Homeಮುಖಪುಟಗುಜರಾತ್ ಗಲಭೆ ಕೇಸ್‌ ಸೇರಿ ಪ್ರಮುಖ ಕೇಸ್‌ಗಳಲ್ಲಿ ತೀರ್ಪು ನೀಡಿದ್ದ ನೂತನ ಲೋಕಪಾಲ್ ಖಾನ್ವಿಲ್ಕರ್

ಗುಜರಾತ್ ಗಲಭೆ ಕೇಸ್‌ ಸೇರಿ ಪ್ರಮುಖ ಕೇಸ್‌ಗಳಲ್ಲಿ ತೀರ್ಪು ನೀಡಿದ್ದ ನೂತನ ಲೋಕಪಾಲ್ ಖಾನ್ವಿಲ್ಕರ್

- Advertisement -
- Advertisement -

ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಎ.ಎಂ.ಖಾನ್ವಿಲ್ಕರ್ ಅವರು ಸುಪ್ರೀಂಕೋರ್ಟ್‌ನಿಂದ ನಿವೃತ್ತರಾದ ಒಂದೂವರೆ ವರ್ಷಗಳ ನಂತರ ಲೋಕಪಾಲ್ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ನ್ಯಾಯಮೂರ್ತಿ ಖಾನ್ವಿಲ್ಕರ್ ಅವರು ಜುಲೈ 2022ರಲ್ಲಿ ಸುಪ್ರೀಂಕೋರ್ಟ್‌ನಿಂದ ನಿವೃತ್ತರಾಗಿದ್ದರು. ಅವರನ್ನು ಫೆಬ್ರವರಿ 27, 2024ರಂದು ಲೋಕಪಾಲ್‌ ಆಗಿ ನೇಮಕ ಮಾಡಲಾಗಿದೆ. ಇವರು ಎರಡನೇ ಲೋಕಪಾಲ್‌ ಎಂಬ ಹೆಗ್ಗಳಿಕೆಗೆ ಕೂಡ ಪಾತ್ರರಾಗಿದ್ದಾರೆ. ಇದಲ್ಲದೆ ರಾಷ್ಟ್ರಪತಿಗಳು ಮಾಜಿ ಹೈಕೋರ್ಟ್ ನ್ಯಾಯಮೂರ್ತಿಗಳಾದ ಲಿಂಗಪ್ಪ ನಾರಾಯಣ ಸ್ವಾಮಿ, ಸಂಜಯ್ ಯಾದವ್ ಮತ್ತು ರಿತು ರಾಜ್ ಅವಸ್ತಿ ಅವರನ್ನು ಲೋಕಪಾಲ್‌ಗೆ  ನ್ಯಾಯಾಂಗ ಸದಸ್ಯರನ್ನಾಗಿ ನೇಮಿಸಿದೆ. ನ್ಯಾಯಾಂಗೇತರ ಸದಸ್ಯರಾಗಿ ಸುಶೀಲ್ ಚಂದ್ರ, ಪಂಕಜ್ ಕುಮಾರ್ ಮತ್ತು ಅಜಯ್ ಟಿರ್ಕಿ ಅವರನ್ನು ನೇಮಕ ಮಾಡಲಾಗಿದೆ.

ಜಾರ್ಖಂಡ್ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಪ್ರದೀಪ್ ಕುಮಾರ್ ಮೊಹಾಂತಿ ಅವರು ಲೋಕಪಾಲ್‌ನ ಪ್ರಸ್ತುತ ಹಂಗಾಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2019ರಲ್ಲಿ ಲೋಕಪಾಲ್‌ ನ್ಯಾಯಾಂಗ ಸದಸ್ಯರಾಗಿ ನೇಮಕಗೊಂಡ ಅವರನ್ನು ಮೇ.2022ರಲ್ಲಿ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

