Homeಚಳವಳಿ#NotFairModiJi ಟ್ವಿಟ್ಟರ್‌ನಲ್ಲಿ ಟ್ರೆಂಡ್: ’ಇದು ಸರಿಯಲ್ಲ ಮೋದಿಜಿ’ ಎಂದ ನೆಟ್ಟಿಗರು...

#NotFairModiJi ಟ್ವಿಟ್ಟರ್‌ನಲ್ಲಿ ಟ್ರೆಂಡ್: ’ಇದು ಸರಿಯಲ್ಲ ಮೋದಿಜಿ’ ಎಂದ ನೆಟ್ಟಿಗರು…

- Advertisement -
- Advertisement -

ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರದಿಂದ ಪರಿಹಾರ ಹಣ ನೀಡಿಲ್ಲ. ಪಿಎಂಸಿ ಬ್ಯಾಂಕಿನಿಂದ ಅನ್ಯಾಯ.. ಕಾಶ್ಮೀರದಲ್ಲಿ ಕರ್ಫ್ಯೂ ಮುಂದುವರೆದಿದೆ. ಆದರೆ ಪ್ರಧಾನಿ ಮೋದಿ ಈ ವಿಚಾರಗಳಿಗೆ ಏನು ಮಾಡುತ್ತಿಲ್ಲ ಎಂದು ಆರೋಪಿಸಿ ’ಇದು ಸರಿಯಲ್ಲ ಮೋದಿಜಿ’ ಎಂದು ನೆಟ್ಟಿಗರು ಗುಡುಗಿದ್ದಾರೆ.

#NotFairModiJi ಟ್ವಿಟ್ಟರ್‌ನಲ್ಲಿ ಟ್ರೆಂಡ್ ಮಾಡುವ ಮೂಲಕ ಹೊಸ ಅಭಿಯಾನಕ್ಕೆ ಕರೆ ನೀಡಿದ್ದಾರೆ. ಇದು ಭಾರತದಲ್ಲೇ ಟ್ರೆಂಡ್ ಆಗಿದ್ದು ಸಾಕಷ್ಟು ಜನ ಈ ಕುರಿತು ಟ್ವೀಟ್ ಮಾಡಿದ್ದಾರೆ.

ಮೋದಿ ಜಿ ರಾಷ್ಟ್ರದ ದುಃಖವನ್ನು ನಿರ್ಲಕ್ಷಿಸುತ್ತಿದ್ದಾರೆ. ಈ ಫ್ಯಾಸಿಸ್ಟ್ ಸರ್ಕಾರವು “ಭಾರತದಲ್ಲಿ ಎಲ್ಲವೂ ಒಳ್ಳೆಯದು” ಎಂದು ಹೇಳಿದಾಗ ಅವರ ಮಾತುಗಳನ್ನು ಮರುಪರಿಶೀಲಿಸಬೇಕಿದೆ. ಮೋದಿಯವರ ಅಜಾಗರೂಕ ನಿರ್ಧಾರಗಳಿಂದಾಗಿ ಇಡೀ ರಾಷ್ಟ್ರವು ಅಘೋಷಿತ ತುರ್ತು ಪರಿಸ್ಥಿತಿಯಿಂದ ಬಳಲುತ್ತಿದೆ. ಇನ್ನೂ ತಡವಾಗುವ ಮುನ್ನ ಎಚ್ಚರಗೊಳ್ಳೋಣ ಎಂದು ಕುಶಾಗ್ರ ಸಕ್ಸೇನಾರವರು ಟ್ವೀಟ್ ಮಾಡಿದ್ದಾರೆ.

ವಿಧಾನಸಭಾ ಚುನಾವಣೆಗಳ ಪ್ರಚಾರಕ್ಕಾಗಿ 17 ಬಾರೀ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ.
ಲೋಕಸಭಾ ಚುನಾವಣೆಗಳಲ್ಲಿ 14 ಬಾರೀ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ.

ಆದರೆ ಪ್ರವಾಹ ಉಂಟಾದಾಗ ಜನರನ್ನು ನೋಡಲು ಸಮಯ ಮತ್ತು ಹಣವಿಲ್ಲ.

ಹೇಡಿ 25 ಸಂಸದರು ಮತ್ತು 105 ಶಾಸಕರು ಮೌನವಾಗಿದ್ದಾರೆ.

ಮೋದಿ ಹೆಸರಿನಲ್ಲಿ ಮತ ಚಲಾಯಿಸಿದ ಭಕ್ತರಿಗೆ ರಾಷ್ಟ್ರೀಯ ವಿರೋಧಿಗಳು ಎಂದು ಹಣೆಪಟ್ಟಿ ಕಟ್ಟಲಾಗಿದೆ

ಸ್ವಂತ ಸಮಾಧಿಯನ್ನು ಅಗೆಯುವುದು ಭಕ್ತರಿಂದ ಕಲಿಯಬೇಕು ಎಂದು ಹೇಮಂತ್ ಕೃಷ್ಣೇಗೌಡ ಟ್ವೀಟ್ ಮಾಡಿದ್ದಾರೆ.

ನವರಾತ್ರಿಯ ಐದನೇ ದಿ‌‌ನ‌ ಇಂದು. ಕಳೆದ ಬಾರಿ ಮೋದಿ ಪ್ರಧಾನಿಯಾಗಬೇಕೆಂದು ನಾವೆಲ್ಲರೂ ಒಂಭತ್ತು ದಿನಗಳ ಕಾಲ ಉಪವಾಸ ಮಾಡಿದ್ದೆವು. ಈ ಬಾರಿ ವೃಷಭಾವತಿ ಸ್ವಚ್ಛವಾಗಲೆಂದು ನಾವು ಉಪವಾಸವಿದ್ದೇವೆ ಎಂದು ಚಕ್ರವರ್ತಿ ಸೂಲಿಬೆಲೆ ಬರೆಯುವ ಮೂಲಕ ಪರೋಕ್ಷವಾಗಿ ಮೋದಿ ವಿರುದ್ಧದ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.

ಪ್ರೀತಿಯ ನರೇಂದ್ರ ಮೋದಿಜಿ,
ಕರ್ನಾಟಕದ ಜನರ ಬಗ್ಗೆ ದುರಹಂಕಾರಿ ಹೇಳಿಕೆ ನೀಡಿದ ಡಿ.ವಿ.ಸದಾನಂದಗೌಡರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ. ಅಲ್ಲಿ ಭಾರೀ ಪ್ರವಾಹದ ನಂತರ ಲಕ್ಷಾಂತರ ಜನರು ಬಳಲುತ್ತಿದ್ದಾರೆ. ನಾವು ನೆರವು ಕೇಳಿದ್ದೇವೆ ಅಷ್ಟೇ. ನಾವು ಯಾರ ಆಸ್ತಿಯನ್ನು ಕೇಳುತ್ತಿಲ್ಲ ಎಂದು ಶ್ವೇತಾ ಡಿ.ಜಿಯವರು ಕಿಡಿಕಾರಿದ್ದಾರೆ.

ರೈತರು ಕಾರ್ಮಿಕರ ಕಷ್ಟದ ಕುರಿತು ಅಮಿತ್ ಪಾಂಡೆಯವರು ವಿಡಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.

ಸರ್ಕಾರವನ್ನು ಸ್ತುತಿಸಿದರೆ ನೀವು ರಾಷ್ಟ್ರೀಯವಾದಿಗಳಾಗುತ್ತೀರಿ. ಸರ್ಕಾರವನ್ನು ಪ್ರಶ್ನಿಸಿದರೆ (ಅಥವಾ ಪ್ರವಾಹ ಪರಿಹಾರಕ್ಕಾಗಿ ಸಹ ಕೇಳಿ) ನಿಮ್ಮನ್ನು ರಾಷ್ಟ್ರ ವಿರೋಧಿ ಮತ್ತು ದೇಶ್ರೋಹಿ ಎಂದು ಕರೆಯಲಾಗುತ್ತದೆ. ಇದು ಪ್ರಸ್ತುತ ಸನ್ನಿವೇಶದ ಕಹಿ ಸತ್ಯ. ಎಂದು ಶೌರ್ಯ ಡಿ ಜೋಷಿ ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...