Homeಮುಖಪುಟಜಾರ್ಖಂಡ್‌ನ ಏಕೈಕ ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ

ಜಾರ್ಖಂಡ್‌ನ ಏಕೈಕ ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ

- Advertisement -
- Advertisement -

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಅವರ ಪತ್ನಿ ಹಾಗೂ ಕಾಂಗ್ರೆಸ್‌ನ ಏಕೈಕ ಸಂಸದೆ ಗೀತಾ ಕೋಡಾ ಅವರು ಸೋಮವಾರ ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ.

ಗೀತಾ ಕೋಡಾ ನಿರ್ಗಮನದಿಂದ ಕಾಂಗ್ರೆಸ್ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮೈತ್ರಿಕೂಟದಲ್ಲಿ ವಿಜಯ್ ಹನ್ಸ್‌ಡಾಕ್‌ ಒಬ್ಬರು ಮಾತ್ರ ಸಂಸದರಾಗಿ ಉಳಿದಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 14 ಸ್ಥಾನಗಳಲ್ಲಿ 12 ಸ್ಥಾನಗಳನ್ನು ಗೆದ್ದಿತ್ತು. ಉಳಿದ ಎರಡು ಸ್ಥಾನಗಳ ಪೈಕಿ ತಲಾ ಒಂದು ಸ್ಥಾನವನ್ನು ಕಾಂಗ್ರೆಸ್ ಮತ್ತು ಜೆಎಂಎಂ ಗೆದ್ದುಕೊಂಡಿತ್ತು.

ಗೀತಾ ಕೋಡಾ ಜೊತೆ ಅವರ ಪತಿ, 2017ರ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣದಲ್ಲಿ 4,000 ಕೋಟಿ ರೂಪಾಯಿ ಅವ್ಯವಹಾರದ ಆರೋಪ ಹೊತ್ತಿದ್ದ ಹಾಗೂ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಮಧು ಕೋಡಾ ಕೂಡ ಬಿಜೆಪಿ ಸೇರಿದ್ದಾರೆ.

ಸಿಂಗ್‌ಭೂಮ್ ಕ್ಷೇತ್ರದ ಸಂಸದೆಯಾಗಿರುವ ಗೀತಾ ಅವರು ಪಕ್ಷಕ್ಕೆ ಸೇರ್ಪಡೆಗೊಂಡಿರುವುದರಿಂದ ಕೊಲ್ಹಾನ್ ವಿಭಾಗದಲ್ಲಿ ಪಕ್ಷಕ್ಕೆ ಬಲ ಬರಲಿದೆ ಎಂದು ಬಿಜೆಪಿಯ ಆಂತರಿಕ ಮೂಲಗಳು ಹೇಳಿವೆ. ಕೊಲ್ಹಾನ್ ವಿಭಾಗದಲ್ಲಿ
ಪೂರ್ವ ಸಿಂಗ್‌ಭೂಮ್, ಪಶ್ಚಿಮ ಸಿಂಗ್‌ಭೂಮ್ ಮತ್ತು ಸರೈಕೆಲಾ-ಖಾರ್ಸಾವಾನ್ ಈ ಮೂರು ಜಿಲ್ಲೆಗಳು ಒಳಗೊಂಡಿವೆ. 2019ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಈ ಪ್ರದೇಶದಲ್ಲಿ ಖಾತೆ ತೆರೆಯುವಲ್ಲಿ ವಿಫಲವಾಗಿತ್ತು.

