Homeಮುಖಪುಟಸರಸ್ವತಿಯನ್ನು ಆರಾಧಿಸದ ದಲಿತ ಶಿಕ್ಷಕಿಗೆ ಕಿರುಕುಳ?

ಸರಸ್ವತಿಯನ್ನು ಆರಾಧಿಸದ ದಲಿತ ಶಿಕ್ಷಕಿಗೆ ಕಿರುಕುಳ?

- Advertisement -
- Advertisement -

ರಾಜಸ್ಥಾನದ ಬರಾನ್ ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ತಿಂಗಳು ನಡೆದ ಗಣರಾಜ್ಯೋತ್ಸವ ಆಚರಣೆಯ ವೇಳಿನ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಗುಂಪೊಂದು ದಲಿತ ಸಮುದಾಯಕ್ಕೆ ಸೇರಿದ 40 ವರ್ಷದ ಶಿಕ್ಷಕಿ ಹೇಮಲತಾ ಬೈರ್ವಾ ಅವರೊಂದಿಗೆ ಜಗಳವಾಡುತ್ತಿರುವುದು, ಅವರಲ್ಲಿ ಸರಸ್ವತಿಯನ್ನು ಯಾಕೆ ಪೂಜಿಸುತ್ತಿಲ್ಲ ಎಂದು ಪ್ರಶ್ನಿಸುತ್ತಿರುವುದು ಕಂಡು ಬಂದಿದೆ.

ಇದಾದ ಒಂದು ತಿಂಗಳ ನಂತರ ರಾಜಸ್ಥಾನದ ಸಚಿವ ಮದನ್ ದಿಲಾವರ್ ಅವರ ಸೂಚನೆಯ ಮೇರೆಗೆ ರಾಜ್ಯ ಶಿಕ್ಷಣ ಇಲಾಖೆಯಿಂದ ಬೈರ್ವಾ ಅವರನ್ನು ಅಮಾನತುಗೊಳಿಸಲಾಗಿದೆ ಮತ್ತು ಅವರನ್ನು ಅವರ ಮನೆಯಿಂದ 600 ಕಿಲೋಮೀಟರ್ ದೂರದಲ್ಲಿರುವ ಬಿಕಾನೇರ್‌ಗೆ ವರ್ಗಾಯಿಸಲಾಗಿದೆ. ಬೈರವರ ಅಮಾನತು ಖಂಡಿಸಿ ದಲಿತ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ. ಸಚಿವ ಮದನ್ ದಿಲಾವರ್ ರಾಜೀನಾಮೆಗೆ ದಲಿತ ಸಮುದಾಯ ಪಟ್ಟು ಹಿಡಿದಿದೆ.

ಜನವರಿ 26ರಂದು ಈ ಕುರಿತು ವೀಡಿಯೊ ವೈರಲ್‌ ಆಗಿದೆ. ಶಿಕ್ಷಕಿ ಬೈರ್ವಾ, ಮಹಾತ್ಮಾ ಗಾಂಧಿ, ಸಾವಿತ್ರಿಬಾಯಿ ಫುಲೆ ಮತ್ತು ಬಿಆರ್ ಅಂಬೇಡ್ಕರ್ ಅವರ ಹಾರ ಹಾಕಿದ ಫೋಟೋಗಳ ಮುಂದೆ ನಿಂತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಪುರುಷರ ಗುಂಪು ಅವಳ ಜೊತೆ ವಾಗ್ವಾದ ನಡೆಸುವುದು ಕಂಡು ಬಂದಿದೆ.

ಬಚ್ಚೋನ್ ಕಿ ದೇವಿ ಸರಸ್ವತಿ ಹೈ (ಮಕ್ಕಳ ದೇವತೆ ಸರಸ್ವತಿ) ಎಂದು ಗುಂಪು ಹೇಳುವುದು ವಿಡಿಯೋದಲ್ಲಿ ಕೇಳಿಸುತ್ತಿದೆ. ಅದಕ್ಕೆ ಬೈರ್ವಾ ‘ಬಚ್ಚೋನ್ ಕಿ ದೇವಿ ತೋ ಸಾವಿತ್ರಿಬಾಯಿ ಫುಲೆ ಹೈ (ಮಕ್ಕಳ ದೇವತೆ ಸಾವಿತ್ರಿಬಾಯಿ ಫುಲೆ)’ ಎಂದು ಉತ್ತರಿಸುವುದು ವಿಡಿಯೋದಲ್ಲಿ ಸೆರೆಯಾಗಿತ್ತು.

ಬೈರ್ವಾ ಹಿಂದೂ ದೇವತೆ ಸರಸ್ವತಿಯ ಪೂಜೆಯನ್ನು ಮಾಡಬೇಕೆಂದು ಗುಂಪು ಒತ್ತಾಯಿಸಿದಾಗ, ಅವರ ಅದನ್ನು ನಿರಾಕರಿಸುವುದನ್ನು ಕಾಣಬಹುದು. ಇದಾದ ಬಳಿಕ ಶಾಲೆಯ ಮುಂದೆ ಜಮಾಯಿಸಿದ ಗುಂಪು ಆಕೆಗೆ ಕಾರ್ಯಕ್ರಮ ಹೇಗೆ ಮುಂದುವರಿಸುತ್ತೀರೆಂದು ಸವಾಲು ಹಾಕುತ್ತಿರುವುದು ಕಂಡು ಬಂದಿದೆ. ದೀಪ ಏಕೆ ಇರಲಿಲ್ಲ?  ಬೈರ್ವಾ ಹಿಂದೂ ಸಂಪ್ರದಾಯಗಳ ಬಗ್ಗೆ ತಿಳಿದಿಲ್ಲವೇ ಎಂದು ಒಬ್ಬ ವ್ಯಕ್ತಿ ಕೇಳುವುದು ಕೂಡ ವಿಡಿಯೋದಲ್ಲಿ ಸೆರೆಯಾಗಿದೆ. ಹಿಂದೂ ಎಂದರೆ ಏನು? ಹಿಂದೂ, ಮುಸ್ಲಿಂ, ಸಿಖ್, ಇಸಾಯಿ ಸಬ್ ಬರಾಬರ್ ಹೈ (ಹಿಂದೂ, ಮುಸ್ಲಿಂ, ಸಿಖ್, ಕ್ರಿಶ್ಚಿಯನ್ ಎಲ್ಲರೂ ಸಮಾನರು) ಎಂದು ಬೈರ್ವಾ ಹೇಳುತ್ತಿರುವುದು ವಿಡಿಯೋದಲ್ಲಿ ಕೇಳಿಬರುತ್ತಿದೆ.

ಎಫ್‌ಐಆರ್‌ ದಾಖಲು:

ಘಟನೆಯ ಬಗ್ಗೆ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಅದರಲ್ಲಿ ಒಂದು ಬೈರ್ವಾ ಅವರ ವಿರುದ್ಧ ದಾಖಲಿಸಲಾಗಿದೆ ಮತ್ತು ಇನ್ನೊಂದು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವುದಕ್ಕಾಗಿ ಶಿಕ್ಷಕಿ ಬೈರ್ವಾ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಗಣರಾಜ್ಯೋತ್ಸವದಂದು ಸರ್ಕಾರಿ ಸೇವಕಳಾಗಿ ನಾನು ಭಾರತದ ಪವಿತ್ರ ಸಂವಿಧಾನದ ಅನುಷ್ಠಾನದ 75ನೇ ವಾರ್ಷಿಕೋತ್ಸವವನ್ನು ಆಚರಿಸಲು ಶಾಲೆಯಲ್ಲಿ ಸಿದ್ಧತೆ ಮಾಡುತ್ತಿದ್ದೆ, ಈ ವೇಳೆ ಗುಂಪು ಮತ್ತು ಶಾಲಾ ಸಿಬ್ಬಂದಿಗಳಾದ  ಹಂಸರಾಜ್ ಸೈನ್ ಮತ್ತು ಭೂಪೇಂದ್ರ ಸೇನ್ ಅವರು ಸಾರ್ವಜನಿಕ ಸ್ಥಳದಲ್ಲಿ ಸರಸ್ವತಿ ಪೂಜೆ ಮಾಡುವಂತೆ ನನಗೆ ಕಿರುಕುಳ ನೀಡಲು ಪ್ರಾರಂಭಿಸಿದರು ಎಂದು ಎಫ್‌ಐಆರ್ ದಾಖಲಿಸಲಾಗಿದೆ.

ಈ ಬಗ್ಗೆ ಬರಾನ್‌ನ ನಹರ್‌ಗಢ್ ಪೊಲೀಸ್ ಠಾಣೆಯಲ್ಲಿ ಬೈರ್ವಾ ಅವರ ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ. ನಾನು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಕ್ಕೆ ಸೇರಿದ ಮಹಿಳಾ ಸೇವಕಿ. ಹಂಸರಾಜ್ ನಗರ, ಭಾರತ್ ನಗರ, ರಾಧೇಶ್ಯಾಮ್ ನಗರ ಜಾತಿ ನಿಂದನೆಗಳನ್ನು ಮಾಡಿದ್ದಾರೆ. ಇದರಿಂದ ನನಗೆ ಮಾನಸಿಕವಾಗಿ ಕಿರುಕುಳವಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಸೇರಿ ವಿವಿಧ ಸೆಕ್ಸನ್‌ಗಳಡಿಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.

