Homeಮುಖಪುಟ'ಮರಾಠ ಸಮುದಾಯಕ್ಕಿಂತ ಯಾರೂ ದೊಡ್ಡವರಲ್ಲ..'; ಮಹಾರಾಷ್ಟ್ರ ಸಿಎಂ-ಡಿಸಿಎಂ ವಿರುದ್ಧ ಜಾರಂಗೆ ವಾಗ್ದಾಳಿ

‘ಮರಾಠ ಸಮುದಾಯಕ್ಕಿಂತ ಯಾರೂ ದೊಡ್ಡವರಲ್ಲ..’; ಮಹಾರಾಷ್ಟ್ರ ಸಿಎಂ-ಡಿಸಿಎಂ ವಿರುದ್ಧ ಜಾರಂಗೆ ವಾಗ್ದಾಳಿ

- Advertisement -
- Advertisement -

ಮರಾಠಾ ಮೀಸಲಾತಿಗಾಗಿ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ನಡೆಸುತ್ತಿರುವ ಆಂದೋಲನದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಪರಿಗಣಿಸಿ, ಜಿಲ್ಲಾಡಳಿತ ಹೊರಡಿಸಿದ ಆದೇಶ ಹೊರಡಿಸಿದ್ದು, ಮಹಾರಾಷ್ಟ್ರದ ಜಲ್ನಾ, ಬೀಡ್ ಮತ್ತು ಛತ್ರಪತಿ ಸಂಭಾಜಿನಗರ ಜಿಲ್ಲೆಗಳಲ್ಲಿ ಇಂಟರ್ನೆಟ್ ನಿಷೇಧದ ಜೊತೆಗೆ ಕರ್ಫ್ಯೂ ವಿಧಿಸಲಾಗಿದೆ.

ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮುಂಬೈಗೆ ತೆರಳಿ ಪ್ರತಿಭಟನೆ ನಡೆಸುವುದಾಗಿ ಮರಾಠ ಕೋಟಾ ಮೀಸಲಾತಿ ಪರ ಹೋರಾಟಗಾರ ಮನೋಜ್ ಜಾರಂಗೆ ಭಾನುವಾರ ಘೋಷಿಸಿದ್ದಾರೆ.

ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಜಲ್ನಾದ ಅಂತರವಾಲಿ ಸಾರತಿ ಗ್ರಾಮದಿಂದ ಅವರು ಮುಂಬೈಗೆ ಹೋಗದಂತೆ ತಡೆಯಲು ಪೊಲೀಸರು ಸಜ್ಜಾಗಿದ್ದಾರೆ. ಭಾರೀ ಜನಸಂದಣಿಯಿಂದಾಗಿ ಧುಲೆ-ಮುಂಬೈ ಹೆದ್ದಾರಿ ಮತ್ತು ಇತರ ಹತ್ತಿರದ ಪ್ರದೇಶಗಳಲ್ಲಿ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆಯಿದೆ. ಮನ್ನೆಚ್ಚರಿಕೆ ಕ್ರಮವಾಗಿ, ಕಾನೂನು ಸುವ್ಯವಸ್ಥೆಯನ್ನು ಪರಿಗಣಿಸಿ ಕರ್ಫ್ಯೂ ವಿಧಿಸಲಾಗಿದೆ.

ಸರ್ಕಾರಿ ಕಚೇರಿಗಳು, ಶಾಲೆಗಳು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ, ಹಾಲು ವಿತರಣೆ, ಮಾಧ್ಯಮ ಮತ್ತು ಆಸ್ಪತ್ರೆಗಳಿಗೆ ಈ ಆದೇಶದಿಂದ ವಿನಾಯಿತಿ ನೀಡಲಾಗಿದೆ. ಜಾರಂಗೆ ಭಾನುವಾರ ರಾತ್ರಿ ಅಂತರವಾಲಿ ಸಾರತಿಯಿಂದ ಹೊರಟು ಸಮೀಪದ ಭಂಬೇರಿ ಗ್ರಾಮಕ್ಕೆ ಬಂದರು.

ಆದರೆ, ಸೋಮವಾರ ಬೆಳಗ್ಗೆ ಪ್ರತಿಭಟನಾ ನಿರತ ಕಾರ್ಯಕರ್ತರು ಅಂತರವಾಲಿ ಸಾರಥಿಗೆ ತೆರಳಿ ಚಿಕಿತ್ಸೆ ಪಡೆಯಲಾರಂಭಿಸಿದರು. ಈ ಮಧ್ಯೆ, ಜಲ್ನಾದಲ್ಲಿ ಎಂಎಸ್ಆರ್‌ಟಿಸಿ ಬಸ್ಸು ಸುಟ್ಟುಹೋದ ಕಾರಣ, ಸದ್ಯಕ್ಕೆ ಸೇವೆಗಳನ್ನು ಬಂದ್ ಮಾಡಲಾಗಿದೆ.

