Homeಮುಖಪುಟ'ಸಂವಿಧಾನ, ಏಕತಾ ಸಮಾವೇಶ'ಕ್ಕೆ ಕರ್ನಾಟಕ ಸರಕಾರ ಆಹ್ವಾನಿಸಿದ್ದ UK ಪ್ರಾಧ್ಯಾಪಕಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

‘ಸಂವಿಧಾನ, ಏಕತಾ ಸಮಾವೇಶ’ಕ್ಕೆ ಕರ್ನಾಟಕ ಸರಕಾರ ಆಹ್ವಾನಿಸಿದ್ದ UK ಪ್ರಾಧ್ಯಾಪಕಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

- Advertisement -
- Advertisement -

‘ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶ’ದಲ್ಲಿ ಮಾತನಾಡಲು ಕರ್ನಾಟಕ ಸರ್ಕಾರದಿಂದ ಆಹ್ವಾನಿತರಾಗಿದ್ದ ಯುಕೆಯಲ್ಲಿನ ಭಾರತೀಯ ಮೂಲದ ಪ್ರಾಧ್ಯಾಪಕಿ ನಿತಾಶಾ ಕೌಲ್ ಅವರು ಬೆಂಗಳೂರಿನಲ್ಲಿ ಬಂದಿಳಿದ ನಂತರ ನನಗೆ ಭಾರತಕ್ಕೆ ಪ್ರವೇಶ ನಿರಾಕರಿಸಲಾಗಿದ್ದು, ವಿಮಾನ ನಿಲ್ದಾಣದಿಂದ  ವಾಪಾಸ್ಸು ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಪ್ರಾಧ್ಯಾಪಕಿ ನಿತಾಶಾ ಕೌಲ್, ಈ ಹಿಂದೆ ಆರೆಸ್ಸೆಸ್‌ ವಿರುದ್ಧ ತಾನು ಮಾತನಾಡಿದ್ದಕ್ಕೆ ತನಗೆ ಪ್ರವೇಶ ನಿರಾಕರಿಸಲಾಗಿದೆ. ಪ್ರಜಾಸತ್ತಾತ್ಮಕ ಮತ್ತು ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಮಾತನಾಡಿದ್ದಕ್ಕಾಗಿ ಭಾರತಕ್ಕೆ ಪ್ರವೇಶವನ್ನು ನಿರಾಕರಿಸಲಾಗಿದೆ. ಕರ್ನಾಟಕ ಸರ್ಕಾರದಿಂದ ಗೌರವಾನ್ವಿತ ಪ್ರತಿನಿಧಿಯಾಗಿ ನನ್ನನ್ನು ಸಮ್ಮೇಳನಕ್ಕೆ ಆಹ್ವಾನಿಸಲಾಗಿತ್ತು. ಆದರೆ ಕೇಂದ್ರ ಸರಕಾರವು ನನಗೆ ಪ್ರವೇಶವನ್ನು ನಿರಾಕರಿಸಿದೆ. ನನ್ನ ಎಲ್ಲಾ ದಾಖಲೆಗಳು ಮಾನ್ಯ ಮತ್ತು ಪ್ರಸ್ತುತವಾಗಿದೆ, ಆದರೂ ಪ್ರವೇಶ ನಿರಾಕರಿಸಲಾಗಿದೆ ಎಂದು ಯುಕೆಯ ವೆಸ್ಟ್‌ಮಿನಿಸ್ಟರ್ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ನಿತಾಶಾ ಕೌಲ್ ಅವರು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಅಧಿಕಾರಿಗಳು ದೆಹಲಿಯಿಂದ ಆದೇಶವಿದೆ ಎಂದು ಹೇಳಿದ್ದನ್ನು ಹೊರತುಪಡಿಸಿ ಯಾವುದೇ ನಿರ್ದಿಷ್ಟ ಕಾರಣವನ್ನು ನೀಡಿಲ್ಲ. ನನ್ನ ಪ್ರಯಾಣಕ್ಕೆ ಕರ್ನಾಟಕ ಸರಕಾರ ವ್ಯವಸ್ಥೆ ಮಾಡಿತ್ತು ಮತ್ತು ನನ್ನ ಬಳಿ ಅಧಿಕೃತ ಪತ್ರವಿತ್ತು. ನನಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ದೆಹಲಿಯಿಂದ ನನಗೆ ಯಾವುದೇ ಸೂಚನೆ ಅಥವಾ ಮಾಹಿತಿಯನ್ನು ಮುಂಚಿತವಾಗಿ ನೀಡಿಲ್ಲ ಎಂದು ಕೌಲ್ ಹೇಳಿಕೊಂಡಿದ್ದಾರೆ.

