Homeಮುಖಪುಟಬಿಜೆಪಿ ಆಡಳಿತದ ಹರ್ಯಾಣದಲ್ಲಿ INLD ಪಕ್ಷದ ರಾಜ್ಯಾಧ್ಯಕ್ಷರನ್ನು ಗುಂಡಿಟ್ಟು ಹತ್ಯೆ: ಸಂಶಯಕ್ಕೆ ಕಾರಣವಾದ INDIA ಒಕ್ಕೂಟದ...

ಬಿಜೆಪಿ ಆಡಳಿತದ ಹರ್ಯಾಣದಲ್ಲಿ INLD ಪಕ್ಷದ ರಾಜ್ಯಾಧ್ಯಕ್ಷರನ್ನು ಗುಂಡಿಟ್ಟು ಹತ್ಯೆ: ಸಂಶಯಕ್ಕೆ ಕಾರಣವಾದ INDIA ಒಕ್ಕೂಟದ ಜೊತೆ ಮೈತ್ರಿ ಹಂತದಲ್ಲಿ ನಡೆದ ಘಟನೆ

- Advertisement -
- Advertisement -

ಭಾರತೀಯ ರಾಷ್ಟ್ರೀಯ ಲೋಕದಳದ ಹರ್ಯಾಣ ರಾಜ್ಯ ಘಟಕದ ಮುಖ್ಯಸ್ಥ ನಫೆ ಸಿಂಗ್ ರಾಥಿ ಮತ್ತು ಪಕ್ಷದ ಕಾರ್ಯಕರ್ತರೋರ್ವರನ್ನು ಕೆಲವು ಅಪರಿಚಿತ ದುಷ್ಕರ್ಮಿಗಳು ರಾಜ್ಯದ ಜಜ್ಜರ್ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. INDIA ಒಕ್ಕೂಟದ ಜೊತೆ INLD ಮೈತ್ರಿ ಮಾತಕತೆ ಹಂತದಲ್ಲಿ ನಡೆದ ಈ ಘಟನೆಯು ಹರ್ಯಾಣದಲ್ಲಿ ಕಾನೂನು ಸುವ್ಯವಸ್ಥೆ ಪ್ರಶ್ನೆಯನ್ನು ಹುಟ್ಟು ಹಾಕಿರುವುದರ ಜೊತೆಗೆ ಸಂಶಯಕ್ಕೆ ಕಾರಣವಾಗಿದೆ.

ಜಜ್ಜರ್‌ನ ಬಹದ್ದೂರ್‌ಗಢ ಪಟ್ಟಣದಲ್ಲಿ ಎಸ್‌ಯುವಿ ಕಾರಿನಲ್ಲಿ ತೆರಳುತ್ತಿದ್ದಾಗ ನಫೆ ಸಿಂಗ್ ರಾಥಿ ಮೇಲೆ ಫೈರಿಂಗ್‌ ಮಾಡಲಾಗಿದೆ. ಈ ದಾಳಿಯಲ್ಲಿ ನಫೆ ಸಿಂಗ್ ರಾಥಿ ಸೇರಿ ಇಬ್ಬರು ಮೃತಪಟ್ಟಿದ್ದು, ರಾಥಿಯ ಮೂವರು ಭದ್ರತಾ ಸಿಬ್ಬಂದಿಗಳಿಗೆ ಕೂಡ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ನಡೆದ ಈ ದಾಳಿಯಿಂದ ಬಿಜೆಪಿ ಆಡಳಿತದ ಹರ್ಯಾಣದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಿರೋಧ ಪಕ್ಷಗಳು ಟೀಕಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಐಎನ್‌ಎಲ್‌ಡಿ ನಾಯಕ ಅಭಯ್ ಚೌಟಾಲಾ, ರಾಥಿ ಅವರಿಗೆ ಜೀವ ಬೆದರಿಕೆ ಇದ್ದರೂ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ವಿಫಲವಾಗಿದೆ. ಘಟನೆಯ ಹೊಣೆ ಹೊತ್ತು ಹರ್ಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ರಾಜ್ಯ ಗೃಹ ಸಚಿವ ಅನಿಲ್ ವಿಜ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ನಮ್ಮ ರಾಜ್ಯ ಘಟಕದ ಮುಖ್ಯಸ್ಥರಾಗಿರುವ, ಎರಡು ಬಾರಿ ಶಾಸಕರಿಗಿದ್ದ ನಫೆ ಸಿಂಗ್ ರಾಥಿ ಅವರಿಗೆ ಭದ್ರತೆಯನ್ನು ಒದಗಿಸಲಾಗಿಲ್ಲ, ಅವರು ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಭದ್ರತೆಯನ್ನು ಒದಗಿಸಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ರಾಜ್ಯ ಗೃಹ ಸಚಿವರಿಗೆ ಲಿಖಿತವಾಗಿ ಮನವಿ ಸಲ್ಲಿಸಲಾಗಿತ್ತು, ಆದರೆ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಹರ್ಯಾಣದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಭೂಪಿಂದರ್ ಸಿಂಗ್ ಹೂಡಾ ಅವರು ಮಾಜಿ ಶಾಸಕರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದ್ದಾರೆ.

