Homeಮುಖಪುಟ'ಸಂವಿಧಾನ, ಏಕತಾ ಸಮಾವೇಶ'ಕ್ಕೆ ಕರ್ನಾಟಕ ಸರಕಾರ ಆಹ್ವಾನಿಸಿದ್ದ UK ಪ್ರಾಧ್ಯಾಪಕಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

‘ಸಂವಿಧಾನ, ಏಕತಾ ಸಮಾವೇಶ’ಕ್ಕೆ ಕರ್ನಾಟಕ ಸರಕಾರ ಆಹ್ವಾನಿಸಿದ್ದ UK ಪ್ರಾಧ್ಯಾಪಕಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

- Advertisement -
- Advertisement -

‘ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶ’ದಲ್ಲಿ ಮಾತನಾಡಲು ಕರ್ನಾಟಕ ಸರ್ಕಾರದಿಂದ ಆಹ್ವಾನಿತರಾಗಿದ್ದ ಯುಕೆಯಲ್ಲಿನ ಭಾರತೀಯ ಮೂಲದ ಪ್ರಾಧ್ಯಾಪಕಿ ನಿತಾಶಾ ಕೌಲ್ ಅವರು ಬೆಂಗಳೂರಿನಲ್ಲಿ ಬಂದಿಳಿದ ನಂತರ ನನಗೆ ಭಾರತಕ್ಕೆ ಪ್ರವೇಶ ನಿರಾಕರಿಸಲಾಗಿದ್ದು, ವಿಮಾನ ನಿಲ್ದಾಣದಿಂದ  ವಾಪಾಸ್ಸು ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಪ್ರಾಧ್ಯಾಪಕಿ ನಿತಾಶಾ ಕೌಲ್, ಈ ಹಿಂದೆ ಆರೆಸ್ಸೆಸ್‌ ವಿರುದ್ಧ ತಾನು ಮಾತನಾಡಿದ್ದಕ್ಕೆ ತನಗೆ ಪ್ರವೇಶ ನಿರಾಕರಿಸಲಾಗಿದೆ. ಪ್ರಜಾಸತ್ತಾತ್ಮಕ ಮತ್ತು ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಮಾತನಾಡಿದ್ದಕ್ಕಾಗಿ ಭಾರತಕ್ಕೆ ಪ್ರವೇಶವನ್ನು ನಿರಾಕರಿಸಲಾಗಿದೆ. ಕರ್ನಾಟಕ ಸರ್ಕಾರದಿಂದ ಗೌರವಾನ್ವಿತ ಪ್ರತಿನಿಧಿಯಾಗಿ ನನ್ನನ್ನು ಸಮ್ಮೇಳನಕ್ಕೆ ಆಹ್ವಾನಿಸಲಾಗಿತ್ತು. ಆದರೆ ಕೇಂದ್ರ ಸರಕಾರವು ನನಗೆ ಪ್ರವೇಶವನ್ನು ನಿರಾಕರಿಸಿದೆ. ನನ್ನ ಎಲ್ಲಾ ದಾಖಲೆಗಳು ಮಾನ್ಯ ಮತ್ತು ಪ್ರಸ್ತುತವಾಗಿದೆ, ಆದರೂ ಪ್ರವೇಶ ನಿರಾಕರಿಸಲಾಗಿದೆ ಎಂದು ಯುಕೆಯ ವೆಸ್ಟ್‌ಮಿನಿಸ್ಟರ್ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ನಿತಾಶಾ ಕೌಲ್ ಅವರು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಅಧಿಕಾರಿಗಳು ದೆಹಲಿಯಿಂದ ಆದೇಶವಿದೆ ಎಂದು ಹೇಳಿದ್ದನ್ನು ಹೊರತುಪಡಿಸಿ ಯಾವುದೇ ನಿರ್ದಿಷ್ಟ ಕಾರಣವನ್ನು ನೀಡಿಲ್ಲ. ನನ್ನ ಪ್ರಯಾಣಕ್ಕೆ ಕರ್ನಾಟಕ ಸರಕಾರ ವ್ಯವಸ್ಥೆ ಮಾಡಿತ್ತು ಮತ್ತು ನನ್ನ ಬಳಿ ಅಧಿಕೃತ ಪತ್ರವಿತ್ತು. ನನಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ದೆಹಲಿಯಿಂದ ನನಗೆ ಯಾವುದೇ ಸೂಚನೆ ಅಥವಾ ಮಾಹಿತಿಯನ್ನು ಮುಂಚಿತವಾಗಿ ನೀಡಿಲ್ಲ ಎಂದು ಕೌಲ್ ಹೇಳಿಕೊಂಡಿದ್ದಾರೆ.