ಇದಲ್ಲದೆ ಸರ್ಕಾರಿ ಶಿಕ್ಷಕಿ ಹೇಮಲತಾ ಬೈರ್ವಾ ವಿರುದ್ಧ ಸೆಕ್ಷನ್ 153 ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಸೇರಿದಂತೆ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಜನವರಿ 26ರ ಘಟನೆಯ ನಂತರ, ಬಿಜೆಪಿಯ ಹಿರಿಯ ಶಾಸಕ ಮತ್ತು ರಾಜಸ್ಥಾನ ಶಿಕ್ಷಣ ಸಚಿವ ಮದನ್ ದಿಲಾವರ್ಹಾದ್ ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಬೈರ್ವಾ ಅವರನ್ನು ಕಳೆದ ವಾರ ಅಮಾನತುಗೊಳಿಸಲಾಗಿತ್ತು.

ಬೈರ್ವಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ತನ್ನ ಜಾತಿಯ ಕಾರಣಕ್ಕಾಗಿ ತನಗೆ ಕಿರುಕುಳ ನೀಡಲಾಗುತ್ತಿದೆ ಮತ್ತು ತಾನು ಬಿಕಾನೇರ್‌ಗೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಸಾರ್ವಜನಿಕ ವೇದಿಕೆಯಲ್ಲಿ ನನಗೆ ಬೆದರಿಕೆ ಹಾಕುವುದು ಎಷ್ಟು ಸರಿ? ನಾನು ಎಫ್‌ಐಆರ್ ದಾಖಲಿಸಿದ್ದು, ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ. ಬದಲಾಗಿ ನನ್ನನ್ನು ಅಮಾನತು ಮಾಡಲಾಗಿದೆ. ದಲಿತ ಮಕ್ಕಳು ಇರುವ ಶಾಲೆಯಲ್ಲಿ ಕೆಲವು ಆರೋಪಿಗಳು ನಿಯಮಿತವಾಗಿ ಜಾತಿಪದ್ಧತಿ ಅನುಸರಿಸುತ್ತಾರೆ. ಸಾವಿತ್ರಿಭಾಯಿ ಫುಲೆ ಮಹಿಳೆಯರಿಗಾಗಿ ಶಾಲೆಗಳನ್ನು ತೆರೆದರು. ಅವಳಿಗಿಂತ ಮೊದಲು ಎಷ್ಟು ಮಹಿಳೆಯರು ಅಕ್ಷರಸ್ಥರಾಗಿದ್ದರು? ಧಾರ್ಮಿಕ ನಂಬಿಕೆಗಳು ವೈಯಕ್ತಿಕ ಮತ್ತು ನಾವು ಸಂವಿಧಾನವನ್ನು ಮಾತ್ರ ಅನುಸರಿಸುತ್ತೇವೆ ಎಂದು ಹೇಳಿದ್ದಾರೆ.

ಇದಲ್ಲದೆ ದಲಿತ ಶಿಕ್ಷಕಿಯನ್ನು ಅಮಾನತು ಮಾಡಿದ್ದನ್ನು ಖಂಡಿಸಿ ಪ್ರತಿಭಟಿಸಿದ ಪ್ರತಿಭಟನಾಕಾರರ ಮೇಲೆ ಪೊಲೀಸ್‌ ದೌರ್ಜನ್ಯ ನಡೆಸಿದೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನು ಓದಿ: ಬ್ರಾಹ್ಮಣರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಅರ್ಚಕ ಹುದ್ದೆ ಪ್ರಶ್ನಿಸಿದ್ದ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊದಲ ಬೋರ್ಡ್ ಪರೀಕ್ಷೆ ಕಡ್ಡಾಯ, ಪರಿಣಾಮಗಳ ಬಗ್ಗೆ ಎಚ್ಚರಿಕೆ

ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ ಬರೆಯುವುದು ಕಡ್ಡಾಯ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸ್ಪಷ್ಟಪಡಿಸಿದ್ದು, ಮೊದಲ ಆವೃತ್ತಿಯಲ್ಲಿ ಕನಿಷ್ಠ ಮೂರು ವಿಷಯಗಳನ್ನು ಪ್ರಯತ್ನಿಸದ ವಿದ್ಯಾರ್ಥಿಗಳು "ಅಗತ್ಯ...

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ವಿಧಾನಸಭೆಯ 2023ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ (ಭಾಗ್ಯನಗರ) ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎನ್‌.ಸುಬ್ಬಾರೆಡ್ಡಿ ಆಯ್ಕೆಯಾಗಿರುವುದನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ &ಬೆಂಚ್ ಸೋಮವಾರ (ಫೆ.16) ವರದಿ ಮಾಡಿದೆ. ಸುಬ್ಬಾರೆಡ್ಡಿ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ ; ಮೂವರು ಅಪರಾಧಿಗಳಿಗೆ ಮರಣದಂಡನೆ

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಅಪರಾಧಿಗಳಿಗೆ ಒಂದನೇ ಹೆಚ್ಚುವರಿ...

