Homeಫ್ಯಾಕ್ಟ್‌ಚೆಕ್Fact Check: 'ಜಲ ಜೀವನ್ ಮಿಷನ್‌' ಯೋಜನೆಯಲ್ಲಿ ಕೇಂದ್ರದ್ದಷ್ಟೇ ಅಲ್ಲ, ರಾಜ್ಯದ ಪಾಲೂ ಇದೆ

Fact Check: ‘ಜಲ ಜೀವನ್ ಮಿಷನ್‌’ ಯೋಜನೆಯಲ್ಲಿ ಕೇಂದ್ರದ್ದಷ್ಟೇ ಅಲ್ಲ, ರಾಜ್ಯದ ಪಾಲೂ ಇದೆ

ಜೆಜೆಎಂ ಕೇವಲ ಕೇಂದ್ರದ ಯೋಜನೆ ಎನ್ನಲು ಸಾಧ್ಯವಿಲ್ಲ

- Advertisement -
- Advertisement -

‘ಜಲ ಜೀವನ್ ಮಿಷನ್'(ಜೆಜೆಎಂ) ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ವಿಚಾರದಲ್ಲಿ ರಾಜಕೀಯ ಕಿತ್ತಾಟ ನಡೆಯುತ್ತಿದೆ. ಬಿಜೆಪಿ ಬೆಂಬಲಿಗರು ‘ಮೋದಿ ದುಡ್ಡು ಸಿದ್ದು ಹೆಸರು’ ಎಂಬ ಪೋಸ್ಟರ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದು, ‘ಕೇಂದ್ರದ ಮೋದಿ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯ ನೀರನ್ನು ಸಿದ್ದರಾಮಯ್ಯ ಸರ್ಕಾರ ತನ್ನದೆಂದು ಬಿಂಬಿಸುತ್ತಿದೆ’ ಎಂಬರ್ಥದಲ್ಲಿ ಸುದ್ದಿ ಹಂಚುತ್ತಿದ್ದಾರೆ.

ಫ್ಯಾಕ್ಟ್‌ಚೆಕ್ : ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗ ಜಲ ಜೀವನ್ ಮಿಷನ್ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭಿಮಾನಿಗಳು ಪರಸ್ಪರ ಕಿತ್ತಾಟದಲ್ಲಿ ನಿರತರಾಗಿದ್ದಾರೆ. ಹಾಗಾಗಿ, ಯೋಜನೆಯ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಜಲ ಜೀವನ್ ಮಿಷನ್ ಯೋಜನೆ ಯಾರದ್ದು? ಇದರ ಉದ್ದೇಶವೇನು? ಈ ಯೋಜನೆಗೆ ಯಾರು ಹಣ ಒದಗಿಸುತ್ತಿದ್ದಾರೆ?, ಯೋಜನೆಯಲ್ಲಿ ಕೇಂದ್ರದ ಪಾಲೆಷ್ಟಿದೆ?, ರಾಜ್ಯದ ಪಾಲೆಷ್ಟಿದೆ? ಇತ್ಯಾದಿ ವಿಷಯಗಳ ಕುರಿತು ನೈಜ ಮಾಹಿತಿಯನ್ನು ನಾವು ಇಲ್ಲಿ ತೆರದಿಟ್ಟಿದ್ದೇವೆ.

ಜಲ ಜೀವನ್ ಮಿಷನ್ ಯೋಜನೆಯ ಕುರಿತು ಮಾಹಿತಿ ಹುಡುಕಿದಾಗ ಕೇಂದ್ರ ಸರ್ಕಾರದ ಅಧಿಕೃತ ಸಂಸ್ಥೆ ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (ಪಿಐಬಿ) 21 ಮಾರ್ಚ್ 2022ರಂದು ಜಲ ಜೀವನ್ ಮಿಷನ್‌ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾಲು (Share of Union and State Government in JJM)ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿದ ಮಾಹಿತಿಯೊಂದು ದೊರೆತಿದೆ.

ಪಿಐಬಿ ಪ್ರಕಟನೆಯಲ್ಲಿ ತಿಳಿಸಿದಂತೆ, 2024ರೊಳಗೆ ದೇಶದ ಗ್ರಾಮೀಣ ಪ್ರದೇಶದ ಪ್ರತೀ ಮನೆಗಳಿಗೆ ನಳ್ಳಿ ನೀರು ಒದಗಿಸುವ ಉದ್ದೇಶದಿಂದ ಆಗಸ್ಟ್ 2019ರಲ್ಲಿ ರಾಜ್ಯಗಳ ಸಹಯೋಗದಲ್ಲಿ ಭಾರತ ಸರ್ಕಾರ ಜಾರಿಗೆ ತಂದ ಯೋಜನೆಯಾಗಿದೆ ‘ಜಲ ಜೀವನ್ ಮಿಷನ್’ (ಜೆಜೆಎಂ) ಇದರ ಅಂದಾಜು ವೆಚ್ಚವು ರೂ. 3.60 ಲಕ್ಷ ಕೋಟಿಯಾಗಿದ್ದು, ಇದರಲ್ಲಿ ಕೇಂದ್ರ ಪಾಲು ರೂ. 2.08 ಲಕ್ಷ ಕೋಟಿ ಆಗಿದೆ.

ಜೆಜೆಎಂ ಯೋಜನೆಗೆ ಶಾಸಕಾಂಗವಿಲ್ಲದ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಶೇ. 100ರಷ್ಟು ಅನುದಾನ ಒದಗಿಸುತ್ತಿದೆ. ಅಂದರೆ, ಯೋಜನೆಯ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸುತ್ತಿದೆ. ಈಶಾನ್ಯ, ಹಿಮಾಲಯ ರಾಜ್ಯಗಳು ಮತ್ತು ಶಾಸಕಾಂಗ ಇರುವ ಕೇಂದ್ರಾಡಳಿತ ಪ್ರದೇಶಗಳಿಗೆ 90:10 ಅನುಪಾತದಲ್ಲಿ, ಅಂದರೆ ಯೋಜನೆಯ ಶೇ. 90ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ಮತ್ತು ಶೇ.10 ಅನುದಾವನ್ನು ಆಯಾ ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು ಭರಿಸುತ್ತಿದೆ. ಕರ್ನಾಟಕ, ಕೇರಳದಂತಹ ಸರ್ಕಾರಗಳು ಇರುವ ರಾಜ್ಯಗಳಲ್ಲಿ 50:50 ಅನುಪಾದಲ್ಲಿ ಅನುದಾನ ಹಂಚಿಕೆಯಾಗುತ್ತಿದೆ. ಅಂದರೆ ಯೋಜನೆಯ ಶೇ. 50ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತಿದ್ದು, ಉಳಿದ ಶೇ.50ರಷ್ಟು ವೆಚ್ಚವನ್ನು ಆಯಾ ರಾಜ್ಯ ಸರ್ಕಾರಗಳು ಭರಿಸುತ್ತಿವೆ.

ಪೋಸ್ಟ್ ಲಿಂಕ್ ಇಲ್ಲಿದೆ

ಇದಲ್ಲದೆ, ನೀರಿನ ಗುಣಮಟ್ಟ ನಿರ್ವಹಣಾ ವ್ಯವಸ್ಥೆಯಡಿ (WQMS)ಕೇಂದ್ರಾಡಳಿತ ಪ್ರದೇಶಗಳಿಗೆ ಶೇ.100ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತಿದ್ದು, ಹಿಮಾಲಯ ಹಾಗೂ ಈಶಾನ್ಯ ರಾಜ್ಯಗಳಿಗೆ 90:10 ಅನುಪಾತ ಮತ್ತು ಇತರ ರಾಜ್ಯಗಳಿಗೆ 60:40 ಅನುಪಾತದಲ್ಲಿ ಅನುದಾನ ಹಂಚಿಕೆಯಾಗ್ತಿದೆ.

ಜಲ ಜೀವನ್ ಮಿಷನ್ ಅಡಿಯಲ್ಲಿ ದೇಶದ ಕೆಲ ವಿಶೇಷ ಪ್ರದೇಶಗಳಿಗೆ ಅಲ್ಲಿನ ಪ್ರಾಧಿಕಾರಗಳ ಮೂಲಕ ಪ್ರೋತ್ಸಾಹಧನ ನೀಡಲಾಗುತ್ತಿದೆ. ಉದಾ: ಮರುಭೂಮಿ ಅಭಿವೃದ್ಧಿ ಕಾರ್ಯಕ್ರಮ (ಡಿಡಿಪಿ) ಮತ್ತು ಬರಪೀಡಿತ ಪ್ರದೇಶ ಕಾರ್ಯಕ್ರಮ (ಡಿಪಿಎಪಿ) ಅಡಿಯಲ್ಲಿರುವ ಬರುವ ಭೂಪ್ರದೇಶಗಳಿಗೆ ಶೇ. 30ರಷ್ಟು ಅನುದಾನ, ಎಸ್‌ಸಿ, ಎಸ್‌ಟಿ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ವಾಸಿಸುವ ಜನಸಂಖ್ಯೆಗೆ ಶೇ. 10ರಷ್ಟು ಅನುದಾನ. ನಿಯಮಗಳ ಪ್ರಕಾರ ಅನುದಾನ ಹಂಚಿಕೆ ಮಾಡುವಾಗ ಈ ಪ್ರದೇಶಗಳಿಗೆ ಮೊದಲ ಪ್ರಾಶಸ್ತ್ಯ ನೀಡಬೇಕಾಗಿದೆ.

ಇದಲ್ಲದೆ, ನೀರಿನ ಜೆಇ-ಎಇಎಸ್ (JE-AES-Japanese encephalitis)ಅಂದರೆ, ಡೆಂಗ್ಯೂ, ಹಳದಿ ಜ್ವರ, ವೆಸ್ಟ್ ನೈಲ್ ವೈರಸ್‌ಗಳು ಮತ್ತು ಸೊಳ್ಳೆಯಿಂದ ಬರುವ ರೋಗ ಪೀಡಿತ ಜಿಲ್ಲೆಗಳ ಗ್ರಾಮಗಳು ಮತ್ತು ಸಂಸದರ ಆದರ್ಶ ಗ್ರಾಮಗಳಿಗೆ (Sansad Adarsh GM Yojana (SAGY)ಅನುದಾನ ಒದಗಿಸಲು ಆದ್ಯತೆ ನೀಡಲಾಗುತ್ತಿದೆ. ನರೇಗಾ ಯೋಜನೆಯಡಿ ಪಾರಂಪರಿಕ ಜಲಮೂಲಗಳ ಪುನರುಜ್ಜೀವನಕ್ಕೂ ಜೆಜೆಎಂ ಯೋಜನೆಯಡಿ ಅನುದಾನ ನೀಡಲಾಗುತ್ತಿದೆ. ಉದಾ: ಕಲ್ಯಾಣಿಗಳು, ಬಾವಿಗಳು.

15 ನೇ ಹಣಕಾಸು ಆಯೋಗವು ಗ್ರಾಮೀಣ ಸ್ಥಳೀಯ ಸಂಸ್ಥೆ (RLBs)ಗಳ ಮೂಲಕ, ಸಂಯೋಜಿತ ಜಲಾನಯನ ನಿರ್ವಹಣಾ ಕಾರ್ಯಕ್ರಮ (IWMP),ರಾಜ್ಯ ಯೋಜನೆಗಳು, ಜಿಲ್ಲಾ ಖನಿಜ ಅಭಿವೃದ್ಧಿ ನಿಧಿ, ಸಿಎಸ್‌ಆರ್‌ ನಿಧಿಗಳು, ಸಮುದಾಯ ಕೊಡುಗೆ ಇತ್ಯಾದಿಗಳು ಕೂಡ ಜೆಜೆಎಂಗೆ ಅನುದಾನ ಒದಗಿಸುತ್ತಿದೆ.

ಕೇಂದ್ರ ಜಲಶಕ್ತಿ ಸಚಿವಾಲಯದ ಅಧೀನದಲ್ಲಿ ಜಲ ಜೀವನ್ ಮಿಷನ್ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಜಲ ಶಕ್ತಿ ಸಚಿವಾಲಯ ಅಥವಾ ಜಲ ಸಂಪನ್ಮೂಲ ಸಚಿವಾಲಯವನ್ನು ಎರಡನೇ ಮೋದಿ ಸರ್ಕಾರ ಅವಧಿಯಲ್ಲಿ ಮೇ 2019 ರಲ್ಲಿ ರಚಿಸಲಾಗಿದೆ. ಇದು ಜಲಸಂಪನ್ಮೂಲ ಸಚಿವಾಲಯ, ನದಿ ಅಭಿವೃದ್ಧಿ, ಗಂಗಾ ಪುನರುಜ್ಜೀವನ ಮತ್ತು ಕುಡಿಯುವ ನೀರು ಹಾಗೂ ನೈರ್ಮಲ್ಯ ಸಚಿವಾಲಯಗಳ ವಿಲೀನದಿಂದ ರೂಪುಗೊಂಡಿದೆ.

ನಮಗೆ ದೊರೆತ ಮಾಹಿತಿ ಪ್ರಕಾರ, ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಯೋಜನೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಮಾನ ಪಾಲಿದೆ. ಯೋಜನೆಗೆ ಕೇಂದ್ರ ಸರ್ಕಾರ ಶೇ.50ರಷ್ಟು ಹಣವನ್ನು ಒದಗಿಸಿದರೆ, ಇನ್ನುಳಿದ ಶೇ.50ರಷ್ಟು ಹಣವನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಹಾಗಾಗಿ, ಇದು ಕೇವಲ ಕೇಂದ್ರ ಸರ್ಕಾರ ಯೋಜನೆಯಲ್ಲ, ರಾಜ್ಯ ಸರ್ಕಾರದ ಯೋಜನೆಯೂ ಹೌದು.

ಇದನ್ನೂ ಓದಿ: Fact Check: ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...