ನ್ಯಾಯಮೂರ್ತಿ ಖಾನ್ವಿಲ್ಕರ್ ಅವರ ನೇಮಕಾತಿಯು ನಿವೃತ್ತಿಯ ನಂತರದ ಉನ್ನತ ಹುದ್ದೆಗಳು ನೀಡುವ ಸಂಪ್ರದಾಯಕ್ಕೆ ನಿದರ್ಶನವಾಗಿದೆ. ನರೇಂದ್ರ ಮೋದಿ ಸರ್ಕಾರವು, ಬಾಬರಿ ಮಸೀದಿ- ರಾಮಜನ್ಮ ಭೂಮಿ ವಿವಾದದ ತೀರ್ಪು ನೀಡಿದ್ದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ಸುಪ್ರೀಂಕೋರ್ಟ್‌ನಿಂದ ಸಿಜೆಐ ಆಗಿ ನಿವೃತ್ತರಾದ ನಾಲ್ಕು ತಿಂಗಳಲ್ಲಿ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು. ಜುಲೈ 2021ರಲ್ಲಿ ನಿವೃತ್ತರಾದ ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರು ಅದೇ ವರ್ಷದ ನಂತರ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯ ಮುಖ್ಯಸ್ಥರಾದರು. 2021ರಲ್ಲಿ ಮೋದಿ ಸರ್ಕಾರವು ಮಾಜಿ ಸುಪ್ರೀಂಕೋರ್ಟ್ ನ್ಯಾಯಾಧೀಶ ಅರುಣ್ ಕುಮಾರ್ ಮಿಶ್ರಾ ಅವರ ಹೆಸರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಹುದ್ದೆಗೆ ಶಿಫಾರಸ್ಸು ಮಾಡಿತ್ತು. 2023ರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಜಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ಗವರ್ನರ್ ಆಗಿ ನೇಮಿಸಿದ್ದರು.

ನ್ಯಾಯಮೂರ್ತಿ ಖಾನ್ವಿಲ್ಕರ್ ಅವರು ನರೇಂದ್ರ ಮೋದಿ ಸರ್ಕಾರದ ನಿರ್ಧಾರಗಳ ಮೇಲೆ ವ್ಯಾಪಕ ಪರಿಣಾಮ ಬೀರುವ ಪ್ರಮುಖ ತೀರ್ಪುಗಳನ್ನು ಬರೆದಿದ್ದಾರೆ.

377, ಆಧಾರ್, ಶಬರಿಮಲೆ

2018ರಲ್ಲಿ ನ್ಯಾಯಮೂರ್ತಿ ಖಾನ್ವಿಲ್ಕರ್ ಅವರು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐದು ನ್ಯಾಯಾಧೀಶರ ಸಂವಿಧಾನ ಪೀಠದ ಭಾಗವಾಗಿದ್ದರು. ಪೀಠದಲ್ಲಿ ನ್ಯಾಯಮೂರ್ತಿಗಳಾದ ರೋಹಿಂಟನ್ ಫಾಲಿ ನಾರಿಮನ್, ಡಿವೈ ಚಂದ್ರಚೂಡ್ ಮತ್ತು ಇಂದೂ ಮಲ್ಹೋತ್ರಾ ಇದ್ದರು. ಈ ಪೀಠ ಸಲಿಂಗಕಾಮವನ್ನು ಅಪರಾಧವಲ್ಲ ಎಂದು ತೀರ್ಪು ನೀಡಿತ್ತು.

ಅದೇ ವರ್ಷ 2018ರಲ್ಲಿ, ನ್ಯಾಯಮೂರ್ತಿ ಖಾನ್ವಿಲ್ಕರ್ ಅವರ ಪೀಠವು ಆಧಾರ್ ಕಾಯಿದೆಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದಿದೆ. ನ್ಯಾಯಮೂರ್ತಿ ಸಿಕ್ರಿ ಅವರು ಬರೆದ ಬಹುಮತದ ಅಭಿಪ್ರಾಯವು ಅಂದಿನ ಸಿಜೆಐ ಮಿಶ್ರಾ ಮತ್ತು ನ್ಯಾಯಮೂರ್ತಿ ಖಾನ್ವಿಲ್ಕರ್ ಅವರ ಪರವಾಗಿತ್ತು. ಆಧಾರ್‌ ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ಹೇಳಿದ್ದರು, ಇದನ್ನು ನ್ಯಾಯಾಲಯವು ಒಪ್ಪಿರಲಿಲ್ಲ.

2018ರಲ್ಲಿ ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶವನ್ನು ಅನುಮತಿಸಿದ ಸುಪ್ರೀಂ ಕೋರ್ಟ್ ಪೀಠದ ಭಾಗವಾಗಿದ್ದ ನ್ಯಾಯಮೂರ್ತಿ ಖಾನ್ವಿಲ್ಕರ್, ದೇಗುಲಕ್ಕೆ ಮಹಿಳೆಯರ ಪ್ರವೇಶವನ್ನು ನಿಷೇಧಿಸುವುದು ಲಿಂಗ ತಾರತಮ್ಯ ಮತ್ತು ಆಚರಣೆಯು ಹಿಂದೂ ಮಹಿಳೆಯರ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದರು.

