Homeಕರ್ನಾಟಕರಾಜ್ಯಸಭಾ ಚುನಾವಣೆಯ ಫಲಿತಾಂಶ ಪ್ರಕಟ: ಕಾಂಗ್ರೆಸ್‌ನ ಮೂವರು, ಬಿಜೆಪಿಯ ಓರ್ವ ಅಭ್ಯರ್ಥಿ ಗೆಲುವು

ರಾಜ್ಯಸಭಾ ಚುನಾವಣೆಯ ಫಲಿತಾಂಶ ಪ್ರಕಟ: ಕಾಂಗ್ರೆಸ್‌ನ ಮೂವರು, ಬಿಜೆಪಿಯ ಓರ್ವ ಅಭ್ಯರ್ಥಿ ಗೆಲುವು

- Advertisement -
- Advertisement -

ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ನಿರೀಕ್ಷೆಯಂತೆ ಕಾಂಗ್ರೆಸ್‌ನ ಮೂವರು ಮತ್ತು ಬಿಜೆಪಿಯ ಓರ್ವ ಅಭ್ಯರ್ಥಿ ಜಯಗಳಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಅಜಯ್ ಮಾಕನ್ 47, ಸೈಯ್ಯದ್ ನಾಸೀರ್ ಹುಸೇನ್ ಮತ್ತು ಜಿ ಸಿ ಚಂದ್ರಶೇಖರ್ ತಲಾ 46 ಮತಗಳನ್ನು ಪಡೆದು ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಪಕ್ಷೇತರ ಶಾಸಕರಾದ ಲತಾ ಮಲ್ಲಿಕಾರ್ಜುನ, ಪುಟ್ಟಸ್ವಾಮಿ ಗೌಡ, ಜನಾರ್ದನ ರೆಡ್ಡಿ ಮತ್ತು ದರ್ಶನ್ ಪುಟ್ಟಣ್ಣಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿದ್ದರು.

ಬಿಜೆಪಿ ಅಭ್ಯರ್ಥಿ ನಾರಾಯಣಾಸಾ ಬಾಂಡಗೆ ಅವರು 47 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಐದನೇ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಜೆಡಿಎಸ್‌ನ ಕುಪೇಂದ್ರ ರೆಡ್ಡಿ ಅವರಿಗೆ ನಿರಾಸೆಯಾಗಿದೆ. ವರದಿಗಳ ಪ್ರಕಾರ, ಜೆಡಿಎಸ್‌ನ ಎಲ್ಲ ಶಾಸಕರು ತಮ್ಮ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಮತ ಹಾಕಿದ್ದಾರೆ.

ಇಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮತದಾನ ನಡೆದಿದ್ದು, ನಾಲ್ಕು ಸ್ಥಾನಗಳಿಗೆ ಐವರು ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದರು.

ಅಡ್ಡ ಮತದಾನ ಮಾಡಿದ ಎಸ್‌.ಟಿ ಸೋಮಶೇಖರ್

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಅಡ್ಡಮತದಾನ ಮಾಡಿದ್ದಾರೆ ಎಂದು ವರದಿಯಾಗಿದೆ

ವಿಧಾನಸೌಧದಲ್ಲಿ ಮತ ಚಲಾಯಿಸಿದ ಬಳಿಕ‌ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್ ಗೆ ತೋರಿಸಿದ್ದೇನೆ” ಎಂದಿದ್ದಾರೆ.

“ಯಾರು ನನ್ನ ಕ್ಷೇತ್ರಕ್ಕೆ ಅನುದಾನ ಕೊಡುವುದಾಗಿ ಭರವಸೆ ನೀಡಿದ್ದಾರೋ, ಅವರಿಗೆ ಮತ ಹಾಕಿದ್ದೇನೆ. ಇದುವರೆಗೆ ಪಕ್ಷ ಹೇಳಿದ ಹಾಗೆ ಕೇಳಿದ್ದೇನೆ. ಆದರೆ, ಈ ಬಾರಿ ನನ್ನ ಕ್ಷೇತ್ರದ ಅಭಿವೃದ್ದಿಗೆ ಅನುದಾನ ಕೊಡುವುದಾಗಿ ಭರವಸೆ ನೀಡಿದವರ ಪರ ಮತ ಚಲಾಯಿಸಿದ್ದೇನೆ” ಎಂದು ಹೇಳಿದ್ದಾರೆ.

ಶಿವರಾಮ್ ಹೆಬ್ಬಾರ್ ಗೈರು

ಅಚ್ಚರಿಯ ಬೆಳವಣಿಗೆಯಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ರಾಜ್ಯಸಭೆ ಚುನಾವಣೆಗೆ ಗೈರಾಗಿದ್ದಾರೆ. ಇಂದು ಬೆಳಗಿನವರೆಗೆ ಬಿಜೆಪಿ ನಾಯಕರ ಜೊತೆ ಸಂಪರ್ಕದಲ್ಲಿದ್ದ ಹೆಬ್ಬಾರ್ ಅವರು ಮತದಾನ ಆರಂಭಕ್ಕೆ ಕೆಲವೇ ಗಂಟೆಗಳು ಮೊದಲು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾದರು.

ಹೆಬ್ಬಾರ್ ಅವರು ಎಲ್ಲಿದ್ದಾರೆ ಎಂದು ಬಿಜೆಪಿ ನಾಯಕರು ಅವರನ್ನು ಹುಡುಕಲು ಮಾಡಿದ ಎಲ್ಲ ಪ್ರಯತ್ನ ವಿಫಲವಾದವು. ಕೊನೆಗೆ ಪಕ್ಷದ ಶಾಸಕಾಂಗ ಕಾರ್ಯದರ್ಶಿ ಹೆಬ್ಬಾರ್ ಅವರ ಶಾಸಕರ ಭವನದ ಕಚೇರಿಗೆ ತೆರಳಿ ಕಚೇರಿಯ ಬಾಗಿಲಿಗೆ ಪಕ್ಷದ ವಿಪ್ ಅಂಟಿಸಿದರು. ಆನಂತರ ಪಕ್ಷದ ಇತರೆ ಮುಖಂಡರು ಅವರ ನಿವಾಸಕ್ಕೂ ತೆರಳಿದ ಮನೆಯ ಬಾಗಿಲಿಗೆ ವಿಪ್ ಅಂಟಿಸಿ ಬಂದರು.

ಬಿಜೆಪಿ ನಾಯಕರು ಹೆಬ್ಬಾರ್ ಅವರನ್ನು ಸಂಪರ್ಕಿಸುವ ಪ್ರಯತ್ನ ನಡೆಸಿದರೂ, ಅದು ಸಫಲವಾಗಿಲ್ಲ. ಅಷ್ಟೊತ್ತಿಗೆ ಮತದಾನದ ಸಮಯವಾದ್ದರಿಂದ ಬಿಜೆಪಿ ನಾಯಕರು ಹೆಬ್ಬಾರ್ ಅವರನ್ನು ಸಂಪರ್ಕಿಸುವ ಪ್ರಯತ್ನ ಕೈ ಬಿಟ್ಟರು ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ : ರಾಜ್ಯಸಭಾ ಚುನಾವಣೆ: ಅಡ್ಡ ಮತದಾನ ಮಾಡಿದ ಎಸ್‌.ಟಿ ಸೋಮಶೇಖರ್: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...