Homeಮುಖಪುಟಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ: ತೀರ್ಪು ಪ್ರಶ್ನಿಸಿದ್ದ ಅರ್ಜಿ ವಜಾ

ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ: ತೀರ್ಪು ಪ್ರಶ್ನಿಸಿದ್ದ ಅರ್ಜಿ ವಜಾ

- Advertisement -
- Advertisement -

ಜ್ಞಾನವಾಪಿ ಮಸೀದಿಯ ನೆಲ ಮಾಳಿಗೆಯಲ್ಲಿ ಹಿಂದೂ ಅರ್ಜಿದಾರರಿಗೆ ಪೂಜೆಗೆ ಅವಕಾಶ ಮಾಡಿಕೊಟ್ಟ ವಾರಣಾಸಿ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ಕಡೆಯವರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಸೋಮವಾರ ವಜಾಗೊಳಿಸಿದ್ದು, ಹಿಂದೂ ಪರರಿಗೆ ವ್ಯಾಸ್ ತೈಖಾನಾದಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಮಾಡಿಕೊಟ್ಟಿದೆ.

ವಾರಣಾಸಿ ನ್ಯಾಯಾಲಯವು ಜನವರಿ 31ರಂದು ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿರುವ ವಿಗ್ರಹಗಳ ಮುಂದೆ ಅರ್ಚಕರು ಪ್ರಾರ್ಥನೆ ಮಾಡಬಹುದು ಎಂದು ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಅಲಹಬಾದ್‌ ಹೈಕೋರ್ಟ್‌ ಮೊರೆ ಹೋಗಿತ್ತು. ಈ ಕುರಿತು ಫೆ. 15ರಂದು ಹೈಕೋರ್ಟ್‌ ವಿಚಾರಣೆ ನಡೆದಿದ್ದು, ಇಂದು ನ್ಯಾಯಮೂರ್ತಿ ರೋಹಿತ್‌ ರಂಜನ್‌ ಅಗರ್ವಾಲ್‌ ಅವರ ಪೀಠವು ತೀರ್ಪನ್ನು ನೀಡಿದೆ.

ಜ್ಞಾನವಾಪಿ ಮಸೀದಿಯ ನೆಲ ಮಾಳಿಗೆಯಲ್ಲಿ ಪೂಜೆ, ಧಾರ್ಮಿಕ ವಿಧಿವಿಧಾನಗಳು ನಡೆಯುತ್ತಿದ್ದುದನ್ನು ಹೈಕೋರ್ಟ್ ಕೂಡ ಒಪ್ಪಿಕೊಂಡು ಜಿಲ್ಲಾ ನ್ಯಾಯಾಲಯದ ಆದೇಶವನ್ನು ಇಂದು ಎತ್ತಿ ಹಿಡಿಯಲಾಗಿದೆ. ನ್ಯಾಯಾಲಯವು ನಮ್ಮ ಪರವಾಗಿ ತೀರ್ಪು ನೀಡಿದೆ. ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯ ಆಕ್ಷೇಪಣೆಯನ್ನು ಹೈಕೋರ್ಟ್ ವಜಾಗೊಳಿಸಿದೆ ಎಂದು ವಕೀಲ ಸುಭಾಷ್ ನಂದನ್ ಚತುರ್ವೇದಿ ಹೇಳಿದ್ದಾರೆ.

ಇದು ಸ್ವಾಗತಾರ್ಹ ನಿರ್ಧಾರ, ಹಿಂದೂಗಳು ಪೂಜೆ ಮಾಡುವ ಹಕ್ಕನ್ನು ಹೈಕೋರ್ಟ್ ಉಳಿಸಿಕೊಂಡಿದೆ. ಹಿಂದೂಗಳು 1993ರವರೆಗೆ ವ್ಯಾಸ್ ತೆಹಖಾನಾದಲ್ಲಿ ಪೂಜೆ ಸಲ್ಲಿಸುತ್ತಿದ್ದರು, ಆದರೆ ಅದನ್ನು ಕಾನೂನುಬಾಹಿರವಾಗಿ ನಿಲ್ಲಿಸಲಾಯಿತು. ಮುಸ್ಲಿಂ ಕಡೆಯವರು ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಮೊರೆ ಹೋಗಬಹುದು ಎಂದು ತೀರ್ಪಿನ ಬಗ್ಗೆ ವಕೀಲ ಹರಿಶಂಕರ್ ಜೈನ್ ಹೇಳಿದ್ದಾರೆ.

ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯನ್ನು ಪ್ರತಿನಿಧಿಸಿದ ಹಿರಿಯ ವಕೀಲರಾದ ಎಸ್‌ಎಫ್‌ಎ ನಖ್ವಿ ಮತ್ತು ಪುನೀತ್ ಗುಪ್ತಾ ಅವರು ವಾದವನ್ನು ಮಂಡಿಸಿದ್ದು, ಪೂಜಿಸುವ ಹಕ್ಕನ್ನು ಕೋರಿ ಸಲ್ಲಿಸಲಾದ ಸಿವಿಲ್ ಮೊಕದ್ದಮೆಯಲ್ಲಿ ಮಧ್ಯಂತರ ಆದೇಶದ ಮೂಲಕ ಅಂತಿಮ ಪರಿಹಾರವನ್ನು ನೀಡುವುದು ಕಾನೂನು ಕಾರ್ಯವಿಧಾನದ ಉಲ್ಲಂಘನೆಯಾಗಿದೆ ಎಂದು ವಾದಿಸಿದ್ದರು. ಹಿಂದೂಗಳ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲರಾದ ಸಿಎಸ್ ವೈದ್ಯನಾಥನ್ ಮತ್ತು ವಿಷ್ಣು ಶಂಕರ್ ಜೈನ್ ವಾದ ಮಂಡಿಸಿದ್ದರು.

ಮಸೀದಿ ಸಂಕೀರ್ಣ ಕುರಿತಂತೆ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ವರದಿ ಹೊರಬಿದ್ದ ನಂತರ ವಾರಣಾಸಿ ನ್ಯಾಯಾಲಯದ ತೀರ್ಪು ಪ್ರಕಟವಾಗಿತ್ತು. ಈ ಮಸೀದಿಯನ್ನು ಔರಂಗಜೇಬ್‌ ಆಡಳಿತದ ವೇಳೆ ಹಿಂದು ದೇವಳದ ಅವಶೇಷಗಳ ಮೇಲೆ ನಿರ್ಮಿಸಲಾಗಿತ್ತು ಎಂದು ವರದಿ ಹೇಳಿತ್ತು. ಆದರೆ ಅರ್ಜಿದಾರರ ವಾದವನ್ನು ಮಸೀದಿ ಸಮಿತಿ ಅಲ್ಲಗಳೆದಿತ್ತು ಹಾಗೂ ನೆಲಮಾಳಿಗೆಯಲ್ಲಿ ಯಾವುದೇ ಮೂರ್ತಿಗಳಿಲ್ಲ, ಆದ್ದರಿಂದ ಅಲ್ಲಿ 1993ರ ತನಕ ಯಾವುದೇ ಪೂಜೆ ಸಲ್ಲಿಸಲಾಗಿಲ್ಲ ಎಂದು ಹೇಳಿತ್ತು. ವಾರಣಾಸಿ ಕೋರ್ಟಿನ ತೀರ್ಪನ್ನು ಪ್ರಶ್ನಿಸಿ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದ ಬೆನ್ನಲ್ಲೇ ಸಮಿತಿ ಫೆಬ್ರವರಿ 2ರಂದು ಹೈಕೋರ್ಟ್‌ ಕದ ತಟ್ಟಿತ್ತು.

ಇದನ್ನು ಓದಿ: ದೇವಾಲಯಗಳ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿಲ್ಲ: ಬಿಜೆಪಿಯ ಸುಳ್ಳನ್ನು ಬಯಲು ಮಾಡಿದ ಅರ್ಚಕರ ಒಕ್ಕೂಟ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...