ಕಳೆದ ಮಂಗಳವಾರ ನಡೆದ ಒಂದು ದಿನದ ವಿಶೇಷ ಅಧಿವೇಶನದಲ್ಲಿ ಮಹಾರಾಷ್ಟ್ರ ಶಾಸಕಾಂಗವು ಮರಾಠರಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಪ್ರತ್ಯೇಕ ವರ್ಗದಡಿಯಲ್ಲಿ ಶೇ.10 ಪ್ರತಿಶತ ಮೀಸಲಾತಿಯನ್ನು ಒದಗಿಸುವ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಿತು. ಆದರೆ, ಒಬಿಸಿ ಅಡಿಯಲ್ಲಿ ಸಮುದಾಯಕ್ಕೆ ಕೋಟಾದ ಬೇಡಿಕೆಗೆ ಜಾರಂಗೆ ದೃಢವಾಗಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಜಾರಂಗೆ, ‘ನಾನು ಅದನ್ನು ಕೇಳಿಲ್ಲ. ಆದರೆ ಮರಾಠ ಸಮುದಾಯದ ಸಂಬಂಧಿಕರ (ಮರಾಠರ) ಕೋಟಾದ ಅಧಿಸೂಚನೆಯನ್ನು ಏಕೆ ಜಾರಿಗೊಳಿಸಲಿಲ್ಲ ಎಂದು ಅವರು ಹೇಳಬೇಕು. ನಾನು ಅವರನ್ನು ತುಂಬಾ ಗೌರವಿಸುತ್ತೇನೆ; ಅವರು ಹೀಗೆಲ್ಲಾ ಮಾಡಬಾರದು’ ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಲ್ಲಿ ಮನವಿ ಮಾಡಿದರು. ‘ಮರಾಠ ಸಮುದಾಯಕ್ಕಿಂತ ಯಾರೂ ದೊಡ್ಡವರಲ್ಲ’ ಎಂದು ಜಾರಂಗೆ ಹೇಳಿದರು.

‘ಮರಾಠರ ಅಧಿಸೂಚನೆಯನ್ನು ಜಾರಿಗೊಳಿಸುವುದು ಅವರ (ಶಿಂಧೆ) ಜವಾಬ್ದಾರಿಯಾಗಿದೆ ಮತ್ತು ಕುಂಬಿ ಜಾತಿಯ ಪ್ರಮಾಣಪತ್ರಗಳನ್ನು ನೀಡಲು (ನಿಜಾಮ್ ರಾಜ್ಯ, ಸತಾರಾ) ಗೆಜೆಟ್ ಅನ್ನು ಪುರಾವೆಯಾಗಿ ತೆಗೆದುಕೊಳ್ಳುವುದನ್ನು ಪರಿಗಣಿಸಿ, ಪ್ರಮಾಣಪತ್ರಗಳ ವಿತರಣೆಯನ್ನು ನಿಲ್ಲಿಸಲಾಗಿದೆ’ ಎಂದರು.

ಸರ್ಕಾರದ ವಿರುದ್ಧ ಮತ್ತೆ ಮತ್ತೆ ಪ್ರತಿಭಟನೆ ನಡೆಸುತ್ತಿರುವವರು ನಮ್ಮ ತಾಳ್ಮೆ ಪರೀಕ್ಷಿಸಬಾರದು, ಅವರು ಕಾನೂನು ಸುವ್ಯವಸ್ಥೆ ಸಮಸ್ಯೆ ಸೃಷ್ಟಿಸಬಾರದು’ ಎಂದು ಸಿಎಂ ಶಿಂಧೆ ಭಾನುವಾರ ಹೇಳಿದ್ದಾರೆ.

ಜಾರಂಗೆ ಅವರ ಭಾಷಣವು ಸಾಮಾನ್ಯವಾಗಿ ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ಬಳಸುವ ಸ್ಕ್ರಿಪ್ಟ್‌ನಂತೆ ಏಕೆ ಕಾಣುತ್ತದೆ ಎಂದು ಅವರು ಆಶ್ಚರ್ಯಪಟ್ಟರು.

