Homeಕರ್ನಾಟಕ'ಆತ್ಮಸಾಕ್ಷಿಗೂ ದರ ಇದೆಯೇ?' ಎಂದು ಪೋಸ್ಟ್‌ ಮಾಡಿ ಪೇಚೆಗೆ ಸಿಲುಕಿದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌

‘ಆತ್ಮಸಾಕ್ಷಿಗೂ ದರ ಇದೆಯೇ?’ ಎಂದು ಪೋಸ್ಟ್‌ ಮಾಡಿ ಪೇಚೆಗೆ ಸಿಲುಕಿದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌

- Advertisement -
- Advertisement -

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಅಡ್ಡಮತದಾನ ಮಾಡಿದ್ದರು. “ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್‌ಗೆ ತೋರಿಸಿದ್ದೇನೆ” ಎಂದು ಎಸ್.ಟಿ.ಸೋಮಶೇಖರ್ ಹೇಳಿದ್ದರು. ಈ ಬಗ್ಗೆ ಮಾಜಿ ಸಚಿವ ಮತ್ತು ಬಿಜೆಪಿ ಶಾಸಕ ಸುರೇಶ್‌ ಕುಮಾರ್‌  ‘ಆತ್ಮಸಾಕ್ಷಿಗೂ ದರ ಇದೆಯೇ?’ ಎಂದು  ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣಗಳ ಬಳಕೆದಾರರು ಸುರೇಶ್‌ ಕುಮಾರ್‌ಗೆ ಸರಿಯಾಗಿ ಕ್ಲಾಸ್‌ ತೆಗೆದುಕೊಂಡಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಮತ ಚಲಾಯಿಸಿದ ಬಳಿಕ‌ ಮಾಧ್ಯಮಗಳ ಜೊತೆ ಮಾತನಾಡಿದ್ದ ಎಸ್‌ಟಿ ಸೋಮಶೇಖರ್‌, “ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್‌ಗೆ ತೋರಿಸಿದ್ದೇನೆ. “ಯಾರು ನನ್ನ ಕ್ಷೇತ್ರಕ್ಕೆ ಅನುದಾನ ಕೊಡುವುದಾಗಿ ಭರವಸೆ ನೀಡಿದ್ದಾರೋ, ಅವರಿಗೆ ಮತ ಹಾಕಿದ್ದೇನೆ. ಇದುವರೆಗೆ ಪಕ್ಷ ಹೇಳಿದ ಹಾಗೆ ಕೇಳಿದ್ದೇನೆ. ಆದರೆ, ಈ ಬಾರಿ ನನ್ನ ಕ್ಷೇತ್ರದ ಅಭಿವೃದ್ದಿಗೆ ಅನುದಾನ ಕೊಡುವುದಾಗಿ ಭರವಸೆ ನೀಡಿದವರ ಪರ ಮತ ಚಲಾಯಿಸಿದ್ದೇನೆ ಎಂದು ಹೇಳಿದ್ದರು.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌, ‘ಆತ್ಮಸಾಕ್ಷಿಗೂ ದರ ಇದೆಯೇ?’ ಎಂದು ಪ್ರಶ್ನಿಸಿದ್ದರು. ಇದಕ್ಕೆ ಎಕ್ಸ್‌ ಬಳಕೆದಾರರು ಸುರೇಶ್‌ ಕುಮಾರ್‌ಗೆ ಹಲವು ಘಟನೆಗಳನ್ನು ನೆನೆಪಿಸಿ ಮಂಗಳಾರತಿ ಮಾಡಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಸುರೇಶ್‌ ಕುಮಾರ್‌ ಅವರಿಗೆ ಪ್ರತಿಕ್ರಿಯಿಸಿರುವ ಚೆನ್ನ ಸೋಮೇಶ್ವರ ಎಂಬವರು, ಆತ್ಮಸಾಕ್ಷಿಗೆ ದರವಿಲ್ಲಾ… ದರ ಕಟ್ಟಲು ಪ್ರಯತ್ನಿಸಿದವರಿಗೆ ಆತ್ಮರಾಮನಿಂದ ತಪ್ಪಿಸಿಕೊಂಡರೂ ಕಾನೂನಿನ ಆಯಾಮದಿಂದ ತಪ್ಪಿಸಿಕೊಳ್ಳಲಾಗದು. ಸಂವಿಧಾನದ ಆತ್ಮವೇ ಪ್ರಜಾಪ್ರಭುತ್ವ, ಅದನ್ನು ತೆಲಂಗಾಣದಲ್ಲಿ, ಇತ್ತೀಚೆಗೆ ಚಂಡೀಗಡದಲ್ಲಿ ಮಾರಣಹೋಮ ಮಾಡಲೆತ್ನಿಸಿದ್ದಾಗಿದೆ ಎಂದು ಬಿಜೆಪಿಯ ಬಿಎಲ್‌ ಸಂತೋಷ್‌ಗೆ ಟಿಆರ್‌ಎಸ್‌ ಶಾಸಕರನ್ನು ಖರೀದಿಸಲು ಯತ್ನಿಸಿರುವ ಕುರಿತ ಸುದ್ದಿಯನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿದ್ದಾರೆ.

