ್ಯಾಧಿಪತಿಗಳ ತೆರಿಗೆ ಮನ್ನಾ; ರಾಹುಲ್‌ ವಾಗ್ಧಾಳಿ

- Advertisement -
- Advertisement -

ಭಾರತ್‌ ಜೋಡೋ ನ್ಯಾಯ ಯಾತ್ರೆ ಉತ್ತರಪ್ರದೇಶದಲ್ಲಿ ಮುಂದುವರಿದಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಅವರು ಇಂದು ಉತ್ತರಪ್ರದೇಶದ ಅಲಿಗಢದಿಂದ ತಮ್ಮ ಯಾತ್ರೆಯನ್ನು ಪ್ರಾರಂಭಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ವಿರುದ್ಧ ರಾಹುಲ್‌ ಗಾಂಧಿ ವಾಗ್ಧಾಳಿಯನ್ನು ನಡೆಸಿದ್ದು, ಪ್ರಧಾನಿ ಮೋದಿ ಕೋಟ್ಯಾಧಿಪತಿಗಳ ತೆರಿಯನ್ನು ಮನ್ನಾ ಮಾಡಿದ್ದು, ರೈತರ ಒಂದೇ ಒಂದು ರೂ.ಸಾಲವನ್ನು ಮನ್ನಾ ಮಾಡಿಲ್ಲ ಎಂದು ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ ಪ್ರತಿಪಕ್ಷಗಳ ಒಗ್ಗಟ್ಟನ್ನು ಪ್ರದರ್ಶಿಸುವ ಭಾಗವಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆಗ್ರಾದಲ್ಲಿ ಯಾತ್ರೆಯೊಂದಿಗೆ ಸೇರಲಿದ್ದಾರೆ. ಸಾವಿರಾರು ಮಂದಿ ಕಾಂಗ್ರೆಸ್‌- ಎಸ್ಪಿ ಕಾರ್ಯಕರ್ತರು ಯಾತ್ರೆಯಲ್ಲಿ ಭಾಗವಹಿಸಿದ್ದಾರೆ.

ಯಾತ್ರೆಯ ವೇಳೆ ಮಾತನಾಡಿದ ರಾಹುಲ್‌ ಗಾಂಧಿ, ಕೇಂದ್ರ ಸರಕಾರ ಅದಾನಿಗೆ ಎಲ್ಲವನ್ನೂ ನೀಡಿದ್ದು, ಸಣ್ಣ  ಕುಶಲಕರ್ಮಿಗಳಿಗೆ ಏನೂ ಉಳಿದಿಲ್ಲ. ಖಾಸಗಿ ಕಂಪನಿಗಳು, ದೊಡ್ಡ ಮಾಧ್ಯಮ ಸಂಸ್ಥೆಗಳಲ್ಲಿ ಒಬಿಸಿ, ದಲಿತರು, ಎಸ್ಟಿಗಳ ಪ್ರಾತಿನಿಧ್ಯ ಶೂನ್ಯ. ನಿರುದ್ಯೋಗ ಇಲ್ಲದಿದ್ದರೆ ಯುವಕರು ದಿನದ 12 ಗಂಟೆ ಮೊಬೈಲ್ ಬಳಸುತ್ತಿರಲಿಲ್ಲ ಎಂದು ಹೇಳಿದ್ದಾರೆ.

ನಾನು 10 ವರ್ಷಗಳ ನಂತರ ಮತ್ತೆ ಇಲ್ಲಿಗೆ ಬರಲು ಬಯಸುತ್ತೇನೆ. ಅಲಿಗಢ್ ಮೊಬೈಲ್ ಉತ್ಪಾದನಾ ಕೇಂದ್ರವಾಗಿದೆ. ನಾನು ಮೊಬೈಲ್ ಫೋನ್‌ಗಳಲ್ಲಿ ‘ಮೇಡ್ ಇನ್ ಅಲಿಗಢ’ ಎಂದು ಬರೆದಿರುವುದನ್ನು ನೋಡಲು ಬಯಸುತ್ತೇನೆ ಹೊರತಾಗಿ ‘ಮೇಡ್ ಇನ್ ಚೀನಾ’ ಅಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಟಾರ್ಚ್‌ ಲೈಟ್‌ ಹಾಕುವಂತೆ, ಪಾತ್ರೆಗಳನ್ನು ಬಡಿಯುವಂತೆ ಹೇಳಿ ಮೋದಿ ಜನಸಾಮಾನ್ಯರನ್ನು ತಬ್ಬಿಬ್ಬುಗೊಳಿಸುತ್ತಿದ್ದಾರೆ. ಪ್ರಧಾನಿ ಮೋದಿ ಕೋಟ್ಯಾಧಿಪತಿಗಳ ತೆರಿಗೆಯನ್ನು ಮನ್ನಾ ಮಾಡಿದ್ದಾರೆ, ಆದರೆ ರೈತರ ಸಾಲವನ್ನು ಒಂದು ರೂಪಾಯಿ ಕೂಡ ಮನ್ನಾ ಮಾಡಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಬಜೆಟ್ ರಚಿಸುವವರಲ್ಲಿ ಶೇಕಡಾ 90ರಷ್ಟು ಜನರು ಮೇಲ್ಜಾತಿಯವರು, ಒಬಿಸಿಗಳು ಯುಪಿಯ ಬಜೆಟ್‌ನಲ್ಲಿ ಶೇಕಡಾ 4ರಷ್ಟು ಪಡೆಯುತ್ತಾರೆ. ಎಲ್ಲಾ ಹಿಂದುಳಿದ ಜಾತಿಗಳ ಜನರು ಏನು ಮಾಡುತ್ತಿದ್ದಾರೆ? ನೀವು MNGREGA, ಗುತ್ತಿಗೆ ಕಾರ್ಮಿಕರ ಪಟ್ಟಿ ಬಗ್ಗೆ ಕೇಳಬೇಕು ಎಂದು ಹೇಳಿದ್ದಾರೆ.

ನಾವು ದೇಶವನ್ನು ಒಗ್ಗೂಡಿಸಲು ಪ್ರಯತ್ನಿಸುತ್ತಿದ್ದೇವೆ, ಹಿಂಸೆ ಮತ್ತು ದ್ವೇಷ ‘ಅನ್ಯಾಯ’ದ ಕಾರಣದಿಂದ ನಡೆಯುತ್ತಿದೆ ಎಂದು  ರೈತರು ಹೇಳಿದ್ದಾರೆ. ಇಲ್ಲಿ ಪ್ರತಿನಿತ್ಯ ಮಹಿಳೆಯರು, ಕಾರ್ಮಿಕರು, ರೈತರು ಅನ್ಯಾಯ ಎದುರಿಸುತ್ತಿದ್ದಾರೆ. ಆದ್ದರಿಂದ ಈ ಯಾತ್ರೆಯನ್ನು ಆಯೋಜಿಸಲಾಗಿದೆ. ಈ ಅನ್ಯಾಯದ ವಿರುದ್ಧ ಒಗ್ಗೂಡಿ ಹೋರಾಡಲು ಪ್ರಯತ್ನಿಸುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನೀವು ಓದುತ್ತೀರಿ, ಖಾಸಗಿ ಟ್ಯೂಷನ್ ತೆಗೆದುಕೊಳ್ಳುತ್ತೀರಿ. ನಂತರ ಪರೀಕ್ಷೆ ಬರೆಯಲು ಹೋದಾಗ ಪೇಪರ್ ಲೀಕ್ ಆಗಿರುವುದು ಗೊತ್ತಾಗಿದೆ. ಮೋದಿ ಸರ್ಕಾರದ ಗುರಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವವರ ಸಮಯವನ್ನು ವ್ಯರ್ಥ ಮಾಡುವುದಾಗಿದೆ. ಏಕೆಂದರೆ ಅವರು ನಿಮಗೆ ಉದ್ಯೋಗವನ್ನು ನೀಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಕುಟುಂಬದಲ್ಲಿ ಜಗಳವಾದಾಗ ಕುಟುಂಬ ದುರ್ಬಲವಾಗುತ್ತದೆ. ಹಾಗೆಯೇ, ಯಾರಾದರೂ ದೇಶವನ್ನು ದುರ್ಬಲಗೊಳಿಸಿದಾಗ, ದೇಶಭಕ್ತ ದೇಶವನ್ನು ಉಳಿಸುತ್ತಾನೆ. ದ್ವೇಷ ಮತ್ತು ಹಿಂಸೆಯನ್ನು ಹೋಗಲಾಡಿಸಲಾಗುತ್ತದೆ. ಇದು ಭಾರತ್ ಜೋಡೋ ಯಾತ್ರೆಯ ಉದ್ದೇಶವಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಭಾರತ್‌ ಜೋಡೋ ನ್ಯಾಯ ಯಾತ್ರೆಯ ವೇಳೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ಅಗ್ನಿವೀರ್ ಯೋಜನೆಯು ಬಿಹಾರ, ಯುಪಿಯ ಶ್ರಮಜೀವಿ ಯುವಕರ ಮೇಲೆ ನೇರವಾಗಿ ದಾಳಿ ಮಾಡುತ್ತದೆ. ಹಣದುಬ್ಬರ, ಕನಿಷ್ಠ ವೇತನ ಹೆಚ್ಚಳ, 10 ವರ್ಷಗಳ ಮೋದಿ ಸರ್ಕಾರ ಏನು ಮಾಡಿದೆ ಎಂಬುವುದನ್ನು ಪ್ರತಿಬಿಂಬಿಸುತ್ತದೆ. ನೀವು ಯೋಚಿಸುತ್ತೀರಿ ಮತ್ತು ಇದನ್ನು ಅರಿತುಕೊಳ್ಳುತ್ತೀರಿ ಇದರಿಂದ ಬದಲಾವಣೆಗೆ ನಾಂದಿ ಹಾಡಬಹುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಗಾಝಾದಲ್ಲಿ ಮಾನವೀಯ ನೆರವು ಕಾರ್ಯಚರಣೆ: ಸಂಕಷ್ಟದಲ್ಲಿರುವ UN ಏಜೆನ್ಸಿ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...