Homeಮುಖಪುಟತಮಿಳುನಾಡಿನಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ; 26 ವರ್ಷದ ದಲಿತ ಯುವಕನ ಕೊಲೆ

ತಮಿಳುನಾಡಿನಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ; 26 ವರ್ಷದ ದಲಿತ ಯುವಕನ ಕೊಲೆ

- Advertisement -
- Advertisement -

ತಮಿಳುನಾಡಿನ ಚೆನ್ನೈನಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಅತಿ ಹಿಂದುಳಿದ ಜಾತಿಗೆ (ಒಬಿಸಿ) ಸೇರಿದ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದ ಆದಿ ದ್ರಾವಿಡ (ಎಸ್‌ಸಿ) ಸಮುದಾಯದ ಯುವಕನನ್ನು ಪತ್ನಿ ಸಹೋದರನೆ ಹತ್ಯೆ ಮಾಡಿದ್ದಾನೆ.

ಶಂಕಿತ ಮರ್ಯಾದೆಗೇಡು ಹತ್ಯೆಯ ಪ್ರಕರಣದಲ್ಲಿ 26 ವರ್ಷದ ದಲಿತ ಯುವಕನನ್ನು ಚೆನ್ನೈನಲ್ಲಿ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಲಾಗಿದೆ. ಅಪರಾಧಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಸೋದರ ಸೇರಿದಂತೆ ಐವರು ಶಂಕಿತರನ್ನು ಈಗಾಗಲೇ ಬಂಧಿಸಲಾಗಿದೆ.

ಹತ್ಯೆಯಾದ ದಲಿತ ಯುವಕನು ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಪ್ರವೀಣ್ ಎಂದು ಗುರುತಿಸಲಾಗಿದೆ. ನಗರದ ಪಲ್ಲಿಕರಣೈ ಬಳಿ ಶನಿವಾರ ಈ ಘಟನೆ ನಡೆದಿದೆ; ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.

ಚೆನ್ನೈನ ಪಲ್ಲಿಕರಣೈನಲ್ಲಿರುವ ಖಾಸಗಿ ಬಾರ್‌ನಲ್ಲಿ ಪ್ರವೀಣ್‌ನನ್ನು ಅವನ ಹೆಂಡತಿಯ ಸಹೋದರ ಮತ್ತು ಅವನ ಸ್ನೇಹಿತರು ಕೊಲೆ ಮಾಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಪ್ರವೀಣ್ ಮತ್ತು ಶರ್ಮಿ ಅವರು ನವೆಂಬರ್ 2023ರಲ್ಲಿ ವಿವಾಹ ನೋಂದಾಯಿಸಿಕೊಳ್ಳುವ ಮೂಲಕ ಮದುವೆಯಾಗಿದ್ದರು. ಏಕೆಂದರೆ, ಅವರ ಕುಟುಂಬಗಳು ಅವರ ಅಂತರ್ಜಾತಿ ಸಂಬಂಧವನ್ನು ಒಪ್ಪಿರಲಿಲ್ಲ. ಪ್ರವೀಣ್ ಪರಿಶಿಷ್ಟ ಜಾತಿಯಡಿ ಬರುವ ಆದಿ ದ್ರಾವಿಡರ್ ಸಮುದಾಯಕ್ಕೆ ಸೇರಿದವರಾಗಿದ್ದರೆ, ಶರ್ಮಿ ಒಬಿಸಿ ಅಡಿಯಲ್ಲಿ ಬರುವ ಯಾದವ ಜಾತಿಗೆ ಸೇರಿದವರು.

ಶರ್ಮಿಯ ಸಹೋದರ ದಿನೇಶ್ ತನ್ನ ನಾಲ್ವರು ಸ್ನೇಹಿತರೊಂದಿಗೆ ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ಪಲ್ಲಿಕರಣೈನಲ್ಲಿರುವ ಖಾಸಗಿ ಬಾರ್‌ಗೆ ಭೇಟಿ ನೀಡಿದ್ದರು, ಅಲ್ಲಿ ಪ್ರವೀಣ್ ಕೂಡ ಇದ್ದರು. ಗುಂಪು ಪ್ರವೀಣ್ ಬಳಿಗೆ ಬಂದಿತು ಮತ್ತು ವಾಗ್ವಾದ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ದಿನೇಶ್ ಮತ್ತು ಆತನ ಸ್ನೇಹಿತರು ತಮ್ಮೊಂದಿಗೆ ತಂದಿದ್ದ ಚಾಕುಗಳನ್ನು ಹೊರತೆಗೆದು ಪ್ರವೀಣ್ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ತೀವ್ರವಾಗಿ ಗಾಯಗೊಂಡ ಪ್ರವೀಣ್‌ನನ್ನು ಕ್ರೋಂಪೇಟೆಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಎಸ್ 10 ಪಲ್ಲಿಕರನೈ ಪೊಲೀಸ್ ಠಾಣೆಯಲ್ಲಿ ದಿನೇಶ್ ಮತ್ತು ಇತರ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಎಲ್ಲ ಐವರು ಆರೋಪಿಗಳನ್ನು ಫೆಬ್ರವರಿ 25 ರಂದು ಮಂಬಕ್ಕಂ ಬಳಿ ಪೊಲೀಸರು ಬಂಧಿಸಿದ್ದರು.

ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದು, ಐವರು ಆರೋಪಿಗಳಾದ ಸ್ಟೀಫನ್ ಕುಮಾರ್, ಜೋತಿ ಲಿಂಗಂ, ಶ್ರೀರಾಮ್, ಅಶೋಕ್, ವಿಷ್ಣು ರಾಜ್ ಮತ್ತು ದಿನೇಶ್ ಅವರನ್ನು ಬಂಧಿಸಿದ್ದಾರೆ. ನಾಲ್ಕು ತಿಂಗಳ ಹಿಂದೆ ಪ್ರವೀಣ್ ಶರ್ಮಿಳಾಳನ್ನು ಆಕೆಯ ಪೋಷಕರ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.

ಶನಿವಾರ ಊಟ ಖರೀದಿಸಲು ಪ್ರವೀಣ್ ಮನೆಯಿಂದ ಹೊರಬಂದಿದ್ದರು, ಅದೇ ಸಮಯಕ್ಕೆ ಅಲ್ಲಿಗೆ ಬಂದಿದ್ದ ಶರ್ಮಿಳಾ ಅವರ ಸಹೋದರ ದಿನೇಶ್ ಮತ್ತು ಇತರ ನಾಲ್ವರು ಆರೋಪಿಗಳು ಆತನನ್ನು ಸುತ್ತುವರೆದು ಹಲ್ಲೆ ನಡೆಸಿದ್ದಾರೆ.

ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ ಪ್ರವೀಣ್ ಅವರ ತಂದೆ ಗೋಪಿ, ‘ನನ್ನ ಮಗ ಊಟ ಖರೀದಿಸಲು ಹೊರಗೆ ಹೋಗಿದ್ದ; ಎರಡು ಗಂಟೆಯಾದರೂ ಅವನು ಹಿಂತಿರುಗದಿದ್ದಾಗ, ನಾನು ಚಿಂತೆ ಮಾಡಲು ಪ್ರಾರಂಭಿಸಿದೆ. ನನ್ನ ಸೊಸೆ ಅಳಲು ಪ್ರಾರಂಭಿಸಿದಾಗ ಮಾತ್ರ, ಏನೋ ಆಗಿದೆ ಎಂದು ನನಗೆ ಅರ್ಥವಾಯಿತು. ಕೊಲೆಯಲ್ಲಿ ಭಾಗಿಯಾದ ಅವರೆಲ್ಲರಿಗೂ ಶಿಕ್ಷೆಯಾಗಬೇಕೆಂದು ನಾನು ಬಯಸುತ್ತೇನೆ. ನನ್ನ ಸೊಸೆಗಾಗಿ ಸರ್ಕಾರ ಏನಾದರೂ ಮಾಡಬೇಕೆಂದು ನಾನು ಬಯಸುತ್ತೇನೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ; ದೇವಾಲಯಗಳ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿಲ್ಲ: ಬಿಜೆಪಿಯ ಸುಳ್ಳನ್ನು ಬಯಲು ಮಾಡಿದ ಅರ್ಚಕರ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...