ಗುಜರಾತ್ ಗಲಭೆ

2002ರ ಗುಜರಾತ್‌ ಗಲಭೆಗೆ ಸಂಬಂಧಿಸಿ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಸೇರಿದಂತೆ 64 ಜನರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಹತ್ಯೆಯಾದ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಕಿಯಾ ಜಾಫ್ರಿ ಅವರ ಮನವಿಯನ್ನು ವಜಾಗೊಳಿಸಿದ ಪೀಠದಲ್ಲಿ ನ್ಯಾಯಮೂರ್ತಿ ಖಾನ್ವಿಲ್ಕರ್ ಅವರಿದ್ದರು. ಸುಪ್ರೀಂ ಕೋರ್ಟ್‌ನ ತೀರ್ಪಿನ ಆಧಾರದ ಮೇಲೆ, ಗುಜರಾತ್ ಪೊಲೀಸರು ಮರುದಿನ, ಗಲಭೆಗೆ ಸಂಬಂಧಿಸಿದ ಸಾಕ್ಷ್ಯವನ್ನು ಸೃಷ್ಟಿಸಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಮತ್ತು ಮಾಜಿ ಐಪಿಎಸ್ ಅಧಿಕಾರಿ ಆರ್.ಬಿ.ಶ್ರೀಕುಮಾರ್ ಅವರನ್ನು ಬಂಧಿಸಿದ್ದರು.

2022ರಲ್ಲಿ ನ್ಯಾಯಮೂರ್ತಿ ಖಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ  ಪೀಠ, ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಕಾಯಿದೆ- 2020ನ್ನು ಎತ್ತಿಹಿಡಿದಿತ್ತು.

ಅದೇ ವರ್ಷದಲ್ಲಿ, ಅವರ ನಿವೃತ್ತಿಗೆ ಎರಡು ದಿನಗಳ ಮೊದಲು, ನ್ಯಾಯಮೂರ್ತಿ ಖಾನ್ವಿಲ್ಕರ್ ಅವರು ಮನಿ ಲಾಂಡರಿಂಗ್ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ಜಾರಿ ನಿರ್ದೇಶನಾಲಯಕ್ಕೆ ಅಗಾಧ ಅಧಿಕಾರವನ್ನು ನೀಡುವ ತೀರ್ಪನ್ನು ನೀಡಿದ್ದರು.

ಇದನ್ನು ಓದಿ: ತುಮಕೂರು: ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರ ಅಟ್ಟಹಾಸ; ಡಿವೈಎಸ್ಪಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊದಲ ಬೋರ್ಡ್ ಪರೀಕ್ಷೆ ಕಡ್ಡಾಯ, ಪರಿಣಾಮಗಳ ಬಗ್ಗೆ ಎಚ್ಚರಿಕೆ

ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ ಬರೆಯುವುದು ಕಡ್ಡಾಯ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸ್ಪಷ್ಟಪಡಿಸಿದ್ದು, ಮೊದಲ ಆವೃತ್ತಿಯಲ್ಲಿ ಕನಿಷ್ಠ ಮೂರು ವಿಷಯಗಳನ್ನು ಪ್ರಯತ್ನಿಸದ ವಿದ್ಯಾರ್ಥಿಗಳು "ಅಗತ್ಯ...

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ವಿಧಾನಸಭೆಯ 2023ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ (ಭಾಗ್ಯನಗರ) ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎನ್‌.ಸುಬ್ಬಾರೆಡ್ಡಿ ಆಯ್ಕೆಯಾಗಿರುವುದನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ &ಬೆಂಚ್ ಸೋಮವಾರ (ಫೆ.16) ವರದಿ ಮಾಡಿದೆ. ಸುಬ್ಬಾರೆಡ್ಡಿ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ ; ಮೂವರು ಅಪರಾಧಿಗಳಿಗೆ ಮರಣದಂಡನೆ

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಅಪರಾಧಿಗಳಿಗೆ ಒಂದನೇ ಹೆಚ್ಚುವರಿ...

