Homeಮುಖಪುಟಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ: ತೀರ್ಪು ಪ್ರಶ್ನಿಸಿದ್ದ ಅರ್ಜಿ ವಜಾ

ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ: ತೀರ್ಪು ಪ್ರಶ್ನಿಸಿದ್ದ ಅರ್ಜಿ ವಜಾ

- Advertisement -
- Advertisement -

ಜ್ಞಾನವಾಪಿ ಮಸೀದಿಯ ನೆಲ ಮಾಳಿಗೆಯಲ್ಲಿ ಹಿಂದೂ ಅರ್ಜಿದಾರರಿಗೆ ಪೂಜೆಗೆ ಅವಕಾಶ ಮಾಡಿಕೊಟ್ಟ ವಾರಣಾಸಿ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ಕಡೆಯವರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಸೋಮವಾರ ವಜಾಗೊಳಿಸಿದ್ದು, ಹಿಂದೂ ಪರರಿಗೆ ವ್ಯಾಸ್ ತೈಖಾನಾದಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಮಾಡಿಕೊಟ್ಟಿದೆ.

ವಾರಣಾಸಿ ನ್ಯಾಯಾಲಯವು ಜನವರಿ 31ರಂದು ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿರುವ ವಿಗ್ರಹಗಳ ಮುಂದೆ ಅರ್ಚಕರು ಪ್ರಾರ್ಥನೆ ಮಾಡಬಹುದು ಎಂದು ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಅಲಹಬಾದ್‌ ಹೈಕೋರ್ಟ್‌ ಮೊರೆ ಹೋಗಿತ್ತು. ಈ ಕುರಿತು ಫೆ. 15ರಂದು ಹೈಕೋರ್ಟ್‌ ವಿಚಾರಣೆ ನಡೆದಿದ್ದು, ಇಂದು ನ್ಯಾಯಮೂರ್ತಿ ರೋಹಿತ್‌ ರಂಜನ್‌ ಅಗರ್ವಾಲ್‌ ಅವರ ಪೀಠವು ತೀರ್ಪನ್ನು ನೀಡಿದೆ.

ಜ್ಞಾನವಾಪಿ ಮಸೀದಿಯ ನೆಲ ಮಾಳಿಗೆಯಲ್ಲಿ ಪೂಜೆ, ಧಾರ್ಮಿಕ ವಿಧಿವಿಧಾನಗಳು ನಡೆಯುತ್ತಿದ್ದುದನ್ನು ಹೈಕೋರ್ಟ್ ಕೂಡ ಒಪ್ಪಿಕೊಂಡು ಜಿಲ್ಲಾ ನ್ಯಾಯಾಲಯದ ಆದೇಶವನ್ನು ಇಂದು ಎತ್ತಿ ಹಿಡಿಯಲಾಗಿದೆ. ನ್ಯಾಯಾಲಯವು ನಮ್ಮ ಪರವಾಗಿ ತೀರ್ಪು ನೀಡಿದೆ. ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯ ಆಕ್ಷೇಪಣೆಯನ್ನು ಹೈಕೋರ್ಟ್ ವಜಾಗೊಳಿಸಿದೆ ಎಂದು ವಕೀಲ ಸುಭಾಷ್ ನಂದನ್ ಚತುರ್ವೇದಿ ಹೇಳಿದ್ದಾರೆ.

ಇದು ಸ್ವಾಗತಾರ್ಹ ನಿರ್ಧಾರ, ಹಿಂದೂಗಳು ಪೂಜೆ ಮಾಡುವ ಹಕ್ಕನ್ನು ಹೈಕೋರ್ಟ್ ಉಳಿಸಿಕೊಂಡಿದೆ. ಹಿಂದೂಗಳು 1993ರವರೆಗೆ ವ್ಯಾಸ್ ತೆಹಖಾನಾದಲ್ಲಿ ಪೂಜೆ ಸಲ್ಲಿಸುತ್ತಿದ್ದರು, ಆದರೆ ಅದನ್ನು ಕಾನೂನುಬಾಹಿರವಾಗಿ ನಿಲ್ಲಿಸಲಾಯಿತು. ಮುಸ್ಲಿಂ ಕಡೆಯವರು ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಮೊರೆ ಹೋಗಬಹುದು ಎಂದು ತೀರ್ಪಿನ ಬಗ್ಗೆ ವಕೀಲ ಹರಿಶಂಕರ್ ಜೈನ್ ಹೇಳಿದ್ದಾರೆ.

ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯನ್ನು ಪ್ರತಿನಿಧಿಸಿದ ಹಿರಿಯ ವಕೀಲರಾದ ಎಸ್‌ಎಫ್‌ಎ ನಖ್ವಿ ಮತ್ತು ಪುನೀತ್ ಗುಪ್ತಾ ಅವರು ವಾದವನ್ನು ಮಂಡಿಸಿದ್ದು, ಪೂಜಿಸುವ ಹಕ್ಕನ್ನು ಕೋರಿ ಸಲ್ಲಿಸಲಾದ ಸಿವಿಲ್ ಮೊಕದ್ದಮೆಯಲ್ಲಿ ಮಧ್ಯಂತರ ಆದೇಶದ ಮೂಲಕ ಅಂತಿಮ ಪರಿಹಾರವನ್ನು ನೀಡುವುದು ಕಾನೂನು ಕಾರ್ಯವಿಧಾನದ ಉಲ್ಲಂಘನೆಯಾಗಿದೆ ಎಂದು ವಾದಿಸಿದ್ದರು. ಹಿಂದೂಗಳ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲರಾದ ಸಿಎಸ್ ವೈದ್ಯನಾಥನ್ ಮತ್ತು ವಿಷ್ಣು ಶಂಕರ್ ಜೈನ್ ವಾದ ಮಂಡಿಸಿದ್ದರು.

ಮಸೀದಿ ಸಂಕೀರ್ಣ ಕುರಿತಂತೆ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ವರದಿ ಹೊರಬಿದ್ದ ನಂತರ ವಾರಣಾಸಿ ನ್ಯಾಯಾಲಯದ ತೀರ್ಪು ಪ್ರಕಟವಾಗಿತ್ತು. ಈ ಮಸೀದಿಯನ್ನು ಔರಂಗಜೇಬ್‌ ಆಡಳಿತದ ವೇಳೆ ಹಿಂದು ದೇವಳದ ಅವಶೇಷಗಳ ಮೇಲೆ ನಿರ್ಮಿಸಲಾಗಿತ್ತು ಎಂದು ವರದಿ ಹೇಳಿತ್ತು. ಆದರೆ ಅರ್ಜಿದಾರರ ವಾದವನ್ನು ಮಸೀದಿ ಸಮಿತಿ ಅಲ್ಲಗಳೆದಿತ್ತು ಹಾಗೂ ನೆಲಮಾಳಿಗೆಯಲ್ಲಿ ಯಾವುದೇ ಮೂರ್ತಿಗಳಿಲ್ಲ, ಆದ್ದರಿಂದ ಅಲ್ಲಿ 1993ರ ತನಕ ಯಾವುದೇ ಪೂಜೆ ಸಲ್ಲಿಸಲಾಗಿಲ್ಲ ಎಂದು ಹೇಳಿತ್ತು. ವಾರಣಾಸಿ ಕೋರ್ಟಿನ ತೀರ್ಪನ್ನು ಪ್ರಶ್ನಿಸಿ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದ ಬೆನ್ನಲ್ಲೇ ಸಮಿತಿ ಫೆಬ್ರವರಿ 2ರಂದು ಹೈಕೋರ್ಟ್‌ ಕದ ತಟ್ಟಿತ್ತು.

ಇದನ್ನು ಓದಿ: ದೇವಾಲಯಗಳ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿಲ್ಲ: ಬಿಜೆಪಿಯ ಸುಳ್ಳನ್ನು ಬಯಲು ಮಾಡಿದ ಅರ್ಚಕರ ಒಕ್ಕೂಟ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...