Homeಮುಖಪುಟರಷ್ಯಾ-ಉಕ್ರೇನ್ ಗಡಿಯಲ್ಲಿ ಭಾರತೀಯನ ಹತ್ಯೆ: ಭಾರತೀಯರನ್ನು ರಷ್ಯಾ ಯುದ್ಧಕ್ಕೆ ನಿಯೋಜಿಸಿದೆ ಎಂಬ ಆರೋಪದ ಬೆನ್ನಲ್ಲಿ ಬೆಳವಣಿಗೆ

ರಷ್ಯಾ-ಉಕ್ರೇನ್ ಗಡಿಯಲ್ಲಿ ಭಾರತೀಯನ ಹತ್ಯೆ: ಭಾರತೀಯರನ್ನು ರಷ್ಯಾ ಯುದ್ಧಕ್ಕೆ ನಿಯೋಜಿಸಿದೆ ಎಂಬ ಆರೋಪದ ಬೆನ್ನಲ್ಲಿ ಬೆಳವಣಿಗೆ

- Advertisement -
- Advertisement -

ಕಟ್ಟಡಗಳಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಕೊಡಿಸುವ ಆಮಿಷವೊಡ್ಡಿ ಏಜೆಂಟ್‌ಗಳು ಭಾರತದಿಂದ 100ಕ್ಕೂ ಅಧಿಕ ಮಂದಿಯನ್ನು ರಷ್ಯಾಗೆ ಕರೆಸಿಕೊಂಡು ರಷ್ಯಾ ಗಡಿಯಲ್ಲಿ ಯುದ್ಧಕ್ಕೆ ನಿಯೋಜಿಸಿರುವ ಬಗ್ಗೆ ಇತ್ತೀಚೆಗೆ ಸುದ್ದಿಯಾಗಿತ್ತು. ಇದೀಗ ಗುಜರಾತ್‌ ನಿವಾಸಿಯೋರ್ವ ರಷ್ಯಾ-ಉಕ್ರೇನ್ ಗಡಿಯಲ್ಲಿರುವ ಡೊನೆಟ್ಸ್ಕ್ ಪ್ರದೇಶದಲ್ಲಿ ಉಕ್ರೇನ್ ನಡೆಸಿದ ವೈಮಾನಿಕ ದಾಳಿಯಲ್ಲಿ ಮೃತಪಟ್ಟಿರುವ ಸುದ್ದಿ ಬಹಿರಂಗವಾಗಿದೆ.

ಗುಜರಾತ್‌ ರಾಜ್ಯದ ಸೂರತ್‌ ನಿವಾಸಿ ಹೆಮಿಲ್ ಅಶ್ವಿನ್‌ಭಾಯ್ ಮಂಗುಕಿಯಾ ಮೃತರು. ರಷ್ಯಾದ ಕಟ್ಟಡದಲ್ಲಿ ಸೆಕ್ಯೂರಿಟಿ ಕೆಲಸಕ್ಕೆಂದು ಸಳ್ಳು ಹೇಳಿ ಇವರನ್ನು ಕರೆಸಿಕೊಂಡು ರಷ್ಯಾ ಗಡಿಯಲ್ಲಿ ಯುದ್ಧಕ್ಕೆ ನಿಯೋಜಿಸಲಾಗಿತ್ತು ಎಂದು ಆರೋಪಿಸಲಾಗಿದೆ.

ಹೆಮಿಲ್ ಅಶ್ವಿನ್‌ಭಾಯ್ ಮಂಗುಕಿಯಾ ಡಿಸೆಂಬರ್ 2023ರಿಂದ ರಷ್ಯಾದಲ್ಲಿದ್ದರು. ಸಾವಿನ ಬಗ್ಗೆ ನಮಗೆ ಮಾಹಿತಿ ನೀಡಲಾಗಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.

ಮಂಗುಕಿಯಾ ಅವರ ತಂದೆಯ ಪರವಾಗಿ ಏಜೆಂಟರೊಬ್ಬರು ಈ ತಿಂಗಳ ಆರಂಭದಲ್ಲಿ ಭಾರತೀಯ ದೂತಾವಾಸಕ್ಕೆ ಪತ್ರ ಬರೆದು ಆತನನ್ನು ಮನೆಗೆ ಕರೆತರಲು ಸಹಾಯವನ್ನು ಕೇಳಿದ್ದರು ಎಂದು ಹಿಂದೂ ವರದಿ ಮಾಡಿತ್ತು. ಫೆಬ್ರವರಿ 2ರಂದು ಮಂಗುಕಿಯಾ ಅವರ ತಂದೆಯ ಪರವಾಗಿ ಭಾರತೀಯ ಕಾನ್ಸುಲೇಟ್‌ಗೆ ಕಳುಹಿಸಲಾದ ಇಮೇಲ್‌ನಲ್ಲಿ ಅವರ ಜೀವಕ್ಕೆ ಅಪಾಯವಿದೆ ಎಂದು ಉಲ್ಲೇಖಿಸಿ ಅವರ ಮಗನ ಮರಳಲು ವ್ಯವಸ್ಥೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಲಾಗಿತ್ತು. ರಷ್ಯಾದ ಸೈನ್ಯದೊಂದಿಗೆ ಕೆಲಸ ಮಾಡುವ ಭಾರತೀಯರನ್ನು ಬಿಡುಗಡೆಗಾಗಿ ರಷ್ಯಾದ ಅಧಿಕಾರಿಗಳನ್ನು ಸಂಪರ್ಕಿಸಿರುವುದಾಗಿ ಕೇಂದ್ರ ಸರ್ಕಾರ ಈ ಮೊದಲು ಹೇಳಿತ್ತು.

100ಕ್ಕೂ ಹೆಚ್ಚು ಭಾರತೀಯ ಪ್ರಜೆಗಳನ್ನು ರಷ್ಯಾದ ಸೇನೆಯು ಭದ್ರತಾ ಸಹಾಯಕರನ್ನಾಗಿ ನೇಮಿಸಿಕೊಂಡಿದೆ ಮತ್ತು ಅವರಲ್ಲಿ ಕೆಲವರು ಅವರನ್ನು ಯುದ್ಧ ವಲಯಕ್ಕೆ ಕಳುಹಿಸುವುದಿಲ್ಲ ಎಂಬ ಭರವಸೆಯ ಹೊರತಾಗಿಯೂ ರಷ್ಯಾದ ಪಡೆಗಳೊಂದಿಗೆ ಹೋರಾಡಲು ಒತ್ತಾಯಿಸಲಾಗುತ್ತಿದೆ ಎಂದು ವರದಿಯಾಗಿದೆ.

ಕರ್ನಾಟಕದ ಗುಲ್ಬರ್ಗದ ನಿವಾಸಿ ಸಮೀರ್ ಅಹ್ಮದ್ ಈ ಕುರಿತು ಮಾತನಾಡಿದ್ದು, ಮಂಗುಕಿಯಾ ಹೆಮಿಲ್ ಮೇಲೆ ಕ್ಷಿಪಣಿ ದಾಳಿ ನಡೆದಿದೆ. ಡ್ರೋನ್ ನಮ್ಮ ಮೇಲೆ ಸುತ್ತಾಡುವುದನ್ನು ನಾವು ನೋಡಿದ್ದೇವೆ. ನಾವು ಕಂದಕವನ್ನು ಅಗೆಯುತ್ತಿದ್ದೆವು. ಇದ್ದಕ್ಕಿದ್ದಂತೆ ನಮಗೆ ಏನೋ ಶಬ್ದ ಕೇಳಿಸಿತು. ನಾನು ಮತ್ತು ಇತರ ಇಬ್ಬರು ಭಾರತೀಯರು, ಇತರ ರಷ್ಯಾದ ಸೈನಿಕರು ಕಂದಕದಲ್ಲಿ ಅಡಗಿಕೊಂಡೆವು. ಕ್ಷಿಪಣಿಗಳು ಹೊಡೆದವು ಮತ್ತು ಭೂಮಿಯು ನಡುಗಿತು. ಸ್ವಲ್ಪ ಸಮಯದ ನಂತರ ನಾವು ಹೊರಬಂದಾಗ, ಹೆಮಿಲ್ ಮೃತಪಟ್ಟಿರುವುದನ್ನು ಕಂಡುಕೊಂಡೆವು. ಅವರ ಶವವನ್ನು ಟ್ರಕ್‌ಗೆ ಹಾಕಿದ್ದು ನಾನೇ ಎಂದು ಸಮೀರ್‌ ಅಹ್ಮದ್‌ ಹೇಳಿದ್ದಾರೆ.