ಶಿವಮೊಗ್ಗ: 40 ಸಾವಿರ ಲಂಚ ಪಡೆಯುತ್ತಿದ್ದ ಕೆಎಎಸ್ ಅಧಿಕಾರಿ ಸೇರಿ ಇಬ್ಬರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು 

ಶಿವಮೊಗ್ಗ: 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ (KAS officer) ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಎಂಬುವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ...

ದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ; ಹೈಕೋರ್ಟ್‌ಗೆ ಹೋಗಲು ಸೂಚನೆ

ಸಂವಿಧಾನದ 32ನೇ ವಿಧಿಯಡಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಈ ವಿಷಯವಾಗಿ ಗುವಾಹಟಿ ಹೈಕೋರ್ಟ್...

ಕಲಬುರಗಿ| ಅನುಮತಿ ಇಲ್ಲದೆ ಪುರಾತತ್ವ ಇಲಾಖೆ ಕೋಟೆ ಪ್ರವೇಶಕ್ಕೆ ಯತ್ನಿಸಿದ ಪಿಎಸ್‌ಐ ಹಗರಣದ ಆರೋಪಿ ದಿವ್ಯಾ ಹಾಗರಗಿ ತಂಡ

ಸಬ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಮಾಜಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ನೇತೃತ್ವದ ಗುಂಪೊಂದು ಭಾನುವಾರ ಕಲಬುರಗಿ ಕೋಟೆಗೆ ಮಹಾಶಿವರಾತ್ರಿ ಪೂಜೆ ಮಾಡಲು ಅನುಮತಿಯಿಲ್ಲದೆ ಪ್ರವೇಶಿಸಲು ಯತ್ನಿಸಿದ...

‘ಆರೆಸ್ಸೆಸ್ ಭೂತ, ಬಿಜೆಪಿ ಅದರ ನೆರಳು’: ಆರ್‌ಎಸ್‌ಎಸ್ ನೋಂದಣಿ ಆಗೇ ಆಗುತ್ತೆ, ನಾವು ಮಾಡಿಸುತ್ತೇವೆ: ಪ್ರಿಯಾಂಕ್ ಖರ್ಗೆ 

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಆರ್‌ಎಸ್‌ಎಸ್ ಮತ್ತು ಅದರ ಸೈದ್ಧಾಂತಿಕ ಸಂತತಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಆರ್‌ಎಸ್‌ಎಸ್ ಇಲ್ಲದೆ ಬಿಜೆಪಿ "ಜೆಡಿ (ಎಸ್) ಗಿಂತ ದುರ್ಬಲವಾಗಿದೆ"...

ರಾಜಸ್ಥಾನ| ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಏಳು ಮಂದಿ ಸಾವು – ಹಲವರು ಸಿಲುಕಿರುವ ಶಂಕೆ

ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಭಿವಾಡಿ ಪಟ್ಟಣದಲ್ಲಿ ಸೋಮವಾರ ಅಕ್ರಮ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಮಭವಿಸಿದ ಬೆಂಕಿ ಅವಘಡದಲ್ಲಿ ಏಳು ಮಂದಿ ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. "ಘಟನೆಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಇದು...

ಶಬರಿಮಲೆಗೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಸಂವಿಧಾನ ಪೀಠ

ಏಪ್ರಿಲ್ 7 ರಿಂದ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲು 9 ನ್ಯಾಯಾಧೀಶರ ಪೀಠವನ್ನು ಸ್ಥಾಪಿಸುವುದಾಗಿ ಸುಪ್ರೀಂ ಕೋರ್ಟ್ ಫೆಬ್ರವರಿ 16, ಸೋಮವಾರದಂದು ಘೋಷಿಸಿರುವುದಾಗಿ ಲೈವ್ ಲಾ...

ಬಾಂಗ್ಲಾ ಪ್ರಧಾನಿ ಪದಗ್ರಹಣ : ಭಾರತವನ್ನು ಪ್ರತಿನಿಧಿಸಲಿರುವ ಸ್ಪೀಕರ್ ಓಂ ಬಿರ್ಲಾ

ಫೆಬ್ರವರಿ 17ರಂದು ನಡೆಯಲಿರುವ ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಖ್ ರೆಹಮಾನ್ ಅವರ ಪದಗ್ರಹಣದ ಸಮಾರಂಭದಲ್ಲಿ ಭಾರತದಿಂದ ಅಧಿಕೃತ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು...