Homeಅಂತರಾಷ್ಟ್ರೀಯಗಾಝಾದಲ್ಲಿ ಮುಂದುವರಿದ ಹತ್ಯಾಕಾಂಡ: ಪ್ಯಾಲೆಸ್ತೀನ್ ಪ್ರಧಾನಿ ಮುಹಮ್ಮದ್ ಶ್ತಾಯಿಹ್ ರಾಜೀನಾಮೆ

ಗಾಝಾದಲ್ಲಿ ಮುಂದುವರಿದ ಹತ್ಯಾಕಾಂಡ: ಪ್ಯಾಲೆಸ್ತೀನ್ ಪ್ರಧಾನಿ ಮುಹಮ್ಮದ್ ಶ್ತಾಯಿಹ್ ರಾಜೀನಾಮೆ

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್ ಹತ್ಯಾಕಾಂಡವನ್ನು ಮುಂದುವರಿಸಿರುವ ಮಧ್ಯೆ ಪ್ಯಾಲೆಸ್ತೀನ್ ಪ್ರಧಾನಿ ಮುಹಮ್ಮದ್ ಶ್ತಾಯಿಹ್ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ನ ಆಕ್ರಮಣ ಹಾಗೂ ವೆಸ್ಟ್‌ ಬ್ಯಾಂಕ್‌ ಮತ್ತು ಜೆರುಸಲೇಮ್‌ನಲ್ಲಿ ಪರಿಸ್ಥಿತಿ ಉಲ್ಬಣ, ಯುದ್ಧದ ನಂತರ ರಾಜಕೀಯ ವ್ಯವಸ್ಥೆಗಳ ಬಗ್ಗೆ ಪ್ಯಾಲೆಸ್ತೀನಿಯಾದವರಲ್ಲಿ ಒಮ್ಮತವನ್ನು ರೂಪಿಸಲು ಅವಕಾಶ ಮಾಡಿಕೊಡಲು ತಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಪ್ಯಾಲೆಸ್ತೀನ್ ಪ್ರಧಾನಿ ಮುಹಮ್ಮದ್ ಶ್ತಾಯಿಹ್ ಸೋಮವಾರ ಘೋಷಿಸಿದ್ದಾರೆ.

ಶ್ತಾಯಿಹ್ ಅವರ ರಾಜೀನಾಮೆಯನ್ನು ಅಬ್ಬಾಸ್ ಅವರು ಇನ್ನೂ ಅಂಗೀಕರಿಸಬೇಕು, ಬೇರೆ ಪ್ರಧಾನಿ  ನೇಮಕಗೊಳ್ಳುವವರೆಗೆ ಉಸ್ತುವಾರಿಯಾಗಿ ಉಳಿಯಲು ಅವರನ್ನು ಕೇಳಬಹುದು ಎಂದು ವರದಿಗಳು ಉಲ್ಲೇಖಿಸಿದೆ.

2019ರಲ್ಲಿ ಅಧಿಕಾರ ವಹಿಸಿಕೊಂಡಿದ್ದ ಮುಹಮ್ಮದ್ ಶ್ತಾಯಿಹ್ ಅರ್ಥಶಾಸ್ತ್ರಜ್ಞರು ಕೂಡ ಹೌದು. ಮುಹಮ್ಮದ್ ಶ್ತಾಯಿಹ್ ರಾಜೀನಾಮೆಯನ್ನು ಘೋಷಿಸಿದ್ದಾರೆ. ಗಾಝಾ ಪಟ್ಟಿಯಲ್ಲಿ ಯುದ್ಧ, ನರಮೇಧ ಮತ್ತು ಹಸಿವಿನಿದ ಜನರು ತತ್ತರಿಸಿರುವ ಮಧ್ಯೆ ರಾಜೀನಾಮೆ ನೀಡುವ ನಿರ್ಧಾರವು ಹೊರ ಬಂದಿದೆ.

