Homeಮುಖಪುಟನಾಸೀರ್‌ ಹುಸೇನ್‌ ವಿಜಯೋತ್ಸವದ ವೇಳೆ 'ಪಾಕಿಸ್ತಾನ್‌ ಝಿಂದಾಬಾದ್‌' ಕೂಗಿಲ್ಲ: ಸತ್ಯ ಬಿಚ್ಚಿಟ್ಟ ಸ್ಥಳದಲ್ಲಿದ್ದ ಎಎನ್‌ಐ  ಪತ್ರಕರ್ತ

ನಾಸೀರ್‌ ಹುಸೇನ್‌ ವಿಜಯೋತ್ಸವದ ವೇಳೆ ‘ಪಾಕಿಸ್ತಾನ್‌ ಝಿಂದಾಬಾದ್‌’ ಕೂಗಿಲ್ಲ: ಸತ್ಯ ಬಿಚ್ಚಿಟ್ಟ ಸ್ಥಳದಲ್ಲಿದ್ದ ಎಎನ್‌ಐ  ಪತ್ರಕರ್ತ

- Advertisement -
- Advertisement -

ರಾಜ್ಯಸಭಾ ಚುನಾವಣೆಯಲ್ಲಿ ನಾಸೀರ್‌ ಹುಸೇನ್‌ ಗೆದ್ದ ಬಳಿಕ ವಿಜಯೋತ್ಸವದ ವೇಳೆ ಅವರ ಬೆಂಬಲಿಗರು ಕೂಗಿದ್ದು ಸಾಸೀರ್‌ ಸಾಬ್‌ ಝಿಂದಾಬಾದ್ ಹೊರತು, ಪಾಕಿಸ್ತಾನ್‌ ಝಿಂದಾಬಾದ್‌ ಅಲ್ಲ, ಆದರೆ ಕನ್ನಡದ ಮಾಧ್ಯಮಗಳು ಇದನ್ನು ತಿರುಚಿವೆ ಎಂದು ಘೋಷಣೆಯ ವೇಳೆ ಸ್ಥಳದಲ್ಲಿದ್ದ ಎಎನ್‌ಐ  ಪತ್ರಕರ್ತ ಎಂ.ಮಧು ತಿಳಿಸಿದ್ದಾರೆ.

ಎಎನ್‌ಐ ಕರ್ನಾಟಕ ಮುಖ್ಯಸ್ಥರೂ ಆಗಿರುವ ಮಧು ಅವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು,
‘ಇವರು ಕಾಂಗ್ರೆಸ್ ಪಕ್ಷದ ಸಂಸದ ನಾಸೀರ್‌ ಹುಸೇನ್. ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ಇವರ ಬೆಂಬಲಿಗರು ನಾಸೀರ್ ಸಾಬ್ ಝಿಂದಾಬಾದ್, ನಾಸೀರ್‌ ಸಾಬ್ ಝಿಂದಾಬಾದ್, ಸೈಯದ್ ಸಾಬ್  ಝಿಂದಾಬಾದ್ ಎಂದು ಕೂಗಿದರು. ಆದರೆ ಕನ್ನಡದ ಸುದ್ದಿವಾಹಿನಿಗಳು ಇದನ್ನು ಪಾಕಿಸ್ತಾನ್ ಝಿಂದಾಬಾದ್ ಎಂದು ತಪ್ಪಾಗಿ ಸುದ್ದಿ ಮಾಡಿದೆ. ಇದು ಉದ್ದೇಶಪೂರ್ವಕ ಕರುಣಾಜನಕ ಪ್ರಮಾದ ಎಂದು ವಿಷಾದವನ್ನು ವ್ಯಕ್ತಪಡಿಸಿದ್ದಾರೆ.

