Homeಕರ್ನಾಟಕ7ನೇ ವೇತನ ಆಯೋಗದ ವರದಿ ಬಂದ ನಂತರ ಸಕಾರಾತ್ಮಕ ತೀರ್ಮಾನ: ಸಿಎಂ ಸಿದ್ದರಾಮಯ್ಯ

7ನೇ ವೇತನ ಆಯೋಗದ ವರದಿ ಬಂದ ನಂತರ ಸಕಾರಾತ್ಮಕ ತೀರ್ಮಾನ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಪಂಚ ಗ್ಯಾರಂಟಿಗಳನ್ನು ಜಾರಿ ಮಾಡುವ ಆರ್ಥಿಕ ಹೊರೆಯ ನಡುವೆಯೂ 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ತೀರ್ಮಾನವನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ನಿರ್ಧರಿಸಿದಂತೆ ತುಟ್ಟಿ ಭತ್ಯೆಯನ್ನು ಯಾವುದೇ ವಿಳಂಬವಿಲ್ಲದೇ ರಾಜ್ಯದಲ್ಲಿ ನೀಡಲಾಗುತ್ತಿದೆ. ಎನ್‌ಪಿಎಸ್ ತೆಗೆದು ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವ ಬಗ್ಗೆಯೂ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಸರ್ಕಾರಿ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿ ಮಾಡುವ ಬಗ್ಗೆಯೂ ಶೀಘ್ರದಲ್ಲಿ ತೀರ್ಮಾನಿಸಲಾಗುವುದು ಎಂದರು. ಮುಖ್ಯಮಂತ್ರಿಗಳು ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿ ಜವಾಬ್ದಾರಿಯುತ ಕೆಲಸವನ್ನು ಪರಿಣಾಮಕಾರಿಯಾಗಿ ಮಾಡುತ್ತಿರುವ ಸರ್ಕಾರಿ ನೌಕರರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯದ ಅಭಿವೃದ್ಧಿಯಲ್ಲಿ ಭಾಗಿಯಾಗಬೇಕು

ಕರ್ನಾಟಕದಲ್ಲಿ 7.50 ಲಕ್ಷ ಸರ್ಕಾರಿ ನೌಕರರಿದ್ದಾರೆ. ಅದರಲ್ಲಿ 5.90 ಲಕ್ಷ ಜನ ಹಾಲಿ ಕೆಲಸ ಮಾಡುತ್ತಿದ್ದಾರೆ. 2.50 ಲಕ್ಷ ಜನರನ್ನು ಭರ್ತಿ ಮಾಡಲು ಸಾಧ್ಯವಾಗಿಲ್ಲ. ಕರ್ನಾಟಕದ ಜನಸಂಖ್ಯೆ 7 ಕೋಟಿ ಇದೆ. 7.50 ಲಕ್ಷ ಮಂಜೂರಾಗಿರುವ ಹುದ್ದೆಗಳಿವೆ. 7 ಲಕ್ಷ ಜನ 7 ಕೋಟಿ ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗುವ, ರಾಜ್ಯದ ಅಭಿವೃದ್ಧಿಯಲ್ಲಿ ಭಾಗಿಯಾಗುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನಮ್ಮನ್ನು 5 ವರ್ಷಕ್ಕೊಮ್ಮೆ ಆಯ್ಕೆ ಮಾಡಿದರೆ, ಸರ್ಕಾರಿ ಸೇವೆಗೆ ಸೇರಿದ ಮೇಲೆ ನಿವೃತ್ತಿಯಾಗುವವರೆಗೆ ನವೀಕರಣ ಮಾಡಿಸಿಕೊಳ್ಳುವ ಪ್ರಮೇಯವಿಲ್ಲ. ರಾಜಕಾರಣಿಗಳು 5 ವರ್ಷಕ್ಕೊಮ್ಮೆ ಕರ್ನಾಟಕದ ಜನರ ಆಶೀರ್ವಾದವನ್ನು ನವೀಕರಿಸಿಕೊಳ್ಳಬೇಕು ಎಂದರು.

ಪ್ರಜಾಪ್ರಭುತ್ವದ ಮಾಲೀಕರ ಪರವಾಗಿ ಕೆಲಸ ಮಾಡಬೇಕು

ರಾಜ್ಯದ ಜನ ನನಗೆ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುವ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಅದರಲ್ಲಿ ನೀವೂ, ನಿಮ್ಮ ಕುಟುಂಬದವರೂ ಇದ್ದಾರೆ. 7 ಕೋಟಿ ಕನ್ನಡಿಗರ ಭಾಗವಾದ ಸರ್ಕಾರಿ ನೌಕರರು, ಸಾಮಾಜಿಕ ವ್ಯವಸ್ಥೆಯನ್ನು ಅರ್ಥ ಮಾಡಿಕೊಂಡಿದ್ದೀರಿ ಎಂದು ಭಾವಿಸಿದ್ದೇನೆ. ನಮ್ಮ ಸಮಾಜದಲ್ಲಿ ಸಾಮಾಜಿಕ, ಆರ್ಥಿಕ ಸಮಾನತೆ ತರಬೇಕು. ನಾವೆಲ್ಲರೂ ಪ್ರಜಾಪ್ರಭುತ್ವದ ಮಾಲೀಕರ ಪರವಾಗಿ ಕೆಲಸ ಮಾಡಲು ಇರಬೇಕು ಎಂದರು.

