Homeಮುಖಪುಟಸಿಂಹಗಳ ಜೋಡಿಗೆ ಅಕ್ಬರ್-ಸೀತಾ ನಾಮಕರಣ ವಿವಾದ: ಹಿರಿಯ ಅರಣ್ಯಾಧಿಕಾರಿ ಅಮಾನತು

ಸಿಂಹಗಳ ಜೋಡಿಗೆ ಅಕ್ಬರ್-ಸೀತಾ ನಾಮಕರಣ ವಿವಾದ: ಹಿರಿಯ ಅರಣ್ಯಾಧಿಕಾರಿ ಅಮಾನತು

- Advertisement -
- Advertisement -

ಸಿಂಹಗಳ ಜೋಡಿಯ ನಾಮಕರಣ ವಿವಾದದ ಬೆನ್ನಲ್ಲಿ ಅಕ್ಬರ್ ಮತ್ತು ಸೀತಾ ಎಂದು ಸಿಂಹಗಳ ಜೋಡಿಗೆ ನಾಮಕರಣವನ್ನು ಮಾಡಿದ್ದ ವಿವಾದಕ್ಕೆ ಸಂಬಂಧಿಸಿ ತ್ರಿಪುರಾ ರಾಜ್ಯ ಸರ್ಕಾರವು, ಮುಖ್ಯ ವನ್ಯಜೀವಿ ವಾರ್ಡನ್ ಪ್ರಬಿನ್ ಲಾಲ್ ಅಗರವಾಲ್ ಅವರನ್ನು ಫೆಬ್ರವರಿ 24 ರಂದು ಅಮಾನತುಗೊಳಿಸಿದ್ದಾರೆ.

ಸಂಭಾವ್ಯ ಧಾರ್ಮಿಕ ವಿವಾದಗಳನ್ನು ಉಂಟುಮಾಡಲು ಅಕ್ಬರ್ ಮತ್ತು ಸೀತೆಯ ಹೆಸರನ್ನು ಸಿಂಹಗಳಿಗೆ ಏಕೆ ಇಡಲಾಗಿದೆ ಎಂದು ಕೋಲ್ಕತ್ತಾ ಹೈಕೋರ್ಟ್ ಕೇಳಿದ ನಂತರ ಈ ಬೆಳವಣಿಗೆ ನಡೆದಿದೆ. ಬಿಜೆಪಿ ಮತ್ತು ಅದರ ಮಿತ್ರಪಕ್ಷವಾದ ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾ ಸಮ್ಮಿಶ್ರ ಸರಕಾರ ಅಗರವಾಲ್ ಅವರನ್ನು ಅಮಾನತು ಮಾಡಿದೆ ಎಂದು ದಿ ವೈರ್‌ ವರದಿ ತಿಳಿಸಿದೆ.

ಸಿಲಿಗುರಿಯಲ್ಲಿರುವ ಬಂಗಾಳ ಸಫಾರಿ ಪಾರ್ಕ್‌ಗೆ ಫೆಬ್ರವರಿ 12ರಂದು ತ್ರಿಪುರಾದ ಸೆಪಹಿಜಲಾ ಝುವೊಲಾಜಿಕಲ್‌ ಪಾರ್ಕಿನಿಂದ ಎರಡು ಸಿಂಹಗಳನ್ನು ತರಲಾಗಿತ್ತು. ಅವುಗಳಲ್ಲಿ ಒಂದಕ್ಕೆ ʼಅಕ್ಬರ್‌ʼ ಎಂದು ಹೆಸರನ್ನಿಡಲಾಗಿದ್ದರೆ, ಇನ್ನೊಂದಕ್ಕೆ ಸೀತಾ ಎಂಬ ಹೆಸರನ್ನಿಡಲಾಗಿದೆ. ಈ 7 ವರ್ಷದ ʼಅಕ್ಬರ್‌ ಮತ್ತು 5 ವರ್ಷದ ಸೀತಾ ಸಿಂಹದ ಜೋಡಿಯನ್ನು ಒಂದೇ ಕಡೆ ಅಧಿಕಾರಿಗಳು ಇರಿಸಿದ್ದಾರೆ. ಇದನ್ನು ಪ್ರಶ್ನಿಸಿ ವಿಶ್ವ ಹಿಂದೂ ಪರಿಷತ್‌ ಕೋಲ್ಕತಾ ಹೈಕೋರ್ಟ್‌ ಮೊರೆ ಹೋಗಿದೆ. ಇದು ಹಿಂದೂ ಧರ್ಮಕ್ಕೆ ಅವಮಾನ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.
ಕೋಲ್ಕತ್ತ ಉಚ್ಚ ನ್ಯಾಯಾಲಯದ ಜಲ್‌ ಪಾಯ್‌ಗುರಿ ಸರ್ಕ್ಯೂಟ್‌ ಪೀಠಕ್ಕೆ ವಿಶ್ವಹಿಂದೂ ಪರಿಷತ್‌ ಅರ್ಜಿಯನ್ನು ಸಲ್ಲಿಸಿತ್ತು. ಈ ಕುರಿತು ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಸುಗತಾ ಭಟ್ಟಾಚಾರ್ಯ ಅವರ ಕಲ್ಕತ್ತಾ ಹೈಕೋರ್ಟ್‌ ಪೀಠವು ‘ಅಕ್ಬರ್ ಮತ್ತು ಸೀತಾ’ ಸಿಂಹಗಳ ಹೆಸರು ಬದಲಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ.

1994ರ ಬ್ಯಾಚ್‌ನ ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಪ್ರಬಿನ್ ಲಾಲ್ ಅಗರವಾಲ್ ಅವರು ಸಿಂಹಗಳ ಜೋಡಿಯನ್ನು ಪಶ್ಚಿಮ ಬಂಗಾಳಕ್ಕೆ ಕಳುಹಿಸುವ ಮೊದಲು ಜೋಡಿಯ ಹೆಸರನ್ನು ಅಕ್ಬರ್ ಮತ್ತು ಸೀತಾ ಎಂದು ದಾಖಲಿಸಿದ್ದರು. ಅಗರವಾಲ್ ಅವರು ತ್ರಿಪುರಾದ ಮುಖ್ಯ ವನ್ಯಜೀವಿ ವಾರ್ಡನ್ ಆಗಿದ್ದು, ರಾಜ್ಯ ಅರಣ್ಯ ಇಲಾಖೆಯ ಉನ್ನತ ಉದ್ಯೋಗಿಗಳಲ್ಲಿ ಒಬ್ಬರಾಗಿದ್ದರು. ಅವರು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾಗಿದ್ದರು.

ಫೆಬ್ರವರಿ 16ರಂದು ಸ್ಥಳೀಯ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸಿಂಹಗಳ ಜೋಡಿಯನ್ನು ಅಕ್ಬರ್ ಮತ್ತು ಸೀತಾ ಎಂದು ಹೆಸರಿಸುವುದರ ಕುರಿತು ಕೋಲ್ಕತ್ತಾ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ವಿಎಚ್‌ಪಿ ಜಿಲ್ಲಾ ಮುಖ್ಯಸ್ಥ ದುಲಾಲ್ ಚಂದ್ರ ರೇ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ನಾಮಕರಣವು ಹಿಂದೂ ಧರ್ಮದ ಮೇಲಿನ ದಾಳಿ, ಅಕ್ಬರ್ ಎಂಬುದು ಮೊಘಲ್ ಚಕ್ರವರ್ತಿಯ ಹೆಸರು ಮತ್ತು ಸೀತಾ ಹಿಂದೂ ಮಹಾಕಾವ್ಯ ರಾಮಾಯಣದಲ್ಲಿ ಒಂದು ಪಾತ್ರವಾಗಿದೆ, ಇದನ್ನು ಹಿಂದೂ ಧರ್ಮದಲ್ಲಿ ದೇವತೆಯಾಗಿ ಪೂಜಿಸಲಾಗುತ್ತದೆ ಎಂದು ಹೇಳಿದ್ದರು. ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್ ವಿವಾದವನ್ನು ತಪ್ಪಿಸಬಹುದಿತ್ತು ಎಂದು ಹೇಳಿದೆ.

ವರದಿಯ ಪ್ರಕಾರ, ತ್ರಿಪುರಾ ಸರ್ಕಾರವು ಅಗರವಾಲ್ ಅವರಿಂದ ಸ್ಪಷ್ಟೀಕರಣವನ್ನು ಕೇಳಿದೆ ಮತ್ತು ಅವರು ಜೋಡಿಗೆ ಅಕ್ಬರ್ ಮತ್ತು ಸೀತಾ ಎಂದು ಹೆಸರಿಸಿರುವುದನ್ನು ನಿರಾಕರಿಸಿದ್ದಾರೆ. ಆದರೆ ತ್ರಿಪುರಾದಲ್ಲಿನ ವನ್ಯಜೀವಿ ಅಧಿಕಾರಿಗಳು ಸಿಂಹದ ಜೋಡಿಯ ಹೆಸರುಗಳನ್ನು ಬದಲಾಯಿಸಿದ್ದಾರೆ ಎಂದು ತನಿಖೆಯಿಂದ ತಿಳಿದು ಬಂದಿದೆ.

ಇದನ್ನು ಓದಿ: ಅಕ್ಬರ್-ಸೀತಾ ಸಿಂಹಗಳ ಹೆಸರು ಬದಲಿಸಲು ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...