ಮುಂದಿನ ಹಂತ ಮತ್ತು ಅದರ ಸವಾಲುಗಳಿಗೆ ಹೊಸ ಸರ್ಕಾರಿ ಮತ್ತು ರಾಜಕೀಯ ವ್ಯವಸ್ಥೆಗಳ ಅಗತ್ಯವಿದೆ ಎಂದು ನಾನು ಭಾವಿಸುತ್ತೇನೆ. ಪ್ಯಾಲೆಸ್ತೀನ್‌ನ ಏಕತೆ ಮತ್ತು ಪ್ಯಾಲೆಸ್ತೀನ್‌ ಭೂ ವಿಚಾರದಲ್ಲಿ ಪ್ಯಾಲೆಸ್ತೀನ್‌-ಪ್ಯಾಲೆಸ್ತೀನ್‌ ಒಮ್ಮತದ ಅಗತ್ಯವಿದೆ ಎಂದು ಮುಹಮ್ಮದ್ ಶ್ತಾಯಿಹ್ ಹೇಳಿದ್ದಾರೆ.

ಯುದ್ಧದ ಸ್ಥಿತಿ ಬಳಿಕ ಪ್ಯಾಲೆಸ್ತೀನ್‌ನ್ನು ಆಳುವ ರಾಜಕೀಯ ರಚನೆಯ ಬಗ್ಗೆ ಕೆಲಸವನ್ನು ಪ್ರಾರಂಭಿಸಲು US ಒತ್ತಡ ಹೆಚ್ಚುತ್ತಿರುವ ಮಧ್ಯೆ ಶ್ತಾಯಿಹ್ ಅವರ ರಾಜೀನಾಮೆ ಹೊರ ಬಿದ್ದಿದೆ. ಆದರೆ ಇಸ್ರೇಲ್‌ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಹಲವಾರು ಸಂದರ್ಭಗಳಲ್ಲಿ ಅಬ್ಬಾಸ್ ಅವರು ಗಾಝಾವನ್ನು ನಿಯಂತ್ರಿಸುವ ಬಗೆಗೆ ವಿರೋಧಿಸಿದೆ. ಪ್ಯಾಲೆಸ್ತೀನ್ ರಾಷ್ಟ್ರದ ಸ್ಥಾಪನೆಯಿಂದ ಶಾಂತಿ ಸ್ಥಾಪನೆಯಲ್ಲಿ ವಿಫಲವಾಗುವುದರ ಜೊತೆಗೆ ಇಸ್ರೇಲ್ ರಾಜ್ಯಕ್ಕೆ ಅಪಾಯವನ್ನುಂಟುಮಾಡುತ್ತದೆ ಎಂದು ನೆತನ್ಯಾಹು ಹೇಳಿದ್ದರು.

ಅ.7ರಂದು ಇಸ್ರೇಲ್‌- ಪ್ಯಾಲೆಸ್ತೀನ್‌ ಮೇಲೆ ಯುದ್ಧ ಘೋಷಿಸಿದ ಬಳಿಕ ಗಾಝಾದಲ್ಲಿ 30,000 ನಾಗರಿಕರನ್ನು ಹತ್ಯೆ ಮಾಡಿದೆ. ಹತ್ಯೆಯಾದವರಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 60,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಲಕ್ಷಾಂತರ ಮನೆಗಳು ಧ್ವಂಸಗೊಂಡಿದ್ದು, ಜನರು ನಿರಾಶ್ರಿತರಾಗಿ ತಾತ್ಕಾಲಿಕ ಶಿಬಿರಗಳಲ್ಲಿ ದಿನದೂಡುತ್ತಿದ್ದಾರೆ. ಶಿಬಿರಗಳಲ್ಲಿ ಆಹಾರ, ನೀರು ವೈದ್ಯಕೀಯ ಸೌಲಭ್ಯಗಳ ಸಮಸ್ಯೆಯಿಂದ ಜನರ ಜೀವನ ನರಕ ಸದೃಶವಾಗಿದೆ.

ಇದನ್ನು ಓದಿ: ಗಾಝಾ ಹತ್ಯಾಕಾಂಡವನ್ನು ಖಂಡಿಸಿ ಇಸ್ರೇಲ್‌ ರಾಯಭಾರ ಕಚೇರಿಯೆದುರು ಬೆಂಕಿ ಹಚ್ಚಿಕೊಂಡ ಅಮೆರಿಕದ ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...