ನಾನು ಲಂಡನ್‌ನಿಂದ ಬೆಂಗಳೂರಿಗೆ ಬರಲು ವಿಮಾನದಲ್ಲಿ 12 ಗಂಟೆಗಳನ್ನು ಕಳೆದಿದ್ದೇನೆ, ಹಲವಾರು ಗಂಟೆಗಳ ಕಾಲ ಅವರು ನನ್ನನ್ನು ಅಲ್ಲಿ-ಇಲ್ಲಿ ಕರೆದೊಯ್ದರು, ಪ್ರಕ್ರಿಯೆಯ ಕುರಿತು ಯಾವುದೇ ಮಾಹಿತಿಯನ್ನು ಒದಗಿಸಲಿಲ್ಲ, ನಂತರ 24 ಗಂಟೆಗಳ ಕಾಲ ಹೋಲ್ಡಿಂಗ್ ಸೆಲ್‌ನಲ್ಲಿ ತನಗೆ ಆಹಾರ ಮತ್ತು ನೀರಿನ ವ್ಯವಸ್ಥೆ ಮಾಡಿಲ್ಲ ಮತ್ತು ವಿಮಾನ ನಿಲ್ದಾಣಕ್ಕೆ ಡಜನ್‌ಗಟ್ಟಲೆ ಕರೆಗಳನ್ನು ಮಾಡಿದರೂ ಒಂದು ದಿಂಬು ಮತ್ತು ಹೊದಿಕೆಯಂತಹ ಮೂಲಭೂತ ಸೌಲಭ್ಯಗಳನ್ನು ನಿರಾಕರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ನಿತಾಶಾ ಕೌಲ್ ಬೆಂಗಳೂರಿಗೆ ಬಂದಿಳಿದ 24 ಗಂಟೆಯ ನಂತರ, ಬ್ರಿಟಿಷ್ ಏರ್‌ವೇಸ್ ವಿಮಾನದ ಮೂಲಕ ಅವರನ್ನು ಲಂಡನ್‌ಗೆ ವಾಪಸ್‌ ಕಳುಹಿಸಲಾಗಿದೆ.

ಬಲಪಂಥೀಯ ಹಿಂದುತ್ವ ಟ್ರೋಲ್ಸ್‌ ವರ್ಷಗಳಿಂದ ನನಗೆ ಜೀವ ಬೆದರಿಕೆ, ಅತ್ಯಾಚಾರ, ನಿಷೇಧ ಇತ್ಯಾದಿ ಬೆದರಿಕೆ ಹಾಕಿದೆ. ಈ ಹಿಂದೆ, ನಾನು ಯುಕೆಯಲ್ಲಿ ವಾಸಿಸುತ್ತಿದ್ದರೂ ಮತ್ತು ನನ್ನ ಕೆಲಸಕ್ಕೆ ಯಾವುದೇ ಸಂಬಂಧವಿಲ್ಲದಿದ್ದರೂ ಸಹ ಅಧಿಕಾರಿಗಳು ನನ್ನ ವಯಸ್ಸಾದ ಅಸ್ವಸ್ಥ ತಾಯಿ ವಾಸಿಸುತ್ತಿರುವ ಕಾಶ್ಮೀರದ ಮನೆಗೆ ಬೆದರಿಸಲು ಪೊಲೀಸರನ್ನು ಕಳುಹಿಸಿದ್ದಾರೆ. ಅವರು ನಿವೃತ್ತ ಹಿಂದಿ ಶಿಕ್ಷಕಿ ಮತ್ತು ನನ್ನ ಏಕೈಕ ಬದುಕುಳಿದ ಪೋಷಕರು ಎಂದು ನಿತಾಶಾ ಕೌಲ್ ಟ್ವೀಟ್ ಮಾಡಿದ್ದಾರೆ.

ಜಮ್ಮು- ಕಾಶ್ಮೀರದಲ್ಲಿನ 370ನೇ ವಿಧಿ ರದ್ದುಗೊಂಡ ನಂತರ ಕಾಶ್ಮೀರದಲ್ಲಿನ ಮಾನವ ಹಕ್ಕುಗಳ ಉಲ್ಲಂಘನೆಯ ಕುರಿತು 2019ರಲ್ಲಿ ನಿತಾಶಾ ಕೌಲ್ ಅಮೆರಿಕಾದ ವಿದೇಶಾಂಗ ವ್ಯವಹಾರಗಳ ಸದನ ಸಮಿತಿಯೆದುರು ಸಾಕ್ಷ್ಯವನ್ನು ಹೇಳಿದ್ದರು.

ಇದನ್ನು ಓದಿ: ಭಾರತ್ ಜೋಡೋ ನ್ಯಾಯ ಯಾತ್ರೆ; ಪ್ರಜಾಪ್ರಭುತ್ವ-ಸಂವಿಧಾನ ಉಳಿಸುವುದೇ ನಮ್ಮೆಲ್ಲರ ದೊಡ್ಡ ಸವಾಲು: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...