ಐಎನ್‌ಎಲ್‌ಡಿ ರಾಜ್ಯಾಧ್ಯಕ್ಷ ನಫೆ ಸಿಂಗ್ ರಾಥಿ ಅವರನ್ನು ಹರ್ಯಾಣದಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ ಸುದ್ದಿ ತುಂಬಾ ದುಃಖಕರವಾಗಿದೆ. ಇದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಪ್ರತಿಬಿಂಬಿಸುತ್ತದೆ. ಕಾನೂನು ಸುವ್ಯವಸ್ಥೆ ದಿವಾಳಿಯಾಗಿದೆ ಎಂಬುದನ್ನು ಈ ಘಟನೆ ಸ್ಪಷ್ಟಪಡಿಸಿದೆ. ಇಂದು ರಾಜ್ಯದಲ್ಲಿ ಯಾರೂ ಸುರಕ್ಷಿತವಾಗಿಲ್ಲ. ಅಗಲಿದ ಆತ್ಮಕ್ಕೆ ನನ್ನ ಶ್ರದ್ಧಾಂಜಲಿ ಮತ್ತು ಕುಟುಂಬಕ್ಕೆ ಆಳವಾದ ಸಂತಾಪ. ಅವರ ಕುಟುಂಬದ ಸದಸ್ಯರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ದಾಳಿಯಲ್ಲಿ ಗಾಯಗೊಂಡಿರುವ ಭದ್ರತಾ ಸಿಬ್ಬಂದಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಭೂಪಿಂದರ್ ಸಿಂಗ್ ಹೂಡಾ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ನಾಯಕ ಸುಶೀಲ್ ಗುಪ್ತಾ ಘಟನೆಯನ್ನು ಖಂಡಿಸಿ ಖಟ್ಟರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಹರ್ಯಾಣದಲ್ಲಿ ಕಾನೂನಿನ ಆಡಳಿತ ಕೊನೆಗೊಂಡಿದೆ ಮತ್ತು ಜಂಗಲ್ ರಾಜ್ ಮೇಲುಗೈ ಸಾಧಿಸಿದೆ. ಹರಿಯಾಣದಲ್ಲಿ ಇಂದು ಯಾರೂ ಸುರಕ್ಷಿತವಾಗಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಟಿಎಂಸಿ ನಾಯಕಿ ಮಹುವಾ ಮೋಯಿತ್ರಾ, ಹರ್ಯಾಣದ  ಐಎನ್‌ಎಲ್‌ಡಿ ಅಧ್ಯಕ್ಷ ಮತ್ತು ಮಾಜಿ ಶಾಸಕ ನಫೆ ಸಿಂಗ್ ರಾಥಿ ಅವರನ್ನು ಜಜ್ಜರ್ ಜಿಲ್ಲೆಯ ಬಹದ್ದೂರ್‌ಗಢದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ವರದಿಗಳ ಪ್ರಕಾರ, ಅಪರಿಚಿತ ದಾಳಿಕೋರರು ಅವರ ಕಾರಿನ ಮೇಲೆ 40-50 ಸುತ್ತಿನ ಬುಲೆಟ್‌ಗಳನ್ನು ಹಾರಿಸಿದ್ದಾರೆ. ಐಎನ್‌ಎಲ್‌ಡಿ ಕಾಂಗ್ರೆಸ್‌ನೊಂದಿಗೆ ಅಂತಿಮ ಮಾತುಕತೆಯಲ್ಲಿತ್ತು ಮತ್ತು ಶೀಘ್ರದಲ್ಲೇ ಇಂಡಿಯಾ ಮೈತ್ರಿಗೆ ಸೇರುವ ನಿರೀಕ್ಷೆಯಿತ್ತು. ಈ ಘಟನೆ ಹರಿಯಾಣದಲ್ಲಿ ಬಿಜೆಪಿ ಆಡಳಿತದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಹೇಳಿದ್ದಾರೆ.

ವೈದ್ಯರ ಹೇಳಿಕೆ:

ಐಎನ್‌ಎಲ್‌ಡಿ ನಾಯಕ ದಾಖಲಾಗಿರುವ ಬ್ರಹ್ಮ ಶಕ್ತಿ ಸಂಜೀವನಿ ಆಸ್ಪತ್ರೆಯ ಡಾ. ಮನೀಷ್ ಶರ್ಮಾ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮಾಜಿ ಶಾಸಕರು ಸೇರಿ ನಾಲ್ವರನ್ನು ಆಸ್ಪತ್ರೆಗೆ ಕರೆತರಲಾಯಿತು ಮತ್ತು ಇಬ್ಬರನ್ನು ಐಸಿಯುಗೆ ದಾಖಲಿಸಲಾಗಿತ್ತು. ಅವರಲ್ಲಿ ಇಬ್ಬರು ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದರು ಮತ್ತು ಮೃತಪಟ್ಟರು. ನಾವು ನಮ್ಮಿಂದಾಗುವ ಎಲ್ಲಾ ಪ್ರಯತ್ನವನ್ನು ಮಾಡಿದ್ದೇವೆ. ಇನ್ನು ಭುಜ, ತೊಡೆ ಮತ್ತು ಎದೆಯ ಎಡಭಾಗದಲ್ಲಿ ಗುಂಡೇಟಿನಿಂದ ಗಾಯಗೊಂಡಿರುವ ಇಬ್ಬರನ್ನು ಐಸಿಯುಗೆ ದಾಖಲಿಸಲಾಗಿದೆ. ಮಾಜಿ ಶಾಸಕ ನಫೆ ಸಿಂಗ್ ಮತ್ತು ಜೈಕಿಶನ್ ಎಂಬವರ ಕುತ್ತಿಗೆ, ಬೆನ್ನು ಮತ್ತು ಭುಜಕ್ಕೆ ಅನೇಕ ಸುತ್ತಿನ ಗುಂಡು ಹಾರಿಸಲಾಗಿದೆ. ಈ ರೀತಿಯ ದಾಳಿಯು ತೀವ್ರ ರಕ್ತಸ್ರಾವ ಮತ್ತು ಹೃದಯಾಘಾತಕ್ಕೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಸಂವಿಧಾನ, ರಾಷ್ಟ್ರೀಯ ಏಕತಾ ಸಮಾವೇಶ’ಕ್ಕೆ ಕರ್ನಾಟಕ ಸರಕಾರ ಆಹ್ವಾನಿಸಿದ್ದ ಯುಕೆಯ ಪ್ರಾಧ್ಯಾಪಕಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...