ಇದಲ್ಲದೆ ಕಳೆದ ಅವಧಿಯಲ್ಲಿ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಸರಕಾರವನ್ನು ಉರುಳಿಸಿ 14 ಮಂದಿ ಕಾಂಗ್ರೆಸ್‌ ಶಾಸಕರು, ಮೂವರು ಜೆಡಿಎಸ್‌ ಶಾಸಕರು ಸೇರಿ ಒಟ್ಟು 17 ಮಂದಿ ಶಾಸಕರು ಆಪರೇಷನ್‌ ಕಮಲಕ್ಕೆ ಒಳಗಾಗಿ  ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿ ಸರಕಾರವನ್ನು ರಚಿಸಿದ್ದರು. ಈ ವೇಳೆ ನಿಮ್ಮ ಆತ್ಮಸಾಕ್ಷಿ ಎಲ್ಲಿಗೆ ಹೋಗಿತ್ತು ಎಂದು ಹಲವರು ಸರೇಶ್‌ ಕುಮಾರ್‌ಗೆ ಪ್ರಶ್ನೆಯನ್ನು ಮಾಡಿದ್ದಾರೆ.

ರೋಹನ್‌ ಗೌಡ ಎಂಬವರು ಈ ಕುರಿತು ಪ್ರತಿಕ್ರಿಯಿಸಿದ್ದು, ನೀವು ಆತ್ಮಸಾಕ್ಷಿಯನ್ನು ನಿಮ್ಮ ಪಕ್ಷಕ್ಕೆ ಕರೆತಂದಾಗ ದರ ನಿಗದಿ ಆಗಿ ವಿಲೇವಾರಿ ಕೂಡ ಆಗಿತ್ತು ಎಂದು ಹೇಳಿದ್ದಾರೆ. ಸಾಗರ್‌ ಕಟೀಲ್‌ ಎಂಬವರು ಪ್ರತಿಕ್ರಿಯಿಸಿದ್ದು, ನಿಮ್ಮನ್ನೇ ಕೇಳಬೇಕು, ಹೋದ ಸರಕಾರದಲ್ಲಿ 18 ಶಾಸಕರನ್ನು ಖರೀದಿ ಮಾಡಿದ್ರಲ್ಲ, ಅವರ ಹತ್ತಿರ ಕೇಲ್ನೋಡಿ ಎಂದು ಪ್ರತಿಕ್ರಿಯಿಸಿದ್ದಾರೆ. ಗುರು ಎಂಬವರು ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದು,  ಬಿಎಲ್ ಸಂತೋಷ್‌ ಅವರನ್ನು ಕೇಳಿ, ಅವರಿಗೆ ಷರತ್ತು, ದರ ಎಲ್ಲಾ ಚೆನ್ನಾಗಿ ಗೊತ್ತು, ಸಿಕ್ಕರೆ ತಪ್ಪಿಸಿಕೊಳ್ಳುವ ದಾರಿಗಳು ಕೂಡ ಗೊತ್ತು ಎಂದು ಪ್ರತಿಕ್ರಿಯಿಸಿದ್ದಾರೆ.

ಭಾಸ್ಕರ್‌ ಎಂಬವರು ಈ ಕುರಿತು ಪ್ರತಿಕ್ರಿಯಿಸಿದ್ದು, ದರದ ಮುಂದೆ ಆತ್ಮಸಾಕ್ಷಿ ಓಡಿ ಹೋಗುತ್ತದೆ, ನಿಮ್ಮ ಸಹೋದ್ಯೋಗಿಗಳಿಗೆ ಒಮ್ಮೆ ಕೇಳಿ ನೋಡಿ ಎಂದು ಸುರೇಶ್‌ ಕುಮಾರ್‌ಗೆ ಕಾಲೆಳೆದಿದ್ದಾರೆ. ಅರುಣ್‌ ಎಂಬವರು ಪ್ರತಿಕ್ರಿಯಿಸಿ, ನೀವೇ ಅಲ್ವ ರೇಟ್‌ ಫಿಕ್ಸ್‌ ಮಾಡುವವರು, ನಿಮಗೆ ಮರೆತು ಹೋಯ್ತಾ ಎಂದು ಪ್ರಶ್ನಿಸಿದ್ದಾರೆ. ಕೃಷ್ಣ ಎಂಬವರು ಪ್ರತಿಕ್ರಿಯಿಸಿದ್ದು, ಆಪರೇಷನ್‌ ಕಮಲದಲ್ಲಿ ಆತ್ಮಸಾಕ್ಷಿಗೆ ದರ ನಿಗದಿ ಮಾಡಿದಂತಿದೆ ಎಂದು ಪೋಸ್ಟ್‌ ಮಾಡಿದ್ದಾರೆ. ಹಾರಿಸ್‌ ಎಂಬವರು ಪ್ರತಿಕ್ರಿಯಿಸಿ, ಮೊದಲು ನಿಮ್ಮನ್ನು ನೀವೇ ಕೇಳ್ಕೊಳ್ಳಿ ಎಂದು ಹೇಳಿದ್ದಾರೆ.

ಮುರಳಿ ರಮೇಶ್‌ ಎಂಬವರು, ಕಾಂಗ್ರೆಸ್‌ನಿಂದ ಬಂದು ಬಿಜೆಪಿ ಸೇರಿದಾಗ ನಿನ್ನ ಆತ್ಮಸಾಕ್ಷಿ ಏನಾಯ್ತು ಎಂದ ಸುರೇಶ್‌ ಕುಮಾರ್‌ಗೆ ಪ್ರಶ್ನಿಸಿದ್ದಾರೆ. ಅಪ್ಪು ಎಂಬವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮೊದಲ ಬಾರಿ ಅಂದರೆ 2008ರಲ್ಲಿ ಯಡಿಯೂರಪ್ಪ ಆಪರೇಷನ್ ಕಮಲ ಮಾಡಿ ಶಾಸಕರನ್ನು ಕರೆದುಕೊಂಡು ಸರ್ಕಾರ ಮಾಡಿದ್ರಲ್ಲ ಅವನನ್ನ ಕೇಳು ಎಂದು ಸುರೇಶ್‌ ಕುಮಾರ್‌ಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ, ಕರ್ನಾಟಕ ಅಲ್ಲದೆ ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿ ಹಲವು ರಾಜ್ಯಗಳಲ್ಲಿ ಆಪರೇಷನ್‌ ಕಮಲ ಮೂಲಕ ಈ ಮೊದಲು ಸರಕಾರವನ್ನು ರಚಿಸಿತ್ತು. ಇದರ ಇತ್ತೀಚಿನ ನಿದರ್ಶನ ಹಿಮಾಚಲ ಪ್ರದೇಶದಲ್ಲಿ ನಡೆಯುತ್ತಿದೆ. ಬಿಜೆಪಿ ಸರಕಾರಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿ ಪ್ರತಿಪಕ್ಷಗಳ ನಾಯಕರನ್ನು ಪಕ್ಷಕ್ಕೆ ಸೇರುವಂತೆ ಒತ್ತಡ ಹಾಕುತ್ತಿದೆ ಎಂಬ ಆರೋಪಗಳು ಕೂಡ ಈ ಮೊದಲು ಕೇಳಿ ಬಂದಿತ್ತು. ತೆಲಂಗಾಣದಲ್ಲಿ ಬಿಎಲ್‌ ಸಂತೋಷ್‌ ಟಿಆರ್‌ಎಸ್‌ ಶಾಸಕರನ್ನು ಖರೀದಿಸಲು ಯತ್ನವನ್ನು ಮಾಡಿ ಸಿಕ್ಕಿಬಿದ್ದಿದ್ದರು. ಈ ಕುರಿತ ಪ್ರಕರಣವನ್ನು ಅವರು ಇದೀಗ ಎದುರಿಸುತ್ತಿದ್ದಾರೆ. ಈ ಮಧ್ಯೆ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌, ರಾಜ್ಯಸಭೆ ಚುನಾವಣೆಯಲ್ಲಿ ಎಸ್‌ಟಿ ಸೋಮಶೇಖರ್‌ ಅಡ್ಡ ಮತದಾನ ಮಾಡಿದ್ದಕ್ಕೆ ಕೇಳಿದ ‘ಆತ್ಮಸಾಕ್ಷಿಯ ಪ್ರಶ್ನೆಗೆ ಸಾಮಾಜಿಕ ಜಾಲತಾಣ ಬಳಕೆದಾರರು ಸರಿಯಾಗಿ ಪಾಠ ಮಾಡಿದ್ದಾರೆ.

 ಇದನ್ನು ಓದಿ: ರಾಜ್ಯಸಭಾ ಚುನಾವಣೆ: ಅಡ್ಡ ಮತದಾನ ಮಾಡಿದ ಎಸ್‌.ಟಿ ಸೋಮಶೇಖರ್: ವರದಿ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...