Homeಮುಖಪುಟರಷ್ಯಾ-ಉಕ್ರೇನ್ ಗಡಿಯಲ್ಲಿ ಭಾರತೀಯನ ಹತ್ಯೆ: ಭಾರತೀಯರನ್ನು ರಷ್ಯಾ ಯುದ್ಧಕ್ಕೆ ನಿಯೋಜಿಸಿದೆ ಎಂಬ ಆರೋಪದ ಬೆನ್ನಲ್ಲಿ ಬೆಳವಣಿಗೆ

ರಷ್ಯಾ-ಉಕ್ರೇನ್ ಗಡಿಯಲ್ಲಿ ಭಾರತೀಯನ ಹತ್ಯೆ: ಭಾರತೀಯರನ್ನು ರಷ್ಯಾ ಯುದ್ಧಕ್ಕೆ ನಿಯೋಜಿಸಿದೆ ಎಂಬ ಆರೋಪದ ಬೆನ್ನಲ್ಲಿ ಬೆಳವಣಿಗೆ

- Advertisement -
- Advertisement -

ಕಟ್ಟಡಗಳಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಕೊಡಿಸುವ ಆಮಿಷವೊಡ್ಡಿ ಏಜೆಂಟ್‌ಗಳು ಭಾರತದಿಂದ 100ಕ್ಕೂ ಅಧಿಕ ಮಂದಿಯನ್ನು ರಷ್ಯಾಗೆ ಕರೆಸಿಕೊಂಡು ರಷ್ಯಾ ಗಡಿಯಲ್ಲಿ ಯುದ್ಧಕ್ಕೆ ನಿಯೋಜಿಸಿರುವ ಬಗ್ಗೆ ಇತ್ತೀಚೆಗೆ ಸುದ್ದಿಯಾಗಿತ್ತು. ಇದೀಗ ಗುಜರಾತ್‌ ನಿವಾಸಿಯೋರ್ವ ರಷ್ಯಾ-ಉಕ್ರೇನ್ ಗಡಿಯಲ್ಲಿರುವ ಡೊನೆಟ್ಸ್ಕ್ ಪ್ರದೇಶದಲ್ಲಿ ಉಕ್ರೇನ್ ನಡೆಸಿದ ವೈಮಾನಿಕ ದಾಳಿಯಲ್ಲಿ ಮೃತಪಟ್ಟಿರುವ ಸುದ್ದಿ ಬಹಿರಂಗವಾಗಿದೆ.

ಗುಜರಾತ್‌ ರಾಜ್ಯದ ಸೂರತ್‌ ನಿವಾಸಿ ಹೆಮಿಲ್ ಅಶ್ವಿನ್‌ಭಾಯ್ ಮಂಗುಕಿಯಾ ಮೃತರು. ರಷ್ಯಾದ ಕಟ್ಟಡದಲ್ಲಿ ಸೆಕ್ಯೂರಿಟಿ ಕೆಲಸಕ್ಕೆಂದು ಸಳ್ಳು ಹೇಳಿ ಇವರನ್ನು ಕರೆಸಿಕೊಂಡು ರಷ್ಯಾ ಗಡಿಯಲ್ಲಿ ಯುದ್ಧಕ್ಕೆ ನಿಯೋಜಿಸಲಾಗಿತ್ತು ಎಂದು ಆರೋಪಿಸಲಾಗಿದೆ.

ಹೆಮಿಲ್ ಅಶ್ವಿನ್‌ಭಾಯ್ ಮಂಗುಕಿಯಾ ಡಿಸೆಂಬರ್ 2023ರಿಂದ ರಷ್ಯಾದಲ್ಲಿದ್ದರು. ಸಾವಿನ ಬಗ್ಗೆ ನಮಗೆ ಮಾಹಿತಿ ನೀಡಲಾಗಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.