ನಾನು ಲಂಡನ್‌ನಿಂದ ಬೆಂಗಳೂರಿಗೆ ಬರಲು ವಿಮಾನದಲ್ಲಿ 12 ಗಂಟೆಗಳನ್ನು ಕಳೆದಿದ್ದೇನೆ, ಹಲವಾರು ಗಂಟೆಗಳ ಕಾಲ ಅವರು ನನ್ನನ್ನು ಅಲ್ಲಿ-ಇಲ್ಲಿ ಕರೆದೊಯ್ದರು, ಪ್ರಕ್ರಿಯೆಯ ಕುರಿತು ಯಾವುದೇ ಮಾಹಿತಿಯನ್ನು ಒದಗಿಸಲಿಲ್ಲ, ನಂತರ 24 ಗಂಟೆಗಳ ಕಾಲ ಹೋಲ್ಡಿಂಗ್ ಸೆಲ್‌ನಲ್ಲಿ ತನಗೆ ಆಹಾರ ಮತ್ತು ನೀರಿನ ವ್ಯವಸ್ಥೆ ಮಾಡಿಲ್ಲ ಮತ್ತು ವಿಮಾನ ನಿಲ್ದಾಣಕ್ಕೆ ಡಜನ್‌ಗಟ್ಟಲೆ ಕರೆಗಳನ್ನು ಮಾಡಿದರೂ ಒಂದು ದಿಂಬು ಮತ್ತು ಹೊದಿಕೆಯಂತಹ ಮೂಲಭೂತ ಸೌಲಭ್ಯಗಳನ್ನು ನಿರಾಕರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ನಿತಾಶಾ ಕೌಲ್ ಬೆಂಗಳೂರಿಗೆ ಬಂದಿಳಿದ 24 ಗಂಟೆಯ ನಂತರ, ಬ್ರಿಟಿಷ್ ಏರ್‌ವೇಸ್ ವಿಮಾನದ ಮೂಲಕ ಅವರನ್ನು ಲಂಡನ್‌ಗೆ ವಾಪಸ್‌ ಕಳುಹಿಸಲಾಗಿದೆ.

ಬಲಪಂಥೀಯ ಹಿಂದುತ್ವ ಟ್ರೋಲ್ಸ್‌ ವರ್ಷಗಳಿಂದ ನನಗೆ ಜೀವ ಬೆದರಿಕೆ, ಅತ್ಯಾಚಾರ, ನಿಷೇಧ ಇತ್ಯಾದಿ ಬೆದರಿಕೆ ಹಾಕಿದೆ. ಈ ಹಿಂದೆ, ನಾನು ಯುಕೆಯಲ್ಲಿ ವಾಸಿಸುತ್ತಿದ್ದರೂ ಮತ್ತು ನನ್ನ ಕೆಲಸಕ್ಕೆ ಯಾವುದೇ ಸಂಬಂಧವಿಲ್ಲದಿದ್ದರೂ ಸಹ ಅಧಿಕಾರಿಗಳು ನನ್ನ ವಯಸ್ಸಾದ ಅಸ್ವಸ್ಥ ತಾಯಿ ವಾಸಿಸುತ್ತಿರುವ ಕಾಶ್ಮೀರದ ಮನೆಗೆ ಬೆದರಿಸಲು ಪೊಲೀಸರನ್ನು ಕಳುಹಿಸಿದ್ದಾರೆ. ಅವರು ನಿವೃತ್ತ ಹಿಂದಿ ಶಿಕ್ಷಕಿ ಮತ್ತು ನನ್ನ ಏಕೈಕ ಬದುಕುಳಿದ ಪೋಷಕರು ಎಂದು ನಿತಾಶಾ ಕೌಲ್ ಟ್ವೀಟ್ ಮಾಡಿದ್ದಾರೆ.

ಜಮ್ಮು- ಕಾಶ್ಮೀರದಲ್ಲಿನ 370ನೇ ವಿಧಿ ರದ್ದುಗೊಂಡ ನಂತರ ಕಾಶ್ಮೀರದಲ್ಲಿನ ಮಾನವ ಹಕ್ಕುಗಳ ಉಲ್ಲಂಘನೆಯ ಕುರಿತು 2019ರಲ್ಲಿ ನಿತಾಶಾ ಕೌಲ್ ಅಮೆರಿಕಾದ ವಿದೇಶಾಂಗ ವ್ಯವಹಾರಗಳ ಸದನ ಸಮಿತಿಯೆದುರು ಸಾಕ್ಷ್ಯವನ್ನು ಹೇಳಿದ್ದರು.

ಇದನ್ನು ಓದಿ: ಭಾರತ್ ಜೋಡೋ ನ್ಯಾಯ ಯಾತ್ರೆ; ಪ್ರಜಾಪ್ರಭುತ್ವ-ಸಂವಿಧಾನ ಉಳಿಸುವುದೇ ನಮ್ಮೆಲ್ಲರ ದೊಡ್ಡ ಸವಾಲು: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...