ಗೀತಾ ಕೋಡಾ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಬಳಿಕ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ, ಕಾಂಗ್ರೆಸ್ ಮಧು ಕೋಡಾ ಅವರನ್ನು ಸಿಎಂ ಮಾಡಿದ ನಂತರ ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಅರ್ಜುನ್ ಮುಂಡಾ ನೇತೃತ್ವದ ಎನ್‌ಡಿಎ ಸರ್ಕಾರದ ಪತನದ ನಂತರ, 2006 ರಲ್ಲಿ ಸ್ವತಂತ್ರ ಶಾಸಕರಾಗಿದ್ದ ಮಧು ಕೋಡಾ ಜಾರ್ಖಂಡ್‌ನ ಸಿಎಂ ಆಗಿದ್ದರು. ಯುಪಿಎ ಒಕ್ಕೂಟ ಇವರನ್ನು ಒಮ್ಮತದ ಅಭ್ಯರ್ಥಿಯಾಗಿ ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಿತ್ತು. ಮಧು ಕೋಡಾ ಅವರ ಸರ್ಕಾರಕ್ಕೆ ಕಾಂಗ್ರೆಸ್ ಹೊರಗಿನಿಂದ ಬೆಂಬಲ ನೀಡಿತ್ತು.

ಆದರೆ, 2008ರಲ್ಲಿ ಯುಪಿಎಯ ಮೈತ್ರಿಕೂಟದ ಪಕ್ಷಗಳಲ್ಲಿ ಒಂದಾಗಿದ್ದ ಜೆಎಂಎಂ ತನ್ನ ಬೆಂಬಲವನ್ನು ಹಿಂಪಡೆದು ಮಧು ಕೋಡಾ ಸರ್ಕಾರದ ಪತನಕ್ಕೆ ಕಾರಣವಾಗಿತ್ತು. ಆ ಸಂದರ್ಭದಲ್ಲಿ ಮಧುಕೋಡಾ ಸರ್ಕಾರಕ್ಕೆ ಕಾಂಗ್ರೆಸ್ ಹೂಡಿದ ಸಂಚು ಕಾರಣ ಎಂದು ಹೇಳಲಾಗಿತ್ತು.

ನಂತರ ಮಧು ಕೋಡಾ ಅವರನ್ನು ಜಾರ್ಖಂಡ್‌ನ ಯುಪಿಎ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು. ಆಗ ಜೆಎಂಎಂನ ಶಿಬು ಸೊರೆನ್ ಸಿಎಂ ಆಗಿದ್ದರು.

ಗೀತಾ ಕೋಡಾ ಅವರು ತಕ್ಷ ಪಕ್ಷ ತೊರೆದು ಬಿಜೆಪಿ ಸೇರಿರುವುದಕ್ಕೆ ಕಾಂಗ್ರೆಸ್ ನಾಯಕರು ಆಘಾತ ವ್ಯಕ್ತಪಡಿಸಿದ್ದಾರೆ. “ಈ ಬಗ್ಗೆ ನಮಗೆ ಯಾವುದೇ ಸುಳಿವು ಇರಲಿಲ್ಲ. ಪಕ್ಷದೊಂದಿಗೆ ಅವರಿಗೆ ಅಸಮಾಧಾನದ ಇತ್ತು ಎನ್ನುವುದು ಸುಳ್ಳು. ಗೀತಾ ಅವರು ಭಾನುವಾರ ಪಕ್ಷದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಗೀತಾ ಅವರು 2009ರಲ್ಲಿ ರಾಜಕೀಯ ಪ್ರವೇಶಿಸಿದ್ದರು. ಆ ವರ್ಷದಲ್ಲಿ ಅವರು ಜೈ ಭಾರತ್ ಸಮಂತಾ ಪಕ್ಷದ ಅಭ್ಯರ್ಥಿಯಾಗಿ ಜಗನ್ನಾಥಪುರ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ್ದರು. ಜೈ ಭಾರತ್ ಸಮಂತಾ ಪಕ್ಷವನ್ನು ಮಧುಕೋಡಾ ಸ್ಥಾಪಿದ್ದರು. ಗೀತಾ ಜಗನ್ನಾಥಪುರದಿಂದ ಗೆಲ್ಲುವ ಮುನ್ನ, ಇದೇ ಕ್ಷೇತ್ರದಿಂದ ಎರಡು ಬಾರಿ (2000ರಲ್ಲಿ ಬಿಜೆಪಿ ಮತ್ತು 2005ರಲ್ಲಿ ಸ್ವತಂತ್ರ) ಮಧು ಕೋಡಾ ಈ ಕ್ಷೇತ್ರದಿಂದ ಗೆಲುವುದ ದಾಖಲಿಸಿದ್ದರು.