ಮಂಗುಕಿಯಾ ಅವರ ತಂದೆಯ ಪರವಾಗಿ ಏಜೆಂಟರೊಬ್ಬರು ಈ ತಿಂಗಳ ಆರಂಭದಲ್ಲಿ ಭಾರತೀಯ ದೂತಾವಾಸಕ್ಕೆ ಪತ್ರ ಬರೆದು ಆತನನ್ನು ಮನೆಗೆ ಕರೆತರಲು ಸಹಾಯವನ್ನು ಕೇಳಿದ್ದರು ಎಂದು ಹಿಂದೂ ವರದಿ ಮಾಡಿತ್ತು. ಫೆಬ್ರವರಿ 2ರಂದು ಮಂಗುಕಿಯಾ ಅವರ ತಂದೆಯ ಪರವಾಗಿ ಭಾರತೀಯ ಕಾನ್ಸುಲೇಟ್‌ಗೆ ಕಳುಹಿಸಲಾದ ಇಮೇಲ್‌ನಲ್ಲಿ ಅವರ ಜೀವಕ್ಕೆ ಅಪಾಯವಿದೆ ಎಂದು ಉಲ್ಲೇಖಿಸಿ ಅವರ ಮಗನ ಮರಳಲು ವ್ಯವಸ್ಥೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಲಾಗಿತ್ತು. ರಷ್ಯಾದ ಸೈನ್ಯದೊಂದಿಗೆ ಕೆಲಸ ಮಾಡುವ ಭಾರತೀಯರನ್ನು ಬಿಡುಗಡೆಗಾಗಿ ರಷ್ಯಾದ ಅಧಿಕಾರಿಗಳನ್ನು ಸಂಪರ್ಕಿಸಿರುವುದಾಗಿ ಕೇಂದ್ರ ಸರ್ಕಾರ ಈ ಮೊದಲು ಹೇಳಿತ್ತು.

100ಕ್ಕೂ ಹೆಚ್ಚು ಭಾರತೀಯ ಪ್ರಜೆಗಳನ್ನು ರಷ್ಯಾದ ಸೇನೆಯು ಭದ್ರತಾ ಸಹಾಯಕರನ್ನಾಗಿ ನೇಮಿಸಿಕೊಂಡಿದೆ ಮತ್ತು ಅವರಲ್ಲಿ ಕೆಲವರು ಅವರನ್ನು ಯುದ್ಧ ವಲಯಕ್ಕೆ ಕಳುಹಿಸುವುದಿಲ್ಲ ಎಂಬ ಭರವಸೆಯ ಹೊರತಾಗಿಯೂ ರಷ್ಯಾದ ಪಡೆಗಳೊಂದಿಗೆ ಹೋರಾಡಲು ಒತ್ತಾಯಿಸಲಾಗುತ್ತಿದೆ ಎಂದು ವರದಿಯಾಗಿದೆ.

ಕರ್ನಾಟಕದ ಗುಲ್ಬರ್ಗದ ನಿವಾಸಿ ಸಮೀರ್ ಅಹ್ಮದ್ ಈ ಕುರಿತು ಮಾತನಾಡಿದ್ದು, ಮಂಗುಕಿಯಾ ಹೆಮಿಲ್ ಮೇಲೆ ಕ್ಷಿಪಣಿ ದಾಳಿ ನಡೆದಿದೆ. ಡ್ರೋನ್ ನಮ್ಮ ಮೇಲೆ ಸುತ್ತಾಡುವುದನ್ನು ನಾವು ನೋಡಿದ್ದೇವೆ. ನಾವು ಕಂದಕವನ್ನು ಅಗೆಯುತ್ತಿದ್ದೆವು. ಇದ್ದಕ್ಕಿದ್ದಂತೆ ನಮಗೆ ಏನೋ ಶಬ್ದ ಕೇಳಿಸಿತು. ನಾನು ಮತ್ತು ಇತರ ಇಬ್ಬರು ಭಾರತೀಯರು, ಇತರ ರಷ್ಯಾದ ಸೈನಿಕರು ಕಂದಕದಲ್ಲಿ ಅಡಗಿಕೊಂಡೆವು. ಕ್ಷಿಪಣಿಗಳು ಹೊಡೆದವು ಮತ್ತು ಭೂಮಿಯು ನಡುಗಿತು. ಸ್ವಲ್ಪ ಸಮಯದ ನಂತರ ನಾವು ಹೊರಬಂದಾಗ, ಹೆಮಿಲ್ ಮೃತಪಟ್ಟಿರುವುದನ್ನು ಕಂಡುಕೊಂಡೆವು. ಅವರ ಶವವನ್ನು ಟ್ರಕ್‌ಗೆ ಹಾಕಿದ್ದು ನಾನೇ ಎಂದು ಸಮೀರ್‌ ಅಹ್ಮದ್‌ ಹೇಳಿದ್ದಾರೆ.