ಮಂಗುಕಿಯಾ ಹೆಮಿಲ್ ದೇಹದ ಮೇಲಿನ ಗಾಯಗಳು ಮತ್ತು ಆತನ ರಕ್ತ ಸಿಕ್ತ ದೇಹಗಳನ್ನು ತೋರಿಸುವ ಪೋಟೋವನ್ನು ಇನ್ನೋರ್ವ ಭಾರತೀಯ ಸಿಬ್ಬಂದಿ ಹಂಚಿಕೊಂಡಿದ್ದಾರೆ. ಫೆಬ್ರವರಿ 21ರಂದು ದಾಳಿಗೆ ಒಳಗಾದ ಗುಂಪಿನಲ್ಲಿ ಮೃತ ಹೆಮಿಲ್ ಸೇರಿದಂತೆ ನಾಲ್ವರು ಭಾರತೀಯರು ಇದ್ದರು. ಹೆಮಿಲ್ ರಷ್ಯಾದ ಮಿಲಿಟರಿ ಕಮಾಂಡರ್‌ಗೆ ತುಂಬಾ ಹತ್ತಿರವಾಗಿದ್ದರು ಮತ್ತು ಅವರ ನಂಬಿಕಸ್ಥರಲ್ಲಿ ಹೆಮಿಲ್‌ ಕೂಡ ಇದ್ದರು. ಕಂದಕ ಅಗೆಯುತ್ತಿದ್ದಾಗ ವಾಯುದಾಳಿ ನಡೆದಿದೆ. ಕೊಲ್ಲಲ್ಪಟ್ಟವರಲ್ಲಿ ಒಬ್ಬ ನೇಪಾಳೀಯನೂ ಇದ್ದಾನೆ ಎಂದು ಮತ್ತೊಬ್ಬ ಭಾರತೀಯ ಸಿಬ್ಬಂದಿ ಹೇಳಿದ್ದಾರೆ.

ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಈ ಬಗ್ಗೆ ಮನವಿಯನ್ನು ಮಾಡಿದ್ದರೂ ನಮ್ಮ ಮನವಿಯನ್ನು ಪರಿಗಣಿಸಲಾಗಿಲ್ಲ  ಎಂದು ಭಾರತೀಯ ಪ್ರಜೆಗಳು ಆರೋಪಿಸಿದ್ದರು. ನಾವು ಭಾರತದಿಂದ ಒಟ್ಟಿಗೆ ಬಂದಿದ್ದೇವೆ. ಹೆಮಿಲ್ ನನ್ನ ಮುಂದೆ ಸತ್ತು ಬಿದ್ದಿದ್ದಾರೆ. ಅವರು ನಮ್ಮನ್ನು ಗಡಿಗೆ ಕಳುಹಿಸುತ್ತಾರೆ ಮತ್ತು ನಮ್ಮನ್ನು ಕೂಡ ಹತ್ಯೆ ಮಾಡಲಾಗುತ್ತದೆ ಎಂದು ನಾವು ಹೆದರುತ್ತೇವೆ. ನಮ್ಮನ್ನು ಬಿಡುಗಡೆ ಮಾಡಲು ನಾವು ರಷ್ಯಾದ ಕಮಾಂಡರ್‌ನ್ನು ಕೇಳಿದಾಗ, ನಾವು ಒಪ್ಪಂದಕ್ಕೆ ಸಹಿ ಹಾಕಿದ್ದೇವೆ ಎಂದು ಅವರು ಹೇಳುತ್ತಾರೆ. ದಯವಿಟ್ಟು ನಮ್ಮನ್ನು ಉಳಿಸಿ ಎಂದು ಸಮೀರ್ ಅಹ್ಮದ್ ಮನವಿಯನ್ನು ಮಾಡಿದ್ದಾರೆ.

ನಮ್ಮನ್ನು ಸೇನೆಯ ಭದ್ರತಾ ಸಹಾಯಕರಾಗಿ ನೇಮಿಸಲಾಗಿದೆ ಆದರೆ ಅವರು ರಷ್ಯಾ-ಉಕ್ರೇನ್ ಗಡಿಯಲ್ಲಿ ಹೋರಾಡಲು ನಮ್ಮನ್ನು ಒತ್ತಾಯಿಸುತ್ತಿದ್ದಾರೆ. ನಮ್ಮ ಸುರಕ್ಷತೆ ಮತ್ತು ಭದ್ರತೆಗಾಗಿ ನಾವು ಭಯಪಡುತ್ತೇವೆ. ಪದೇ ಪದೇ ಮನವಿ ಮಾಡಿದರೂ ಸರ್ಕಾರ ನಮ್ಮನ್ನು ರಕ್ಷಿಸಲು ಏನನ್ನೂ ಮಾಡುತ್ತಿಲ್ಲ ಎಂದು ಭಾರತೀಯ ಸಿಬ್ಬಂದಿಗಳು ಅಳಲನ್ನು ತೋಡಿಕೊಂಡಿದ್ದಾರೆ.

ಇದನ್ನು ಓದಿ: ಉತ್ತರಪ್ರದೇಶದಲ್ಲಿ ಮುಂದುವರಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿಯಿಂದ ಕೋಟ್ಯಾಧಿಪತಿಗಳ ತೆರಿಗೆ ಮನ್ನಾ; ರಾಹುಲ್‌ ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...