Homeಮುಖಪುಟಹರ್ಯಾಣ: INLD ರಾಜ್ಯಾಧ್ಯಕ್ಷರ ಹತ್ಯೆಯ ಹಿಂದೆ ಬಿಜೆಪಿ ನಾಯಕ: 12 ಮಂದಿ ವಿರುದ್ಧ ಎಫ್‌ಐಆರ್‌

ಹರ್ಯಾಣ: INLD ರಾಜ್ಯಾಧ್ಯಕ್ಷರ ಹತ್ಯೆಯ ಹಿಂದೆ ಬಿಜೆಪಿ ನಾಯಕ: 12 ಮಂದಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ) ರಾಜ್ಯಾಧ್ಯಕ್ಷ ಮತ್ತು ಮಾಜಿ ಶಾಸಕ ನಫೆ ಸಿಂಗ್ ರಾಥಿ ಅವರನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ಬಹದ್ದೂರ್‌ಗಢದ ಮಾಜಿ ಬಿಜೆಪಿ ಶಾಸಕ ನರೇಶ್ ಕೌಶಿಕ್ ಸೇರಿದಂತೆ 12 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮಾಜಿ ಬಿಜೆಪಿ ಶಾಸಕ ನರೇಶ್ ಕೌಶಿಕ್, ಬಹದ್ದೂರ್‌ಗಢ ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ಸರೋಜ್ ರಥೀ ಅವರ ಪತಿ ರಮೇಶ್ ರಾಥಿ, ಅವರ ನಿಕಟವರ್ತಿಗಳಾದ ಕರಂಬಿರ್ ರಥಿ ಮತ್ತು ಕಮಲ್ ರಥಿ, ಮಾಜಿ ಸಚಿವ ಮಾಂಗೆ ರಾಮ್ ರಥಿ ಅವರ ಪುತ್ರ ಸತೀಶ್ ನಂಬರ್‌ದಾರ್, ಮೊಮ್ಮಗ ಗೌರವ್, ರಾಹುಲ್ ಮತ್ತು ಐವರು ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಕೊಲೆ ಮತ್ತು ಪಿತೂರಿ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ಬಂಧನಕ್ಕೆ ಪಟ್ಟು:

ಆರೋಪಿಗಳನ್ನು ಬಂಧಿಸುವವರೆಗೆ ದಾಳಿಯಲ್ಲಿ ಹತರಾದ ಐಎನ್‌ಎಲ್‌ಡಿ ನಾಯಕ ನಫೆ ಸಿಂಗ್ ರಾಥಿ ಮತ್ತು ಅವರ ಭದ್ರತಾ ತಂಡದ ಸದಸ್ಯ ಜೈ ಕಿಶನ್ ಅವರ ಶವಗಳನ್ನು ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ನಫೆ ಸಿಂಗ್ ಅವರ ಕುಟುಂಬದ ಸದಸ್ಯರು ಮತ್ತು ಬೆಂಬಲಿಗರು ಪಟ್ಟು ಹಿಡಿದಿದ್ದಾರೆ. ಮೃತರ ಶವಗಳನ್ನು ಇರಿಸಲಾಗಿರುವ ಬಹದ್ದೂರ್‌ಗಢ ಸಿವಿಲ್ ಆಸ್ಪತ್ರೆಯ ಮುಂಭಾಗದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಎಫ್‌ಐಆರ್‌:

ಘಟನೆಯ ಬಗ್ಗೆ ನಫೆ ಸಿಂಗ್ ರಾಥಿ ಅವರ ಸೋದರಳಿಯ ಮತ್ತು ಚಾಲಕ ರಾಕೇಶ್ ಅವರ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ. ರಾಕೇಶ್ ಅವರು ಬಿಳಿ ಬಣ್ಣದ ಫಾರ್ಚುನರ್ ಕಾರು ಚಲಾಯಿಸುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ನಫೆ ಸಿಂಗ್ ಮತ್ತು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇತರರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರಿನ ಪ್ರಕಾರ, ಐಎನ್‌ಎಲ್‌ಡಿ ನಾಯಕ ಮುಂಭಾಗದ ಸೀಟಿನಲ್ಲಿ ಕುಳಿತಿದ್ದರೆ, ಅವರ ಇಬ್ಬರು ಭದ್ರತಾ ಸಿಬ್ಬಂದಿಗಳಾದ ಸಂಜೀತ್ ಮತ್ತು ಜೈ ಕಿಶನ್ ಹಿಂದೆ ಇದ್ದರು. ಕಾರು ಹಿಂಬಾಲಿಸುತ್ತಿರುವುದನ್ನು ಗಮನಿಸಿದ ರಾಕೇಶ್ ಅವರು ಕಾರನ್ನು ವೇಗಗೊಳಿಸಲು ಪ್ರಯತ್ನಿಸಿದರು ಆದರೆ ಅವರು ದಾರಿಯಲ್ಲಿದ್ದ ರೈಲ್ವೆ ಕ್ರಾಸಿಂಗ್‌ನ ಗೇಟ್ ಮುಚ್ಚಿದ್ದರಿಂದ ನಿಲ್ಲಿಸಬೇಕಾಯಿತು. ಅವರು ಕಾರನ್ನು ನಿಲ್ಲಿಸಿದಾಗ, ಪಿಸ್ತೂಲುಗಳೊಂದಿಗೆ ಶಸ್ತ್ರಸಜ್ಜಿತವಾದ ಐವರು ದಾಳಿಕೋರರು ಹೊರಬಂದು ಗುಂಡಿನ ದಾಳಿಯನ್ನು ನಡೆಸಿದ್ದಾರೆ.

ದುಷ್ಕರ್ಮಿಗಳು ಈ ವೇಳೆ ಸತೀಶ್, ಕರಂಬಿರ್ ರಥಿ ಮತ್ತು ನರೇಶ್ ಕೌಶಿಕ್ ಜೊತೆ ದ್ವೇಷ ಬೆಳೆಸಿಕೊಂಡಿದ್ದಕ್ಕೆ ಪಾಠ ಕಲಿಸುತ್ತೇವೆಂದು ಗುಂಡಿನ ದಾಳಿ ನಡೆಸುತ್ತೇವೆ ಎಂದು ಹೇಳಿ ಫೈರಿಂಗ್‌ ಮಾಡಿದ್ದಾರೆ. ಅವರಲ್ಲೊಬ್ಬ ನನ್ನ ಕಡೆಗೆ ಬಂದು ನಾನು ನಿನ್ನನ್ನು ಜೀವಂತವಾಗಿ ಬಿಡುತ್ತಿದ್ದೇನೆ. ನರೇಶ್ ಕೌಶಿಕ್, ಕರಂಬಿರ್ ರಾಥಿ, ಸತೀಶ್ ರಾಥಿ, ಗೌರವ್ ರಾಥಿ, ರಾಹುಲ್ ಮತ್ತು ಕಮಲ್ ವಿರುದ್ಧ ನ್ಯಾಯಾಲಯಕ್ಕೆ ಹೋದರೆ ಅವರನ್ನು ಕೂಡ ಕೊಲ್ಲಲಾಗುವುದು ಎಂದು ಅವರ ಕುಟುಂಬಕ್ಕೆ ಹೇಳಿ ಎಂದು ಹೇಳಿರುವುದಾಗಿ ರಾಕೇಶ್‌ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನನ್ನ ಚಿಕ್ಕಪ್ಪ ನಫೆ ಸಿಂಗ್ ಮತ್ತು ಜೈ ಕಿಶನ್ ಆ ವೇಳೆಗೆ ಮೃತಪಟ್ಟಿರುವುದನ್ನು ನಾನು ನೋಡಿದೆ, ಆದರೆ ಸಂಜೀತ್ ಗಂಭೀರ ಸ್ಥಿತಿಯಲ್ಲಿದ್ದರು. ವ್ಯಕ್ತಿಯೊಬ್ಬರು ಅವರನ್ನು ಬಹದ್ದೂರ್‌ಗಢದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ರಾಕೇಶ್ ಹೇಳಿದ್ದಾರೆ. ತನ್ನ ದೂರಿನಲ್ಲಿ ಉಲ್ಲೇಖಿಸಿರುವ ವ್ಯಕ್ತಿಗಳು ಸಂಚು ರೂಪಿಸಿ ಕೊಲೆಯ ಹಿಂದೆ ಇದ್ದಾರೆ ಎಂದು ಅವರು ಪೊಲೀಸರಿಗೆ ತಿಳಿಸಿದ್ದಾರೆ.

ಹರ್ಯಾಣದಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಇಂದು ಬೆಳಿಗ್ಗೆ ಘಟನೆಯ ಬಗ್ಗೆ ಸಂತಾಪ ಸೂಚನೆಗಳ ಸಂದರ್ಭದಲ್ಲಿ ಹರ್ಯಾಣದಲ್ಲಿ ಪ್ರತಿಪಕ್ಷಗಳು ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದೆ. ನಫೆ ಸಿಂಗ್ ಅವರ ಹತ್ಯೆಯನ್ನು ರಾಜಕೀಯ ಹತ್ಯೆ ಎಂದು ಕರೆದ ಪ್ರತಿಪಕ್ಷಗಳು ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ತನಿಖೆಗೆ ಒತ್ತಾಯಿಸಿದೆ.

ಜನವರಿ 2023ರಲ್ಲಿ ಮಾಜಿ ಸಚಿವ ಮಂಗೇ ರಾಮ್ ಅವರ ಪುತ್ರ, ಸ್ಥಳೀಯ ಬಿಜೆಪಿ ನಾಯಕ ಜಗದೀಶ್ ನಂಬರ್‌ದಾರ್ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ನಫೆ ಸಿಂಗ್ ಮತ್ತು ಇತರ ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಮೃತರ ಮಗ ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದರೆ, ರಾಜಕೀಯ ಪಿತೂರಿಯ ಭಾಗವಾಗಿ ಅವರ ವಿರುದ್ದ ಎಫ್‌ಐಆರ್ ದಾಖಲಿಸಲಾಗಿತ್ತು ಎಂದು ಐಎನ್‌ಎಲ್‌ಡಿ ಹಿರಿಯ ನಾಯಕ ಅಭಯ್ ಸಿಂಗ್ ಚೌಟಾಲಾ ಆರೋಪಿಸಿದ್ದರು.

ಇದನ್ನು ಓದಿ: ಬಿಜೆಪಿ ಆಡಳಿತದ ಹರ್ಯಾಣದಲ್ಲಿ INLD ಪಕ್ಷದ ರಾಜ್ಯಾಧ್ಯಕ್ಷರನ್ನು ಗುಂಡಿಟ್ಟು ಹತ್ಯೆ: ಸಂಶಯಕ್ಕೆ ಕಾರಣವಾದ INDIA ಒಕ್ಕೂಟದ ಜೊತೆ ಮೈತ್ರಿ ಹಂತದಲ್ಲಿ ನಡೆದ ಘಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...