Homeಮುಖಪುಟಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಅತಿ ಹೆಚ್ಚು ದ್ವೇಷ ಭಾಷಣ: ವರದಿ

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಅತಿ ಹೆಚ್ಚು ದ್ವೇಷ ಭಾಷಣ: ವರದಿ

- Advertisement -
- Advertisement -

ಭಾರತದಲ್ಲಿನ ದ್ವೇಷ ಭಾಷಣದಲ್ಲಿ 2023ರ ದ್ವಿತೀಯಾರ್ಧದಲ್ಲಿ ಸಾರ್ವಕಾಲಿಕ ಹೆಚ್ಚಳವಾಗಿದೆ ಎಂದು ವಾಷಿಂಗ್ಟನ್ ಮೂಲದ ಸಂಶೋಧನಾ ಸಂಸ್ಥೆ ‘ಇಂಡಿಯಾ ಹೇಟ್ ಲ್ಯಾಬ್’ ವರದಿಯನ್ನು ಮಾಡಿದ್ದು, ಅದರಲ್ಲಿ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಾದ ಮುಸ್ಲಿಮರ ವಿರುದ್ಧ ಅತಿ ಹೆಚ್ಚು ದ್ವೇಷ ಭಾಷಣವನ್ನು ಮಾಡಲಾಗಿದೆ ಎಂದು ವರದಿ ತಿಳಿಸಿದೆ.

2023ರ ದ್ವಿತೀಯಾರ್ಧದಲ್ಲಿ ಭಾರತದಲ್ಲಿ ಮುಸ್ಲಿಂ ವಿರೋಧಿ ದ್ವೇಷದ ಭಾಷಣವು ಶೇಕಡಾ 62ರಷ್ಟು ಹೆಚ್ಚಾಗಿದೆ ಎಂದು ‘ಇಂಡಿಯಾ ಹೇಟ್ ಲ್ಯಾಬ್’ ವರದಿ ತಿಳಿಸಿದೆ. 2023ರಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡ 668 ದ್ವೇಷ ಭಾಷಣ ಘಟನೆಗಳನ್ನು ಉಲ್ಲೇಖಿಸಿದೆ. ಅದರಲ್ಲಿ 255 ವರ್ಷದ ಮೊದಲಾರ್ಧದಲ್ಲಿ ಸಂಭವಿಸಿದೆ ಮತ್ತು 2023ರ ಕೊನೆಯ ಆರು ತಿಂಗಳಲ್ಲಿ 413 ಘಟನೆಗಳು ನಡೆದಿವೆ ಎಂದು ಸಂಶೋಧನಾ ಸಮಿತಿ ಸೋಮವಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ.

ಇಂಡಿಯಾ ಹೇಟ್ ಲ್ಯಾಬ್ ಹಿಂದೂ ರಾಷ್ಟ್ರೀಯತಾವಾದಿ ಗುಂಪುಗಳ ಆನ್‌ಲೈನ್ ಚಟುವಟಿಕೆಯನ್ನು  ಟ್ರ್ಯಾಕ್ ಮಾಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ದ್ವೇಷ ಭಾಷಣದ ವೀಡಿಯೊಗಳನ್ನು ಪರಿಶೀಲಿಸಿದೆ ಮತ್ತು ಭಾರತೀಯ ಮಾಧ್ಯಮಗಳು ವರದಿ ಮಾಡಿದ ಪ್ರತ್ಯೇಕ ಘಟನೆಗಳ ದಾಖಲೆಯನ್ನು ಸಂಗ್ರಹಿಸಿ ವರದಿಯನ್ನು ಸಿದ್ದಪಡಿಸಿದೆ.

ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಮತ್ತು ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗೆ ಸಿದ್ಧವಾಗುತ್ತಿರುವ ಆಗಸ್ಟ್‌ನಿಂದ ನವೆಂಬರ್‌ವರೆಗಿನ ಅವಧಿಯಲ್ಲಿ ದ್ವೇಷದ ಭಾಷಣದ ಘಟನೆಗಳು ಉತ್ತುಂಗಕ್ಕೇರಿದವು ಎಂದು ವರದಿಯು ಗಮನಿಸಿದೆ. ಮಹಾರಾಷ್ಟ್ರ (118), ಉತ್ತರ ಪ್ರದೇಶ (104), ಮಧ್ಯಪ್ರದೇಶ (65), ರಾಜಸ್ಥಾನ (64), ಹರಿಯಾಣ (48), ಉತ್ತರಾಖಂಡ (41), ಕರ್ನಾಟಕ (40), ಗುಜರಾತ್ (31), ಛತ್ತೀಸ್‌ಗಢ (21), ಮತ್ತು ಬಿಹಾರ ( 18) ದ್ವೇಷದ ಭಾಷಣದ ಘಟನೆಯನ್ನು ವರದಿ ಮಾಡಿದೆ. ಇದರಲ್ಲಿ ಕರ್ನಾಟಕವನ್ನು ಹೊರತುಪಡಿಸಿ ಬೇರೆ ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ ಆಡಳಿತವನ್ನು ಹೊಂದಿದೆ.

ವರದಿಯ ಪ್ರಕಾರ, ಸುಮಾರು 75 ಪ್ರತಿಶತ ಅಥವಾ 498 ಘಟನೆಗಳು ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತವಿರುವ ರಾಜ್ಯಗಳಲ್ಲಿ ನಡೆದಿವೆ. ಮಹಾರಾಷ್ಟ್ರ, ಉತ್ತರಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಹೆಚ್ಚು ದ್ವೇಷಪೂರಿತ ಭಾಷಣಗಳನ್ನು ಮಾಡಲಾಗಿದೆ. ಈ ರಾಜ್ಯಗಳಲ್ಲಿ ಬಿಜೆಪಿ ಆಡಳಿತವನ್ನು ಹೊಂದಿದೆ. ಉತ್ತರಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯದಲ್ಲಿ ಸರಕಾರದ ಮುಸ್ಲಿಂ ವಿರೋಧಿ ನಿಲುವುಗಳು ಹಲವು ಬಾರಿ ಸಾರ್ವಜನಿಕಗೊಂಡಿದ್ದವು, ಮುಸ್ಲಿಮರ ಧಾರ್ಮಿಕ ಕೇಂದ್ರಗಳ ಮೇಲೆ ದಾಳಿ, ಮುಸ್ಲಿಮರ ಮೇಲಿನ ಕಾನೂನು ದೌರ್ಜನ್ಯ, ಮನೆಗಳ ಧ್ವಂಸ, ಎನ್‌ಕೌಂಟರ್‌ ಪ್ರಕರಣಗಳು ಈ ರಾಜ್ಯಗಳಲ್ಲಿ ಹೆಚ್ಚು ವರದಿಯಾಗಿದ್ದವು.

ಮುಸ್ಲಿಮರ ವಿರುದ್ಧ ಹಿಂಸಾಚಾರದ ನೇರ ಕರೆಯನ್ನು ಕೆಲವು ದ್ವೇಷ ಭಾಷಣಗಳು ಒಳಗೊಂಡಿವೆ, ಲವ್ ಜಿಹಾದ್, ಲ್ಯಾಂಡ್ ಜಿಹಾದ್, ಹಲಾಲ್ ಜಿಹಾದ್ ಮತ್ತು ಜನಸಂಖ್ಯೆಯ ಜಿಹಾದ್‌ ಇದರಲ್ಲಿ ಒಳಗೊಂಡಿವೆ. ಸುಮಾರು 25% ಜನರು ಮುಸ್ಲಿಂ ಆರಾಧನಾ ಸ್ಥಳಗಳನ್ನು ಗುರಿಯಾಗಿಸಿಕೊಂಡು ದ್ವೇಷ ಭಾಷಣಗಳನ್ನು ಮಾಡಿದ್ದಾರೆ.

ಅಕ್ಟೋಬರ್ 7ರಂದು ಹಮಾಸ್‌ ಸಶಸ್ತ್ರ ಗುಂಪು ಮತ್ತು ಇಸ್ರೇಲ್‌ ನಡುವೆ ಯುದ್ಧ ಘೋಷಣೆ ಬಳಿಕ ಭಾರತೀಯ ಮುಸ್ಲಿಮರ ವಿರುದ್ಧ ದ್ವೇಷದ ಭಾಷಣದ 41 ಘಟನೆಗಳು ವರದಿಯಾಗಿದೆ. ಅಂದರೆ 2023ರ ಕೊನೆಯ ಮೂರು ತಿಂಗಳಲ್ಲಿ ಸುಮಾರು 20 ಪ್ರತಿ ಶತದಷ್ಟು ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದೆ ಎಂದು ಸಂಶೋಧನೆಯು ಉಲ್ಲೇಖಿಸಿದೆ. ಅಕ್ಟೋಬರ್ 7ರ ಇಸ್ರೇಲ್‌ ಯುದ್ಧ ಘೋಷಣೆ ದಿನ ಮತ್ತು ಡಿಸೆಂಬರ್ 31ರ ನಡುವೆ ನಡೆದ 193 ದ್ವೇಷ ಭಾಷಣ ಘಟನೆಗಳಲ್ಲಿ, ಭಾರತೀಯ ಮುಸ್ಲಿಮರ ಬಗ್ಗೆ ಭಯ ಮತ್ತು ದ್ವೇಷವನ್ನು ಹೆಚ್ಚಿಸಲು ಯುದ್ಧವನ್ನು ಬಳಸಿಕೊಳ್ಳಲಾಗಿದೆ. ಮುಸ್ಲಿಮರು ಸ್ವಾಭಾವಿಕವಾಗಿ ಹಿಂಸಾತ್ಮಕವಾಗಿದ್ದಾರೆ ಮತ್ತು ಹಿಂದೂಗಳಿಗೆ ಬೆದರಿಕೆಯನ್ನು ಒಡ್ಡುತ್ತಿದ್ದಾರೆ ಎಂದು ಬಲಪಂಥೀಯ ನಾಯಕರು ಪ್ರತಿಪಾದಿಸುತ್ತಾ ಬಂದಿದ್ದಾರೆ. ಜುಲೈ 2023ರಲ್ಲಿ ಹರಿಯಾಣದ ನುಹ್ ಮತ್ತು ಜೂನ್ 2023ರಲ್ಲಿ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದ ಹಿಂಸಾಚಾರವು ಈ ರೀತಿಯ ಪ್ರತಿಪಾದನೆಯಿಂದ ಉಂಟಾಗಿದೆ ಎನ್ನುವುದನ್ನು ಗಮನಿಸಬಹುದಾಗಿದೆ.

ಸಂಶೋಧನೆಯ ವೇಳೆ ಧರ್ಮ, ಜನಾಂಗೀಯತೆ, ರಾಷ್ಟ್ರೀಯತೆ, ಜನಾಂಗ ಅಥವಾ ಲಿಂಗದ ಆಧಾರದ ಮೇಲೆ ವ್ಯಕ್ತಿ ಅಥವಾ ಗುಂಪಿನ ಬಗ್ಗೆ ಪೂರ್ವಾಗ್ರಹ ಪೀಡಿತ ಅಥವಾ ತಾರತಮ್ಯದ ಭಾಷೆಯ ಬಳಕೆ ಎಂಬ ವಿಶ್ವಸಂಸ್ಥೆಯ ವ್ಯಾಖ್ಯಾನದಂತೆ ದ್ವೇಷ ಭಾಷಣವನ್ನು ಪತ್ತೆಹಚ್ಚಲಾಗಿದೆ ಎಂದು ಸಂಶೋಧನೆಯು ಬಹಿರಂಗಪಡಿಸಿದೆ. 2014ರಲ್ಲಿ ಪ್ರಧಾನಿಯಾಗಿ ಮೋದಿ ಅಧಿಕಾರವನ್ನು ಸ್ವೀಕರಿಸಿದ ಬಳಿಕ ಮೋದಿ ಆಡಳಿತದಲ್ಲಿ ಮುಸ್ಲಿಮರ ಮೇಲೆ ಅನ್ಯಾಯ ನಡೆಸಲಾಗಿದೆ ಎಂದು ಹೇಳಿದೆ.

ಅವರು UN ಮಾನವ ಹಕ್ಕುಗಳ ಕಚೇರಿ ಮೂಲಭೂತವಾಗಿ ತಾರತಮ್ಯ ಎಂದು ಕರೆಯುವ 2019ರ ಪೌರತ್ವ ಕಾನೂನು, ಮತಾಂತರ-ವಿರೋಧಿ ಶಾಸನ ಮತ್ತು ಮುಸ್ಲಿಂ ಬಹುಸಂಖ್ಯಾತ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂಪಡೆದಿರುವುದು ಸೇರಿದಂತೆ ವಿವಿಧ ವಿಚಾರಗಳನ್ನು ಉಲ್ಲೇಖಿಸಲಾಗಿದೆ. ಅಕ್ರಮ ಕಟ್ಟಡಗಳನ್ನು ತೆಗೆದುಹಾಕುವ ಹೆಸರಿನಲ್ಲಿ ಮುಸ್ಲಿಂ ಆಸ್ತಿಗಳನ್ನು ಧ್ವಂಸಗೊಳಿಸಲಾಗಿದೆ ಮತ್ತು ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ತರಗತಿಯಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಲಾಗಿದೆ ಎಂದು ಸಮಿತಿಯ ವರದಿಯು ಉಲ್ಲೇಖಿಸಿದೆ.

ಇದನ್ನು ಓದಿ: ಲೋಕಸಭೆಯಲ್ಲಿ ಅಂಗವಿಕಲರಿಗೆ ಮೀಸಲಾತಿ ಕೋರಿ ಸಲ್ಲಿಸಿದ್ದ PIL ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...