ಕಾಂಗ್ರೆಸ್‌ನಿಂದ ಗೆದ್ದ ಏಕೈಕ ಅಭ್ಯರ್ಥಿ ಗೀತಾ ಅವರು, 2014ರಲ್ಲಿ ಮೋದಿ ಅಲೆಯನ್ನು ಎದುರಿಸಿ ಸೀಟು ಉಳಿಸಿಕೊಂಡಿದ್ದರು. 2018 ರಲ್ಲಿ ಅವರ ಜೈ ಭಾರತ್ ಸಮಂತಾ ಪಕ್ಷವು ಕಾಂಗ್ರೆಸ್‌ನಲ್ಲಿ ವಿಲೀನಗೊಳಿಸಿದ್ದರು.

ಸಕ್ರಿಯ ಸಂಸದೀಯ ಪಟುವಾಗಿರುವ ಗೀತಾ ಕೋಡಾ ಅವರು, ಈ ಅವಧಿಯ ಲೋಕಸಭೆಯಲ್ಲಿ ಶೇ.69 ಹಾಜರಾತಿ ಹೊಂದಿದ್ದಾರೆ. ಗೀತಾ ಅವರು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರಾಗಿದ್ದಾರೆ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿಯ ಸಲಹಾ ಸಮಿತಿಯ ಸದಸ್ಯರಾಗಿದ್ದಾರೆ.

ಡಿಸೆಂಬರ್ 2021ರಲ್ಲಿ ಜನ ಗಣತಿ ನಡೆದಾಗ ಬುಡಕಟ್ಟು ಸಮುದಾಯದ ಜನರಿಗೆ ‘ಸರ್ನಾ ಧಾರ್ಮಿಕ ಸಂಹಿತೆ’ ಪ್ರತ್ಯೇಕ ಕೋಡ್ ಕೊಡುವಂತೆ ಗೀತಾ ಧ್ವನಿಯೆತ್ತಿದ್ದರು. ಈ ವಿಷಯದ ಬಗ್ಗೆ ಮೋದಿ ಸರ್ಕಾರದ ನಿಲುವನ್ನು ಅವರು ಪ್ರಶ್ನಿಸಿದ್ದರು. ಲೋಕಸಭೆಯಲ್ಲಿ ಮಾತನಾಡಿದ್ದ ಗೀತಾ, “ಸ್ಪೀಕರ್ ಸರ್, ಆದಿವಾಸಿಗಳು ಭಾರತದ ಮೂಲನಿವಾಸಿಗಳು ಮತ್ತು ಅವರ ಅಸ್ತಿತ್ವವು ಅಪಾಯದಲ್ಲಿದೆ ಎಂದು ನಾನು ನಿಮಗೆ ಹೇಳಲು ಬಯಸುತ್ತೇನೆ. ಈ ವಿಷಯವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ಕೇವಲ ಯೋಜನೆಗಳು ಬುಡಕಟ್ಟು ಜನರಿಗೆ ಪ್ರಯೋಜನವನ್ನು ನೀಡುವುದಿಲ್ಲ. ಸರ್ಕಾರ ಆದಿವಾಸಿಗಳ ಪರ ಇದೆ ಎಂಬುವುದನ್ನು ತೋರಿಸಿಕೊಡಬೇಕು. ಅವರ ಪರ ಜೋರಾಗಿ ಮಾತನಾಡಬೇಕು. ಇಂದು ಆದಿವಾಸಿಗಳು ಅಪಾಯದಲ್ಲಿದ್ದಾರೆ” ಎಂದು ಹೇಳಿದ್ದರು.

ಇದನ್ನೂ ಓದಿ : ಆಂಧ್ರ ವಿಧಾನಸಭೆ ಚುನಾವಣೆ: ಮೊದಲ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...