 

ಇದಲ್ಲದೆ ಮಧು ಅವರು ಮತ್ತೊಂದು ಪೋಸ್ಟ್‌  ಮಾಡಿದ್ದು, ಇದನ್ನು ಪೊಲೀಸ್, ಸರ್ಕಾರ ಮತ್ತು ಪ್ರತಿಪಕ್ಷಗಳು ಸಾಬೀತುಪಡಿಸಬೇಕು. ನಾನು ನೋಡಿದ್ದನ್ನು ಮತ್ತು ನಾನು ಕೇಳಿದ್ದನ್ನು ಟ್ವೀಟ್ ಮಾಡಿದ್ದೇನೆ. ಆ ಬೆಂಬಲಿಗರ ಗುಂಪಿನಲ್ಲಿ ಯಾರೂ ಕೂಡ ಯಾವುದೇ ದೇಶದ ಪರವಾಗಿ ಯಾವುದೇ ಘೋಷಣೆಯನ್ನು ಕೂಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪತ್ರಕರ್ತ ಮಧು ಅವರು ಆರಂಭದಿಂದ ಕೊನೆಯವರೆಗೂ ಸ್ಥಳದಲ್ಲಿದ್ದರು ಎಂದು ಹೇಳಲಾಗಿದೆ. ಇದಲ್ಲದೆ ಮಧು ಅವರಿಗೆ ತಮ್ಮ ಪೋಸ್ಟ್ ಅಳಿಸಿ ಹಾಕುವಂತೆ ಒತ್ತಡಗಳನ್ನು ಹೇರಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇನ್ನು ಮಾಧ್ಯಮಗಳ ವರದಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ, ದೇಶದಲ್ಲಿ ಬಿಜೆಪಿ ಸವಾಲುಗಳನ್ನು ಎದುರಿಸುವ ಸಂದರ್ಭ ಬಂದಾಗಲೆಲ್ಲ  “ಪಾಕಿಸ್ತಾನ್ ಜಿಂದಾಬಾದ್” ಎನ್ನುವ ಶಬ್ದ ಸದ್ದು ಮಾಡುತ್ತದೆ! ಮಾಧ್ಯಮ ಸ್ನೇಹಿತರಲ್ಲಿ ಕೇಳಬೇಕು ಎನಿಸುವ ಒಂದಷ್ಟು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ, ವಿಜಯೋತ್ಸವ ಆಚರಣೆಯ ವೇಳೆ ಅಲ್ಲಿ ಉಪಸ್ಥಿತರಿದ್ದ ಒಂದಷ್ಟು ಮಾಧ್ಯಮ ಸ್ನೇಹಿತರು ಅಲ್ಲಿ “ನಾಸಿರ್ ಸಾಬ್ ಜಿಂದಾಬಾದ್” ಎಂದು ಕೂಗಿರುವುದಾಗಿ ಹೇಳಿದ್ದಾರೆ. ಅಕಸ್ಮಾತ್ ಅಲ್ಲಿ “ಪಾಕಿಸ್ತಾನ್” ಎಂದೇ ಕೂಗಿದ್ದರೆ ಎಲ್ಲರಿಗೂ ಒಂದೇ ರೀತಿ ಕೇಳಿಸಿರಬೇಕಲ್ಲವೇ?  ಅಕಸ್ಮಾತ್ ಆತ ನಿಜಕ್ಕೂ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದರೆ ಸಹಜವಾಗಿ ಪತ್ರಕರ್ತರ ಪ್ರಜ್ಞೆ ಜಾಗೃತವಾಗಿ ಆತನತ್ತ ಗಮನ ಹರಿಸುತ್ತಿದ್ದರು, ಆತನತ್ತ ಕ್ಯಾಮರಾ ತಿರುಗಿಸುತ್ತಿದ್ದರು, ಆತನ ಮೇಲೆ ಮುಗಿಬೀಳುತ್ತಿದ್ದರು, ಆದರೆ ಇಲ್ಲಿ ಪತ್ರಕರ್ತರು ಆತನತ್ತ ಕಿಂಚಿತ್ತೂ ಗಮನಿಸುವುದಿಲ್ಲ, ಆತ ಹಾಗೆ ಕೂಗಿದ್ದೇ ಆಗಿದ್ದರೆ ಅಲ್ಲಿ ನೆರೆದಿದ್ದವರು ಖಂಡಿತಾ ಸುಮ್ಮನಿರುತ್ತಿರಲಿಲ್ಲ, ಕೂಡಲೇ ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸುತ್ತಿದ್ದರು, ಪತ್ರಕರ್ತರೂ ಸೇರಿದಂತೆ ಅಲ್ಲಿ ನೆರೆದಿದ್ದವರ ಮ್ಯಾನರಿಸಂನಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ, ಅಕಸ್ಮಾತ್ ಆ ವ್ಯಕ್ತಿ ಹಾಗೆ ಘೋಷಣೆ ಕೂಗಿದ್ದಿದ್ದರೆ ಅಲ್ಲಿನ ಪತ್ರಕರ್ತರ “ದೇಶಭಕ್ತಿ“ ಜಾಗೃತವಾಗದೆ ಸಹಜವಾಗಿದ್ದಿದ್ದೇಕೆ? ಏನೂ ನಡೆದೇ ಇಲ್ಲ ಎನ್ನುವಂತೆ ನಡೆದುಕೊಂಡಿದ್ದೇಕೆ? ಪತ್ರಕರ್ತ ಸ್ನೇಹಿತರೇ ಉತ್ತರಿಸಬೇಕು. ಮಾಧ್ಯಮ ಜಾಗೃತವಾಗಲಿ. ಜಾಗೃತ ಮಾಧ್ಯಮ ಜನಕಲ್ಯಾಣಕ್ಕೆ ಕಾರಣವಾಗಲಿ. ಈ ರೀತಿ ಭಜನೆಗಲ್ಲಾ ಎಂದು ಪ್ರಿಯಾಂಕ ಖರ್ಗೆ ಟ್ವೀಟ್‌ ಮಾಡಿದ್ದಾರೆ.