ಸಿಎಂ ಹೆಳಿಕೆಗೆ ಪ್ರತಿಕ್ರಿಯಿಸಿರುವ ಜಾರಂಗೆ, ‘ನಾನು ಅವರನ್ನು (ಸಿಎಂ ಶಿಂಧೆ) ಈಗಲೂ ಗೌರವಿಸುತ್ತೇನೆ. ನಮ್ಮ ಜಾತಿಯೇ ನಮ್ಮ ‘ಸ್ಕ್ರಿಪ್ಟ್’, ನೀವು ನಿಜವಾದ ಮುಖ್ಯಮಂತ್ರಿ ಎಂದು ನಮ್ಮ ಭಾವನೆ. ನಾನು ಪ್ರಾಮಾಣಿಕನಿದ್ದೇನೆ ಮತ್ತು ನನಗೆ ಹೆಚ್ಚು ಮಾತನಾಡಲು ಬಿಡುವುದಿಲ್ಲ. ನಾನು ಮುಂಬೈಗೆ ಬರುತ್ತಿದ್ದೇನೆ, ನಮಗೆ ಮೋಸ ಮಾಡುತ್ತಿದ್ದರೆ ನಾವು ಏನು ಹೇಳಬೇಕು? ಮೂವರು (ಶಿಂಧೆ, ಫಡ್ನವೀಸ್ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್) ತಮ್ಮ ರಾಜಕೀಯಕ್ಕಾಗಿ ಮರಾಠ ಸಮುದಾಯವನ್ನು ಕೊಲ್ಲಲು ಬಯಸುತ್ತಾರೆಯೇ? ಮರಾಠ ಸಮುದಾಯವು ಈಗಲೂ ಶಿಂಧೆಯ ಪರವಾಗಿ ಮಾತನಾಡುತ್ತಾರೆ ಮತ್ತು ಅವರು ಹಾಗೆಲ್ಲಾ ಕೇಳಬಾರದು’ ಎಂದು ಅವರು ಹೇಳಿದರು.

‘ಜನರನ್ನು ಮೂರ್ಖರನ್ನಾಗಿಸಿ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸುವುದು ಸರ್ಕಾರದ ಸಂಸ್ಕೃತಿಯೇ’ ಎಂದು ಕಾರ್ಯಕರ್ತ ಪ್ರಶ್ನಿಸಿದರು. ‘ಮರಾಠಾ ಕೋಟಾ ವಿಚಾರದಲ್ಲಿ ಸರ್ಕಾರ ಏನು ಮಾಡಿದೆ ಎಂಬುದನ್ನು ತಿಳಿಸಬೇಕು’ ಎಂದು ಸವಾಲು ಹಾಕಿದರು.

‘ಅವರು ಗೆಜೆಟ್ ತೆಗೆದುಕೊಂಡಿಲ್ಲ ಮತ್ತು ಮರಾಠವಾಡದಲ್ಲಿ ಪತ್ತೆಯಾದ ದಾಖಲೆಗಳ ಡೇಟಾವನ್ನು ನೀಡಿಲ್ಲ. ಪತ್ತೆಯಾದ ದಾಖಲೆಗಳ ಪಟ್ಟಿಯನ್ನು ಗ್ರಾಮ ಪಂಚಾಯಿತಿಗಳಲ್ಲಿ ಪ್ರದರ್ಶಿಸಲಾಗಿಲ್ಲ’ ಎಂದು ಅವರು ಪ್ರತಿಪಾದಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಫಡ್ನವೀಸ್, ಜಾರಂಗೆಯ ಹಿಂದಿರುವ ಜನರ ಬಗ್ಗೆ ರಾಜ್ಯ ಸರ್ಕಾರಕ್ಕೆ ನ್ಯಾಯಯುತವಾದ ಕಲ್ಪನೆ ಇದೆ, ಸೂಕ್ತ ಸಮಯದಲ್ಲಿ ವಿವರಗಳು ಹೊರಬರುತ್ತವೆ’ ಎಂದು ಹೇಳಿದರು.

ಜಾರಂಗೆ ಅವರು ಫಡ್ವೀಸ್ ಬಂಗಲೆ ಎದುರು ಪ್ರತಿಭಟನೆ ನಡೆಸಲು ಮುಂಬೈಗೆ ಮೆರವಣಿಗೆ ನಡೆಸುವುದಾಗಿ ಘೋಷಿಸಿರುವ ಕುರಿತು ಕೇಳಿದ ಪ್ರಶ್ನೆಗೆ, ‘ಇದು ಉಪ ಮುಖ್ಯಮಂತ್ರಿ ಅವರ ಅಧಿಕೃತ ನಿವಾಸವಾಗಿದ್ದು, ಯಾವುದೇ ರೀತಿಯ ಕೆಲಸವಿರುವವರು ಭೇಟಿ ನೀಡಬಹುದು’ ಎಂದು ಹೇಳಿದರು.

ಇದನ್ನೂ ಓದಿ; ಮರಾಠ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆಗೆ ಕರೆಕೊಟ್ಟ ಮನೋಜ್ ಜಾರಂಗೆ; ಜಲ್ನಾ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...