ರಾಜ್ಯದ ಜನರ ಪರವಾಗಿ ಕೆಲಸ ಮಾಡಬೇಕಾಗಿರುವುದು ಮೊದಲನೇ ಆದ್ಯತೆ

ಸರ್ಕಾರ ನಿಮಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ಸರ್ಕಾರ ನಿಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು. ಆದರೆ ಅದೇ ಮೊದಲ ಆದ್ಯತೆ ಅಲ್ಲ. ಅನ್ಯಾಯಗಳನ್ನು ಸರಿಪಡಿಸುವುದು ಸರ್ಕಾರದ ಕರ್ತವ್ಯ. ರಾಜ್ಯದ ಜನರ ಪರವಾಗಿ ಕೆಲಸ ಮಾಡಬೇಕಾಗಿರುವುದು ಮೊದಲನೇ ಆದ್ಯತೆ. ಬೇಡಿಕೆಗಳು ನಂತರದ ಆದ್ಯತೆ. ಇದನ್ನು ಸ್ಪಷ್ಟವಾಗಿ ನೀವು ಅರ್ಥಮಾಡಿಕೊಂಡಿದ್ದೀರಿ ಎನ್ನುವುದು ನನ್ನ ಅನಿಸಿಕೆ ಎಂದು ಹೇಳಿದರು.

ನಾನು ಸರ್ಕಾರಿ ನೌಕರರ ಪರ

ಸರ್ಕಾರಿ ನೌಕರರ ಸಮಸ್ಯೆಗಳನ್ನು ಅರಿತು 7ನೇ ವೇತನ ಆಯೋಗ ರಚಿಸಲಾಗಿದ್ದು, 6ನೇ ವೇತನ ಆಯೋಗವನ್ನು ನಮ್ಮ ಸರ್ಕಾರ ಜಾರಿಗೆ ತಂದಿತ್ತು. ಆ ಸಂದರ್ಭದಲ್ಲಿ ಸರ್ಕಾರಿ ನೌಕರರ ವಿರುದ್ಧವಿರುವುದಾಗಿ ನನ್ನ ಮೇಲೆ ಅರೋಪ ಮಾಡಿದ್ದರು. ಆದರೆ ನಾವೇ 6ನೇ ವೇತನ ಆಯೋಗವನ್ನು ರಚಿಸಿದ್ದೆವು. ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಕೆಲಸವಾಗಬೇಕು. 6ನೇ ವೇತನ ಆಯೋಗದಲ್ಲಿ ಶೇ. 30ರಷ್ಟು ಫಿಟ್ಮೆಂಟ್ ಸೌಲಭ್ಯ ನೀಡಲು 10,500 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಬಿಡುಗಡೆ ಮಾಡಿದೆ. ಈಗ 7 ನೇ ವೇತನ ಆಯೋಗದ ಮಧ್ಯಂತರ ವರದಿಯಂತೆ 17% ಹೆಚ್ಚಳ ಮಾಡಲಾಗಿತ್ತು. ಆಯೋಗದ ಅಂತಿಮ ವರದಿ ನೀಡಲು ಇನ್ನಷ್ಟು ಕಾಲಾವಕಾಶ ಬೇಕೆಂದು ಆಯೋಗದ ಆಧ್ಯಕ್ಷರು ಕೋರಿದ್ದು, ಮಾರ್ಚ್ 15 ರವರೆಗೆ ವರದಿ ನೀಡಲು ಸಮಯಾವಕಾಶ ನೀಡಲಾಗಿದೆ. ಲೋಕಸಭಾ ಚುನಾವಣೆಯ ಹಿನ್ನಲೆ , ಆಯೋಗದ ಅಂತಿಮ ವರದಿಯನ್ನು ಆದಷ್ಟು ಶೀಘ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ. ನಾನು ಸರ್ಕಾರಿ ನೌಕರರ ಪರವಾಗಿದ್ದೇನೆ ಎಂದು ತಿಳಿಸಿದರು.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ, ಸಚಿವ ಈಶ್ವರ್ ಖಂಡ್ರೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಕೃಷ್ಣಪ್ಪ, ಶೇಷಯ್ಯ, ಭೈರಪ್ಪ, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಶ್ರೀನಿವಾಸ ತಿಮ್ಮೇಗೌಡ, ಖಜಾಂಚಿ ಡಾ. ಸಿದ್ದರಾಮಣ್ಣ, ರಾಜ್ಯ ಮಟ್ಟದ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಶಾಸಕರಿಗೆ ‘ಬೆದರಿಕೆ’: ಜೆಡಿಎಸ್ ರಾಜ್ಯಸಭಾ ಅಭ್ಯರ್ಥಿ ಕುಪೇಂದ್ರ ರೆಡ್ಡಿ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...