Homeಮುಖಪುಟಜೆಡಿಎಸ್ ಅಭ್ಯರ್ಥಿ ಗೆಲ್ಲಲು 45 ಮತ ಬೇಕು; ಅವರಿಗೆ ಆತ್ಮಸಾಕ್ಷಿ ಇದೆಯೇ..: ಮುಖ್ಯಮಂತ್ರಿ ಸಿದ್ದರಾಮಯ್ಯ

ಜೆಡಿಎಸ್ ಅಭ್ಯರ್ಥಿ ಗೆಲ್ಲಲು 45 ಮತ ಬೇಕು; ಅವರಿಗೆ ಆತ್ಮಸಾಕ್ಷಿ ಇದೆಯೇ..: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

‘ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಲು 45 ಮತಗಳ ಅಗತ್ಯವಿದೆ, ಅಷ್ಟು ಮತಗಳು ಅವರಿಗಿದೆಯೇ ? ಅವರಿಗೆ ಆತ್ಮಸಾಕ್ಷಿ ಇದೆಯೇ’ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮುಯ್ಯ, ಅವರ ಮತಗಳೇ ನಮಗೆ ಬರುತ್ತವೆ ಎಂದು ಹೇಳಿದರು.

ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಜೆಡಿಎಸ್‌ನವರಿಗೆ ಅಗತ್ಯ ಮತವಿಲ್ಲದಿದ್ದರೂ ಅಭ್ಯರ್ಥಿಯನ್ನು ನಿಲ್ಲಿಸಿ, ಶಾಸಕರಿಗೆ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಬೆದರಿಕೆ ಹಾಕಿರುವುದಕ್ಕೆ ಎಫ್.ಐ.ಆರ್ ಹಾಕಲಾಗಿದೆ. ನಮ್ಮ ಮೂವರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ನ ಮೂರೂ ಅಭ್ಯರ್ಥಿಗಳು ಗೆಲ್ಲುತ್ತಾರೆ

‘ಕಾಂಗ್ರೆಸ್ ನ ಅಜಯ ಮಾಕನ್, ಚಂದ್ರಶೇಖರ್ ಹಾಗೂ ಸೈಯ್ಯದ್ ನಾಸಿರ್ ಹುಸೇನ್, ಮೂರೂ ಅಭ್ಯರ್ಥಿಗಳು ಸುಲಭವಾಗಿ ಗೆಲ್ಲುತ್ತಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮತದಾನ ಪೂರ್ಣಗೊಂಡ ನಂತರ ವಿಧಾನನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ಆಮಿಷಗಳು ಹಾಗೂ ಬೆದರಿಕೆ ಹಾಕಿದ್ದರಿಂದ ಒಟ್ಟಿಗಿದ್ದು ಮತ ಚಲಾವಣೆ ಮಾಡಿದ್ದೇವೆ.
ಚುನಾವಣೆಗೆ ನಿಲ್ಲುವವರೆಲ್ಲಾ ಗೆಲ್ಲುತ್ತೇವೆ ಎಂದೇ ಹೇಳುವುದು; ಸೋಲುತ್ತೇವೆ ಎಂದು ಯಾರೂ ನಿಲ್ಲುವುದಿಲ್ಲ. ಆದರೆ, ಅವರಿಗೆ ಎಷ್ಟು ಮತಗಳು ಬೇಕೋ ಅಷ್ಟು ಮತಗಳಿಲ್ಲ. ಅವರಿಗಿರುವುದೇ 19 ಮತಗಳು. ಅದರಿಂದ ಅವರು ಅಭ್ಯರ್ಥಿಯನ್ನು ನಿಲ್ಲಿಸಬೇಕಿರಲಿಲ್ಲ; ಆದರೂ ನಿಲ್ಲಿಸಿದ್ದಾರೆ. ನಮ್ಮ ಎಲ್ಲಾ ಶಾಸಕರು ನಿಷ್ಠೆಯಿಂದ ಕಾಂಗ್ರೆಸ್ ಪರವಾಗಿ ಮತ ಹಾಕಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಯೇ ಗೆಲ್ಲುವುದು. ಜೆಡಿಎಸ್ ಐದನೇ ಅಭ್ಯರ್ಥಿಯನ್ನು ನಿಲ್ಲಿಸಿದ್ದರಿಂದ ನಾವೆಲ್ಲ ಒಟ್ಟಿಗೆ ಇದ್ದು ಮತ ಹಾಕಬೇಕಾಯಿತು. ನಮ್ಮ ಶಾಸಕರಿಗೆ ಆಸೆ ಆಮಿಷಗಳನ್ನು ಒಡ್ಡುವುದು ಬೆದರಿಕೆ ಹಾಕುವುದನ್ನು ಮಾಡುತ್ತಿದ್ದರು. ಅದಕ್ಕೆ ಎಲ್ಲರೂ ಒಟ್ಟಿಗಿದ್ದು ಮತ ಚಲಾಯಿಸಿದ್ದೇವೆ’ ಎಂದರು.

ಆಮಿಷ ಒಡ್ಡುವ ಪ್ರಮೇಯ ಇಲ್ಲ

ನಮ್ಮ ಸರ್ಕಾರದ ಬಗ್ಗೆ ಒಳ್ಳೆ ಅಭಿಪ್ರಾಯ ಇರುವ ಬೇರೆ ಪಕ್ಷದ ಮತಗಳೂ ಬರಬಹುದು. ನಮಗೆ ಸಾಕಷ್ಟು ಮತಗಳಿರುವಾಗ ಆಸೆ ಆಮಿಷ ಒಡ್ಡುವ ಪ್ರಮೇಯ ಎಲ್ಲಿದೆ. ನಮಗೆ 136 ಮತಗಳಿವೆ. ಸ್ವತಂತ್ರ ಅಭ್ಯರ್ಥಿ ಲತಾ ಪ್ರಕಾಶ್, ಮಲ್ಲಿಕಾರ್ಜುನ ಹಾಗೂ ದರ್ಶನ್ ಪುಟ್ಟಣ್ಣಯ್ಯ, ಪುಟ್ಟಸ್ವಾಮಿ ಗೌಡ ಹಾಗೂ ಜನಾರ್ದನ ರೆಡ್ಡಿ ಇವರ ಮತಗಳಿದ್ದ ಮೇಲೆ ಆಸೆ ಆಮಿಷ ಒಡ್ಡುವ ಪ್ರಮೇಯ ಎಲ್ಲಿದೆ. ಆಮಿಷ, ಬೆದರಿಕೆ ಒಡ್ಡುತ್ತಿರುವವರು ಜೆಡಿಎಸ್ ಹಾಗೂ ಬಿಜೆಪಿಯವರು ಎಂದರು.

ಅಡ್ಡಮತದಾನ ಬಿಜೆಪಿಯಲ್ಲಿ ಮಾತ್ರ ಸಾಧ್ಯ

ಜೆಡಿಎಸ್ ಹಾಗೂ ಬಿಜೆಪಿ ಕಾಂಗ್ರೆಸ್ ನಿಂದ ಅಡ್ಡ ಮತದಾನದ ನಿರೀಕ್ಷೆ ಯಲ್ಲಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ತಮ್ಮ ಶಾಸಕರನ್ನು ಭದ್ರವಾಗಿತ್ತುಕೊಳ್ಳಲಿ; ಅಡ್ಡಮತದಾನ ಬಿಜೆಪಿಯಲ್ಲಿ ಮಾತ್ರ ಸಾಧ್ಯ’ ಎಂದರು.

ಇದನ್ನೂ ಓದಿ; ದಾರಿ ತಪ್ಪಿಸುವ ಜಾಹೀರಾತು; ಪತಂಜಲಿ ಕಂಪನಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...