ಮಂಗುಕಿಯಾ ಹೆಮಿಲ್ ದೇಹದ ಮೇಲಿನ ಗಾಯಗಳು ಮತ್ತು ಆತನ ರಕ್ತ ಸಿಕ್ತ ದೇಹಗಳನ್ನು ತೋರಿಸುವ ಪೋಟೋವನ್ನು ಇನ್ನೋರ್ವ ಭಾರತೀಯ ಸಿಬ್ಬಂದಿ ಹಂಚಿಕೊಂಡಿದ್ದಾರೆ. ಫೆಬ್ರವರಿ 21ರಂದು ದಾಳಿಗೆ ಒಳಗಾದ ಗುಂಪಿನಲ್ಲಿ ಮೃತ ಹೆಮಿಲ್ ಸೇರಿದಂತೆ ನಾಲ್ವರು ಭಾರತೀಯರು ಇದ್ದರು. ಹೆಮಿಲ್ ರಷ್ಯಾದ ಮಿಲಿಟರಿ ಕಮಾಂಡರ್‌ಗೆ ತುಂಬಾ ಹತ್ತಿರವಾಗಿದ್ದರು ಮತ್ತು ಅವರ ನಂಬಿಕಸ್ಥರಲ್ಲಿ ಹೆಮಿಲ್‌ ಕೂಡ ಇದ್ದರು. ಕಂದಕ ಅಗೆಯುತ್ತಿದ್ದಾಗ ವಾಯುದಾಳಿ ನಡೆದಿದೆ. ಕೊಲ್ಲಲ್ಪಟ್ಟವರಲ್ಲಿ ಒಬ್ಬ ನೇಪಾಳೀಯನೂ ಇದ್ದಾನೆ ಎಂದು ಮತ್ತೊಬ್ಬ ಭಾರತೀಯ ಸಿಬ್ಬಂದಿ ಹೇಳಿದ್ದಾರೆ.

ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಈ ಬಗ್ಗೆ ಮನವಿಯನ್ನು ಮಾಡಿದ್ದರೂ ನಮ್ಮ ಮನವಿಯನ್ನು ಪರಿಗಣಿಸಲಾಗಿಲ್ಲ  ಎಂದು ಭಾರತೀಯ ಪ್ರಜೆಗಳು ಆರೋಪಿಸಿದ್ದರು. ನಾವು ಭಾರತದಿಂದ ಒಟ್ಟಿಗೆ ಬಂದಿದ್ದೇವೆ. ಹೆಮಿಲ್ ನನ್ನ ಮುಂದೆ ಸತ್ತು ಬಿದ್ದಿದ್ದಾರೆ. ಅವರು ನಮ್ಮನ್ನು ಗಡಿಗೆ ಕಳುಹಿಸುತ್ತಾರೆ ಮತ್ತು ನಮ್ಮನ್ನು ಕೂಡ ಹತ್ಯೆ ಮಾಡಲಾಗುತ್ತದೆ ಎಂದು ನಾವು ಹೆದರುತ್ತೇವೆ. ನಮ್ಮನ್ನು ಬಿಡುಗಡೆ ಮಾಡಲು ನಾವು ರಷ್ಯಾದ ಕಮಾಂಡರ್‌ನ್ನು ಕೇಳಿದಾಗ, ನಾವು ಒಪ್ಪಂದಕ್ಕೆ ಸಹಿ ಹಾಕಿದ್ದೇವೆ ಎಂದು ಅವರು ಹೇಳುತ್ತಾರೆ. ದಯವಿಟ್ಟು ನಮ್ಮನ್ನು ಉಳಿಸಿ ಎಂದು ಸಮೀರ್ ಅಹ್ಮದ್ ಮನವಿಯನ್ನು ಮಾಡಿದ್ದಾರೆ.

ನಮ್ಮನ್ನು ಸೇನೆಯ ಭದ್ರತಾ ಸಹಾಯಕರಾಗಿ ನೇಮಿಸಲಾಗಿದೆ ಆದರೆ ಅವರು ರಷ್ಯಾ-ಉಕ್ರೇನ್ ಗಡಿಯಲ್ಲಿ ಹೋರಾಡಲು ನಮ್ಮನ್ನು ಒತ್ತಾಯಿಸುತ್ತಿದ್ದಾರೆ. ನಮ್ಮ ಸುರಕ್ಷತೆ ಮತ್ತು ಭದ್ರತೆಗಾಗಿ ನಾವು ಭಯಪಡುತ್ತೇವೆ. ಪದೇ ಪದೇ ಮನವಿ ಮಾಡಿದರೂ ಸರ್ಕಾರ ನಮ್ಮನ್ನು ರಕ್ಷಿಸಲು ಏನನ್ನೂ ಮಾಡುತ್ತಿಲ್ಲ ಎಂದು ಭಾರತೀಯ ಸಿಬ್ಬಂದಿಗಳು ಅಳಲನ್ನು ತೋಡಿಕೊಂಡಿದ್ದಾರೆ.

ಇದನ್ನು ಓದಿ: ಉತ್ತರಪ್ರದೇಶದಲ್ಲಿ ಮುಂದುವರಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿಯಿಂದ ಕೋಟ್ಯಾಧಿಪತಿಗಳ ತೆರಿಗೆ ಮನ್ನಾ; ರಾಹುಲ್‌ ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...