ರಾಜ್ಯಸಭೆಗೆ ಮಂಗಳವಾರ ಚುನಾವಣೆ ನಡೆದಿದ್ದು, ಕರ್ನಾಟಕದಿಂದ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಮತ್ತು ಓರ್ವ ಬಿಜೆಪಿ- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಗೆಲುವನ್ನು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕನ್, ನಾಸಿರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರು ಜಯ ಗಳಿಸಿದ್ದರು. ನಾಸಿರ್ ಹುಸೇನ್ ಗೆಲುವಿನ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಸಿರ್ ಹುಸೇನ್ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ. ಈ ವೇಳೆ ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರೆ ಎಂದು ಕನ್ನಡದ ಬಹುತೇಕ ಟಿವಿ ಚಾನಲ್‌ಗಳು ವರದಿ ಮಾಡಿದ್ದು, ಬಿಜೆಪಿ ನಾಯಕರು ವಿಭಿನ್ನ ಹೇಳಿಕೆಗಳನ್ನು ಕೊಟ್ಟಿದ್ದರು. ರಾಜ್ಯದ ವಿವಿಧೆಡೆ ಬಿಜೆಪಿ ಪ್ರತಿಭಟನೆಯನ್ನು ಮಾಡಿತ್ತು. ಆದರೆ ವಾಸ್ತವವಾಗಿ ಕಾಂಗ್ರೆಸ್‌ ಕಾರ್ಯಕರ್ತರು, ‘ನಾಸೀರ್ ಸಾಬ್ ಝಿಂದಾಬಾದ್’ ಎಂದು ಕೂಗಿದ್ದಾರೆ ಹೊರತು ಪಾಕಿಸ್ತಾನ ಝಿಂದಾಬಾದ್‌ ಎಂದು ಕೂಗಿಲ್ಲ ಎನ್ನುವುದು ವಿಡಿಯೋಗಳ ಪರಿಶೀಲನೆ ವೇಳೆ ಬಯಲಾಗಿತ್ತು.

ಇದನ್ನು ಓದಿ: ಕಾಂಗ್ರೆಸ್ ವಿರುದ್ಧ ಅವಹೇಳನಾಕಾರಿ ಪೋಸ್ಟ್‌ ಮಾಡಿದ ಬಿಜೆಪಿ; ಕ್ರಮ ತೆಗೆದುಕೊಳ್ಳುತ್ತಾ ಸಿದ್ದರಾಮಯ್ಯ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...