ಶಿವಮೊಗ್ಗ: 40 ಸಾವಿರ ಲಂಚ ಪಡೆಯುತ್ತಿದ್ದ ಕೆಎಎಸ್ ಅಧಿಕಾರಿ ಸೇರಿ ಇಬ್ಬರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು 

ಶಿವಮೊಗ್ಗ: 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ (KAS officer) ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಎಂಬುವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ...

ದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ; ಹೈಕೋರ್ಟ್‌ಗೆ ಹೋಗಲು ಸೂಚನೆ

ಸಂವಿಧಾನದ 32ನೇ ವಿಧಿಯಡಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಈ ವಿಷಯವಾಗಿ ಗುವಾಹಟಿ ಹೈಕೋರ್ಟ್...

ಕಲಬುರಗಿ| ಅನುಮತಿ ಇಲ್ಲದೆ ಪುರಾತತ್ವ ಇಲಾಖೆ ಕೋಟೆ ಪ್ರವೇಶಕ್ಕೆ ಯತ್ನಿಸಿದ ಪಿಎಸ್‌ಐ ಹಗರಣದ ಆರೋಪಿ ದಿವ್ಯಾ ಹಾಗರಗಿ ತಂಡ

ಸಬ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಮಾಜಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ನೇತೃತ್ವದ ಗುಂಪೊಂದು ಭಾನುವಾರ ಕಲಬುರಗಿ ಕೋಟೆಗೆ ಮಹಾಶಿವರಾತ್ರಿ ಪೂಜೆ ಮಾಡಲು ಅನುಮತಿಯಿಲ್ಲದೆ ಪ್ರವೇಶಿಸಲು ಯತ್ನಿಸಿದ...

‘ಆರೆಸ್ಸೆಸ್ ಭೂತ, ಬಿಜೆಪಿ ಅದರ ನೆರಳು’: ಆರ್‌ಎಸ್‌ಎಸ್ ನೋಂದಣಿ ಆಗೇ ಆಗುತ್ತೆ, ನಾವು ಮಾಡಿಸುತ್ತೇವೆ: ಪ್ರಿಯಾಂಕ್ ಖರ್ಗೆ 

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಆರ್‌ಎಸ್‌ಎಸ್ ಮತ್ತು ಅದರ ಸೈದ್ಧಾಂತಿಕ ಸಂತತಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಆರ್‌ಎಸ್‌ಎಸ್ ಇಲ್ಲದೆ ಬಿಜೆಪಿ "ಜೆಡಿ (ಎಸ್) ಗಿಂತ ದುರ್ಬಲವಾಗಿದೆ"...

ರಾಜಸ್ಥಾನ| ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಏಳು ಮಂದಿ ಸಾವು – ಹಲವರು ಸಿಲುಕಿರುವ ಶಂಕೆ

ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಭಿವಾಡಿ ಪಟ್ಟಣದಲ್ಲಿ ಸೋಮವಾರ ಅಕ್ರಮ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಮಭವಿಸಿದ ಬೆಂಕಿ ಅವಘಡದಲ್ಲಿ ಏಳು ಮಂದಿ ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. "ಘಟನೆಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಇದು...

ಶಬರಿಮಲೆಗೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಸಂವಿಧಾನ ಪೀಠ

ಏಪ್ರಿಲ್ 7 ರಿಂದ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲು 9 ನ್ಯಾಯಾಧೀಶರ ಪೀಠವನ್ನು ಸ್ಥಾಪಿಸುವುದಾಗಿ ಸುಪ್ರೀಂ ಕೋರ್ಟ್ ಫೆಬ್ರವರಿ 16, ಸೋಮವಾರದಂದು ಘೋಷಿಸಿರುವುದಾಗಿ ಲೈವ್ ಲಾ...

ಬಾಂಗ್ಲಾ ಪ್ರಧಾನಿ ಪದಗ್ರಹಣ : ಭಾರತವನ್ನು ಪ್ರತಿನಿಧಿಸಲಿರುವ ಸ್ಪೀಕರ್ ಓಂ ಬಿರ್ಲಾ

ಫೆಬ್ರವರಿ 17ರಂದು ನಡೆಯಲಿರುವ ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಖ್ ರೆಹಮಾನ್ ಅವರ ಪದಗ್ರಹಣದ ಸಮಾರಂಭದಲ್ಲಿ ಭಾರತದಿಂದ ಅಧಿಕೃತ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು...